Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 5:5 - ಕನ್ನಡ ಸತ್ಯವೇದವು C.L. Bible (BSI)

5 ಕಿತ್ತೆಸೆಯುವೆನು ಅದರ ಬೇಲಿಯನು; ತುತ್ತಾಗುವುದದು ದನಕರುಗಳಿಗೆ. ಕೆಡವಿಹಾಕುವೆನು ಅದರ ಗೋಡೆಯನು; ಈಡಾಗುವುದದು ಪರರ ತುಳಿದಾಟಕ್ಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನನ್ನ ದ್ರಾಕ್ಷಿಯ ತೋಟವನ್ನು ಏನು ಮಾಡುವೆನು ಎಂದು ಈಗ ನಿಮಗೆ ತಿಳಿಸುತ್ತೇನೆ. ಅದರ ಮುಳ್ಳು ಬೇಲಿಯನ್ನು ಕೀಳುವೆನು. ದನಗಳು ಅದನ್ನು ಮೇಯ್ದುಬಿಡುವುದು. ಅದರ ಗೋಡೆಯನ್ನು ಕೆಡವಿ ಹಾಕುವೆನು. ಅದು ಜನರ ತುಳಿದಾಟಕ್ಕೆ ಈಡಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನನ್ನ ತೋಟವನ್ನು ಏನು ಮಾಡುವೆನೋ ಈಗ ನಿಮಗೆ ತಿಳಿಸುವೆನು, ಕೇಳಿರಿ; ಅದರ ಬೇಲಿಯನ್ನು ಕೀಳುವೆನು, ದನವು ಅದನ್ನು ಮೇಯ್ದುಬಿಡುವದು; ಅದರ ಗೋಡೆಯನ್ನು ಕೆಡವಿಹಾಕುವೆನು, ಅದು ತುಳಿದಾಟಕ್ಕೆ ಈಡಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ನಾನೀಗ ನನ್ನ ದ್ರಾಕ್ಷಿತೋಟಕ್ಕೆ ಏನು ಮಾಡುವೆನೆಂದು ತಿಳಿಸುವೆನು: ಅದರ ಸುತ್ತಲೂ ರಕ್ಷಣೆಗಾಗಿ ಹಾಕಿದ್ದ ಮುಳ್ಳಿನ ಬೇಲಿಯನ್ನು ಕಿತ್ತು ಸುಟ್ಟುಬಿಡುವೆನು. ಅದರ ಕಲ್ಲಿನ ಗೋಡೆಯನ್ನು ಕೆಡವಿ ತುಳಿದಾಟಕ್ಕೆ ಈಡುಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನನ್ನ ದ್ರಾಕ್ಷಿ ತೋಟಕ್ಕೆ ನಾನು ಮಾಡುವುದು ಏನೆಂದು ನಾನು ನಿಮಗೆ ತಿಳಿಸುತ್ತೇನೆ. ನಾನು ಅದರ ಬೇಲಿಯನ್ನು ತೆಗೆದುಹಾಕುವೆನು. ಆಗ ದನಕರುಗಳು ಅದನ್ನು ಮೇಯ್ದುಬಿಡುವುದು. ಅದರ ಗೋಡೆಯನ್ನು ಕೆಡವಿಬಿಡುವೆನು, ಆಗ ಅದು ತುಳಿದಾಟಕ್ಕೆ ಈಡಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 5:5
31 ತಿಳಿವುಗಳ ಹೋಲಿಕೆ  

ಕೆಲವರು ಕತ್ತಿಯ ಬಾಯಿಗೆ ತುತ್ತಾಗುವರು. ಮತ್ತೆ ಕೆಲವರು ಬಂಧಿತರಾಗಿ ದೇಶದೇಶಗಳಿಗೆ ಕೊಂಡೊಯ್ಯಲ್ಪಡುವರು; ಅನ್ಯದೇಶೀಯರು ತಮ್ಮ ಕಾಲಾವಧಿಯ ತನಕ ಜೆರುಸಲೇಮನ್ನು ತುಳಿದುಹಾಕುವರು.


“ಸ್ವಾಮಿ ತೃಣೀಕರಿಸಿದನು ನನ್ನ ಶೂರರನ್ನೆಲ್ಲಾ ನನ್ನ ಕಣ್ಮುಂದೆಯೇ. ಸೈನ್ಯಸಮೂಹವನ್ನೆ ಬರಮಾಡಿದನು ನನ್ನ ಯುವಕರನ್ನು ಸದೆಬಡಿಯಲೆಂದೇ. ಯೆಹೂದಿಯೆಂಬ ಯುವತಿಯನ್ನು ತುಳಿಸಿದನು ತೊಟ್ಟಿಯಲ್ಲಿ ದ್ರಾಕ್ಷಿ ತುಳಿವಂತೆ.


ಮೃತ್ಯುವಿನೊಂದಿಗೆ ನೀವು ಮಾಡಿಕೊಂಡ ಒಪ್ಪಂದ ಬಿದ್ದುಹೋಗುವುದು. ಆ ಮಹಾವಿಪತ್ತು ನಾಡನ್ನು ಹಾದುಹೋಗುವಾಗ ನಿಮ್ಮನ್ನು ತುಳಿದುಹಾಕುವುದು.


ಆಲಯದ ಹೊರ ಅಂಗಳವನ್ನು ಅಳತೆಮಾಡಬೇಡ; ಅದನ್ನು ಬಿಟ್ಟುಬಿಡು. ಅದನ್ನು ಜನರಿಗೆ ಬಿಟ್ಟುಕೊಡಲಾಗಿದೆ. ಅವರು ಪವಿತ್ರನಗರವನ್ನು ನಲವತ್ತೆರಡು ತಿಂಗಳವರೆಗೆ ತುಳಿದಾಡುವರು.


ಎಫ್ರಯಿಮಿನ ಕುಡುಕರ ಮಹಾಮುಕುಟದಂತಿರುವ ಆ ನಗರ ಕಾಲಿನ ತುಳಿತಕ್ಕೆ ಈಡಾಗುವುದು.


ಆ ಧರ್ಮಭ್ರಷ್ಟ ಪ್ರಜೆಗೆ ಇದಿರಾಗಿ ಅಸ್ಸೀರಿಯವನ್ನು ಕಳುಹಿಸುತ್ತೇನೆ. ನನ್ನ ಕೋಪಕ್ಕೆ ಗುರಿಯಾದ ಜನರಿಗೆ ವಿರುದ್ಧ ಕಾರ್ಯವನ್ನು ಕೈಗೊಳ್ಳಲು ಆಜ್ಞೆ ಮಾಡುತ್ತೇನೆ. ನನ್ನ ಪ್ರಜೆಯನ್ನು ಸೂರೆಮಾಡಲು, ಕೊಳ್ಳೆಹೊಡೆಯಲು, ಬೀದಿಯ ಕಸದಂತೆ ತುಳಿದುಬಿಡಲು ಅದಕ್ಕೆ ಆಜ್ಞೆಮಾಡುತ್ತೇನೆ.


ನಾವು ಹೋಗಿ ಇವರಲ್ಲಿ ಒಬ್ಬರ ಮಾತು ಒಬ್ಬರಿಗೆ ತಿಳಿಯದಂತೆ ಇವರ ಭಾಷೆಯನ್ನು ಗಲಿಬಿಲಿಗೊಳಿಸೋಣ,” ಎಂದರು.


ಒಂದು ಪಟ್ಟಣವನ್ನು ಕಟ್ಟೋಣ; ಆಕಾಶವನ್ನು ಮುಟ್ಟುವಂಥ ಗೋಪುರವನ್ನು ನಿರ್ಮಿಸಿ ಪ್ರಖ್ಯಾತಿ ಪಡೆಯೋಣ. ಹೀಗೆ ಮಾಡಿದರೆ ನಾವು ಜಗದಲ್ಲೆಲ್ಲಾ ಚದರಿಹೋಗುವುದಕ್ಕೆ ಆಸ್ಪದವಿರುವುದಿಲ್ಲ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. ಕಟ್ಟುವಾಗ ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನೂ ಗಾರೆಗೆ (ಸುಣ್ಣಕ್ಕೆ) ಬದಲಾಗಿ ಕಲ್ಲರಗನ್ನೂ ಉಪಯೋಗಿಸಿದರು.


ಆಗ ಒಬ್ಬ ದೇವದೂತನು ಮಾತಾಡುವುದು ನನಗೆ ಕೇಳಿಸಿತು. ಮಾತಾಡುವವನನ್ನು ಮತ್ತೊಬ್ಬ ದೇವದೂತನು ಸಂಬೋಧಿಸಿ: “ಅನುದಿನದ ಬಲಿಯರ್ಪಣೆಯನ್ನು ನಿಲ್ಲಿಸುವುದು, ಭಯಂಕರವಾದ ದೇವದ್ರೋಹ ಮಾಡುವುದು, ಪವಿತ್ರಾಲಯವನ್ನೂ ದೇವಭಕ್ತಗಣವನ್ನೂ ತುಳಿಯುವುದೂ-ಕನಸಿನ ಇಂಥಾ ಕಾರ್ಯಗಳು ಎಷ್ಟುಕಾಲ ನಡೆಯುವುವು?” ಎಂದು ಪ್ರಶ್ನೆಮಾಡಿದನು.


ವೈರಿಗಳೂ ವಿರೋಧಿಗಳೂ ಜೆರುಸಲೇಮಿನ ಬಾಗಿಲೊಳಗೆ ಕಾಲಿಡುವರೆಂದು ವಿಶ್ವದ ರಾಜರಾಗಲಿ, ನಿವಾಸಿಗಳಾಗಲಿ ನಂಬಿರಲಿಲ್ಲ ಯಾರೂ.


ಸರ್ವೇಶ್ವರ ಸ್ವಾಮಿಯ ಅಭಯ ಹಸ್ತವು ಈ ಪರ್ವತದ ಮೇಲೆ ಶಾಶ್ವತವಾಗಿ ನೆಲಸುವುದು. ಮೋವಾಬಾದರೋ ತಿಪ್ಪೆಗುಂಡಿಯ ರೊಚ್ಚಿನಲ್ಲಿ ಒಣಹುಲ್ಲು ತುಳಿತಕ್ಕೆ ಈಡಾಗುವಂತೆ ತಾನಿದ್ದಲ್ಲೇ ತುಳಿತಕ್ಕೀಡಾಗುವುದು.


ನಾನು ರಾಜನಿಗೆ, “ರಾಜಾಧಿರಾಜರು ಚಿರಂಜೀವಿಯಾಗಿರಲಿ! ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳಾಗಿ ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ; ಹೀಗಿರುವಲ್ಲಿ, ನನ್ನ ಮುಖ ಕಳೆಗುಂದದೆ ಇರಲು ಸಾಧ್ಯವೆ?,” ಎಂದು ಹೇಳಿದೆ.


ಸೀಳಿಬಿಟ್ಟಿರುವೆ ಅವನಾ ಪೌಳಿಗೋಡೆಗಳನು I ಹಾಳುಮಾಡಿಬಿಟ್ಟಿರುವೆ ಕೋಟೆಕೊತ್ತಲಗಳನು II


ಅವುಗಳಲ್ಲಿ ಮುಳ್ಳುಗಿಡಗಳು ಹರಡಿಕೊಂಡಿದ್ದವು, ಕಳೆಗಳು ಮುಚ್ಚಿಕೊಂಡಿದ್ದವು, ಕಲ್ಲಿನಗೋಡೆ ಹಾಳಾಗಿತ್ತು.


ಈಗ ಸುಖವಾಗಿ ಕುಳಿತಿದ್ದೀರಿ, ನಿಶ್ಚಿಂತೆಯಿಂದಿದ್ದೀರಿ. ಇನ್ನು ಒಂದು ವರ್ಷದ ಮೇಲೆ ಕೆಲವು ದಿನಗಳಲ್ಲಿ ಕಳವಳಗೊಳ್ಳುವಿರಿ. ಏಕೆಂದರೆ, ಆಗ ದ್ರಾಕ್ಷೆಯ ಕೊಯಿಲು ನಿಂತುಹೋಗುವುದು. ಯಾವ ಬೆಳೆಯೂ ನಿಮಗೆ ದಕ್ಕದು.


ಈಗ ನೀನು ಜುದೇಯದ ಹಾಗು ಜೆರುಸಲೇಮಿನ ಜನರಿಗೆ ಈ ಸಂದೇಶವನ್ನು ತಿಳಿಸು - ‘ಸರ್ವೇಶ್ವರ ಹೀಗೆನ್ನುತ್ತಾರೆ : ನಾನು ನಿಮಗೆ ವಿರುದ್ಧ ವಿಪತ್ತನ್ನು ಕಲ್ಪಿಸುತ್ತಿದ್ದೇನೆ. ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ದುರ್ಮಾರ್ಗವನ್ನು ಬಿಟ್ಟು ಹಿಂದಿರುಗಲಿ, ನಡತೆಯನ್ನೂ ಕೃತ್ಯಗಳನ್ನೂ ಸರಿಪಡಿಸಿಕೊಳ್ಳಲಿ.


ಇಸ್ರಯೇಲರ ದೇವರಾದ ಸರ್ವೇಶ್ವರ ಇಂತೆನ್ನುತ್ತಾರೆ: ‘ಇಗೋ ನಿಮ್ಮ ಪೌಳಿಗೋಡೆಗೆ ಮುತ್ತಿಗೆ ಹಾಕಿರುವ ಬಾಬಿಲೋನಿನ ಅರಸನಿಗೂ ಅವನ ಸೈನಿಕರಿಗೂ ವಿರುದ್ಧವಾಗಿ ನೀವು ಹಿಡಿದಿರುವ ಆಯುಧಗಳನ್ನು ನಿಮ್ಮ ವಿರುದ್ಧವಾಗಿಯೇ ತಿರುಗಿಸಿಬಿಡುವೆನು. ಅವುಗಳನ್ನೆಲ್ಲ ಈ ನಗರದ ನಡುವೆ ಗುಡ್ಡೆಹಾಕಿಸುವೆನು.


ನನಗೂ ನಿನಗೂ ಹಿಂದೆ, ಪುರಾತನ ಕಾಲದಿಂದಿದ್ದ ಪ್ರವಾದಿಗಳು ಅನೇಕ ದೇಶಗಳಿಗೂ ದೊಡ್ಡ ದೊಡ್ಡ ರಾಜ್ಯಗಳಿಗೂ ಯುದ್ಧ, ಆಪತ್ತು-ವಿಪತ್ತು, ಕಾಯಿಲೆ-ಕಷ್ಟ, ಇಂಥವುಗಳನ್ನು ಸಾರುತ್ತಿದ್ದರು.


“ಸರ್ವೇಶ್ವರನ ಈ ವಾಣಿಯನ್ನು ಕೇಳು: ‘ನೋಡು, ನಾನು ಕಟ್ಟಿದ್ದನ್ನು ನಾನೇ ಕೆಡವುತ್ತೇನೆ. ನಾನು ನೆಟ್ಟಿದ್ದನ್ನು ನಾನೇ ಕಿತ್ತುಹಾಕುತ್ತೇನೆ. ಹೌದು ಜಗದಲ್ಲೆಲ್ಲ ಹಾಗೆ ಮಾಡುತ್ತೇನೆ.


‘ನನ್ನ ನಲ್ಲರು ನನಗೆ ಉಡುಗೊರೆಯಾಗಿ ಕೊಟ್ಟವುಗಳು’ ಎಂದು ಅವಳು ಹೇಳಿಕೊಳ್ಳುವ ದ್ರಾಕ್ಷಾಲತೆಗಳನ್ನೂ ಅಂಜೂರದ ವೃಕ್ಷಗಳನ್ನೂ ನಾಶಪಡಿಸುವೆನು. ಅವುಗಳನ್ನು ಕಾಡುಪೊದೆಗಳನ್ನಾಗಿ ಮಾರ್ಪಡಿಸುವೆನು. ಕಾಡುಮೃಗಗಳು ಅವುಗಳನ್ನು ಕಬಳಿಸುವುವು.


ಸುಲಿಗೆ ಮಾಡುತಿಹರವನನು ದಾರಿಗರೆಲ್ಲರು I ಪರಿಹಾಸ್ಯಕ್ಕೆ ಈಡುಮಾಡುತಿಹರು ನೆರೆಯವರು II


ಕೊಲ್ಲುವ ಸಮಯ, ಗುಣಪಡಿಸುವ ಸಮಯ ಕೆಡವಿಬಿಡುವ ಸಮಯ, ಕಟ್ಟಿ ಎಬ್ಬಿಸುವ ಸಮಯ.


ತನ್ನ ಗರ್ಭಗುಡಿಯನ್ನೂ ಉತ್ಸವಸ್ಥಾನವನ್ನೂ ಹಾಳುಮಾಡಿದ ತೋಟದ ಗುಡಿಸಲನ್ನೋ ಎಂಬಂತೆ. ಮಹೋತ್ಸವಗಳನ್ನೂ ಸಬ್ಬತ್‍ದಿನಗಳನ್ನೂ ಅಳಿಸಿಬಿಟ್ಟ ನೆನಪಿಗೂ ಬಾರದಂತೆ. ರಾಜರನ್ನೂ ಯಾಜಕರನ್ನೂ ಸರ್ವೇಶ್ವರ ಧಿಕ್ಕರಿಸಿದ ಅತಿ ರೋಷಾವೇಷಗೊಂಡವನಂತೆ.


ಆದುದರಿಂದ ಇಗೋ, ನಾನು ಅವಳನ್ನು ಪುನಃ ಬೆಂಗಾಡಿಗೆ ಕರೆದೊಯ್ಯುವೆನು. ಹೃದಯಂಗಮವಾಗಿ ಅವಳನ್ನು ಒಲಿಸಿಕೊಂಡು ಮಾತಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು