Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 49:18 - ಕನ್ನಡ ಸತ್ಯವೇದವು C.L. Bible (BSI)

18 ಕಣ್ಣೆತ್ತಿ ಸುತ್ತಮುತ್ತಲು ನೋಡು : ಬರುತಿಹರು ನಿನ್ನ ಬಳಿಗೆ ಅವರೆಲ್ಲರು ಕೂಡಿಕೊಂಡು. ನನ್ನ ಜೀವದಾಣೆ ನಿನಗೆ ಹೇಳುವುದೇನೆಂದರೆ : ‘ವಧುವು ಒಡವೆಗಳನು ಧರಿಸಿಕೊಳ್ಳುವಂತೆ ಅವರಾಗುವರು ನಿನಗೆ ಆಭರಣಗಳಂತೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಕಣ್ಣೆತ್ತಿ ಸುತ್ತಲು ನೋಡು! ಇವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಯೆಹೋವನು ಹೀಗೆನ್ನುತ್ತಾನೆ, “ನನ್ನ ಜೀವದಾಣೆ, ನೀನು ಇವರನ್ನೆಲ್ಲಾ ಆಭರಣವನ್ನಾಗಿ ಧರಿಸಿಕೊಳ್ಳುವಿ, ವಧುವು ಒಡ್ಯಾಣವನ್ನು ಕಟ್ಟಿಕೊಳ್ಳುವ ಹಾಗೆ ನೀನು ಇವರನ್ನು ನಿನ್ನ ಎದೆಗೆ ಒರಗಿ ಕಟ್ಟಿಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಕಣ್ಣೆತ್ತಿ ಸುತ್ತಲು ನೋಡು! ಇವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಯೆಹೋವನು ಹೀಗನ್ನುತ್ತಾನೆ - ನನ್ನ ಜೀವದಾಣೆ, ನೀನು ಇವರನ್ನೆಲ್ಲಾ ಆಭರಣವನ್ನಾಗಿ ಧರಿಸಿಕೊಳ್ಳುವಿ, ವಧುವು ಒಡ್ಯಾಣವನ್ನು ಕಟ್ಟಿಕೊಳ್ಳುವಂತೆ ನೀನು ಇವರನ್ನು ಕಟ್ಟಿಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಮೇಲಕ್ಕೆ ನೋಡು! ನಿನ್ನ ಸುತ್ತಲೂ ನೋಡು! ನಿನ್ನ ಮಕ್ಕಳೆಲ್ಲಾ ಒಟ್ಟಾಗಿ ಸೇರಿ ನಿನ್ನ ಬಳಿಗೆ ಬರುತ್ತಿದ್ದಾರೆ. ಯೆಹೋವನು ಹೇಳುವುದೇನೆಂದರೆ, “ನನ್ನ ಜೀವದಾಣೆ, ನಿನ್ನ ಮಕ್ಕಳು ನೀನು ಕೊರಳಲ್ಲಿ ಧರಿಸುವ ಹಾರದಂತಿರುವರು. ಮದುಮಗಳು ಧರಿಸುವ ಕಂಠಹಾರದಂತೆ ನಿನ್ನ ಮಕ್ಕಳಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಿನ್ನ ಕಣ್ಣುಗಳನ್ನು ಎತ್ತಿ ಸುತ್ತಲೂ ನೋಡು. ಇವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಯೆಹೋವ ದೇವರು ಹೇಳುವುದೇನೆಂದರೆ,” ನನ್ನ ಜೀವದಾಣೆ, ನಿಶ್ಚಯವಾಗಿ ನೀನು ಅವರನ್ನೆಲ್ಲಾ ಆಭರಣಗಳಂತೆ ಧರಿಸಿಕೊಳ್ಳುವೆ ಮತ್ತು ನೀನು ಅವರನ್ನು ಮದಲಗಿತ್ತಿಯಂತೆ ಕಟ್ಟಿಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 49:18
26 ತಿಳಿವುಗಳ ಹೋಲಿಕೆ  

ನಾನು ಪಡೆಯುವೆ ಸರ್ವೇಶ್ವರನಲ್ಲಿ ಪರಮಾನಂದ ಹಿರಿಹಿಗ್ಗುವುದು ನನ್ನ ದೇವರಲಿ ನನ್ನಾತ್ಮ. ಮದುವಣಿಗನಿಗೆ ಬಾಸಿಂಗವನು ತೊಡಿಸುವಂತೆ ವಧುವಿಗೆ ಆಭರಣಗಳಿಂದ ಅಲಂಕರಿಸುವಂತೆ ಹೊದಿಸಿಹನಾತ ನನಗೆ ಮುಕ್ತಿಯೆಂಬ ವಸ್ತ್ರವನು ತೊಡಿಸಿಹನು ನನಗೆ ನೀತಿಯೆಂಬ ನಿಲುವಂಗಿಯನು.


“ಶಪಥಮಾಡಿದೆ ನಾನು ನೋಹನ ದಿನದಂದು: ಜಲಪ್ರಳಯವು ಭೂಮಿಯನು ಇ‍ನ್ನು ಮುಳುಗಿಸದೆಂದು. ಶಪಥಮಾಡುವೆ ಈಗ ‘ಕೋಪಮಾಡೆನು’ ಎಂದು ‘ಇನ್ನು ನಿನ್ನನು ಗದರಿಸೆನು’ ಎಂದು.


ಒಬ್ಬ ಯುವತಿ ತನ್ನ ಆಭರಣಗಳನ್ನು, ಒಬ್ಬ ವಧು ತನ್ನ ಡಾಬನ್ನು ಮರೆಯುವುದುಂಟೆ? ನನ್ನ ಜನರೋ ಲೆಕ್ಕವಿಲ್ಲದಷ್ಟು ದಿನ ನನ್ನನ್ನು ಮರೆತಿದ್ದಾರೆ.


ನನಗೆ ಕಾಣಿಕೆಯಾಗಿ ಎಲ್ಲ ಜನಾಂಗಗಳಿಂದ ನಿಮ್ಮ ಸಹೋದರರನ್ನು ಕರೆದುತರುವರು. ಇಸ್ರಯೇಲರು ನನ್ನ ಆಲಯಕ್ಕೆ ಶುದ್ಧ ಪಾತ್ರೆಯಲ್ಲಿ ನೈವೇದ್ಯವನ್ನು ತೆಗೆದುಕೊಂಡು ಬರುವಂತೆ, ಅವರನ್ನು ಕುದುರೆ, ತೇರು, ಪಲ್ಲಕ್ಕಿ, ಹೇಸರಗತ್ತೆ, ಒಂಟೆ, ಇವುಗಳ ಮೇಲೆ ಏರಿಸಿಕೊಂಡು ಜೆರುಸಲೇಮೆಂಬ ನನ್ನ ಪವಿತ್ರ ಪರ್ವತಕ್ಕೆ ಕರೆದುತರುವರು.


“ಬಿಟ್ಟಿದ್ದೆನು ನಿನ್ನನು ಕ್ಷಣಮಾತ್ರ ಪ್ರೀತಿಯಿಂದ ಸೇರಿಸಿಕೊಳ್ಳುವೆ ಹತ್ತಿರ.


ನೋಡಿ, ಬರುತಿಹರು ನನ್ನ ಜನರು ದೂರದಿಂದ ಹೌದು, ಬರುತಿಹರು ಉತ್ತರ ಪಶ್ಚಿಮದಿಂದ ದಕ್ಷಿಣದ ಆ ಅಶ್ವಾನ್ ನಾಡಿನಿಂದ.


ಆದರೆ ಶುನಕ ಸಮಾನರೂ ಮಾಟಮಂತ್ರಗಾರರೂ ಕಾಮುಕರೂ ಕೊಲೆಗಾರರೂ ವಿಗ್ರಹಾರಾಧಕರೂ ಅಸತ್ಯವಾದಿಗಳೂ ನಗರದ ಹೊರಗೆ ಬಿದ್ದಿರುವರು.


ಇದಲ್ಲದೆ, ಪವಿತ್ರ ನಗರವಾದ ನೂತನ ಜೆರುಸಲೇಮ್ ಸ್ವರ್ಗದಿಂದಲೂ ದೇವರ ಸನ್ನಿಧಿಯಿಂದಲೂ ಕೆಳಗಿಳಿದು ಬರುವುದನ್ನು ಕಂಡೆ. ಅದು ಮದುಮಗನನ್ನು ಎದುರುಗೊಳ್ಳುವುದಕ್ಕಾಗಿ ಅಲಂಕೃತಳಾದ ಮದುವಣಗಿತ್ತಿಯಂತೆ ಶೃಂಗಾರಮಯವಾಗಿತ್ತು.


ಇಗೋ ನೋಡು, ಅವರನ್ನು ಬರಮಾಡುವೆನು ಉತ್ತರದೇಶದಿಂದ ಅವರನ್ನು ಒಂದುಗೂಡಿಸುವೆನು ದಿಗಂತಗಳಿಂದ. ಅವರೊಡನೆ ಕುರುಡರನ್ನೂ ಕುಂಟರನ್ನೂ ಗರ್ಭಿಣಿಯರನ್ನೂ ದಿನತುಂಬಿದ ಬಸುರಿಯರನ್ನೂ ಒಟ್ಟಿಗೆ ಕರೆತರುವೆನು. ಅವರು ದೊಡ್ಡ ಗುಂಪಾಗಿ ಇಲ್ಲಿಗೆ ಹಿಂದಿರುಗುವರು.


ಎಚ್ಚರಗೊಳ್ಳು, ಎಚ್ಚರಗೊಳ್ಳು ಓ ಸಿಯೋನೇ, ಶಕ್ತಿಶಾಲಿಯಾಗು ಪವಿತ್ರನಗರ ಜೆರುಸಲೇಮೆ. ಧರಿಸಿಕೊ ನಿನ್ನ ಚಂದದ ಉಡುಪನು ನಿನ್ನೊಳಗೆ ಪ್ರವೇಶಿಸರು ಇನ್ನು ಅಪವಿತ್ರರು, ಅನ್ಯಧರ್ಮೀಯರು.


ಇಂತೆನ್ನುವರು ಸ್ವಾಮಿ ಸರ್ವೇಶ್ವರ : ಇದೋ, ಕೈಸನ್ನೆಮಾಡುವೆ ಜನಾಂಗಗಳಿಗೆ ನನ್ನ ಧ್ವಜವನ್ನೆತ್ತುವೆ ದೇಶಾಂತರಗಳವರೆಗೆ ಬರುವರವರು ನಿನ್ನ ಕುವರರನು ಅಪ್ಪಿಕೊಂಡು ಎದೆಗೆ ಕರೆತರುವರು ನಿನ್ನ ಕುವರಿಯರನು ಹೆಗಲಮೇಲೆ.


ಪ್ರತಿಯೊಬ್ಬರು ಮೊಣಕಾಲೂರುವರು ನನಗೆ ಎಲ್ಲರು ನಾನೇ ದೇವರೆಂದು ಮಾಡುವರು ಪ್ರತಿಜ್ಞೆ. ಆ ನುಡಿ ಹೊರಟಿದೆ ನನ್ನ ಸತ್ಯದ ಬಾಯಿಂದ ಅದನ್ನು ಹಿಂತೆಗೆಯೆನು ನನ್ನ ಮೇಲಿಟ್ಟ ಆಣೆಯಿಂದ.


ಮಕ್ಕಳ ಮಕ್ಕಳು ಮುದುಕರ ಮುಕುಟ; ಮಕ್ಕಳಿಗೆ ಹೆತ್ತವರೇ ಭೂಷಣ.


“ಸರ್ವೇಶ್ವರನ ವಾಕ್ಯವನ್ನು ಕೇಳು; ನೀನು ನಿನ್ನ ಒಬ್ಬನೇ ಮಗನನ್ನು ಬಲಿಕೊಡಲು ಹಿಂತೆಗೆಯದೆ ಹೋದುದರಿಂದ ನಾನು ನಿನ್ನನ್ನು ತಪ್ಪದೆ ಆಶೀರ್ವದಿಸುತ್ತೇನೆ;


ಲೋಟನು ಅಬ್ರಾಮನನ್ನು ಬಿಟ್ಟುಹೋದ ಬಳಿಕ ಸರ್ವೇಶ್ವರ ಸ್ವಾಮಿ ಅಬ್ರಾಮನಿಗೆ, “ನೀನು ಇರುವ ಸ್ಥಳದಿಂದಲೇ ದಕ್ಷಿಣೋತ್ತರ ಪೂರ್ವಪಶ್ಚಿಮಗಳ ಕಡೆಗೆ ಕಣ್ಣೆತ್ತಿ ನೋಡು.


ಇನ್ನು ನಾಲ್ಕು ತಿಂಗಳು ಆದ ಮೇಲೆ ಸುಗ್ಗಿ ಬರುತ್ತದೆ ಎಂದು ನೀವು ಹೇಳುವುದಿಲ್ಲವೆ? ಇಗೋ, ಕಣ್ಣುಹಾಯಿಸಿ ನೋಡಿ; ಬಲಿತು ಕೊಯ್ಲಿಗೆ ಬಂದಿರುವ ಹೊಲಗಳನ್ನು ನೋಡಿ.


ಆದರೂ ನನ್ನ ಜೀವದಾಣೆ ಸರ್ವೇಶ್ವರನ ಮಹಿಮೆ ಅಖಿಲ ವಿಶ್ವವನ್ನು ತುಂಬಿದೆಯೆಂಬ ಸತ್ಯವಾಕ್ಯದ ಆಣೆ. ನನ್ನನ್ನು ಅಲಕ್ಷ್ಯಮಾಡಿದ ಇವರಲ್ಲಿ ಯಾರೂ ವಾಗ್ದತ್ತ ನಾಡನ್ನು ನೋಡುವುದಿಲ್ಲ.


ಅವನು ಈಜಿಪ್ಟಿನ ದೇವತೆಗಳ ಆಲಯಗಳಿಗೆ ಬೆಂಕಿ ಹೊತ್ತಿಸುವನು. ಅವುಗಳನ್ನು ಸುಟ್ಟು ಆ ದೇವತೆಗಳನ್ನು ಸೆರೆಗೊಯ್ಯುವನು. ಕುರುಬನು ತನ್ನ ಕಂಬಳಿಯನ್ನು ಸೋಸುವಂತೆ ಅವನು ಈಜಿಪ್ಟನ್ನು ಸೋಸುವನು.


ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಲವಲೇಶವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ. ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ. ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಡಿ, ಬಿಟ್ಟುಬಿಡಿ; ನೀವು ಏಕೆ ಸಾಯಬೇಕು?” ಇದು ಸರ್ವೇಶ್ವರನಾದ ದೇವರ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು