Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 49:2 - ಕನ್ನಡ ಸತ್ಯವೇದವು C.L. Bible (BSI)

2 ಮಾಡಿದನು ನನ್ನ ನುಡಿಯನ್ನು ಹರಿತವಾದ ಖಡ್ಗವನ್ನಾಗಿ ಮುಚ್ಚಿಟ್ಟಹನು ನನ್ನನ್ನು ತನ್ನ ಕರದ ನೆರಳಿನಲ್ಲಿ ರೂಪಿಸಿಹನು ನನ್ನನ್ನು ಚೂಪಾದ ಬಾಣವನ್ನಾಗಿ, ಬಚ್ಚಿಟ್ಟಿಹನು ನನ್ನನು ತನ್ನ ಬತ್ತಳಿಕೆಯಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನನ್ನ ಬಾಯಿಯನ್ನು ಹದವಾದ ಖಡ್ಗವನ್ನಾಗಿ ಮಾಡಿ, ತನ್ನ ಕೈಯ ನೆರಳಿನಲ್ಲಿ ನನ್ನನ್ನು ಹುದುಗಿಸಿದ್ದಾನೆ. ನನ್ನನ್ನು ಚೂಪಾದ ಬಾಣವನ್ನಾಗಿ ರೂಪಿಸಿ, ತನ್ನ ಬತ್ತಳಿಕೆಯಲ್ಲಿ ಮುಚ್ಚಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನನ್ನ ಬಾಯನ್ನು ಹದವಾದ ಖಡ್ಗವನ್ನಾಗಿ ಮಾಡಿ ತನ್ನ ಕೈಯ ನೆರಳಿನಲ್ಲಿ ನನ್ನನ್ನು ಹುದುಗಿಸಿದ್ದಾನೆ; ನನ್ನನ್ನು ಚೂಪಾದ ಬಾಣವನ್ನಾಗಿ ರೂಪಿಸಿ ತನ್ನ ಬತ್ತಳಿಕೆಯಲ್ಲಿ ಮುಚ್ಚಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ತನ್ನ ಪರವಾಗಿ ಮಾತನಾಡಲು ಯೆಹೋವನು ನನ್ನನ್ನು ಉಪಯೋಗಿಸುತ್ತಾನೆ. ಹದವಾದ ಕತ್ತಿಯಂತೆ ನನ್ನನ್ನು ಉಪಯೋಗಿಸುತ್ತಾನೆ. ಅದೇ ಸಮಯದಲ್ಲಿ ನನ್ನನ್ನು ತನ್ನ ಕೈಯೊಳಗೆ ಸುರಕ್ಷಿತವಾಗಿ ಇರಿಸುತ್ತಾನೆ. ಯೆಹೋವನು ನನ್ನನ್ನು ಬಾಣದಂತೆ ಉಪಯೋಗಿಸುತ್ತಾನೆ, ಅದೇ ಸಮಯದಲ್ಲಿ ಬತ್ತಳಿಕೆಯಲ್ಲಿ ನನ್ನನ್ನು ಅಡಗಿಸಿಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆತನು ನನ್ನ ಬಾಯನ್ನು ಹರಿತವಾದ ಖಡ್ಗವನ್ನಾಗಿ ಮಾಡಿ, ತನ್ನ ಕೈ ನೆರಳಿನಲ್ಲಿ ನನ್ನನ್ನು ಮರೆಯಾಗಿಟ್ಟಿದ್ದಾನೆ. ನನ್ನನ್ನು ಆತನು ನುಣುಪಾದ ಬಾಣವನ್ನಾಗಿ ರೂಪಿಸಿ, ತನ್ನ ಬತ್ತಳಿಕೆಯಲ್ಲಿ ಮುಚ್ಚಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 49:2
20 ತಿಳಿವುಗಳ ಹೋಲಿಕೆ  

ದೇವರ ವಾಕ್ಯ ಜೀವಂತವಾದುದು, ಕ್ರಿಯಾತ್ಮಕವಾದುದು; ಎಂಥ ಇಬ್ಬಾಯಿ ಕತ್ತಿಗಿಂತಲೂ ಹರಿತವಾದುದು. ಪ್ರಾಣ ಮತ್ತು ಆತ್ಮಗಳ, ಕೀಲು ಮತ್ತು ಮಜ್ಜೆಗಳ ಭೇದವನ್ನು ಛೇದಿಸುವಂತಾದ್ದು; ಹೃದಯದ ಆಶೆ ಆಲೋಚನೆಗಳನ್ನು ವಿವೇಚಿಸುವಂತಾದ್ದು.


ಅವರ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು. ಬಾಯೊಳಗಿಂದ ಹರಿತವಾದ ಇಬ್ಬಾಯಿಯ ಖಡ್ಗವು ಹೊರಬಂದಿತ್ತು. ಅವರ ಮುಖ ನಡುಮಧ್ಯಾಹ್ನದ ಸೂರ್ಯನಂತೆ ಪ್ರಕಾಶಿಸುತ್ತಿತ್ತು.


ದಣಿದವರನ್ನು ಹಿತನುಡಿಗಳಿಂದ ತಣಿಸುವಂತೆ ಅನುಗ್ರಹಿಸುತ್ತಾನೆನಗೆ ಸ್ವಾಮಿ ಸರ್ವೇಶ್ವರ ಶಿಕ್ಷಿತರ ನಾಲಗೆಯನು; ಶಿಷ್ಯನೋಪಾದಿ ನಾನು ಆತನನ್ನು ಆಲಿಸುವಂತೆ ಬೆಳಬೆಳಗೂ ನನ್ನನೆಚ್ಚರಿಸಿ ಚೇತನಗೊಳಿಸುತ್ತಾನೆ ನನ್ನ ಕಿವಿಯನು.


ಆಕಾಶವನ್ನ ಹರಡಿದೆ; ಭುವಿಯನ್ನು ಸ್ಥಾಪಿಸಿದೆ; ಸಿಯೋನಿಗೆ ‘ನೀನೆನ್ನ ಜನತೆ’ ಎಂದೆ ನಾನಾಡುವುದನೆ ನಿನ್ನಿಂದ ಮಾತನಾಡಿಸಿದೆ, ನಿನ್ನನು ನನ್ನ ಅಂಗೈಯಲಿ ಕೊರೆದು ಕಾದಿಟ್ಟೆ.”


“ಪೆರ್ಗಮದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ಹರಿತವಾದ ಇಬ್ಬಾಯಿಯ ಖಡ್ಗವುಳ್ಳವನು ನೀಡುವ ಸಂದೇಶವಿದು:


ನಾನು ಹೇಳುವುದನ್ನು ಗಮನದಿಂದ ಕೇಳು - ಈ ದಿನ ನಿನ್ನನ್ನು ಜುದೇಯದ ಅರಸರು, ಅಧಿಪತಿಗಳು, ಯಾಜಕರು, ಜನಸಾಮಾನ್ಯರು, ಹೀಗೆ ನಾಡಿನವರೆಲ್ಲರನ್ನು ಎದುರಿಸತಕ್ಕವನನ್ನಾಗಿ ಮಾಡಿದ್ದೇನೆ; ಕೋಟೆಕೊತ್ತಲಗಳಿಂದ ಸುಸಜ್ಜಿತ ನಗರವನ್ನಾಗಿಯೂ ಕಬ್ಬಿಣದ ಕಂಬವನ್ನಾಗಿಯೂ ತಾಮ್ರದ ಪೌಳಿಗೋಡೆಯನ್ನಾಗಿಯೂ ನಿನ್ನನ್ನು ಸ್ಥಾಪಿಸಿದ್ದೇನೆ.


ಆದರೆ ಬಡಬಗ್ಗರಿಗೆ ತೀರ್ಪಿಡುವನು ನ್ಯಾಯನೀತಿಯಿಂದ ನಾಡ ದಲಿತರಿಗೆ ನಿರ್ಣಯಿಸುವನು ಯಥಾರ್ಥತೆಯಿಂದ ದಂಡಿಸುವನು ಲೋಕವನು ನುಡಿಯೆಂಬ ದಂಡದಿಂದ ಕೊಲ್ಲುವನು ಕೆಡುಕರನು ಉಸಿರೆಂಬ ಕತ್ತಿಯಿಂದ.


ಖಂಡತುಂಡವಾದ ತೀರ್ಪುನೀಡುವ, ಕತ್ತಿಯಂತೆ ಹರಿತವಾಗಿ ಮಾತನಾಡುವ ನನ್ನ ಪ್ರವಾದಿಗಳನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ. ನನ್ನ ನ್ಯಾಯದಂಡನೆ ಮಿಂಚಿನಂತೆ ಹೊರಡುವುದು.


ಪರಾತ್ಪರ ಪ್ರಭುವಿನ ಮೊರೆಹೊಕ್ಕಿರುವವನು I ಸರ್ವಶಕ್ತನ ಆಶ್ರಯದಲಿ ಸುರಕ್ಷಿತನು II


ರಾಷ್ಟ್ರಗಳನ್ನು ಹೊಡೆದುರುಳಿಸುವಂಥ ಹರಿತವಾದ ಖಡ್ಗವೊಂದು ಆತನ ಬಾಯಿಂದ ಹೊರಟಿತು. ಆತನು ಕಬ್ಬಿಣದ ದಂಡದಿಂದ ಅವುಗಳ ಆಳ್ವಿಕೆ ನಡೆಸುವನು. ಸರ್ವಶಕ್ತ ದೇವರ ರೋಷವೆಂಬ ದ್ರಾಕ್ಷಿಯ ಆಲೆಯಲ್ಲಿ ಇರುವವರನ್ನು ತುಳಿದುಹಾಕುವನು.


ಯೇಸುಸ್ವಾಮಿ, “ಪಿತನೇ, ನನ್ನಾತ್ಮವನ್ನು ನಿಮ್ಮ ಕೈಗೊಪ್ಪಿಸುತ್ತೇನೆ,” ಎಂದು ಗಟ್ಟಿಯಾಗಿ ಕೂಗಿ ಪ್ರಾಣಬಿಟ್ಟರು.


ಇಗೋ, ನನ್ನ ದಾಸನು ! ನನ್ನ ಆಧಾರ ಪಡೆದವನು ನನ್ನಿಂದ ಆಯ್ಕೆಯಾದವನು ನನಗೆ ಪರಮ ಪ್ರಿಯನು. ನೆಲೆಗೊಳಿಸಿರುವೆ ಇವನಲ್ಲಿ ನನ್ನ ಆತ್ಮವನು ಅನ್ಯರಾಷ್ಟ್ರಗಳಿಗೆ ಸಾರುವನಿವನು ಸದ್ಧರ್ಮವನು.


ರಕ್ಷಣೆಯೆಂಬ ಶಿರಸ್ತ್ರಾಣವನ್ನು ಧರಿಸಿಕೊಳ್ಳಿ; ಪವಿತ್ರಾತ್ಮರ ಕೊಡುಗೆಯಾದ ದೇವರ ವಾಕ್ಯವು ನಿಮಗೆ ಖಡ್ಗವಾಗಿರಲಿ.


ಆದುದರಿಂದ ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗು. ಇಲ್ಲದಿದ್ದರೆ, ಬೇಗನೆ ನಿನ್ನ ಬಳಿಗೆ ಬರುತ್ತೇನೆ. ಬಂದು ನನ್ನ ಬಾಯಲ್ಲಿರುವ ಖಡ್ಗದಿಂದ ಅವರೊಡನೆ ಕಾದಾಡುತ್ತೇನೆ.


ನನ್ನ ಮಹಿಮೆ ನಿನ್ನೆದುರಿಗೆ ದಾಟಿ ಹೋಗುವಾಗ ನಾನು ಆ ಬಂಡೆಯ ಸಂದಿನಲ್ಲಿ ನಿನ್ನನ್ನು ಇರಿಸಿ, ನಿನ್ನ ಮುಂದೆ ನಾನು ಹಾದುಹೋಗುವ ತನಕ ನಿನ್ನನ್ನು ನನ್ನ ಕೈಯಿಂದ ಮುಚ್ಚುವೆನು.


ಸರ್ವೇಶ್ವರನ ದಾಸನಾದ ನನ್ನ ಮಾತುಗಳನು ಕೇಳಿ : ಭಯಭಕ್ತಿಯುಳ್ಳವನಾರು ನಿಮ್ಮೊಳು ಆ ಸರ್ವೇಶ್ವರನಲಿ? ಬೆಳಕಿಲ್ಲದೆ ಕತ್ತಲಲಿ ನಡೆಯುವವನು ಭರವಸೆಯಿಡಲಿ ಆ ಸರ್ವೇಶ್ವರನ ನಾಮದಲಿ; ಆಶ್ರಯ ಪಡೆಯಲಿ ತನ್ನಾ ದೇವನಲಿ.


ಹಾರಿ ಓಡುವ ನಿನ್ನ ಬಾಣಗಳ ಬೆಳಕಿಗೆ ಥಳಥಳಿಸುವ ನಿನ್ನ ಈಟಿಯ ಹೊಳಪಿಗೆ ಸೂರ್ಯಚಂದ್ರ ಅಡಗುತ್ತವೆ ಗೂಡಿನೊಳಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು