Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 46:11 - ಕನ್ನಡ ಸತ್ಯವೇದವು C.L. Bible (BSI)

11 ಮೂಡಲಿಂದ ಬೇಟೆಗಾಗಿ ರಣಹದ್ದನು ಕರೆದಂತೆ ಕರೆದಿಹೆನು ದೂರದೇಶದಿಂದ ನನ್ನ ಸಂಕಲ್ಪ ಈಡೇರಿಸಲೆಂದೇ. ನುಡಿದಿರುವೆನು ನಾನು; ಈಡೇರಿಸುವೆನು ಅದನ್ನು ಯೋಜಿಸಿರುವೆನು ನಾನು; ಸಾಧಿಸುವೆನು ಅದನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮೂಡಲಿಂದ ಒಂದು ಪಕ್ಷಿಯನ್ನು ಬರಮಾಡು, ದೂರದೇಶದಿಂದ ನನ್ನ ಸಂಕಲ್ಪವನ್ನು ನೆರವೇರಿಸುವ ಮನುಷ್ಯನು ಬರಲಿ ಎಂದು ಕರೆದಿದ್ದೇನೆ. ಎಂದು ನಾನೇ ನುಡಿದಿದ್ದೇನೆ, ನಾನು ಅದನ್ನು ಈಡೇರಿಸುವೆನು. ಆಲೋಚಿಸಿದ್ದೇನೆ, ನಾನು ಅದನ್ನು ಸಾಧಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮೂಡಲಿಂದ ಹದ್ದು ಎರಗಲಿ ಎಂದು, ಅಂದರೆ ನನ್ನ ಸಂಕಲ್ಪವನ್ನು ನೆರವೇರಿಸತಕ್ಕವನು ದೂರದೇಶದಿಂದ ಬರಲಿ ಎಂದು ಕೂಗಿದ್ದೇನೆ; ನಾನು ನುಡಿದಿದ್ದೇನೆ, ಈಡೇರಿಸುವೆನು; ಆಲೋಚಿಸಿದ್ದೇನೆ, ಸಾಧಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಪೂರ್ವದಿಕ್ಕಿನಿಂದ ಒಬ್ಬನನ್ನು ಕರೆಯುತ್ತೇನೆ. ಅವನು ಗಿಡುಗನಂತಿರುವನು. ಅವನು ಬಹು ದೂರದೇಶದಿಂದ ಬಂದು ನನ್ನ ಬಯಕೆಯನ್ನು ಈಡೇರಿಸುವನು. ನಾನು ಹೇಳಿದ ಸಂಗತಿಗಳನ್ನು ಮಾಡಿಮುಗಿಸುವೆನು. ನಾನು ಅವನನ್ನು ಸೃಷ್ಟಿಸಿದೆನು. ನಾನೇ ಅವನನ್ನು ಕರೆದುಕೊಂಡು ಬರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಪೂರ್ವದಿಂದ ಒಂದು ಕ್ರೂರವಾದ ಪಕ್ಷಿಯೂ, ದೂರದೇಶದಿಂದ ನನ್ನ ಆಜ್ಞೆಯನ್ನು ನಡೆಸುವ ಮನುಷ್ಯನೂ ಬರಲಿ, ಎಂದು ಕರೆದಿದ್ದೇನೆ. ನಾನು ನುಡಿದಿದ್ದೇನೆ, ಅದನ್ನು ನಾನು ಈಡೇರಿಸುವೆನು. ಆಲೋಚಿಸಿದ್ದೇನೆ, ನಾನು ಅದನ್ನು ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 46:11
31 ತಿಳಿವುಗಳ ಹೋಲಿಕೆ  

ನರಮಾನವರಂತೆ ದೇವರು ಎರಡು ಮಾತಿನವರಲ್ಲ ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಆತ ನುಡಿದಂತೆ ನಡೆಯದಿರುತ್ತಾನೋ?


ಆತನದು ಏಕಚಿತ್ತ; ಅದನು ಬದಲಾಯಿಸಲಸಾಧ್ಯ ಆತ ಬಯಸಿದ್ದೆ ಸಿದ್ಧಿಯಾದಕಾರ್ಯ.


ಕರೆತಂದವರಾರು ಆ ಪರಾಕ್ರಮಿಯನ್ನು ಪೂರ್ವದಿಂದ? ಅವನು ಗೆದ್ದುಬರುವಂತೆ ಮಾಡಿದವರಾರು ದಿಗ್ವಿಜಯದಿಂದ? ರಾಷ್ಟ್ರಗಳನ್ನು, ರಾಜರುಗಳನ್ನು ಸೋಲಿಸಿದವರಾರು ಅವನ ಕೈಯಿಂದ? ಧೂಳು ಧೂಳಾಗಿಸುತ್ತಾನೆ ಅವರನ್ನು ಅವನ ಖಡ್ಗದಿಂದ ಗಾಳಿಗೆ ತೂರಿಹೋಗುವ ಹುಲ್ಲನ್ನಾಗಿಸುತ್ತಾನೆ ಅವನ ಬಿಲ್ಲಿನಿಂದ.


ದೈವಯೋಜನೆಯಂತೆಯೇ ಸಕಲವೂ ಸಂಭವಿಸುತ್ತದೆ. ದೇವರು ಆದಿಯಲ್ಲೇ ಸಂಕಲ್ಪಿಸಿದ್ದಂತೆ ತಮ್ಮ ಚಿತ್ತಕ್ಕನುಗುಣವಾಗಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು.


ಇದು ದೈವಸಂಕಲ್ಪವಾಗಿದ್ದರೆ ಅವರನ್ನು ನಾಶಮಾಡಲು ನಿಮ್ಮಿಂದಾಗದು. ನೀವು ದೇವರಿಗೆ ವಿರುದ್ಧ ಹೋರಾಡಿದಂತೆ ಆದೀತು,” ಎಂದು ಹೇಳಿದನು. ಸಭಾಸದಸ್ಯರು ಗಮಲಿಯೇಲನ ಸಲಹೆಯನ್ನು ಅಂಗೀಕರಿಸಿದರು.


ನುಡಿದಂತೆ ಪ್ರಭೂ ನೆರವೇರಿಸಿಹನು; ನಾನೇನು ಹೇಳಲಿ; ಮುಳುಗಿದೆ ನನ್ನಾತ್ಮ ದುಃಖಸಾಗರದಲಿ ನಿದ್ರೆಯಿಲ್ಲದೆ ಸೊರಗುತಿದೆ ನನ್ನ ಜೀವಮಾನವಿಡೀ.


ಪರ್ಷಿಯ ರಾಜನಾದ ಸೈರಸೆಂಬ ನನ್ನ ಮಾತನ್ನು ಕೇಳಿರಿ; ಪರಲೋಕ ದೇವರಾದ ಸರ್ವೇಶ್ವರಸ್ವಾಮಿ ಭೂಲೋಕದ ಎಲ್ಲ ರಾಜ್ಯಗಳನ್ನು ನನಗೆ ಕೊಟ್ಟಿದ್ದಾರೆ; ‘ನನಗಾಗಿ ಜುದೇಯ ನಾಡಿನ ಜೆರುಸಲೇಮಿನಲ್ಲಿ ಒಂದು ಆಲಯವನ್ನು ಕಟ್ಟಿಸಬೇಕು’ ಎಂದು ಅವರು ಆಜ್ಞಾಪಿಸಿದ್ದಾರೆ.


ತಮ್ಮ ಪೂರ್ವಸಂಕಲ್ಪದಂತೆಯೇ ಇದನ್ನು ದೇವರು ನಮ್ಮ ಪ್ರಭುವಾದ ಯೇಸುಕ್ರಿಸ್ತರಲ್ಲಿ ಕಾರ್ಯಗತಗೊಳಿಸಿದರು.


ಹೀಗಿರಲು, ಸರ್ವೇಶ್ವರನು ಬಾಬಿಲೋನಿಯರ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನು, ಅದರ ಕಸ್ದೀಯರನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನು ಆಲಿಸಿರಿ: ಕಾಡುಮೃಗಗಳು ಹಿಂಡಿನ ಮರಿಗಳನ್ನು ಖಂಡಿತವಾಗಿ ಎಳೆದುಕೊಂಡು ಹೋಗುವುವು. ಅವುಗಳ ನಾಶಕ್ಕಾಗಿ ಹುಲ್ಲುಗಾವಲು ನಿಶ್ಚಯವಾಗಿ ಕಳವಳಪಡುವುದು.


ಹುರಿದುಂಬಿಸಿ ಕರೆತಂದಿರುವೆನು ಒಬ್ಬನನ್ನು ಉತ್ತರದಿಂದ ನನ್ನ ನಾಮವನ್ನು ಪ್ರಚುರಪಡಿಸಲು ಬಂದಿಹನಾತ ಪೂರ್ವದಿಂದ ಕುಂಬಾರನು ಜೇಡಿಮಣ್ಣನ್ನು ತುಳಿಯುವಂತೆ ತುಳಿಯುವನಾತ ರಾಜರನ್ನು ಮಣ್ಣಂತೆ.


ನಿನ್ನಾಜ್ಞೆಯು ಆನಂದದಾಯಕ I ಅವೇ ನನಗೆ ಮಂತ್ರಾಲೋಚಕ II


ನರರ ಕೋಪ, ದೇವಾ ನಿನ್ನ ಘನತೆಗೆ ಸಾಧಕ I ಅಳಿದುಳಿದಾ ಕೋಪ ನಿನ್ನ ನಡುಕಟ್ಟಿಗೆ ಲಾಯಕ II


ನೀವು ಸಂಯೋಜಿಸಿದ್ದು ಹಾಗೂ ಸಂಕಲ್ಪಿಸಿದ್ದು ಈಡೇರುವಂತೆ ಅವರು ಹೀಗೆ ವರ್ತಿಸಿದರು.


ನೀನು, ನಿನ್ನ ಸೇನೆ ಹಾಗು ಪರಿವಾರ ಇಸ್ರಯೇಲಿನ ಪರ್ವತಗಳಲ್ಲಿ ಬಿದ್ದುಬಿಡುವಿರಿ; ನಾನು ನಿಮ್ಮನ್ನು ಮಾಂಸಾಹಾರಿಗಳಾದ ಬಗೆಬಗೆಯ ಹಕ್ಕಿಗಳಿಗೂ ಭೂಜಂತುಗಳಿಗೂ ಆಹಾರ ಮಾಡುವೆನು. ನೀವು ಬಯಲಿನಲ್ಲೇ ಬೀಳುವಿರಿ.


“ಬಿಲ್ಲುಬಾಣಗಾರರನ್ನೆಲ್ಲ ಬಾಬಿಲೋನಿಗೆ ಕರೆಯಿರಿ. ಅದರ ಸುತ್ತಲು ದಂಡಿಳಿಸಿರಿ. ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ. ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ. ಅದು ಮಾಡಿದಂತೆಯೇ ಅದಕ್ಕೆ ಮಾಡಿ. ಏಕೆಂದರೆ ಗರ್ವದಿಂದ ಅದು ಇಸ್ರಯೇಲರ ಪರಮ ಪಾವನನಾದ ಸರ್ವೇಶ್ವರನನ್ನು ಅಸಡ್ಡೆಮಾಡಿದೆ.


ಧರ್ಮಸಾಧನೆಗಾಗಿ ಕೋರೆಷನನ್ನು ಉದಯಗೊಳಿಸಿರುವೆನು ಅವನ ಮಾರ್ಗಗಳನ್ನು ನಾನೇ ಸರಾಗಮಾಡುವೆನು ನನ್ನ ನಗರವನು ಪುನರ್ ನಿರ್ಮಾಣಮಾಡುವನು ಅವನು ಸೆರೆಯಾದ ನನ್ನ ಜನರನು ಬಿಡುಗಡೆ ಮಾಡುವನು ಸಂಬಳವನ್ನಾಗಲಿ ಸಂಭಾವನೆಯನ್ನಾಗಲಿ ಸ್ವೀಕರಿಸನು. ಇದ ನುಡಿದಿರುವೆನು ಸೇನಾಧೀಶ್ವರ ಸರ್ವೇಶ್ವರನಾದ ನಾನು.”


ಕೋರೆಷನಿಗೆ ಇಂತೆನ್ನುವೆನು ನಾನು : ನನ್ನ ಮಂದೆ ಕಾಯುವವನು ನೀನು ನನ್ನ ಇಷ್ಟಾರ್ಥವನು ನೆರವೇರಿಸುವವನು ನೀನು; 'ಪುನಃ ನಿರ್ಮಾಣವಾಗುವೆ' ಎನ್ನುವೆ ಜೆರುಸಲೇಮಿಗೆ, ನೀನು; ‘ಪುನಃ ನಿನಗೆ ಅಸ್ತಿವಾರ ಹಾಕಿಸುವೆ’ ಎನ್ನುವೆ ಆ ದೇವಾಲಯಕೆ ನೀನು.”


ಆರನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಯೂಫ್ರೆಟಿಸ್ ಎಂಬ ಮಹಾನದಿಯ ಮೇಲೆ ಸುರಿದನು. ಕೂಡಲೇ ಅದರ ನೀರು ಬತ್ತಿಹೋಯಿತು. ಇದರ ಪರಿಣಾಮವಾಗಿ ಪೂರ್ವದೇಶದ ರಾಜರು ಬರುವುದಕ್ಕೆ ಮಾರ್ಗವಾಯಿತು.


ಹೀಗೆ ಕಡಿಯಲ್ಪಟ್ಟವರ ಶವಗಳೆಲ್ಲ ರಣಹದ್ದುಗಳ ಮತ್ತು ಕಾಡುಮೃಗಗಳ ಪಾಲಾಗುವುವು; ಪಕ್ಷಿಗಳಿಗೆ ಬೇಸಿಗೆಯ ಆಹಾರವಾಗುವುವು, ಪ್ರಾಣಿಗಳಿಗೆ ಚಳಿಗಾಲದ ಉಣಿಸಾಗುವುವು.


ಇದರಿಂದ ಬಿಗಿಯಾಗಿ ಹೊಡೆಯಲಾಗಿದ್ದ ಆ ಮೊಳೆ ಸಡಿಲವಾಗಿ ಕುಸಿದುಬೀಳುವುದು. ಅದಕ್ಕೆ ತಗಲುಹಾಕಿದ್ದ ವಸ್ತುಗಳೆಲ್ಲ ಕಳಚಿಬೀಳುವುವು. ಇದು ಸರ್ವೇಶ್ವರನಾದ ನನ್ನ ನುಡಿ,” ಎಂದು ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಹೇಳಿರುವರು.


ಇದನ್ನೆಲ್ಲಾ ಬಹುಕಾಲದ ಹಿಂದೆ ಗೊತ್ತು ಮಾಡಿದವನು ನಾನೇ, ಪೂರ್ವಕಾಲದಲ್ಲಿ ನಿರ್ಣಯಿಸಿದುದನ್ನು ಈಗ ನೆರವೇರಿಸಿದ್ದೇನೆ. ಕೋಟೆ ನಗರಗಳನ್ನು ನೀನು ಹಾಳು ದಿಬ್ಬಗಳನ್ನಾಗಿಸಿದೆ, ಆದರೆ ಸಾಧ್ಯವಾಯಿತಿದು ನನ್ನಿಂದಲೇ, ನಿನಗಿದು ತಿಳಿಯದೆಹೋಯಿತೆ?


“ಕಾಡಿನ ಮೃಗಗಳೇ ಬನ್ನಿ, ಬಂದು ನುಂಗಿಬಿಡಿ!


ಖಡ್ಗಕ್ಕೆ ತಪ್ಪಿಸಿಕೊಂಡ ಕೊಂಚ ಜನರು ಮಾತ್ರ ಈಜಿಪ್ಟಿನಿಂದ ಜುದೇಯಕ್ಕೆ ಹಿಂದಿರುಗುವರು. ಈಜಿಪ್ಟಿಗೆ ಹೋಗಿ ಪ್ರವಾಸಿಸುತ್ತಿರುವ ಅಳಿದು ಉಳಿದ ಯೆಹೂದ್ಯರೆಲ್ಲರು, ನನ್ನ ಮಾತು ದಿಟವಾಯಿತೋ ಅಥವಾ ಅವರ ಮಾತು ದಿಟವಾಯಿತೋ ಎಂದು ಆಗ ತಿಳಿದುಕೊಳ್ಳುವರು.’


ಆದರೆ ಸರ್ವೇಶ್ವರನಾದ ನಾನು ಸಿಯೋನ್ ಪರ್ವತದಲ್ಲೂ ಜೆರುಸಲೇಮಿನಲ್ಲೂ ನನ್ನ ಗುರಿಯನ್ನು ಸಾಧಿಸಿದ ಮೇಲೆ ಆ ಅಸ್ಸೀರಿಯದ ಅರಸನನ್ನು ಅವನ ದುರಹಂಕಾರಕ್ಕಾಗಿ, ಗರ್ವದ ಭಾವನೆಗಳಿಗಾಗಿ ಸರಿಯಾಗಿ ದಂಡಿಸುವೆನು.


ಸರ್ವೇಶ್ವರಾ, ನೀನೆನ್ನ ದೇವನು, ಏಕೆನೆ ನೀನು ಸತ್ಯಸ್ವರೂಪನು, ನಿಷ್ಟಾವಂತನು, ಆದಿ ಯೋಜನೆಗಳನು ಪೂರೈಸುವವನು, ಅದ್ಭುತಕಾರ್ಯಗಳನು ಎಸಗಿದಂತವನು. ಘನಪಡಿಸುವೆ ನಾ ನಿನ್ನನು, ಸ್ತುತಿಸುವೆನು ನಿನ್ನ ನಾಮ ಮಹಿಮೆಯನು.


ಬಾಬಿಲೋನಿಯರಿಗೆ ನಿತ್ಯ ನೆಲೆಯಾದ ಗೋಮಾಳಕ್ಕೆ ಇಗೋ, ಜೋರ್ಡನ್ ದಟ್ಟಡವಿಯಿಂದ ಸಿಂಹದೋಪಾದಿ ನಾನು ಏರಿಬರುವೆನು. ಕ್ಷಣಮಾತ್ರದಲ್ಲಿ ಆ ಬಾಬಿಲೋನಿಯರನ್ನು ಅಲ್ಲಿಂದ ಓಡಿಸಿಬಿಡುವೆನು. ಅದನ್ನು ಪಾಲಿಸುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನ್ಯಾಯವಿಚಾರಣೆಗೆ ನನ್ನನ್ನು ಎಳೆಯಬಲ್ಲ ವ್ಯಕ್ತಿ ಯಾರು? ಮಂದೆಯನ್ನು ಕಾಯುವ ಯಾವನು ತಾನೆ ನನ್ನೆದುರಿಗೆ ನಿಲ್ಲಬಲ್ಲನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು