Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 5:18 - ಕನ್ನಡ ಸತ್ಯವೇದವು C.L. Bible (BSI)

18 ಅಕ್ರಮವೆಂಬ ಹಗ್ಗಗಳಿಂದ ಅಪರಾಧ ಎಂಬ ತೇರನ್ನು ಎಳೆಯುವವರಿಗೆ ಧಿಕ್ಕಾರ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅಯ್ಯೋ, ವ್ಯರ್ಥವಾದ ಹಗ್ಗಗಳಿಂದ ಅಪರಾಧ ದಂಡನೆಯನ್ನು, ರಥವನ್ನು ಹಗ್ಗಗಳಿಂದಲೋ ಎಂಬಂತೆ ಪಾಪವನ್ನು ಎಳೆದುಕೊಳ್ಳುತ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅಯ್ಯೋ, ಅಕಾರ್ಯಗಳೆಂಬ ಹಗ್ಗಗಳಿಂದ ಅಪರಾಧ ದಂಡನೆಯನ್ನು, ತೇರನ್ನು ಹೊರಜಿಯಿಂದಲೋ ಎಂಬಂತೆ ಪಾಪದ ಫಲವನ್ನು ತಮ್ಮ ಕಡೆಗೆ ಎಳೆದುಕೊಳ್ಳುತ್ತಾ ಆತನು ತ್ವರೆಪಡಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆ ಜನರನ್ನು ನೋಡಿರಿ. ಜನರು ಹಗ್ಗಗಳಿಂದ ಗಾಡಿಯನ್ನು ಎಳೆದುಕೊಂಡು ಹೋಗುವಂತೆ ಅವರು ತಮ್ಮ ಪಾಪಗಳನ್ನು ಎಳೆದುಕೊಂಡು ಹೋಗುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅಯ್ಯೋ, ವ್ಯರ್ಥವಾದ ಹಗ್ಗಗಳಿಂದ ಅಪರಾಧವನ್ನೂ, ಬಂಡಿಹಗ್ಗದಿಂದಲೋ ಎಂಬಂತೆ ಪಾಪವನ್ನೂ ಎಳೆದು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 5:18
23 ತಿಳಿವುಗಳ ಹೋಲಿಕೆ  

ಜೆರುಸಲೇಮಿನ ಪ್ರವಾದಿಗಳಲ್ಲೂ ಭೀಕರವಾದುವನ್ನು ನೋಡಿರುವೆನು ವ್ಯಭಿಚಾರ ಮಾಡುತ್ತಾರೆ, ಸುಳ್ಳು ಹಾದಿಯನ್ನು ಹಿಡಿಯುತ್ತಾರೆ ದುರುಳರು ದುರಾಚಾರವನ್ನು ಬಿಡದಂತೆ ದೃಢಪಡಿಸುತ್ತಾರೆ. ನನ್ನ ದೃಷ್ಟಿಗೆ ಅವರೆಲ್ಲರು ಸೊದೋಮಿನಂತೆ, ಆ ಪುರನಿವಾಸಿಗಳು ನನ್ನ ಕಣ್ಣಿಗೆ ಗೊಮೋರದಂತೆ.”


“ನಾನು ಎದೆಗುಂದಿಸದ ಶಿಷ್ಯನ ಮನಸ್ಸನ್ನು ನೀವು ಸುಳ್ಳಾಡಿ ಕುಂದಿಸಿದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನನ್ನು ಪ್ರೋತ್ಸಾಹಿಸಿದ್ದೀರಿ.


ದೈವಶಾಪದ ನಿಮಿತ್ತ ದೇಶ ದುಃಖಿಸುತ್ತಿದೆ ವ್ಯಭಿಚಾರದಿಂದ ನಾಡು ತುಂಬಿತುಳುಕುತ್ತಿದೆ ಅಡವಿಯ ಹುಲ್ಲುಗಾವಲು ಬಾಡಿದೆ. ನಾಡಿನ ಜನರು ಹಿಡಿದೋಡುತ್ತಿರುವ ಮಾರ್ಗ ದುರ್ಮಾರ್ಗ ಅನ್ಯಾಯ ಸಾಧನೆಗಾಗಿಯೆ ಅವರ ಅಧಿಕಾರ ಪ್ರಯೋಗ.


ಪ್ರವಾದಿಗಳೇ ಸುಳ್ಳು ಪ್ರವಾದನೆಮಾಡುತ್ತಾರೆ. ಯಾಜಕರು ಅಂಥವರಿಂದ ಅಧಿಕಾರ ಪಡೆದು ದೊರೆತನಮಾಡುತ್ತಾರೆ. ನನ್ನ ಜನರಿಗೆ ಚೆನ್ನಾಗಿ ಹಿಡಿಸುವುದು ಇಂಥದ್ದೇ. ಆದರೆ ಅಂತ್ಯ ಬಂದಾಗ ಏನು ಮಾಡುವರು?”


“ಬೈಲಿಗೆ ಬಾರದು ನಿನ್ನ ದೋಷವು, ನಿನಗದು ಕೇಡು ತರದು” I ಇಂತುಲಿದು ಆ ಪಾಪದ ಜಿನುಗು ಅವನನು ವಂಚಿಸುತಿಹುದು II


“ನನ್ನ ವಿಷಯದಲ್ಲಿ ಹೇಳುವುದಾದರೆ, ಒಮ್ಮೆ ನಾನು ಯೇಸುವಿನ ನಾಮವನ್ನೇ ನಿರ್ಮೂಲಮಾಡಬೇಕೆಂದಿದ್ದೆ; ಅದಕ್ಕೆ ಅಗತ್ಯವಾದುದನ್ನೆಲ್ಲ ಮಾಡುವುದು ನನ್ನ ಕರ್ತವ್ಯ ಎಂದು ಎಣಿಸಿದ್ದೆ.


ಜನರು, ನಿಮ್ಮನ್ನು ಪ್ರಾರ್ಥನಾಮಂದಿರದಿಂದ ಬಹಿಷ್ಕರಿಸುವರು, ಅಷ್ಟೇ ಅಲ್ಲ, ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಬಲಿಕೊಟ್ಟೆನೆಂದು ಭಾವಿಸುವ ಕಾಲವೂ ಬರಲಿದೆ.


“ಆಗ ದೀಪವನ್ನು ಹಿಡಿದುಕೊಂಡು ಜೆರುಸಲೇಮನ್ನೆಲ್ಲಾ ಹುಡುಕಿಬಿಡುವೆನು. ‘ಸರ್ವೇಶ್ವರ ಮೇಲನ್ನಾಗಲಿ, ಕೇಡನ್ನಾಗಲಿ ಏನನ್ನೂ ಮಾಡುವುದಿಲ್ಲ’ ಎಂದುಕೊಳ್ಳುವ ಮದ್ಯದ ಮಡ್ಡಿಯಂಥ ಜಡ ಮನಸ್ಕರನ್ನು ದಂಡಿಸುವೆನು.


ನನ್ನ ಕಣ್ಣಿಗೆ ಬೀಳದಂತೆ ಯಾವನಾದರು ಗುಪ್ತಸ್ಥಳಗಳಲ್ಲಿ ಮರೆಮಾಚಿಕೊಳ್ಳಲು ಸಾಧ್ಯವೇ? ನಾನು ಭೂಮ್ಯಾಕಾಶಗಳಲ್ಲಿ ವ್ಯಾಪಿಸಿರುವವನಲ್ಲವೆ?


ನೀವು ನಿಮ್ಮನಿಮ್ಮೊಳಗೆ : “ಮೃತ್ಯುವಿನೊಂದಿಗೆ ಮುಚ್ಚಳಿಕೆ, ಪಾತಾಳದೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇವೆ. ಮಹಾವಿಪತ್ತು ನಾಡನ್ನು ಹಾದುಹೋಗುವಾಗ, ಅದು ನಮ್ಮನ್ನು ಮುಟ್ಟದು. ನಾವು ಅಸತ್ಯವನ್ನು ಆಶ್ರಯಿಸಿಕೊಂಡಿದ್ದೇವೆ. ಮೋಸವನ್ನು ಮರೆಹೊಕ್ಕಿದ್ದೇವೆ” ಎಂದು ಕೊಚ್ಚಿಕೊಳ್ಳುತ್ತಿದ್ದೀರಿ.


“ದೇವನಿಲ್ಲ” ಎನ್ನುವವರು ಮನದಲಿ ದುರ್ಮತಿಗಳು I ಹೇಯ ಕೃತ್ಯವೆಸಗುವರು ಆ ಭ್ರಷ್ಟಚಾರಿಗಳು I ಒಳಿತನ್ನು ಮಾಡುವರಾರೂ ಇಲ್ಲ ಅವರೊಳು II


ಮನದೊಳಿಂತೆಂದು ನೆನೆದನಾ ದುರುಳನು: I “ದೇವನಿದನು ಮರೆತು ವಿಮುಖನಾಗಿಹನು I ಇನ್ನೆಂದಿಗು ನೋಡನು ಇದೆಲ್ಲವನು” II


“ಒಬ್ಬ ಲೇವಿ ನನ್ನ ಮನೆಯಲ್ಲಿ ಯಾಜಕನಾಗಿರುವುದರಿಂದ ಸರ್ವೇಶ್ವರ ನನ್ನನ್ನು ಆಶೀರ್ವದಿಸುವರೆಂದು ಬಲ್ಲೆ,” ಎಂದುಕೊಂಡನು.


ಈ ಮೀಕನು ‘ಏಫೋದ’ನ್ನೂ ವಿಗ್ರಹಗಳನ್ನೂ ಮಾಡಿಸಿ ಅವುಗಳನ್ನು ತಾನು ಕಟ್ಟಿಸಿದ ದೇವಸ್ಥಾನದಲ್ಲಿಟ್ಟು ತನ್ನ ಕುಮಾರರಲ್ಲೊಬ್ಬನನ್ನು ಅರ್ಚಕ ಸೇವೆಗೆ ಪ್ರತಿಷ್ಠಿಸಿದನು.


ಯೆಹೂದಿ ಬರವಣಿಗೆಯ ಮೂರು ನಾಲ್ಕು ಪುಟಗಳನ್ನು ಓದಿದ ಹಾಗೆಲ್ಲಾ ಅರಸನು ಆಯಾ ಭಾಗಗಳನ್ನು ಚೂರಿಯಿಂದ ಕತ್ತರಿಸಿ ಸುರುಳಿ ಸಂಪೂರ್ಣವಾಗಿ ಸುಟ್ಟುಹೋಗುವ ತನಕ ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಹಾಕುತ್ತಾ ಬಂದನು.


ದುಷ್ಟತನವೇ ಅವರಿಗೆ ಅನ್ನ ಆಹಾರ; ಹಿಂಸಾಚಾರವೇ ಅವರಿಗೆ ಮದುಪಾನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು