Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 46:13 - ಕನ್ನಡ ಸತ್ಯವೇದವು C.L. Bible (BSI)

13 ಬರಮಾಡುವೆನು ಮುಕ್ತಿಯನು ಹತ್ತಿರಕೆ ಅದಿನ್ನು ದೂರವಿರದು ನಿಮಗೆ. ತಡವಾಗದು ನಿಮಗೆ ನನ್ನ ರಕ್ಷಣೆ ಸಾಧಿಸುವೆನು ರಕ್ಷಣೆಯನ್ನು ಸಿಯೋನಿನಲೇ, ಬೀರುವೆನು ನನ್ನ ಮಹಿಮೆಯನ್ನು ಇಸ್ರಯೇಲ ಮೇಲೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನನ್ನ ನೀತಿಯನ್ನು ಹತ್ತಿರಕ್ಕೆ ಬರ ಮಾಡುವೆನು. ಅದು ಇನ್ನು ದೂರವಾಗಿರದು, ನನ್ನ ರಕ್ಷಣೆಯು ತಡವಾಗದು, ಚೀಯೋನಿನಲ್ಲಿ ರಕ್ಷಣಾ ಕಾರ್ಯವನ್ನು ನಡೆಸಿ ಇಸ್ರಾಯೇಲಿಗೆ ನನ್ನ ಮಹಿಮೆಯನ್ನು ದಯಪಾಲಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನನ್ನ ಧರ್ಮವನ್ನು ಹತ್ತಿರಕ್ಕೆ ಬರಮಾಡುವೆನು, ಅದು ಇನ್ನು ದೂರವಾಗಿರದು, ನನ್ನ ರಕ್ಷಣೆಯು ತಡವಾಗದು; ಚೀಯೋನಿನಲ್ಲಿ ರಕ್ಷಣಾಕಾರ್ಯವನ್ನು ನಡಿಸಿ ಇಸ್ರಾಯೇಲಿಗೆ ನನ್ನ ಮಹಿಮೆಯನ್ನು ದಯಪಾಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಾನು ಒಳ್ಳೆಯ ಕಾರ್ಯಗಳನ್ನು ಮಾಡುವೆನು. ನನ್ನ ಜನರನ್ನು ಬೇಗನೆ ರಕ್ಷಿಸುವೆನು. ಚೀಯೋನಿಗೆ, ಅಂದರೆ ನನ್ನ ಅದ್ಭುತವಾದ ಇಸ್ರೇಲಿಗೆ ರಕ್ಷಣೆಯನ್ನು ತರುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು. ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾಗದು, ನನ್ನ ಮಹಿಮೆಯಾಗಿರುವ ಇಸ್ರಾಯೇಲಿಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟುಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 46:13
34 ತಿಳಿವುಗಳ ಹೋಲಿಕೆ  

ಇಗೋ, ಸಮೀಪಿಸುತ್ತಿದೆ ನೀವು ಮುಕ್ತಿಹೊಂದುವದಿನ ಆತನೊಂದಿಗಿದೆ ಆತ ನೀಡುವ ಬಹುಮಾನ ಆತನ ಮುಂದಿದೆ ಆತ ಗಳಿಸಿದ ವರಮಾನ. ಇದನು ತಿಳಿಯಹೇಳಿರಿ ಸಿಯೋನೆಂಬಾಕೆಗೆ ಸರ್ವೇಶ್ವರನ ಆಜ್ಞೆಯಿದು ಜಗದ ದಿಗಂತದವರೆಗೆ.


ದುಃಖಿತರೆಲ್ಲರಿಗೆ ಸಾಂತ್ವನ ಸಾರಲೆಂದೇ ಕಳುಹಿಸಿದನಾತ ನನ್ನನು. ಸಿಯೋನಿನ ಶೋಕಾರ್ತರಿಗೆ ಬರಿಬೂದಿಗೆ ಬದಲು ಶಿರೋಭೂಷಣ, ದುಃಖತಾಪದ ಬದಲು ಆನಂದ ತೈಲ, ಸೊರಗಿದ್ದ ಮನಕೆ ಮೆಚ್ಚಿಕೆಯ ಮೇಲ್ವಸ್ತ್ರ ಒದಗಿಸಲೆಂದೇ ನನ್ನನ್ನು ಕಳುಹಿಸಿದನಾತ. ನೆಟ್ಟಿಹನು ಇವರನು ಸರ್ವೇಶ್ವರ ತನ್ನ ಮಹಿಮೆಯಾಗಿ ಹೆಸರ ಪಡೆವರಿವರು ‘ನೀತಿವೃಕ್ಷ’ಗಳೆಂಬುದಾಗಿ.


ದೇವರೇ ಉದ್ಧಾರಕನೆನಗೆ ಆತನಲ್ಲಿದೆ ನನಗೆ ನಿರ್ಭೀತ ನಂಬಿಕೆ. ದೇವಾದಿದೇವನೇ ಎನಗೆ ಶಕ್ತಿ ಆತನೆನ್ನ ಕೀರ್ತನೆಯ ವ್ಯಕ್ತಿ ತಂದಿಹನಾತ ಎನಗೆ ಮುಕ್ತಿ.”


ಹತ್ತಿರದಲ್ಲೇ ಇದೆ ನಾ ನೀಡುವ ಮುಕ್ತಿ ಸಿಗುವದು ನನ್ನಿಂದ ವಿಮೋಚನಾ ಶಕ್ತಿ ನ್ಯಾಯ ನೀಡುವೆನು ರಾಷ್ಟ್ರಗಳಿಗೆ ನನ್ನ ಭುಜಬಲದಿಂದ ನನ್ನನ್ನು ನಿರೀಕ್ಷಿಸಿಕೊಂಡಿರುವರು ಜನರು ದೂರದೇಶಗಳಿಂದ ಕಾದಿರುವರು ಆ ಭುಜಬಲ ಸಾಧನೆಗಾಗಿ ನಂಬಿಕೆಯಿಂದ.


ಜಯ ಜಯಕಾರ ಮಾಡು ಓ ಆಕಾಶವೇ, ಜಯಘೋಷ ಮಾಡು ಭೂ ತಳವೇ, ಹರ್ಷಧ್ವನಿಗೈಯಿರಿ ಬೆಟ್ಟಗುಡ್ಡಗಳೇ ವನವೃಕ್ಷಗಳೇ. ವಿಮೋಚಿಸಿದನು ಸರ್ವೇಶ್ವರ ಯಕೋಬನನು, ಇಸ್ರಯೇಲನ್ನು ರಕ್ಷಿಸಿ ಪ್ರಚಾರಗೊಳಿಸಿದನು ತನ್ನ ಮಹಿಮೆಯನು.


ಕರೆತರುವೆ ಈ ಪರಿ ನನ್ನ ನಾಮಧಾರಿಗಳೆಲ್ಲರನು ನನ್ನ ಮಹಿಮೆಗಾಗಿ ನಾನು ಸೃಷ್ಟಿಸಿ ರೂಪಿಸಿದವರನು.


ಈ ಕಾರಣದಿಂದಲೇ ಪವಿತ್ರಗ್ರಂಥ ಇಂತೆನ್ನುತ್ತದೆ : “ಅಮೂಲ್ಯ ಶಿಲೆಯೊಂದನ್ನು ನಾನಾರಿಸಿಕೊಂಡೆ. ಸಿಯೋನಿನಲ್ಲಿ ಅದನ್ನೇ ಮುಖ್ಯ ಮೂಲೆಗಲ್ಲನ್ನಾಗಿರಿಸಿದೆ. ಎಂದಿಗೂ ಆಶಾಭಂಗವಾಗದು ಅದರ ಮೇಲೆ ವಿಶ್ವಾಸವಿಡುವವರಿಗೆ.”


ಪ್ರಭು ತಮ್ಮ ಸದ್ಭಕ್ತರೆಲ್ಲರಿಂದ ಸನ್ಮಾನವನ್ನೂ ವಿಶ್ವಾಸಿಗಳೆಲ್ಲರಿಂದ ಗೌರವವನ್ನೂ ಪಡೆಯುವ ಆ ದಿನದಲ್ಲಿ ಇದೆಲ್ಲಾ ಸಂಭವಿಸುವುದು. ನಾವು ನಿಮಗಿತ್ತ ಸಾಕ್ಷಿಯನ್ನು ನಂಬಿದ ನೀವೆಲ್ಲರೂ ಅವರೊಂದಿಗಿರುವಿರಿ.


ನಿಯಮಿತ ಕಾಲದಲ್ಲಿ ಆ ದರ್ಶನ ನೆರವೇರುವುದು. ಅದರ ಅಂತಿಮ ಪರಿಣಾಮ ಶೀಘ್ರದಲ್ಲಿ ಗೊತ್ತಾಗುವುದು. ತಡವಾದರೂ ಕಾದಿರು; ಮೋಸಮಾಡದು. ಅದು ಖಂಡಿತವಾಗಿ ಕೈಗೂಡುವುದು; ತಾಮಸವಾಗದು.


“ಇಸ್ರಯೇಲರೇ, ಕೇಳಿ, ಪವಿತ್ರಪರ್ವತವಾದ ಸಿಯೋನಿನಲ್ಲಿ ನೆಲೆಯಾಗಿರುವ ನಿಮ್ಮ ಸರ್ವೇಶ್ವರಸ್ವಾಮಿ ದೇವರು ನಾನೇ ಎಂದು ಆಗ ನಿಮಗೆ ಮನದಟ್ಟಾಗುವುದು. ಜೆರುಸಲೇಮ್ ಪುಣ್ಯಕ್ಷೇತ್ರವೆನಿಸಿಕೊಳ್ಳುವುದು. ಪರಕೀಯರು ಅದನ್ನೆಂದಿಗೂ ಆಕ್ರಮಿಸರು.


ಬುವಿಯು ತನ್ನಿಂದ ಬೀಜವನು ಮೊಳೆಯಿಸುವಂತೆ ತೋಟವು ತನ್ನೊಳು ಸಸಿಯನು ಬೆಳೆಸುವಂತೆ ಸ್ವಾಮಿ ಸರ್ವೇಶ್ವರ, ಸಮಸ್ತ ರಾಷ್ಟ್ರಗಳ ಮುಂದೆ ವೃದ್ಧಿಗೊಳಿಸುವನು ಸದ್ಧರ್ಮವನೆ, ಸ್ತುತಿಸ್ತೋತ್ರವನೆ.


ಏಕೆಂದರೆ : “ಇನ್ನು ಅಲ್ಪ, ಅತ್ಯಲ್ಪ ಕಾಲದಲ್ಲೇ ಬರುವಾತನು ಬಂದೇ ಬರುವನು, ವಿಳಂಬಮಾಡನು.


ಹೀಗೆ ನಿಮ್ಮ ಮುಖಾಂತರ ಪ್ರಭು ಯೇಸುವಿನ ನಾಮಕ್ಕೂ ಮತ್ತು ಅವರಲ್ಲಿ ನಿಮಗೂ ಮಹಿಮೆಯುಂಟಾಗಲಿ. ನಮ್ಮ ದೇವರ ಹಾಗು ಪ್ರಭು ಯೇಸುಕ್ರಿಸ್ತರ ಅನುಗ್ರಹದಿಂದ ಇದು ನೆರವೇರಲಿ.


ತಮ್ಮ ಪ್ರೀತಿಯ ಪುತ್ರನಲ್ಲೇ ಅವರು ನಮಗೆ ಉಚಿತವಾಗಿ ಅನುಗ್ರಹಿಸಿರುವ ಅತಿಶಯ ವರಪ್ರಸಾದಕ್ಕಾಗಿ ಅವರಿಗೆ ಸ್ತುತಿಸಲ್ಲಿಸೋಣ.


ದೇವರು ಮಾನವನನ್ನು ಹೇಗೆ ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ ಎಂಬುದನ್ನು ಶುಭಸಂದೇಶವು ಪ್ರಕಟಿಸುತ್ತದೆ. ಇಂಥ ಸಂಬಂಧವು ಆದಿಯಿಂದ ಅಂತ್ಯದವರೆಗೂ ವಿಶ್ವಾಸದಿಂದ ಮಾತ್ರ ಸಾಧ್ಯ. “ಯಾರು ದೇವರೊಡನೆ ಸತ್ಸಂಬಂಧ ಹೊಂದಿರುತ್ತಾರೋ ಅವರು ವಿಶ್ವಾಸದಿಂದಲೇ ಸಜ್ಜೀವವನ್ನು ಪಡೆಯುತ್ತಾರೆ," ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ಏಕೆಂದರೆ, ಇವರು ನಿಮ್ಮವರು; ಇವರಿಂದ ನನಗೆ ಮಹಿಮೆ ಉಂಟಾಗಿದೆ. ನನ್ನದೆಲ್ಲವೂ ನಿಮ್ಮದೇ; ನಿಮ್ಮದು ಎಲ್ಲವೂ ನನ್ನದೇ.


ಮಲೆನಾಡಿಗೆ ಹೋಗಿ ಮರವನ್ನು ತಂದು ನನ್ನ ಆಲಯವನ್ನು ಕಟ್ಟಿರಿ. ಆಗ ನಾನು ಪ್ರಸನ್ನನಾಗುವೆನು. ನನ್ನ ಮಹಿಮೆಯನ್ನು ಪ್ರಕಟಿಸುವೆನು,” ಎಂದು ನುಡಿಯುತ್ತಾರೆ ಸ್ವಾಮಿ.


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲ ಸೌಭಾಗ್ಯಗಳ ಸುದ್ದಿಯನ್ನು ಸಕಲ ಭೂರಾಜ್ಯಗಳು ಕೇಳುವರು. ಈ ನಗರಕ್ಕೆ ನಾನು ನೀಡುವ ಸುಖಸಮಾಧಾನಗಳನ್ನು ಅವರು ನೋಡುವರು ಹಾಗೂ ಹೆದರಿ ನಡುಗುವರು. ಇದರಿಂದಾಗಿ ಆ ಎಲ್ಲ ರಾಜ್ಯಗಳ ಮುಂದೆ ನನಗೆ ಅದು ಕೀರ್ತಿಯನ್ನು, ಮಹಿಮೆಯನ್ನು ಹಾಗೂ ಆನಂದವನ್ನು ತರುವುದು.”


ಸದ್ಧರ್ಮಿಗಳಾಗಿರುವರು ನಿನ್ನ ಜನರೆಲ್ಲರು ಆಗುವರವರು ನಾಡಿಗೆ ಶಾಶ್ವತ ಬಾಧ್ಯಸ್ಥರು ನನ್ನ ಮಹಿಮೆಗಾಗಿ ನಾ ನೆಟ್ಟ ಸಸಿಗಳವರು ನನ್ನ ಕೈಗಳು ಸೃಷ್ಟಿಸಿದ ಪ್ರಜೆಗಳವರು.


ಎಂದೇ, ಒಡೆಯರಾದ ಸರ್ವೇಶ್ವರ ಹೀಗೆನ್ನುತ್ತಾರೆ : ‘ಇಗೋ, ನಾನು ಸಿಯೋನಿನಲ್ಲಿ ಅಸ್ತಿವಾರದ ಕಲ್ಲೊಂದನ್ನು ಇಡುತ್ತೇನೆ. ಅದು ಸ್ಥಿರವಾದ, ಪರೀಕ್ಷಿತವಾದ, ಮೌಲ್ಯವಾದ ಮೂಲೆಗಲ್ಲು. ಇದರಲ್ಲಿ ವಿಶ್ವಾಸವಿಡುವವನು ತಾಳ್ಮೆಯಿಂದ ಬಾಳುವನು.


ದೇವನಿರುವನಾ ನಗರ ಮಧ್ಯೆ, ಅಳಿವಿಲ್ಲ ಅದಕೆ I ಉದಯಕಾಲದಲೆ ದೇವ ಬರುವನು ಅದರ ಸಹಾಯಕೆ II


ದೇವರೆಮಗೆ ಆಶ್ರಯ ದುರ್ಗ I ಸಂಕಟದಲಿ ಸಿದ್ಧ ಸಹಾಯಕ II


ಬರಲಿ ಇಸ್ರಯೇಲಿಗೆ ಜೀವೋದ್ಧಾರ ಸಿಯೋನಿನಿಂದ I ತರಲಿ ಪ್ರಭು ತನ್ನ ಪ್ರಜೆಗೆ ಮರಳಿ ಸಿರಿಸಂಪತ್ತ I ಸಿಗಲಿ ಯಕೋಬ - ಇಸ್ರಯೇಲ ಜನತೆಗೆ ಹರ್ಷಾನಂದ II


ಭಯಭಕ್ತಿಯುಳ್ಳವರಿಗಾತನ ರಕ್ಷಣೆ ಸನ್ನಿಹಿತ I ಇದರಿಂದಾತನ ಮಹಿಮೆ ನಾಡಿಲ್ಲಿರುವುದು ನಿರುತ II


ಸಫಲವಾಗದು ನಿನ್ನ ವಿರುದ್ಧ ಪ್ರಯೋಗಿಸಿದ ಆಯುಧ ನ್ಯಾಯಸ್ಥಾನದಲ್ಲಿ ನಿನ್ನ ಪ್ರತಿವಾದಿ ಪಡೆವನು ಅಪಜಯ ನನ್ನ ದಾಸನನು ರಕ್ಷಿಸಿ ಆತನಿಗೆ ನೀಡುವೆ ವಿಜಯ” ಇದು ಸರ್ವೇಶ್ವರನ ವಾಕ್ಯ.


ಸರ್ವೇಶ್ವರ ಸ್ವಾಮಿ ಹೇಳುವುದು ಏನೆಂದರೆ : ನ್ಯಾಯವನ್ನು ಅನುಸರಿಸಿರಿ. ನೀತಿಯನ್ನು ಆಚರಿಸಿರಿ. ಏಕೆಂದರೆ ನಾನೀಡುವ ಮುಕ್ತಿಯು ಬೇಗನೆ ಬರುವುದು; ನಾನು ತರುವ ಸತ್ಸಂಬಂಧವು ಕೂಡಲೆ ಬೆಳಗುವುದು.


ಸಿಯೋನಿನ ಸದ್ಧರ್ಮವು ಪ್ರಕಾಶಗೊಳ್ಳುವತನಕ ಜೆರುಸಲೇಮಿನ ಉದ್ಧಾರ ದೀಪವು ಬೆಳಗುವತನಕ ಸುಮ್ಮನಿರೆನು ನಾನು ಸಿಯೋನಿನ ಹಿತವನ್ನು ಲಕ್ಷಿಸದೆ, ಮೌನವಿರೆನು ಜೆರುಸಲೇಮಿನ ಸುಕ್ಷೇಮವನು ಚಿಂತಿಸದೆ.


ಆದರೆ ಸರ್ವೇಶ್ವರಸ್ವಾಮಿಯ ನಾಮಸ್ಮರಣೆ ಮಾಡುವವರೆಲ್ಲರೂ ಜೀವೋದ್ಧಾರವನ್ನು ಪಡೆಯುವರು. ಅವರೇ ತಿಳಿಸಿರುವಂತೆ ಸಿಯೋನ್ ಪರ್ವತದಲ್ಲೂ ಜೆರುಸಲೇಮಿನಲ್ಲೂ ಅನೇಕರಿಗೆ ಮುಕ್ತಿ ದೊರಕುವುದು. ಅಳಿದುಳಿದವರಲ್ಲಿ ಆ ಸ್ವಾಮಿಯ ಕರೆಹೊಂದಿದವರು ಬದುಕುವರು.”


ಆ ಸ್ವಾಮಿಗೆ ವಿರುದ್ಧ ನಾನು ಪಾಪಮಾಡಿದ್ದರಿಂದ ಅವರ ಕೋಪವನ್ನು ನಾನು ಸಹಿಸಿಕೊಳ್ಳಬೇಕಾಗುತ್ತದೆ. ಅವರು ನನ್ನ ಪರವಾಗಿ ವಾದಿಸಿ ನನಗಾದ ಅನ್ಯಾಯವನ್ನು ನೀಗಿಸುವರು; ನನ್ನನ್ನು ಕತ್ತಲೆಯಿಂದ ಬೆಳಕಿಗೆ ತರುವರು. ಅವರಿಂದ ಬರುವ ರಕ್ಷಣಾನೀತಿಯನ್ನು ಆಗ ಸವಿಯುವೆನು.


ಪ್ರೀತಿಯೂ ಸತ್ಯವೂ ಒಂದನ್ನೊಂದು ಕೂಡಿರುವುವು I ನೀತಿಯೂ ಶಾಂತಿಯೂ ಒಂದನ್ನೊಂದು ಚುಂಬಿಸುವುವು II


ವರ್ಷಿಸಲಿ ಸದ್ಧರ್ಮವನು ಆಕಾಶಮಂಡಲ ಸುರಿಸಲಿ ಮೇಲಿಂದ ಅದನ್ನು ಆ ಗಗನಮಂಡಲ; ಅಂಕುರಿಸಲಿ ಜೀವೋದ್ಧಾರವನು ಭೂಮಂಡಲ ಬೆಳೆಯಲಿ ಅದರೊಡನೆಯೇ ಸದ್ಧರ್ಮದ ಫಲ, ಸರ್ವೇಶ್ವರನಾದ ನಾನೇ ಕರ್ತ ಇದಕ್ಕೆಲ್ಲಾ.”


ನಿರೀಕ್ಷಿಸುತ್ತಿಹರು ನನ್ನನು ದೂರದ ನಿವಾಸಿಗಳು ಮುಂದಾಗಿ ಬರುತಿಹವು ತಾರ್ಷೀಷಿನ ಹಡಗುಗಳು, ನಿನ್ನ ದೇವರಾದ ಸರ್ವೇಶ್ವರನ ಶ್ರೀನಾಮ ನಿಧಿಯಾದ ಇಲ್ಲಿಗೆ; ನಿನ್ನ ಘನಪಡಿಸಿದ ಇಸ್ರಯೇಲಿನ ಪರಮಪಾವನನ ಸನ್ನಿಧಿಗೆ. ಹೊತ್ತು ತರುತಿಹರು ನಿನ್ನ ಮಕ್ಕಳನು ಜೊತೆಗೆ ಅವರ ಬೆಳ್ಳಿಬಂಗಾರಗಳನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು