ಯೆಶಾಯ 5:12 - ಕನ್ನಡ ಸತ್ಯವೇದವು C.L. Bible (BSI)12 ಕಿನ್ನರಿ, ವೀಣೆ, ತಬಲ, ಕೊಳಲು, ಮದ್ಯಪಾನ ಇವೇ ಅವರ ದುಂದೌತಣದ ಸೊಬಗು. ಸ್ವಾಮಿಯ ಕಾರ್ಯಗಳನ್ನು ಅವರು ಲಕ್ಷಿಸರು. ಸ್ವಾಮಿಯ ಕೃತಿಗಳನ್ನವರು ಧ್ಯಾನಿಸರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸ ಇವುಗಳೇ ಅವರ ಔತಣಗಳ ಸೊಬಗು. ಯೆಹೋವನ ಕೆಲಸವನ್ನೋ ಅವರು ಲಕ್ಷಿಸುವುದಿಲ್ಲ. ಆತನ ಕೈಕೆಲಸವನ್ನು ಆಲೋಚಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಕಿನ್ನರಿ, ವೀಣೆ, ದಮ್ಮಡಿ, ಕೊಳಲು, ದ್ರಾಕ್ಷಾರಸ ಇವುಗಳೇ ಅವರ ಔತಣಗಳ ಸೊಬಗು; ಯೆಹೋವನ ಕೆಲಸವನ್ನೋ ಅವರು ಲಕ್ಷಿಸರು, ಆತನ ಹಸ್ತಕಾರ್ಯವನ್ನು ಆಲೋಚಿಸರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನೀವು ಕುಡಿಯುತ್ತಾ ಹಾರ್ಪ್ವಾದ್ಯಗಳನ್ನೂ ದಮ್ಮಡಿಗಳನ್ನೂ ಕೊಳಲುಗಳನ್ನೂ ಬಾರಿಸುತ್ತಾ ನೃತ್ಯಮಾಡುವಿರಿ. ಆದರೆ ಯೆಹೋವನು ಮಾಡಿದ ಕಾರ್ಯಗಳನ್ನು ನೀವು ಗಮನಿಸುವುದಿಲ್ಲ. ಯೆಹೋವನ ಹಸ್ತವು ಅನೇಕಾನೇಕ ಕಾರ್ಯಗಳನ್ನು ಮಾಡಿದೆ. ಆದರೆ ನೀವು ಅವುಗಳನ್ನು ಲಕ್ಷಿಸುವುದಿಲ್ಲ. ಆದ್ದರಿಂದ ನಿಮಗೆ ಕೇಡಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅವರ ಹಬ್ಬಗಳಲ್ಲಿ ಕಿನ್ನರಿ, ವೀಣೆ, ದಮ್ಮಡಿ, ಕೊಳಲು ಮತ್ತು ಮದ್ಯಪಾನ ಇರುವುವು. ಆದರೆ ಯೆಹೋವ ದೇವರ ಕೆಲಸವನ್ನು ಅವರು ಲಕ್ಷಿಸರು ಇಲ್ಲವೆ ಅವರ ಕೈಗೆಲಸವನ್ನು ಲಕ್ಷಿಸುವುದಿಲ್ಲ. ಅಧ್ಯಾಯವನ್ನು ನೋಡಿ |
ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿಮ್ಮನ್ನೆ ಹೆಚ್ಚಿಸಿಕೊಂಡಿದ್ದೀರಿ. ದೇವಾಲಯದಿಂದ ಪವಿತ್ರ ಪೂಜಾಪಾತ್ರೆಗಳನ್ನು ಇಲ್ಲಿಗೆ ತಂದಿದ್ದೀರಿ. ನೀವೂ ನಿಮ್ಮ ರಾಜ್ಯದ ಪ್ರಮುಖರೂ ಪತ್ನಿ-ಉಪಪತ್ನಿಯರೂ ಅವುಗಳಲ್ಲಿ ದ್ರಾಕ್ಷಾರಸವನ್ನೂ ಕುಡಿದಿದ್ದೀರಿ. ಬುದ್ಧಿ, ಕಣ್ಣು, ಕಿವಿ ಇಲ್ಲದೆ ಬೆಳ್ಳಿಬಂಗಾರಗಳ, ಕಂಚುಕಬ್ಬಿಣಗಳ, ಮರ ಕಲ್ಲುಗಳ ದೇವರುಗಳನ್ನೂ ಆರಾಧಿಸಿದ್ದೀರಿ. ನಿಮ್ಮ ಪ್ರಾಣ ಯಾರ ಕೈಯಲ್ಲಿದೆಯೋ ನಿಮ್ಮ ಸ್ಥಿತಿಗತಿಗಳು ಯಾರ ಅಧೀನದಲ್ಲಿದೆಯೋ ಆ ದೇವರನ್ನು ಮಾತ್ರ ಗೌರವಿಸದೆ ಇದ್ದೀರಿ.