Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 5:8 - ಕನ್ನಡ ಸತ್ಯವೇದವು C.L. Bible (BSI)

8 ಮನೆಯ ಮೇಲೆ ಮನೆಯನ್ನು, ಹೊಲದ ಮೇಲೆ ಹೊಲವನ್ನು ಕೂಡಿಹಾಕಿಸುತ್ತಾ ಇರುವವರಿಗೆ ಧಿಕ್ಕಾರ ! ಇತರರಿಗೆ ಕಿಂಚಿತ್ತನ್ನೂ ಬಿಡದೆ ನಾಡಿನ ನಡುವೆ ತಾವೇ ಗೌಡರಾಗಿ ವಾಸಿಸುವ ಇವರಿಗೆ ಧಿಕ್ಕಾರ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅಯ್ಯೋ, ಮನೆಗೆ ಮನೆಯನ್ನೂ, ಹೊಲಕ್ಕೆ ಹೊಲವನ್ನೂ ಸೇರಿಸಿಕೊಳ್ಳುತ್ತಾ ಬಂದು, ಇತರರಿಗೆ ಸ್ವಲ್ಪ ಸ್ಥಳವನ್ನೂ ಬಿಡದೆ ದೇಶದ ಮಧ್ಯದಲ್ಲಿ ತಾವೇ ತಾವಾಗಿ ವಾಸಿಸುವವರ ಗತಿಯನ್ನು ಏನು ಹೇಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅಯ್ಯೋ, ಮನೆಗೆ ಮನೆಯನ್ನೂ ಹೊಲಕ್ಕೆ ಹೊಲವನ್ನೂ ಸೇರಿಸಿಕೊಳ್ಳುತ್ತಾ ಬಂದು ಇತರರಿಗೆ ಸ್ವಲ್ಪ ಸ್ಥಳವನ್ನೂ ಬಿಡದೆ ದೇಶದ ಮಧ್ಯದಲ್ಲಿ ತಾವೇ ತಾವಾಗಿ ವಾಸಿಸುವವರ ಗತಿಯನ್ನು ಏನು ಹೇಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನೀವು ಒಬ್ಬರಿಗೊಬ್ಬರು ಸಮೀಪದಲ್ಲಿ ವಾಸಿಸುತ್ತೀರಿ. ಬೇರೆ ಯಾವುದಕ್ಕೂ ಸ್ಧಳ ಸಿಗದಂತೆ ನೀವು ಹತ್ತಿರಹತ್ತಿರವಾಗಿ ಮನೆಗಳನ್ನು ಕಟ್ಟಿಕೊಳ್ಳುತ್ತೀರಿ. ಆದರೆ ಯೆಹೋವನು ನಿಮ್ಮನ್ನು ಶಿಕ್ಷಿಸಿ ಇಡೀ ದೇಶದಲ್ಲಿಯೇ ನೀವು ಒಬ್ಬಂಟಿಗರಾಗಿ ವಾಸಿಸುವಂತೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅಯ್ಯೋ, ಭೂಮಿಯ ಮಧ್ಯದಲ್ಲಿ ಒಂಟಿಯಾಗಿ ವಾಸಿಸುವಂತೆ ಮನೆಗೆ ಮನೆ ಕೂಡಿಸಿ, ಹೊಲಕ್ಕೆ ಹೊಲ ಸೇರಿಸುವ ನಿಮಗೆ ಕಷ್ಟ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 5:8
14 ತಿಳಿವುಗಳ ಹೋಲಿಕೆ  

ಇತರರ ಹೊಲಗದ್ದೆಗಳನ್ನು ದುರಾಸೆಯಿಂದ ಆಕ್ರಮಿಸಿಕೊಳ್ಳುತ್ತಾರೆ. ಅಂತೆಯೇ ಮನೆಗಳನ್ನು ಅಪಹರಿಸುತ್ತಾರೆ. ಈ ರೀತಿಯಲ್ಲಿ ಮನೆಯನ್ನೂ ಮಾಲೀಕನನ್ನೂ ಸ್ವತ್ತನ್ನೂ ಹಕ್ಕುದಾರನನ್ನೂ ತುಳಿದುಬಿಡುತ್ತಾರೆ.


“ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಸ್ವರ್ಗಸಾಮ್ರಾಜ್ಯದ ದ್ವಾರಗಳನ್ನು ಮಾನವರಿಗೆ ಮುಚ್ಚಿದ್ದೀರಿ. ನೀವೂ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಲು ಯತ್ನಿಸುವವರನ್ನೂ ಬಿಡುವುದಿಲ್ಲ.


“ನರಪುತ್ರನೇ, ಇಸ್ರಯೇಲ್ ನಾಡಿನ ಹಾಳುಪ್ರದೇಶಗಳಲ್ಲಿ ವಾಸಿಸುವರು, ‘ಅಬ್ರಹಾಮನು ಒಂಟಿಗನಾಗಿದ್ದರೂ ಈ ನಾಡು ಅವನಿಗೆ ಸೊತ್ತಾಗಿ ಸಿಕ್ಕಿತು; ಅದು ಬಹುಜನರಾದ ನಮಗೆ ಸೊತ್ತಾಗಿ ಸಿಕ್ಕಿದ್ದು ಏನು ದೊಡ್ಡದು! ಎಂದುಕೊಳ್ಳುತ್ತಿದ್ದಾರೆ.


“ನರಪುತ್ರನೇ, ನಿನ್ನ ಸಹೋದರರಿಗೆ, ನಿನ್ನ ಅಣ್ಣತಮ್ಮಂದಿರಿಗೆ, ನಿನ್ನ ನೆಂಟರಿಷ್ಟರಿಗೆ, ಅಂತು ಇಸ್ರಯೇಲ್ ವಂಶದ ಎಲ್ಲರಿಗೆ, ಜೆರುಸಲೇಮಿನಲ್ಲೇ ಉಳಿದಿರುವವರು, ‘ಸರ್ವೇಶ್ವರನ ಬಳಿಯಿಂದ ದೂರವಾಗಿ ತೊಲಗಿರಿ, ಈ ನಾಡು ನಮಗೇ ಸೊತ್ತಾಗಿ ಸಿಕ್ಕಿದೆ,’ ಎಂದು ಹೇಳಿ ಹೀನೈಸುತ್ತಿದ್ದಾರಲ್ಲವೆ?


ಹಾಳುಮಾಡಿದ್ದ ಪಟ್ಟಣಗಳಲ್ಲೆ ಅವನು ಸೇರಿಕೊಂಡಿದ್ದ ಯಾರೂ ವಾಸಮಾಡದೆ ದಿಬ್ಬವಾಗಿ ಮಾರ್ಪಟ್ಟಿದ್ದ ಶಾಪಗ್ರಸ್ತ ಮನೆಗಳಲ್ಲಿ ವಾಸಮಾಡಿಕೊಂಡಿದ್ದ.


ಸರ್ವೇಶ್ವರ ಇಂತೆನ್ನುತ್ತಾರೆ: “ಅಮ್ಮೋನ್ಯರು ಪದೇಪದೇ ಮಾಡಿದ ಪಾಪಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ತಮ್ಮ ನಾಡಿನ (ಗಡಿ) ವಿಸ್ತರಣೆಗಾಗಿ ಗರ್ಭಿಣಿಯರ ಹೊಟ್ಟೆಯನ್ನೇ ತಿವಿದು ಸೀಳಿಬಿಟ್ಟಿದ್ದಾರೆ.


ಏನನ್ನೂ ಬಿಡದೆ ಕಬಳಿಸಿದ ಅವನ ಸಂತಾನಕ್ಕೆ ಉಳಿಗಾಲವಿಲ್ಲ.


ಸೂರೆಮಾಡುವವನು ಸ್ವಂತ ಮನೆಗೇ ಕೇಡುಮಾಡುತ್ತಾನೆ; ಲಂಚವನ್ನು ದ್ವೇಷಿಸುವವನು ಸುಖವಾಗಿ ಬಾಳುತ್ತಾನೆ.


ತಮ್ಮ ಹಾಸಿಗೆಯಲ್ಲೇ ಕುತಂತ್ರವನ್ನು ಕಲ್ಪಿಸಿಕೊಂಡು ಕೇಡನ್ನು ಬಗೆಯುವವರಿಗೆ ಧಿಕ್ಕಾರ! ಬೆಳಗಾದದ್ದೇ ಅವರು ಕುತಂತ್ರವನ್ನು ಕಾರ್ಯಗತ ಮಾಡುತ್ತಾರೆ. ಆ ಸಾಮರ್ಥ್ಯ ಅವರ ಕೈಯಲ್ಲಿದೆ.


ಆದರೆ ಹೀಗೆ ಅವನಿಂದ ಆಕರ್ಷಿತರಾದವರೆಲ್ಲ ಅವನ ಸಮಾಚಾರವೆತ್ತಿ ಗೇಲಿಯ ಲಾವಣಿಕಟ್ಟುವರು. “ತನ್ನದಲ್ಲದನ್ನು ಹೆಚ್ಚು ಹೆಚ್ಚಾಗಿ ತುಂಬಿಸಿಕೊಂಡವನಿಗೆ ಧಿಕ್ಕಾರ! ಬಡ್ಡಿಗಾಗಿ ಅಡವಿಟ್ಟ ವಸ್ತುಗಳನ್ನು ರಾಶಿಮಾಡಿಕೊಂಡವನಿಗೆ ಧಿಕ್ಕಾರ! ಎಷ್ಟುಕಾಲ ಹೀಗೆ ಮಾಡಿಯಾನು?’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು