Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 46:6 - ಕನ್ನಡ ಸತ್ಯವೇದವು C.L. Bible (BSI)

6 ಸುರಿಯುತ್ತಾರೆ ಜನರು ಚಿನ್ನವನ್ನು ಚೀಲದಿಂದ ತೂಗಿ ತೂಕಹಾಕುತ್ತಾರೆ ಬೆಳ್ಳಿಯನ್ನು ತಕ್ಕಡಿಯಿಂದ. ದೇವರನ್ನು ಮಾಡಿಸುತ್ತಾರೆ ಕೂಲಿಕೊಟ್ಟು ಅಕ್ಕಸಾಲಿಗನಿಂದ ಪೂಜಿಸುತ್ತಾರೆ ಅದನ್ನು ಸಾಷ್ಟಾಂಗ ನಮಸ್ಕಾರದಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಚೀಲದಿಂದ ಚಿನ್ನವನ್ನು ಸುರಿದು, ತಕ್ಕಡಿಯಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೊಟ್ಟು ಕೂಲಿಯನ್ನು ಗೊತ್ತುಮಾಡಿದಾಗ, ಅವನು ಅದನ್ನು ದೇವರನ್ನಾಗಿ ಮಾಡಲು, ಅವರು ಅದಕ್ಕೆ ಎರಗಿ ಪೂಜೆಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಚೀಲದಿಂದ ಚಿನ್ನವನ್ನು ಸುರಿದು ತ್ರಾಸಿನಲ್ಲಿ ಬೆಳ್ಳಿಯನ್ನು ತೂಗಿ ಅಕ್ಕಸಾಲಿಗನಿಗೆ ಕೊಟ್ಟು ಕೂಲಿಗೊತ್ತುಮಾಡಿ ದೇವರನ್ನು ಮಾಡಿಸಿ ಅದಕ್ಕೆ ಎರಗಿ ಪೂಜೆಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಕೆಲವರು ಬೆಳ್ಳಿಬಂಗಾರಗಳಲ್ಲಿ ಐಶ್ವರ್ಯವಂತರಾಗಿದ್ದಾರೆ. ಅವರ ಕೈಚೀಲಗಳಿಂದ ಬಂಗಾರವು ಉದುರುತ್ತವೆ, ಅವರು ತಕ್ಕಡಿಯಲ್ಲಿ ಬೆಳ್ಳಿಯನ್ನು ತೂಗುತ್ತಾರೆ; ಕುಶಲಕರ್ಮಿಗಳಿಗೆ ಹಣಕೊಟ್ಟು ಮರದಿಂದ ವಿಗ್ರಹವನ್ನು ಮಾಡಿಸಿಕೊಳ್ಳುತ್ತಾರೆ. ಆಮೇಲೆ ಅವರು ಆ ವಿಗ್ರಹಕ್ಕೆ ಅಡ್ಡಬಿದ್ದು ಪೂಜೆ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಚೀಲದಿಂದ ಚಿನ್ನವನ್ನು ಸುರಿದು, ತಕ್ಕಡಿಯಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೂಲಿ ಕೊಟ್ಟಾಗ, ಅವನು ಅದನ್ನು ದೇವರನ್ನಾಗಿ ಮಾಡಲು, ಅವರು ಅದಕ್ಕೆ ಎರಗಿ ಪೂಜೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 46:6
21 ತಿಳಿವುಗಳ ಹೋಲಿಕೆ  

“ನಾವು ದೇವರ ಮಕ್ಕಳಾಗಿರುವುದರಿಂದ ಜನರು ಕಲಾಕುಶಲತೆಯಿಂದಲೂ ಕಲ್ಪನೆಯಿಂದಲೂ ರೂಪಿಸಿದ ಚಿನ್ನ, ಬೆಳ್ಳಿ, ಶಿಲೆಗಳ ಪ್ರತಿಮೆಗೆ ದೇವರು ಸಮಾನರೆಂದು ಭಾವಿಸಲಾಗದು.


ಇದರ ಮುಂದೆ ತಿಳುವಳಿಕೆಯಿಲ್ಲದ ಪಶುಪ್ರಾಯರು ಜನರೆಲ್ಲರು. ತಾನು ಕೆತ್ತಿದ ವಿಗ್ರಹಕ್ಕಾಗಿ ಹೇಸುವನು ಪ್ರತಿಯೊಬ್ಬ ಅಕ್ಕಸಾಲಿಗನು. ಅವನು ಎರಕ ಹೊಯ್ದ ವಿಗ್ರಹಗಳು ಟೊಳ್ಳು, ಶ್ವಾಸವಿಲ್ಲದವುಗಳು.


ಆ ಬೊಂಬೆಗಳ ಭೂಷಣಕ್ಕಾಗಿ ಸಾಗಿಬರುತ್ತವೆ ತಾರ್ಷೀಷಿನಿಂದ ಬೆಳ್ಳೀತಗಡುಗಳು, ಊಫಜಿನಿಂದ ಚಿನ್ನ. ಅವು ಕೆತ್ತನೆಗಾರನ, ಎರಕದವನ ಕೈಕೆಲಸಗಳು ಅವುಗಳ ಉಡುಪು ನೀಲಧೂಮ್ರ ವರ್ಣದ ವಸ್ತ್ರಗಳು. ಇವೆಲ್ಲವು ಕೇವಲ ಕಲಾಕುಶಲರ ಕೌಶಲ್ಯಗಳು.


ದೇಶದಲ್ಲಿ ವಿಗ್ರಹಗಳು ತುಂಬಿ ತುಳುಕುತ್ತಿವೆ. ಜನರು ತಮ್ಮ ಕೈಯಿಂದ ಮಾಡಿದ ವಿಗ್ರಹಗಳನ್ನೇ ಪೂಜಿಸುತ್ತಿದ್ದಾರೆ.


ಬಹಳವಾಗಿ ಆಲೋಚಿಸಿ, ಕಡೆಗೆ ಬಂಗಾರದ ಎರಡು ಹೋರಿಕರುಗಳ ಮೂರ್ತಿಗಳನ್ನು ಮಾಡಿಸಿ, ಇಸ್ರಯೇಲರಿಗೆ, “ನೀವು ಜಾತ್ರೆಗಾಗಿ ಜೆರುಸಲೇಮಿಗೆ ಹೋದದ್ದು ಇನ್ನು ಸಾಕು. ಇಗೋ, ನಿಮ್ಮನ್ನು ಈಜಿಪ್ಟಿನಿಂದ ಕರೆದುತಂದ ದೇವರುಗಳು ಇಲ್ಲಿರುತ್ತವೆ,” ಎಂದು ಹೇಳಿ


“ಅಳಿದುಳಿದ ಅನ್ಯಜನರೇ, ನೆರೆದು ಬನ್ನಿ, ಒಟ್ಟಿಗೆ ನನ್ನ ಬಳಿಗೆ ಬನ್ನಿ. ತಮ್ಮ ಮರದ ಬೊಂಬೆಯನು ಹೊತ್ತು ತಿರುಗುವವರು ರಕ್ಷಿಸಲಾಗದ ದೇವತೆಗೆ ಮೊರೆಯಿಡುವ ಬುದ್ಧಿಹೀನರು.


ಆಗ ಬೆಳ್ಳಿಯ ಕವಚಗಳಿಂದ ಕೂಡಿದ ನಿಮ್ಮ ವಿಗ್ರಹಗಳನ್ನೂ ಚಿನ್ನದಿಂದ ಲೇಪಿತವಾದ ನಿಮ್ಮ ಬೊಂಬೆಗಳನ್ನೂ ಬಿಸಾಡುವಿರಿ. ಅವುಗಳನ್ನು ಹೊಲೆಮಾಡಿ ‘ತೊಲಗಿ’ ಎಂದು ಹೇಳುತ್ತಾ ಎಸೆದುಬಿಡುವಿರಿ.


ಅವರ ನೀರನ್ನೆಲ್ಲ ಹೀರಲಿ ಬೇಗನೆ ಬತ್ತಿಹೋಗಲಿ ಅವರ ತೊರೆ. ಅಕಟಾ! ತುಂಬಿದೆ ಆ ದೇಶ ಬೊಂಬೆಗಳಿಂದ ಮದವೇರಿದೆ ಅದರ ಜನತೆಗೆ ವಿಗ್ರಹಾರಾಧನೆಯಿಂದ.


ರಾಜ ನೆಬೂಕದ್ನೆಚ್ಚರನು 27 ಮೀಟರ್ ಎತ್ತರದ 3 ಮೀಟರ್ ಅಗಲದ ಒಂದು ಬಂಗಾರದ ಪ್ರತಿಮೆಯನ್ನು ಮಾಡಿಸಿ ಬಾಬಿಲೋನ್ ಸಂಸ್ಥಾನದ ‘ದೂರಾ’ ಎಂಬ ಬಯಲಿನಲ್ಲಿ ನಿಲ್ಲಿಸಿದನು.


ಈಗ ಎಫ್ರಯಿಮರ ಪಾಪ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅವರು ಬೆಳ್ಳಿಬಂಗಾರವನ್ನು ಕರಗಿಸಿ ಇಷ್ಟಬಂದಂತೆ ಬೊಂಬೆಗಳನ್ನು ಮಾಡಿಕೊಂಡಿದ್ದಾರೆ. ಅವೆಲ್ಲವು ಶಿಲ್ಪಿಗಳ ಕೈಕೆಲಸವೇ ಹೊರತು ಮತ್ತೇನು ಅಲ್ಲ. ಇಂಥ ವಿಗ್ರಹಗಳನ್ನು ಪೂಜೆಗಾಗಿ ಪ್ರತಿಷ್ಠಾಪನೆಮಾಡುತ್ತಾರೆ. ಬುದ್ಧಿಜೀವಿಗಳಾದ ಇವರು ಬಸವನಿಗೆ ಮುದ್ದಿಡುತ್ತಾರೆ.


ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಇಷ್ಟು ಬೇಗನೆ ತೊರೆದುಬಿಟ್ಟು ತಮಗೇ ಲೋಹದ ಹೋರಿಕರುವನ್ನು ಮಾಡಿಸಿಕೊಂಡು, ಅದಕ್ಕೆ ಅಡ್ಡಬಿದ್ದು, ಬಲಿಗಳನ್ನರ್ಪಿಸಿ, ‘ಇಸ್ರಯೇಲರೇ ನೋಡಿ, ನಿಮ್ಮನ್ನು ಈಜಿಪ್ಟಿನಿಂದ ಕರೆದುತಂದ ದೇವರು’ ಎಂದು ಹೇಳಿಕೊಳ್ಳುತ್ತಿದ್ದಾರೆ.


ಕೈಯಿದ್ದರೂ ಅವು ಮುಟ್ಟುವುದಿಲ್ಲ I ಕಾಲಿದ್ದರೂ ಅವು ನಡೆಯುವುದಿಲ್ಲ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು