Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 5:22 - ಕನ್ನಡ ಸತ್ಯವೇದವು C.L. Bible (BSI)

22 ಸುರಾಪಾನದಲ್ಲಿ ಶೂರರಾಗಿ, ಮದ್ಯಮಿಶ್ರಣದಲ್ಲಿ ಸಾಹಸಿಗಳಾಗಿ ಇರುವವರಿಗೆ ಧಿಕ್ಕಾರ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅಯ್ಯೋ, ಸುರಾಪಾನದಲ್ಲಿ ಶೂರರೂ, ಮದ್ಯಮಿಶ್ರಣದಲ್ಲಿ ಸಾಹಸಿಗಳೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅಯ್ಯೋ, ಸುರಾಪಾನದಲ್ಲಿ ಶೂರರೂ ಮದ್ಯವಿುಶ್ರಣದಲ್ಲಿ ಸಾಹಸಿಗಳೂ ಆಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಅವರು ಮದ್ಯವನ್ನು ಬೆರೆಸುವುದರಲ್ಲಿ ಪರಿಣಿತರು; ಮದ್ಯಸೇವನೆ ಮಾಡುವದಕ್ಕೆ ಹೆಸರಾದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅಯ್ಯೋ, ದ್ರಾಕ್ಷಾರಸ ಕುಡಿಯುವುದರಲ್ಲಿ ಶೂರರೂ, ಮದ್ಯ ಸಾಹಸಿಗಳೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 5:22
14 ತಿಳಿವುಗಳ ಹೋಲಿಕೆ  

ಮದ್ಯದ ಗೀಳಿನಿಂದ ಮುಂಜಾನೆ ಏಳುವವರಿಗೆ ಧಿಕ್ಕಾರ ! ಅಮಲೇರಿ ಉನ್ಮತ್ತರಾಗುವಂತೆ ರಾತ್ರಿಯಲ್ಲಿ ಹೊತ್ತುಮೀರಿ ಕುಡಿಯುತ್ತಾ ಕಾಲಹರಣ ಮಾಡುವವರಿಗೆ ಧಿಕ್ಕಾರ !


ನಿನ್ನ ರೋಷವನ್ನು ಮಧುಪಾನಕ್ಕೆ ಬೆರಸಿ, ಅದರಿಂದ ನಿನ್ನ ನೆರೆಯವರನ್ನು ಮತ್ತರಾಗಿಸಿ, ಅವರ ಬೆತ್ತಲೆತನವನ್ನು ನೋಡಬೇಕೆಂದಿರುವ ನಿನಗೆ ಧಿಕ್ಕಾರ!


ಯಾಜಕರು, ಪ್ರವಾದಿಗಳು ಮದ್ಯಪಾನದಿಂದ ಮತ್ತರಾಗಿದ್ದಾರೆ; ದ್ರಾಕ್ಷಾರಸದಿಂದ ಓಲಾಡುತ್ತಿದ್ದಾರೆ; ಕುಡಿತದಿಂದ ತೂರಾಡುತ್ತಿದ್ದಾರೆ. ದ್ರಾಕ್ಷಾರಸವೇ ಅವರನ್ನು ಮುಳುಗಿಸಿಬಿಟ್ಟಿದೆ. ಹೌದು, ಅವರು ಮದ್ಯದಲ್ಲಿ ತೇಲಾಡುತ್ತಿದ್ದಾರೆ. ದೈವದರ್ಶನವಾಗುತ್ತಿರುವಾಗಲೂ ಅವರು ಓಲಾಡುತ್ತಾರೆ.


ಅಲ್ಲದೆ, ‘ಬನ್ನಿ, ಮಧುಪಾನವನ್ನು ತರಿಸುತ್ತೇನೆ. ಅಮಲೇರಿಸುವ ಮದ್ಯವನ್ನು ಬೇಕಾದಷ್ಟು ಕುಡಿಯೋಣ; ಆಗ ಇನ್ನೂ ಸಂಭ್ರಮವಾಗಿರುವುದು!’ ಎಂದು ಹರಟಿಕೊಳ್ಳುವರು.”


ಲಂಚವನ್ನು ತೆಗೆದುಕೊಳ್ಳಬಾರದು. ಲಂಚವು ಕಣ್ಣುಳ್ಳವರನ್ನು ಕುರುಡರನ್ನಾಗಿಸುತ್ತದೆ; ನಿರಪರಾಧಿಗೆ ದೊರಕಬೇಕಾದ ನ್ಯಾಯವನ್ನು ಕೆಡಿಸುತ್ತದೆ.


ದ್ರಾಕ್ಷಾರಸದಿಂದ ನಗೆಯಾಟ, ಮಧ್ಯದಿಂದ ಕೂಗಾಟ; ಇವುಗಳಿಂದ ತೂರಾಟಕ್ಕೆ ತುತ್ತಾಗುವವನು ಜ್ಞಾನಿಯಲ್ಲ.


ಕಿರಿಚಾಟ, ಕೂಗಾಟ, ಕಿತ್ತಾಟ, ಗೋಳಾಟವು ನಿರ್ನಿಮಿತ್ತ ಹುಣ್ಣು, ಕೆಂಪೇರಿದ ಕಣ್ಣು; ಇವುಗಳನ್ನು ಅನುಭವಿಸುವವರು ಯಾರು?


ಕುಡುಕತನ ರಾಜನಿಗೆ ತಕ್ಕುದ್ದಲ್ಲ; ಲೆಮೂವೇಲನೇ ಕೇಳು, ಅದು ರಾಜನಿಗೆ ಯೋಗ್ಯವಲ್ಲ; ಮದ್ಯಪಾನಾಸಕ್ತಿ ಅಧಿಕಾರಿಗಳಿಗೆ ಹಿತವಲ್ಲ.


ಆದರೆ ನೀವು ಹರ್ಷಾನಂದಗೊಂಡಿರಿ. ದನಕರುಗಳನ್ನು ಕೊಯ್ದಿರಿ, ಮಾಂಸವನ್ನು ಭುಜಿಸಿ ಮದ್ಯಪಾನ ಮಾಡಿದಿರಿ. “ಇಂದೇ ತಿಂದು ಕುಡಿಯೋಣ, ನಾಳೆ ಬರುತ್ತದೆ ಮರಣ,” ಎಂದು ಹೇಳಿಕೊಂಡಿರಿ.


ಇನ್ನಿಲ್ಲ ಮದ್ಯಪಾನ ಗೀತಾಗಾನ, ಕಹಿಪಾನವಾಯಿತು ಕುಡುಕನಿಗೆ ಸುರಾಪಾನ.


ಮಧ್ಯಾಹ್ನದಲ್ಲಿ, ಬೆನ್ಹದದನು ತನ್ನ ಸಹಾಯಕ್ಕಾಗಿ ಬಂದ ಮೂವತ್ತೆರಡು ಮಂದಿ ರಾಜರ ಸಂಗಡ ಮದ್ಯಪಾನಮಾಡಿ ಮತ್ತನಾಗಿ, ಡೇರೆಯಲ್ಲಿ ಕುಳಿತುಕೊಂಡಿದ್ದಾಗ ಇವರು ಪಟ್ಟಣದಿಂದ ಹೊರಗೆ ಬಂದರು.


ಕುಡಿದರೆ ಕರ್ತವ್ಯವನ್ನು ಮರೆಯುತ್ತಾರೆ; ದೀನದಲಿತರಿಗೆ ನ್ಯಾಯ ತೀರಿಸದೆ ತಾರತಮ್ಯ ಮಾಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು