Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 48:6 - ಕನ್ನಡ ಸತ್ಯವೇದವು C.L. Bible (BSI)

6 ನೋಡು, ನೀ ಕೇಳಿದವೆಲ್ಲ ನಡೆದಿದೆಯೊ ಇಲ್ಲವೋ ಎಂಬುದನು. ಆದರೂ ಘೋಷಿಸುತ್ತಾರೆಯೇ ನಿನ್ನವರು ಅವುಗಳನ್ನು? ಅರುಹುವೆನು ನಿನಗಿಂದಿನಿಂದ ಹೊಸ ಸಂಗತಿಗಳನು ಈವರೆಗೂ ನೀನರಿಯದ ಗುಪ್ತ ವಿಷಯಗಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಡೆದ ಸಂಗತಿಗಳನ್ನು ನೀನು ಕೇಳಿದಿಯಲ್ಲಾ, ನಡೆದದ್ದನ್ನೆಲ್ಲಾ ನೋಡು, ನಿನ್ನವರೇ ಪ್ರಸಿದ್ಧಿಪಡಿಸಲಿ. ಇಂದಿನಿಂದ ಹೊಸ ಸಂಗತಿಗಳನ್ನು, ನೀನು ತಿಳಿಯದಿದ್ದ ಗುಪ್ತವಿಷಯಗಳನ್ನು ನಿನಗೆ ತಿಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 [ಆಗಲೇ] ಕೇಳಿದಿಯಲ್ಲಾ, [ಈಗ] ನಡೆದದ್ದನ್ನೆಲ್ಲಾ ನೋಡು, ನಿನ್ನವರೇ ಪ್ರಸಿದ್ಧಿಪಡಿಸಲಿ, ಇಂದಿನಿಂದ ಹೊಸ ಸಂಗತಿಗಳನ್ನು, ನೀನು ತಿಳಿಯದಿದ್ದ ಗುಪ್ತ ವಿಷಯಗಳನ್ನು, ನಿನಗೆ ಅರುಹುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ನಡೆದದ್ದನ್ನು ನೀವು ಕಣ್ಣಾರೆ ನೋಡಿದಿರಿ; ಕಿವಿಯಾರೆ ಕೇಳಿದಿರಿ. ಆದ್ದರಿಂದ ನೀವು ಇತರರಿಗೆ ಸುದ್ದಿಯನ್ನು ತಿಳಿಸಬೇಕು. ನೀವು ಈವರೆಗೆ ತಿಳಿಯದಿರುವ ಗುಪ್ತವಿಷಯಗಳನ್ನು ಈಗ ನಿಮಗೆ ತಿಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನೀನು ಕೇಳಿದ್ದೀ, ಇವೆಲ್ಲವುಗಳನ್ನು ದೃಷ್ಟಿಸು. ನೀವು ಅದನ್ನು ಒಪ್ಪಿಕೊಳ್ಳದೆ ಇದ್ದೀರೋ? “ಇಂದಿನಿಂದ ಹೊಸ ಸಂಗತಿಗಳನ್ನೂ, ನೀನು ತಿಳಿಯದಿದ್ದ ಗುಪ್ತವಾದ ವಿಷಯಗಳನ್ನೂ ನಿನಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 48:6
29 ತಿಳಿವುಗಳ ಹೋಲಿಕೆ  

ಇದಾದ ಬಳಿಕ ಮತ್ತೊಂದು ದಿವ್ಯದರ್ಶನವನ್ನು ಕಂಡೆ. ಸ್ವರ್ಗದ ಬಾಗಿಲು ತೆರೆದಿತ್ತು. ಮೊದಲು ನನ್ನೊಡನೆ ಮಾತನಾಡಿದ ತುತೂರಿಯಂಥ ನಾದವು ನನಗೆ ಕೇಳಿಸಿತು. ಅದು, “ಮೇಲೆ ಬಾ, ಮುಂದೆ ಸಂಭವಿಸಲಿರುವ ಘಟನೆಗಳನ್ನು ನಿನಗೆ ತೋರಿಸುವೆನು,” ಎಂದು ಹೇಳಿತು.


ಮುಂತಿಳಿಸಿದ ಸಂಗತಿಗಳಿದೋ ಈಡೇರಿವೆ ಹೊಸ ಸಂಗತಿಗಳನಿದೋ ಪ್ರಕಟಿಸುವೆ ಅವು ತಲೆದೋರುವುದಕ್ಕೆ ಮುಂಚೆಯೇ ನಿಮಗೆ ತಿಳಿಸುವೆ.”


ನಾನು ಕತ್ತಲಲ್ಲಿ ಹೇಳುವುದನ್ನು ನೀವು ಬೆಳಕಿನಲ್ಲಿ ಪ್ರಚುರಪಡಿಸಿರಿ, ಕಿವಿಮಾತಾಗಿ ಕೇಳಿದ್ದನ್ನು ಮನೆಮಾಳಿಗೆಯ ಮೇಲೆ ನಿಂತು ಸಾರಿರಿ.


ಇಗೋ, ನೂತನ ಕಾರ್ಯವನು ನಾನೆಸಗುವೆ ಈಗಲೇ ಅದು ತಲೆದೋರುತಲಿದೆ, ನಿಮಗೆ ಕಾಣುವುದಿಲ್ಲವೇ? ಮಾರ್ಗವನ್ನು ಏರ್ಪಡಿಸುವೆ ಮರುಭೂಮಿಯಲಿ, ಹರಿಸುವೆ ತೊರೆಗಳನ್ನು ಅರಣ್ಯದಲಿ.


ಪವಿತ್ರಗ್ರಂಥದಲ್ಲಿ ಹೇಳಿರುವಂತೆ : “ಕಣ್ಣಾವುದೂ ಕಂಡಿಲ್ಲ, ಕಿವಿಯಾವುದೂ ಕೇಳಿಲ್ಲ. ಮನುಜಕಲ್ಪನೆಗೂ ಎಟುಕಲಿಲ್ಲ. ಅಂಥ ಅತಿಶಯಗಳನ್ನು ಸಜ್ಜುಗೊಳಿಸಿರುವನು, ತನ್ನನೊಲಿದವರಿಗೆ ಪರಮದೇವನು.”


ಆದರೆ ಪವಿತ್ರಾತ್ಮ ಅವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯುತರಾಗುವಿರಿ. ಆಗ ನೀವು ಜೆರುಸಲೇಮಿನಲ್ಲೂ ಜುದೇಯದಲ್ಲೂ ಸಮಾರಿಯದಲ್ಲೂ ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು.


ನಾನಿನ್ನು ನಿಮ್ಮನ್ನು ದಾಸರೆಂದು ಕರೆಯುವುದಿಲ್ಲ. ಧಣಿಯ ಕೆಲಸಕಾರ್ಯಗಳು ದಾಸನಿಗೆ ತಿಳಿಯವು. ನಾನಾದರೋ ಪಿತನಿಂದ ಕೇಳಿಸಿಕೊಂಡದ್ದನ್ನೆಲ್ಲಾ ನಿಮಗೆ ತಿಳಿಸಿದ್ದೇನೆ. ಈ ಕಾರಣ ನಿಮ್ಮನ್ನು ಗೆಳೆಯರೆಂದು ಕರೆದಿದ್ದೇನೆ.


“ರಾಷ್ಟ್ರಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮುಚ್ಚುಮರೆಯಿಲ್ಲದೆ ಹೀಗೆಂದು ಸಾರಿರಿ: ‘ಬಾಬಿಲೋನ್ ಶತ್ರುವಶವಾಯಿತು. ಬೇಲ್ ದೇವತೆ ನಾಚಿಕೆಗೊಂಡಿದೆ. ಮೆರೋದಾಕ್ ದೇವತೆ ಬೆಚ್ಚಿಬಿದ್ದಿದೆ. ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ. ಅದರ ಬೊಂಬೆಗಳು ಚೂರುಚೂರಾಗಿವೆ.


ಇಸ್ರಯೇಲ್ ಜನರೇ, ದುಷ್ಟಸಂತತಿಯವರೇ, ಸರ್ವೇಶ್ವರನಾದ ನಾನು ಹೇಳುವುದನ್ನು ಕೇಳಿರಿ : ನಾನು ನಿಮಗೆ ಬೆಂಗಾಡಾಗಿಯೂ ಗಾಢಾಂಧಕಾರವಾಗಿಯೂ ಪರಿಣಮಿಸಿದ್ದೇನೊ? ‘ನಾವು ಮನಬಂದಂತೆ ನಡೆದುಕೊಳ್ಳುತ್ತೇವೆ; ನಿನ್ನ ಬಳಿಗೆ ಇನ್ನು ಬಾರೆವು’ ಎಂದು ನನ್ನ ಜನರಾದ ನೀವು ಹೇಳುವುದು ಹೇಗೆ?


ನನ್ನ ಪ್ರಜೆಯೇ, ನನ್ನ ಕಣಜದ ದವಸವೇ, ಬಡಿತಕ್ಕೆ ಈಡಾದ ಜನರೇ, ಇಸ್ರಯೇಲರ ದೇವರಾದ ಸೇನಾಧಿಶ್ವರ ಸರ್ವೇಶ್ವರ ಸ್ವಾಮಿಯಿಂದ ನಾನು ಕೇಳಿದ್ದನ್ನೇ ತಿಳಿಸುತ್ತಿದ್ದೇನೆ.


ಬಂದುವು ಆ ವಿಧಿಗಳು ನಿನ್ನ ಬಾಯಿಂದ I ವರ್ಣಿಸುವೆನು ಅವನ್ನು ನನ್ನ ಬಾಯಿಂದ II


ಪರ್ಯಾಲೋಚಿಸಲಿವುಗಳನು ಬುದ್ಧಿವಂತರು I ಗ್ರಹಿಸಲಿ ಪ್ರಭುವಿನಚಲ ಪ್ರೀತಿಯನಾ ಜನರು II


ಆದುದರಿಂದ ನೀನು ಕಂಡ ಘಟನೆಗಳನ್ನು ಅಂದರೆ, ಈಗ ನಡೆಯುತ್ತಿರುವ ಘಟನೆಗಳನ್ನೂ ಮುಂದೆ ಸಂಭವಿಸಲಿರುವ ಘಟನೆಗಳನ್ನೂ ಕುರಿತು ಬರೆ.


ಸರ್ವೇಶ್ವರಸ್ವಾಮಿಯಲ್ಲಿ ಭಯಭಕ್ತಿಯಿಂದಿರುವುದು ಸುಜ್ಞಾನ. ಇದು ಆ ಸ್ವಾಮಿಯ ವಾಣಿ; ಪಟ್ಟಣಕ್ಕೆ ನೀಡುವ ಎಚ್ಚರಿಕೆಯ ಕರೆ:


ರಣಕಹಳೆ ಮೊಳಗಲು ಜನರು ಬೆದರದೆ ಇರುವುದುಂಟೆ? ಸರ್ವೇಶ್ವರನಿಂದಲ್ಲದೆ ಪಟ್ಟಣಕ್ಕೆ ಕೇಡು ತಟ್ಟುವುದುಂಟೆ?


ಪುರಾತನ ಕಾಲದಲ್ಲಿ ಅಲ್ಲ, ಈಗ ನಡೆಯುತ್ತಿವೆ ಈ ಘಟನೆಗಳೆಲ್ಲ. ‘ಇದೆಲ್ಲ ನನಗೆ ಮೊದಲೇ ತಿಳಿದಿತ್ತಲ್ಲಾ,’ ಎಂದು ನೀ ಕೊಚ್ಚಿಕೊಳ್ಳದಂತೆ, ನಾ ನಿನಗೆ ಮುಂತಿಳಿಸಲಿಲ್ಲ.


“ನನ್ನನ್ನು ಬೇಡಿಕೊ, ನಾನು ನಿನಗೆ ಸದುತ್ತರವನ್ನು ದಯಪಾಲಿಸುವೆನು. ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.


ನಾನೇ ಸರ್ವೇಶ್ವರ, ನನ್ನ ನಾಮವು ಅದುವೆ. ಸಲ್ಲಿಸೆನು ನನ್ನ ಮಹಿಮೆಯನ್ನು ಮತ್ತೊಬ್ಬರಿಗೆ ನನ್ನ ಸ್ತೋತ್ರವನು ವಿಗ್ರಹಗಳ ಪಾಲಿಗೆ.


ನೀವು ಗಮನಿಸುವುದಿಲ್ಲ ಹಲವಿಷಯಗಳನ್ನು ಕಂಡಿದ್ದರೂ ನೀವು ಕೇಳುವುದಿಲ್ಲ ನಿಮ್ಮ ಕಿವಿಗಳು ತೆರೆದಿದ್ದರೂ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು