Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 48:4 - ಕನ್ನಡ ಸತ್ಯವೇದವು C.L. Bible (BSI)

4 ತಿಳಿದಿದೆ ನನಗೆ ನಿನ್ನ ಹಟಮಾರಿತನ ನಿನ್ನ ಕುತ್ತಿಗೆಯ ನರಗಳು ಕಬ್ಬಿಣ ನಿನ್ನ ಹಣೆ ಕಂಚಿನಂತೆ ಕಠಿಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಏಕೆಂದರೆ ನೀನು ಹಟವಾದಿ ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ತಾಮ್ರ ಎಂದು ನಾನು ತಿಳಿದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನೀನು ಹಟಗಾರ, ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ತಾಮ್ರ ಎಂದು ನಾನು ತಿಳಿದುಕೊಂಡೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನೀವು ಹಠಮಾರಿಗಳಾಗಿದ್ದು ನಾನು ಹೇಳಿದ್ದನ್ನು ನಂಬದೆ ಹೋದದ್ದರಿಂದ ನಾನು ಹಾಗೆ ಮಾಡಿದೆನು. ನೀವು ಕಬ್ಬಿಣದಂತೆ ಬಗ್ಗದ ಹಠಮಾರಿಗಳಾಗಿದ್ದೀರಿ. ಹಿತ್ತಾಳೆಯಂತೆ ಗಟ್ಟಿಯಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಏಕೆಂದರೆ ನೀನು ಹಟಗಾರ. ನಿನ್ನ ಕತ್ತಿನ ನರಗಳು ಕಬ್ಬಿಣ, ನಿನ್ನ ಹಣೆ ಕಂಚಿನದು ಎಂದು ನಾನು ತಿಳಿದುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 48:4
27 ತಿಳಿವುಗಳ ಹೋಲಿಕೆ  

ಸ್ತೇಫನನು ಮುಂದುವರೆದು, “ಎಷ್ಟು ಹಟಮಾರಿಗಳು ನೀವು; ಎಂಥಾ ಕಠಿಣ ಹೃದಯಿಗಳು ನೀವು’ ದೇವರ ಸಂದೇಶಕ್ಕೆ ಎಷ್ಟು ಕಿವುಡರು ನೀವು! ನಿಮ್ಮ ಪೂರ್ವಜರಂತೆ ನೀವು ಸಹ ಪವಿತ್ರಾತ್ಮ ಅವರನ್ನು ಯಾವಾಗಲೂ ಪ್ರತಿಭಟಿಸುತ್ತೀರಿ.


ಈ ಜನರ ಸ್ವಭಾವ ನನಗೆ ಗೊತ್ತಿದೆ. ಇವರು ನನ್ನ ಆಜ್ಞೆಗೆ ಬಗ್ಗದ ಹಟಮಾರಿಗಳು.


ಎಷ್ಟು ಗದರಿಸಿದರೂ ತಗ್ಗದ ಹಟಮಾರಿ ಫಕ್ಕನೆ ಬೀಳುವನು, ಮತ್ತೆ ಏಳನು.


ಆದರೆ ನಿನ್ನದು ಕಠಿಣ ಹೃದಯ, ಮೊಂಡುಸ್ವಭಾವ. ಆದ್ದರಿಂದ ದೇವರ ಕೋಪ ಹಾಗು ನ್ಯಾಯವಾದ ತೀರ್ಪು ವ್ಯಕ್ತವಾಗುವ ದಿನದಂದು ನಿನಗೆ ವಿಧಿಸಲಾಗುವ ಶಿಕ್ಷೆಯನ್ನು ನೀನಾಗಿಯೇ ಸಂಗ್ರಹಿಸಿಕೊಳ್ಳುತ್ತಿದ್ದೀಯೆ.


“ಇಸ್ರಯೇಲರ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರ ಹೀಗೆನ್ನುತ್ತಾರೆ - ಈ ನಗರದವರೂ ಇದರ ಸುತ್ತಮುತ್ತಿನ ಊರಿನವರೂ ನನ್ನ ಮಾತನ್ನು ಕೇಳದೆಹೋದರು. ತಮ್ಮ ಮನಸ್ಸನ್ನು ಕಲ್ಲಾಗಿಸಿಕೊಂಡರು. ಆದುದರಿಂದ ನಾನು ಈ ನಗರಕ್ಕೆ ಶಾಪ ಹಾಕಿದ ಕೇಡನ್ನೆಲ್ಲಾ ಅವರಿಗೆ ಬರಮಾಡುವೆನು,” ಎಂದು ಎಲ್ಲ ಜನರಿಗೆ ಸಾರಿದನು.


ಸ್ವಾಮಿ ಸರ್ವೇಶ್ವರನ ಕಣ್ಣು ನಾಟಿಸುವುದು ಸತ್ಯದ ಮೇಲೆ. ಅವರು ದಂಡಿಸಿದರೂ ನೀವು ಪಶ್ಚಾತ್ತಾಪಪಡಲಿಲ್ಲ. ಅವರು ನಸುಕಿದರೂ ನೀವು ತಿದ್ದುಕೊಳ್ಳಲು ಒಪ್ಪಲಿಲ್ಲ. ನಿಮ್ಮ ಮುಖವನ್ನು ಕಲ್ಲಿಗಿಂತ ಕಠಿಣ ಮಾಡಿಕೊಂಡಿರಿ. ಅವರಿಗೆ ಅಭಿಮುಖರಾಗಲು ಸಮ್ಮತಿಸದೆಹೋದಿರಿ.


ಏಕೆಂದರೆ ನೀವು ಹಟಮಾರಿಗಳು, ಆಜ್ಞೆಗೆ ಒಳಗಾಗದವರೆಂಬುದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಸರ್ವೇಶ್ವರನಿಗೆ ವಿರುದ್ಧ ಪ್ರತಿಭಟಿಸಿದ್ದೀರಿ; ನಾನು ಹೋದ ತರುವಾಯ ನೀವು ಪ್ರತಿಭಟಿಸುವುದು ಮತ್ತಷ್ಟು ನಿಶ್ಚಯ.


ಏಕೆಂದರೆ ಮೋಶೆಯ ಮುಖಾಂತರ ಸರ್ವೇಶ್ವರ, “ನೀವು ನನ್ನ ಆಜ್ಞೆಗಳಿಗೆ ಬಗ್ಗದ ಹಟಮಾರಿಗಳು. ನಾನು ಕ್ಷಣಮಾತ್ರ ನಿಮ್ಮೊಡನೆ ಬರುವುದಾದರೆ ನಿರ್ಮೂಲವಾಗಿಬಿಡುವಿರಿ, ಎಚ್ಚರಿಕೆ! ಆದ್ದರಿಂದ ನಿಮ್ಮ ಒಡವೆವಸ್ತುಗಳನ್ನು ತೆಗೆದುಬಿಡಿ. ನಿಮಗೇನು ಮಾಡಬೇಕೆಂದು ಆಲೋಚಿಸುವೆನು,” ಎಂದಿದ್ದರು.


ಮರೆಯರು ನನ್ನ ಮಹತ್ಕಾರ್ಯಗಳನು I ಇಡುವರು ನನ್ನಲ್ಲೇ ಭರವಸೆಯನು I ಕೈಗೊಳ್ಳುವರು ನನ್ನ ಆಜ್ಞೆಗಳನು II


ಕಾಣಿಸಿಕೊಳ್ಳದಿರಲಿ ನಿಮ್ಮ ಕೋರೆಕೊಂಬುಗಳು I ಮಾತೆತ್ತದಿರಲಿ ನಿಮ್ಮಗಳ ಕೊಬ್ಬಿದಾ ಕಂಠಗಳು” II


ಅದು ಹಾಲೂ ಜೇನೂ ಹರಿಯುವ ಶ್ರೀಮಂತ ನಾಡು. ನಾನು ಸ್ವತಃ ನಿಮ್ಮ ಸಂಗಡ ಬರುವುದಿಲ್ಲ. ಏಕೆಂದರೆ ನೀವು ನನ್ನ ಆಜ್ಞೆಗೆ ತಲೆಬಾಗದ ಹಟಮಾರಿ ಜನ; ದಾರಿಯಲ್ಲೇ ನಾನು ನಿಮ್ಮನ್ನು ಸಂಹರಿಸಬೇಕಾಗಬಹುದು.


ಧರ್ಮಕ್ಕೆ ದೂರವಾದ ಹಟಮಾರಿಗಳೇ, ಕಿವಿಗೊಡಿರಿ ನೀವು ನನ್ನ ಮಾತಿಗೆ.


ಇದಲ್ಲದೆ, ನೆಬೂಕದ್ನೆಚ್ಚರನಿಗೆ ಒಳಗಾಗುತ್ತೇನೆಂದು, ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿದ್ದರೂ, ಅವನಿಗೆ ವಿರುದ್ಧ ದಂಗೆ ಎದ್ದನು. ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಅಭಿಮುಖನಾಗಲೊಲ್ಲದೆ, ಹಟಹಿಡಿದು ಮನಸ್ಸನ್ನು ಕಠಿಣಮಾಡಿಕೊಂಡನು.


ನಿಮ್ಮಲ್ಲಿ ಯಾರೂ ಪಾಪದಿಂದ ಮೋಸಹೋಗಿ ಕಠಿಣರಾಗದಂತೆ “ಇಂದು” ಎನ್ನುವ ಕಾಲವು ಇರುವ ತನಕ ಪ್ರತಿನಿತ್ಯವು ಒಬ್ಬರನ್ನೊಬ್ಬರು ಎಚ್ಚರಿಸಿರಿ.


ಹಾಗೆ ಅವರ ಎದೆ ಗರ್ವದಿಂದ ಉಬ್ಬಿಹೋಯಿತು. ಮನಸ್ಸಿಗೆ ಸೊಕ್ಕೇರಿಹೋಯಿತು. ಅವರನ್ನೂ ರಾಜಾಸ್ಥಾನದಿಂದ ತಳ್ಳಲಾಯಿತು. ಮಾನ ಕಳೆದುಹೋಯಿತು.


ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ. ನನ್ನ ಆಜ್ಞೆಗೆ ಮಣಿಯಲಿಲ್ಲ. ತಮ್ಮ ಪೂರ್ವಜರಿಗಿಂತಲೂ ಕೆಟ್ಟವರಾಗಿ ನಡೆದುಕೊಂಡರು.”


ಆದಕಾರಣವೇ ಹದಮಳೆಗೆ ಅಡ್ಡಿಯಾಯಿತು. ವಸಂತಕಾಲದ ಮಳೆ ಬರದೆಹೋಯಿತು. ಇನ್ನೂ ನೀನು ವೇಶ್ಯೆ ಮುಖದವಳು, ಲಜ್ಜೆಗೆಟ್ಟವಳು !


ಈಗ ನಿಮ್ಮ ಪೂರ್ವಜರಂತೆ ಆಜ್ಞೆಗೆ ಮಣಿಯದವರಾಗಬೇಡಿ. ಸರ್ವೇಶ್ವರನಿಗೆ ಅಧೀನರಾಗಿರಿ. ನಿಮ್ಮ ದೇವರಾದ ಸರ್ವೇಶ್ವರ ಸದಾಕಾಲಕ್ಕೂ ಪ್ರತಿಷ್ಠಿಸಿಕೊಂಡ ಪವಿತ್ರಾಲಯಕ್ಕೆ ಬಂದು ಅವರನ್ನು ಅವಲಂಬಿಸಿರಿ. ಆಗ ನಿಮ್ಮ ಮೇಲಿರುವ ಅವರ ಉಗ್ರಕೋಪ ತೊಲಗಿಹೋಗುವುದು.


ಆದರೆ ಅವರು, ದೇವರಾದ ಸರ್ವೇಶ್ವರನನ್ನು ನಂಬದೆ, ಅವರ ಆಜ್ಞೆಗಳಿಗೆ ಮಣಿಯದೆಯಿದ್ದ ತಮ್ಮ ಹಿರಿಯರಂತೆ, ಕಿವಿಗೊಡದೆ ಹೋದರು.


ಆದುದರಿಂದ ಅವರ ಆಜ್ಞೆಗೆ ಮಣಿಯದ ನಿಮ್ಮ ದುಷ್ಟಸ್ವಭಾವವನ್ನು ಬಿಟ್ಟು ಬಿಟ್ಟು ನಿಮ್ಮ ಹೃದಯದಲ್ಲೇ ಸುನ್ನತಿಮಾಡಿಕೊಳ್ಳಿ.


ಶಾಂತಿ ಸವಿದದ್ದೇ ದ್ರೋಹಿಗಳಾಗಿ ನಡೆದರು ಮತ್ತೆ ನೀವಿತ್ತಿರವರನು ದೊರೆತನ ನಡೆಸುವ ವೈರಿಗಳ ಕೈಗೆ. ಪಶ್ಚಾತ್ತಾಪಪಟ್ಟು ಕೂಗಿಕೊಳ್ಳಲು, ಆಲಿಸಿದಿರಿ ಪರದಿಂದ ರಕ್ಷಿಸಿದಿರಿ ಪದೇ ಪದೇ ಅಪರಿಮಿತ ಕರುಣೆಯಿಂದ.


ನಾನು ಯಾವ ಸಂತಾನದವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಆ ಸಂತಾನದವರು ನಾಚಿಕೆಗೆಟ್ಟವರೂ ಹಟಗಾರರೂ ಆಗಿದ್ದಾರೆ; ನೀನು ಅವರಿಗೆ, ‘ಸರ್ವೇಶ್ವರನಾದ ದೇವರೇ ಇಂತೆನ್ನುತ್ತಾರೆ,’ ಎಂದು ನುಡಿ.


ಫರೋಹನು ಆಳುಗಳನ್ನು ಕಳುಹಿಸಿ ವಿಚಾರಿಸಿದನು. ಇಸ್ರಯೇಲರ ಪಶುಪ್ರಾಣಿಗಳಲ್ಲಿ ಒಂದೂ ಸಾಯಲಿಲ್ಲವೆಂದು ತಿಳಿದುಬಂದಿತು. ಆದರೂ ಕೂಡ ಫರೋಹನ ಹೃದಯ ಕಠಿಣವಾಯಿತು. ಆ ಜನರಿಗೆ ಹೊರಡಲಿಕ್ಕೆ ಅವನು ಅಪ್ಪಣೆ ಕೊಡದೆಹೋದನು.


ಇವರು ದಂಗೆ ಏಳುವ ಜನರು. ಸುಳ್ಳಾಡುವ ಪೀಳಿಗೆ, ಸರ್ವೇಶ್ವರನ ಉಪದೇಶಕ್ಕೆ ಕಿವಿಗೊಡದ ಸಂತಾನ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು