Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 47:6 - ಕನ್ನಡ ಸತ್ಯವೇದವು C.L. Bible (BSI)

6 “ನಾ ರೋಷಗೊಂಡು ನನ್ನ ಜನರನ್ನೇ ನಿನ್ನ ಕೈವಶಮಾಡಿದೆ ನನಗೆ ಸ್ವಂತವಾದವರನ್ನೇ ಈ ಪರಿ ಹೊಲೆಗೆಡಿಸಿದೆ. ನೀನಾದರೋ ಕರುಣೆ ತೋರಿಸದೆಹೋದೆ ಮುದುಕರ ಮೇಲೂ ತೂಕದ ನೊಗವನು ಹೊರಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾನು ನನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವತ್ತನ್ನು ಹೊಲೆಗೆಡಿಸಿದೆನು. ಅವರನ್ನು ನಿನ್ನ ಕೈವಶ ಮಾಡಳು, ನೀನು ಅವರನ್ನು ಕರುಣಿಸದೆ ಬಹುಭಾರವಾದ ನೊಗವನ್ನು ಹೊರಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಾನು ನನ್ನ ಜನರ ಮೇಲೆ ರೋಷಗೊಂಡು ಅವರನ್ನು ನಿನ್ನ ಕೈವಶ ಮಾಡಿ ನನ್ನ ಸ್ವಾಸ್ತ್ಯವನ್ನು ಹೊಲೆಗೆಡಿಸಿದೆನು; ನೀನು ಅವರನ್ನು ಹೇಗೂ ಕರುಣಿಸದೆ ಮುದುಕರ ಮೇಲೆಯೂ ಬಹುಭಾರವಾದ ನೊಗವನ್ನು ಹೊರಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ನನ್ನ ಜನರ ಮೇಲೆ ನಾನು ಸಿಟ್ಟಿಗೆದ್ದಿದ್ದೆನು. ಅವರು ನನಗೆ ಸೇರಿದವರಾಗಿದ್ದಾರೆ. ಆದರೆ ನಾನು ಅವರ ಮೇಲೆ ಸಿಟ್ಟಾದೆನು. ಆದ್ದರಿಂದ ನಾನು ಅವರನ್ನು ತಳ್ಳಿಬಿಟ್ಟೆನು. ಅವರನ್ನು ನಿನಗೆ ಕೊಟ್ಟೆನು; ನೀನು ಅವರನ್ನು ಶಿಕ್ಷಿಸಿದೆ. ಅವರ ಮೇಲೆ ಕರುಣೆ ತೋರಿಸಲಿಲ್ಲ. ವೃದ್ಧರೂ ಕಷ್ಟದ ಕೆಲಸ ಮಾಡುವಂತೆ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಾನು ನಿನ್ನ ಜನರ ಮೇಲೆ ರೋಷಗೊಂಡು, ನನ್ನ ಸೊತ್ತನ್ನು ಅಪವಿತ್ರ ಮಾಡಿ, ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಬಿಟ್ಟೆನು. ನೀನು ಅವರಿಗೆ ಕರುಣೆಯನ್ನು ತೋರಿಸದೆ, ವೃದ್ಧರ ಮೇಲೆಯೂ, ಬಹು ಭಾರವಾದ ನೊಗವನ್ನು ಹೊರಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 47:6
28 ತಿಳಿವುಗಳ ಹೋಲಿಕೆ  

ನೆಮ್ಮದಿಯಿಂದ ಬಾಳುವ ರಾಷ್ಟ್ರಗಳ ಮೇಲೆ ಬಹಳ ಸಿಟ್ಟುಗೊಂಡಿದ್ದೇನೆ. ಏಕೆಂದರೆ, ನಾನು ಜೆರುಸಲೇಮಿನ ವಿರುದ್ಧ ಕಿಂಚಿತ್ತೇ ಕೋಪಗೊಂಡಿದ್ದಾಗ ಅವರು ಕೇಡಿಗೆ ಕೇಡು ಕೂಡಿಸಿಬಿಟ್ಟರು.


ಸಮಾರಿಯದಲ್ಲಿ ಸರ್ವೇಶ್ವರನ ಒಬ್ಬ ಪ್ರವಾದಿ ಇದ್ದನು. ಅವನ ಹೆಸರು ಓದೇದ್. ಅವನು ಸಮಾರಿಯಕ್ಕೆ ಬರುತ್ತಿದ್ದ ಸೈನ್ಯದವರನ್ನು ಎದುರುಗೊಂಡು, “ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರನು ಯೆಹೂದ್ಯರ ಮೇಲೆ ಕೋಪಗೊಂಡು ಅವರನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟರು. ಅವರನ್ನು ಸಂಹರಿಸುವುದರಲ್ಲಿ ನಿಮ್ಮ ರೌದ್ರ ಆಕಾಶವನ್ನು ಮುಟ್ಟಿತು.


ಆ ಜನಾಂಗದವರು ಕ್ರೂರಮುಖವುಳ್ಳವರು; ನೀವು ವೃದ್ಧರೆಂದು ಮರ್ಯಾದೆ ತೋರಿಸುವುದಿಲ್ಲ, ಚಿಕ್ಕವರೆಂದು ಕನಿಕರಿಸುವುದಿಲ್ಲ.


“ನಿನ್ನ ತಮ್ಮನಾದ ಯಕೋಬನ ವಿರುದ್ಧ ನಡೆಸಿದ ಹಿಂಸಾಕೃತ್ಯಗಳಿಗಾಗಿ ನೀನು ಅವಮಾನಕ್ಕೊಳಗಾಗುವೆ. ನಿತ್ಯನಾಶನಕ್ಕೆ ಈಡಾಗುವೆ.


ದಯೆತೋರದವನಿಗೆ, ದಯೆದಾಕ್ಷಿಣ್ಯವಿಲ್ಲದ ನ್ಯಾಯತೀರ್ಪು ಕಾದಿರುತ್ತದೆ. ನ್ಯಾಯಕ್ಕೂ ಮಿಗಿಲಾಗಿ ವಿಜೃಂಭಿಸುವುದು ದಯೆಯೇ.


ನೀ ಗಾಯಪಡಿಸಿದವರನು ಪೀಡಿಸುತಿಹರು I ಗಾಯದ ಮೇಲೆ ಬರೆಯೆಳೆಯುತಿಹರು II


ಜನರೇ, ಪವಿತ್ರಪರ್ವತದ ಮೇಲೆ ನನ್ನ ದಂಡನೆಯ ಕಹಿಪಾನಮಾಡಿದಿರಿ. ಅಂತೆಯೇ ಸಕಲ ರಾಷ್ಟ್ರಗಳೂ ಕಹಿಪಾನ ಮಾಡುವುವು. ಹೌದು, ಪದೇಪದೇ ಪಾನಮಾಡಿ ತೂರಾಡುವುವು. ಅಂತ್ಯದಲ್ಲಿ ಇಲ್ಲದಂತಾಗುವುವು.


ನಗರಗಳನು ಕೆಡವಿಸಿದವನು, ನಾಡನು ಕಾಡಾಗಿಸಿದವನು, ಖೈದಿಗಳನು ಬಂಧನದಿಂದ ಬಿಡಿಸಿದವನು ಈತನೇ ಅಲ್ಲವೆ?’ ಎಂದಾಡಿಕೊಳ್ವರು.


ಆ ಧರ್ಮಭ್ರಷ್ಟ ಪ್ರಜೆಗೆ ಇದಿರಾಗಿ ಅಸ್ಸೀರಿಯವನ್ನು ಕಳುಹಿಸುತ್ತೇನೆ. ನನ್ನ ಕೋಪಕ್ಕೆ ಗುರಿಯಾದ ಜನರಿಗೆ ವಿರುದ್ಧ ಕಾರ್ಯವನ್ನು ಕೈಗೊಳ್ಳಲು ಆಜ್ಞೆ ಮಾಡುತ್ತೇನೆ. ನನ್ನ ಪ್ರಜೆಯನ್ನು ಸೂರೆಮಾಡಲು, ಕೊಳ್ಳೆಹೊಡೆಯಲು, ಬೀದಿಯ ಕಸದಂತೆ ತುಳಿದುಬಿಡಲು ಅದಕ್ಕೆ ಆಜ್ಞೆಮಾಡುತ್ತೇನೆ.


ನೀವು ಇತರರ ಬಗ್ಗೆ ಕೊಡುವ ತೀರ್ಪಿಗೆ ಅನುಗುಣವಾಗಿಯೇ ದೇವರು ನಿಮಗೂ ತೀರ್ಪುಕೊಡುವರು. ಇತರರಿಗೆ ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದುಕೊಡುವರು.


ನೀ ಪಾಪಿಯಾದೆ ಮಿತಿಯಿಲ್ಲದ ವ್ಯಾಪಾರದಿಂದ ನಿನ್ನಲ್ಲಿ ಹಿಂಸಾಚಾರಗಳು ತುಂಬಿಕೊಂಡದ್ದರಿಂದ. ಎಂದೇ, ಹೊಲಸೆಂಬಂತೆ ನಿನ್ನ ತಳ್ಳಿಬಿಟ್ಟೆ ದೇವರ ಬೆಟ್ಟದಿಂದ ಕಿತ್ತೆಸೆದುಬಿಟ್ಟೆ ಕೆಂಡದ ನಡು ಮಡುವಿನ ನೆಲೆಯಿಂದ ನೆರಳು ನೀಡುವ ಕೆರೂಬಿಯೇ ಎಸೆಯಿತು ನಿನ್ನನ್ನು ಅಲ್ಲಿಂದ.


ಇಸ್ರಯೇಲ್ ವಂಶದವರಿಗೆ ಹೀಗೆ ಸಾರು - ಹಾ, ನಿಮಗೆ ಮುಖ್ಯಬಲ, ನೇತ್ರಾನಂದ ಹಾಗು ಪ್ರಾಣಪ್ರಿಯ ಆದ ನನ್ನ ಪವಿತ್ರಾಲಯವನ್ನು ನಾನು ಅಪವಿತ್ರಮಾಡಿಸುವೆನು; ನೀವು ಬಿಟ್ಟುಬಂದಿರುವ ನಿಮ್ಮ ಗಂಡು ಹೆಣ್ಣುಮಕ್ಕಳು ಖಡ್ಗಕ್ಕೆ ತುತ್ತಾಗುವರು, ಎಂಬುದಾಗಿ ಸರ್ವೇಶ್ವರನಾದ ದೇವರು ನುಡಿದಿದ್ದಾರೆ.


ಸ್ವಾಮಿ ಯಕೋಬಿನ ನಿವಾಸಿಗಳನ್ನು ನಾಶಪಡಿಸಿಹನು, ರೌದ್ರದಿಂದ ಯೆಹೂದ ಕೋಟೆಗಳನ್ನು ನೆಲಸಮವಾಗಿಸಿಹನು, ರಾಜ್ಯವನ್ನೂ ಅದರ ಪಾಲಕರನ್ನೂ ನೀಚಸ್ಥಿತಿಗೆ ಇಳಿಸಿಹನು.


ಎಂದೇ ಗುರಿಮಾಡಿದೆ ಯಕೋಬನ್ನು ಶಾಪಕ್ಕೆ ಈಡುಪಡಿಸಿದೆ ಇಸ್ರಯೇಲನ್ನು ನಿಂದೆದೂಷಣೆಗೆ.”


ಅವರ ಮಕ್ಕಳನ್ನು ಬಂಡೆಗೆ ಅಪ್ಪಳಿಸಲಾಗುವುದು. ಅವರ ಮನೆಗಳನ್ನು ಸೂರೆಮಾಡಲಾಗುವುದು. ಅವರ ಹೆಂಗಳೆಯರು ಅತ್ಯಾಚಾರಕ್ಕೆ ಈಡಾಗುವರು.


ಅದಕ್ಕೆ ದಾವೀದನು, “ನಾನು ಬಲು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದೇನೆ. ಸರ್ವೇಶ್ವರನ ಕೈಯಲ್ಲೆ ಬೀಳುತ್ತೇನೆ; ಅವರು ಕೃಪಾಪೂರ್ಣರು. ಮನುಷ್ಯರ ಕೈಯಲ್ಲಿ ಬೀಳಲೊಲ್ಲೆ,” ಎಂದು ಹೇಳಿ ವ್ಯಾಧಿಯನ್ನು ಆಯ್ದುಕೊಂಡನು.


ಏಕೆನೆ, ಎಡೆಬಿಡದೆ ದಂಡಿಸಿದರು ಪ್ರಜೆಗಳನು ಕೋಪೋದ್ರೇಕದಿಂದ ತಡೆಯಿಲ್ಲದೆ ದಬ್ಬಾಳಿಕೆ ನಡೆಸಿದರು ರಾಷ್ಟ್ರಗಳ ಮೇಲೆ ಸಿಟ್ಟಿನಿಂದ.


ಆ ಕ್ರೂರಿಗಳು, ಆ ನಿಷ್ಕರುಣಿಗಳು ಹಿಡಿದುಕೊಂಡಿರುವರು ಬಿಲ್ಲನ್ನೂ ಈಟಿಯನ್ನೂ. ಅವರ ಧ್ವನಿ ಮೊರೆಯುತ್ತದೆ ಸಮುದ್ರದಂತೆ ಕುದುರೆ ಸವಾರಿ ತೊಡಗಲಿದೆ. ಬಾಬಿಲೋನ್ ನಗರಿಯೇ, ಕೇಳು, ಆ ಸೈನ್ಯ ಶೂರವೀರರಿಂದ ಕೂಡಿದೆ. ಅದು ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ. ಸರ್ವೇಶ್ವರನಾದ ನನ್ನ ನುಡಿ ಇದು.


“ನನ್ನ ದ್ರೋಹಗಳನ್ನು ನನಗೆ ಬಿಗಿದಿದ್ದಾನೆ ನೊಗದ ಕಣ್ಣುಗಳಂತೆ. ಅವು ಹುರಿಗೊಂಡು, ಸುತ್ತಿಕೊಂಡು ಕುತ್ತಿಗೆಗೆ, ನನ್ನ ಶಕ್ತಿಯನ್ನು ಹೀರುತ್ತಿವೆ. ಸಿಕ್ಕಿಸಿದನಲ್ಲಾ ಸ್ವಾಮಿ, ನನ್ನಿಂದ ಎದುರಿಸಲಾಗದಂಥವರ ಕೈಗೆ !


ಸಾಂತ್ವನ ತರುವವರಾರೂ ಇಲ್ಲವಲ್ಲಾ ನನಗೆ ! ನನ್ನ ನರಳಾಟದ ಸುದ್ದಿ ಮುಟ್ಟಿದೆ ವೈರಿಗಳ ಕಿವಿಗೆ. ನನಗಾದ ಕೇಡಿಗೆ ನೀನೇ ಕಾರಣನೆಂಬ ಸಂತಸ ಶತ್ರುವಿಗೆ. ನೀ ಮುಂತಿಳಿಸಿದ ಮೇರೆಗೆ ನನಗಾದ ಗತಿ ಬರಲಿ ಅವರಿಗೆ.


ನಮ್ಮ ನಾಯಕರ ಕೈಗಳನ್ನು ನೇತುಹಾಕಿದ್ದಾರೆ ಗಲ್ಲಿಗೆ ನಮ್ಮ ಹಿರಿಯರನ್ನು ಗುರಿಪಡಿಸಿದ್ದಾರೆ ಮಾನಭಂಗಕ್ಕೆ.


ನನ್ನ ತಂದೆ ನಿಮ್ಮ ಮೇಲೆ ಭಾರವಾದ ನೊಗವನ್ನು ಹೇರಿರುವುದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ; ಅವರು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ನಿಮ್ಮನ್ನು ಮುಳ್ಳು ಕೊರಡೆಗಳಿಂದ ದಂಡಿಸುವೆನು’ ಎಂಬುದಾಗಿ ಹೇಳಬೇಕು", ಎಂದು ಉತ್ತರ ಕೊಟ್ಟರು.


ಸರ್ವೇಶ್ವರಸ್ವಾಮಿ ಬಾಬಿಲೋನಿಯದ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೊಪ್ಪಿಸಿದರು. ಅವನು ಅವರ ಯುವ ಯೋಧರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿದನು. ಯುವಕರನ್ನು, ಕನ್ಯೆಯರನ್ನು, ವೃದ್ಧರನ್ನು ಹಾಗು ಅತಿವೃದ್ಧರನ್ನು ಕನಿಕರಿಸದೆ ಎಲ್ಲರನ್ನು ಕೊಲ್ಲಿಸಿದನು.


ಕತ್ತಿಗೆ ತಪ್ಪಿಸಿಕೊಂಡವರನ್ನು ಅರಸನು ಬಾಬಿಲೋನಿಗೆ ಸೆರೆ ಒಯ್ದನು. ಪರ್ಷಿಯದ ಪ್ರಭುತ್ವ ಅಲ್ಲಿ ಸ್ಥಾಪಿತವಾಗುವವರೆಗೆ ಅವರು ಅವನಿಗೂ ಅವನ ಮಕ್ಕಳಿಗೂ ಗುಲಾಮರಾಗಿದ್ದರು.


ಆದರೆ ನಮ್ಮ ಪೂರ್ವಿಕರು ಪರಲೋಕ ದೇವರನ್ನು ರೇಗಿಸಿದ್ದರಿಂದ ಆ ದೇವರು ಅವರನ್ನು ಬಾಬಿಲೋನಿನ ಕಸ್ದೀಯ ರಾಜನಾದ ನೆಬೂಕದ್ನೆಚ್ಚರನ ಕೈಗೆ ಒಪ್ಪಿಸಿಕೊಟ್ಟರು. ಅವನು ಈ ಆಲಯವನ್ನು ಹಾಳುಮಾಡಿ, ಜನರನ್ನು ಸೆರೆಹಿಡಿದು ಬಾಬಿಲೋನಿಗೆ ಒಯ್ದನು.


ಸರ್ವೇಶ್ವರನ ದೃಷ್ಟಿ ಅವರನ್ನು ಚದರಿಸಿದೆ ಇನ್ನು ಆತ ತೋರನು ಅವರಿಗೆ ಕರುಣೆ. ಯಾಜಕರಾದರೂ ಅವರಿಗೆ ಮರ್ಯಾದೆ ತಪ್ಪಿಹೋಗಿದೆ ಹಿರಿಯರಾದರೂ ಅವರಿಗೆ ಆದರಣೆ ಇಲ್ಲದಿದೆ.


ಆಗ ದೇವದೂತನು: “ಸೇನಾಧಿಶ್ವರ ಸರ್ವೇಶ್ವರಾ, ಕಳೆದ ಎಪ್ಪತ್ತು ವರ್ಷಗಳಿಂದ ನೀವು ಕೋಪದಿಂದಿರುವಿರಿ, ಏಕೆ? ಇನ್ನೆಷ್ಟು ಕಾಲ ಜೆರುಸಲೇಮಿಗೂ ಜುದೇಯದ ಇತರ ಪಟ್ಟಣಗಳಿಗೂ ಕರುಣೆತೋರಿಸದೆ ಇರುವಿರಿ?” ಎಂದು ಕೇಳಿದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು