Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 5:23 - ಕನ್ನಡ ಸತ್ಯವೇದವು C.L. Bible (BSI)

23 ಲಂಚಕ್ಕೋಸ್ಕರ ನಿರ್ದೋಷಿಗಳನ್ನು ಅಪರಾಧಿಗಳೆಂದು ತೀರ್ಮಾನಿಸಿ ವಂಚಿಸುವವರಿಗೆ ಧಿಕ್ಕಾರ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಲಂಚಕ್ಕೋಸ್ಕರ ದೋಷಿಗಳನ್ನು ನಿರ್ದೋಷಿಗಳೆಂದು ತೀರ್ಪುಮಾಡಿ, ನ್ಯಾಯವಂತರ ನ್ಯಾಯವನ್ನು ಹಾಳುಮಾಡುವವರ ಗತಿಯನ್ನು ಏನು ಹೇಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಲಂಚಕ್ಕೋಸ್ಕರ ದೋಷಿಗಳನ್ನು ನಿರ್ದೋಷಿಗಳೆಂದು ತೀರ್ಪುಮಾಡಿ ನ್ಯಾಯವಂತರ ನ್ಯಾಯವನ್ನು ಹಾಳುಮಾಡುವವರ ಗತಿಯನ್ನು ಏನೆಂದು ಹೇಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಅವರಿಗೆ ಹಣಕೊಟ್ಟರೆ, ಅಪರಾಧಿಯನ್ನೂ ಬಿಟ್ಟುಬಿಡುವರು; ಆದರೆ ಒಳ್ಳೆಯವರಿಗೆ ಸರಿಯಾದ ನ್ಯಾಯತೀರ್ಪು ದೊರಕಲು ಅವರು ಅವಕಾಶ ಕೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಲಂಚಕ್ಕೋಸ್ಕರ ದುಷ್ಟನನ್ನು ನೀತಿವಂತನೆಂದು ನಿರ್ಣಯಿಸಿ, ನೀತಿಯನ್ನು ನೀತಿವಂತನಿಂದ ತೆಗೆದು ಹಾಕುವವರಿಗೂ ಕಷ್ಟ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 5:23
22 ತಿಳಿವುಗಳ ಹೋಲಿಕೆ  

ನೀವು ದಲಿತರಿಗೆ ನ್ಯಾಯ ದೊರಕದಂತೆ ಮಾಡುತ್ತೀರಿ. ಬಡಬಗ್ಗರಿಂದ ಹಕ್ಕುಬಾಧ್ಯತೆಗಳನ್ನು ಕಸಿದುಕೊಳ್ಳುತ್ತೀರಿ. ವಿಧವೆಯರನ್ನು ಸೂರೆಮಾಡುತ್ತೀರಿ. ಅನಾಥರನ್ನು ಕೊಳ್ಳೆಹೊಡೆಯುತ್ತೀರಿ.


ನಿಮ್ಮನ್ನು ವಿರೋಧಿಸಿದ ಸಜ್ಜನನನ್ನು ಖಂಡಿಸಿ ಕೊಲೆಮಾಡಿಸಿದ್ದೀರಿ.


ದುರ್ಜನರನ್ನು ಸಜ್ಜನರೆಂದೂ, ಸಜ್ಜನರನ್ನು ದುರ್ಜನರೆಂದೂ ನಿರ್ಣಯಿಸುವ ಇಬ್ಬರೂ ಸರ್ವೇಶ್ವರನಿಗೆ ಅಸಹ್ಯರು.


ಹೊಂಚುಹಾಕುವರವರು ನೀತಿವಂತರ ಪ್ರಾಣಕೆ I ಮರಣಶಿಕ್ಷೆ ವಿಧಿಸುವರವರು ನಿರಪರಾಧಿಗಳಿಗೆ II


ದುಷ್ಕೃತ್ಯಗಳನ್ನು ಮಾಡುವುದರಲ್ಲಿ ಅವರದು ನುರಿತ ಕೈ. ಅಧಿಕಾರಿಗಳು ಮತ್ತು ನ್ಯಾಯಾಧಿಪತಿಗಳು ಲಂಚಕ್ಕಾಗಿ ಕೈಯೊಡ್ಡುತ್ತಾರೆ. ದೊಡ್ಡ ದೊಡ್ಡ ವ್ಯಕ್ತಿಗಳು ತಮ್ಮ ಅಂತರಂಗದ ದುರಾಸೆಯನ್ನು ವ್ಯಕ್ತಪಡಿಸುತ್ತಾರೆ. ಎಲ್ಲರು ಒಟ್ಟಿಗೆ ಸೇರಿ ಒಳಸಂಚುಮಾಡುತ್ತಾರೆ.


ನಿಮ್ಮ ಮುಖಂಡರು ಲಂಚಕ್ಕಾಗಿ ನ್ಯಾಯತೀರಿಸುತ್ತಾರೆ. ನಿಮ್ಮ ಯಾಜಕರು ಸಂಬಳಕ್ಕಾಗಿ ಉಪದೇಶಮಾಡುತ್ತಾರೆ. ಆದರೂ ಸರ್ವೆಶ್ವರಸ್ವಾಮಿಯ ಮೇಲೆ ಭಾರಹಾಕಿದವರಂತೆ, “ಸ್ವಾಮಿ ನಮ್ಮೊಡನೆ ಇಲ್ಲವೆ? ನಮಗೆ ಕೇಡು ಸಂಭವಿಸುವುದಾದರೂ ಹೇಗೆ?” ಎಂದುಕೊಳ್ಳುತ್ತಾರೆ.


ನಿನ್ನ ಅಧಿಪತಿಗಳೇ ದ್ರೋಹಿಗಳಾಗಿದ್ದಾರೆ, ಕಳ್ಳರ ಗೆಳೆಯರಾಗಿದ್ದಾರೆ. ಎಲ್ಲರೂ ಲಂಚಕೋರರಾಗಿದ್ದಾರೆ. ಕಪ್ಪಕಾಣಿಕೆಗಳಿಗೆ ಕೈಯೊಡ್ಡುತ್ತಾರೆ. ಆದರೆ ಅನಾಥರ ಪರವಾಗಿ ವಾದಿಸುವುದಿಲ್ಲ. ವಿಧವೆಯರ ವ್ಯಾಜ್ಯವನ್ನು ತೀರಿಸುವುದಿಲ್ಲ.


ಅಪರಾಧಿಗೆ “ನೀನು ನಿರಪರಾಧಿ” ಎಂದು ತೀರ್ಪು ಕೊಡುವವನನ್ನು ಜನರು ಶಪಿಸುವರು, ಪ್ರಜೆಗಳು ದೂಷಿಸುವರು.


ಲಂಚವನ್ನು ಗುಟ್ಟಾಗಿ ಪಡೆದ ದುಷ್ಟನು ಡೊಂಕಾಗಿಸುತ್ತಾನೆ ನ್ಯಾಯ ನಿರ್ಣಯವನ್ನು.


ಹೀಗಿರುವಲ್ಲಿ, ನಿಮಗೆ ಅವರ ಭಯಭಕ್ತಿಯಿರಲಿ. ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಅನ್ಯಾಯ, ಮುಖದಾಕ್ಷಿಣ್ಯ ಹಾಗು ಲಂಚಕೋರತನ ಇಲ್ಲ. ಆದುದರಿಂದ ಜಾಗರೂಕತೆಯಿಂದ ಕೆಲಸಮಾಡಿ,” ಎಂದು ಎಚ್ಚರಿಸಿದನು.


“ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು; ಪಕ್ಷಪಾತ ಕೂಡದು; ಲಂಚ ತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರನ್ನಾಗಿಸುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.


ಹೀಗೆ, ಪುನೀತ ಹೇಬೆಲನ ರಕ್ತ ಮೊದಲ್ಗೊಂಡು ಬಲಿಪೀಠಕ್ಕೂ ಗರ್ಭಗುಡಿಗೂ ನಡುವೆ ನೀವು ಕೊಲೆಮಾಡಿದ ಬರಕೀಯನ ಮಗ ಜಕರೀಯನ ರಕ್ತದವರೆಗೆ ಪೃಥ್ವಿಯಲ್ಲಿ ಸುರಿಸಲಾದ ಎಲ್ಲಾ ಸತ್ಪುರುಷರ ರಕ್ತದ ಹೊಣೆ ನಿಮ್ಮದೇ.


ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕುಳಿತರು. ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆಂಬುದಾಗಿ ಜನರ ಎದುರಿನಲ್ಲೆ ಅವನಿಗೆ ವಿರುದ್ಧ ಸಾಕ್ಷಿಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು.


ಅನ್ಯಾಯವಾದ ನಿಬಂಧನೆಗಳನ್ನು ಕ್ರೂರವಾದ ಕಾನೂನುಗಳನ್ನು ರಚಿಸುವ ನಿಮಗೆ ಧಿಕ್ಕಾರ !


ಕಳ್ಳನ ಸಾಧನಗಳು ಕೆಟ್ಟವುಗಳೇ. ಅವನ ಯೋಜನೆಗಳು ಅಬದ್ಧವಾದುವೇ. ದೀನದಲಿತರ ಕೋರಿಕೆಗಳು ನ್ಯಾಯಬದ್ಧವಾಗಿದ್ದರೂ ಸುಳ್ಳುಮಾತುಗಳಿಂದ ಅವರನ್ನು ಹಾಳುಮಾಡುತ್ತಾನೆ.


ಸತ್ಯವು ಅದೃಶ್ಯವಾಗಿದೆ. ಕೇಡನ್ನು ಕೈಬಿಟ್ಟವನೇ ಖೂನಿಗೆ ಗುರಿಯಾಗುತ್ತಾನೆ.”


ಸಜ್ಜನರನ್ನು ಹಿಂಸಿಸಿ, ಲಂಚಕ್ಕೆ ಕೈ ಒಡ್ಡುವವರೇ, ನ್ಯಾಯಮಂಟಪದಲ್ಲಿ ಬಡವರಿಗೆ ನ್ಯಾಯದೊರಕಿಸದಿರುವವರೇ, ನಿಮ್ಮ ಪಾಪಗಳು ಅಪಾರ! ನಿಮ್ಮ ದ್ರೋಹಗಳು ಬಹಳ! ಇದು ನನಗೆ ಗೊತ್ತು.


ಯಾಜಕರು, ಪ್ರವಾದಿಗಳು ಮದ್ಯಪಾನದಿಂದ ಮತ್ತರಾಗಿದ್ದಾರೆ; ದ್ರಾಕ್ಷಾರಸದಿಂದ ಓಲಾಡುತ್ತಿದ್ದಾರೆ; ಕುಡಿತದಿಂದ ತೂರಾಡುತ್ತಿದ್ದಾರೆ. ದ್ರಾಕ್ಷಾರಸವೇ ಅವರನ್ನು ಮುಳುಗಿಸಿಬಿಟ್ಟಿದೆ. ಹೌದು, ಅವರು ಮದ್ಯದಲ್ಲಿ ತೇಲಾಡುತ್ತಿದ್ದಾರೆ. ದೈವದರ್ಶನವಾಗುತ್ತಿರುವಾಗಲೂ ಅವರು ಓಲಾಡುತ್ತಾರೆ.


ಸುಳ್ಳುಸಾಕ್ಷಿ ಹೇಳಿ ತಪ್ಪುಹೊರಿಸುವವರು, ನ್ಯಾಯಸ್ಥಾನದಲ್ಲಿ ದೋಷವನ್ನು ಖಂಡಿಸುವವರಿಗೆ ಉರುಲೊಡ್ಡುವರು, ನೀತಿವಂತನಿಗೆ ನ್ಯಾಯ ತಪ್ಪಿಸುವವರು - ಹೀಗೆ ಅಧರ್ಮದಲ್ಲಿ ನಿರತರಾಗಿರುವ ಇವರೆಲ್ಲರು ನಿರ್ಮೂಲರಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು