Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 50:11 - ಕನ್ನಡ ಸತ್ಯವೇದವು C.L. Bible (BSI)

11 ಬೆಂಕಿಯಿಕ್ಕಿ ಸುತ್ತಲು ಕೊಳ್ಳಿಗಳನು ಹತ್ತಿಸಿಕೊಂಡಿರುವ ಎಲೈ ಜನರೇ, ನಡೆಯಿರಿ ನಿಮ್ಮಾ ಬೆಂಕಿಯ ಬೆಳಕಿನಲಿ ನೀವು ಹತ್ತಿಸಿದ ಆ ಕೊಳ್ಳಿಗಳ ನಡುವೆಯೆ ನಡೆಯಿರಿ : ಇಗೋ, ಒದಗುವುದು ದುರ್ಗತಿ ನನ್ನ ಹಸ್ತದಿಂದ, ಸಾಯುವಿರಿ ನೀವು ಬಾಧೆಯಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಓಹೋ, ಬೆಂಕಿಹಚ್ಚಿ ಸುತ್ತಮುತ್ತಲು ಉರಿಯನ್ನು ಹತ್ತಿಸಿಕೊಂಡಿರುವವರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ, ನೀವು ಹತ್ತಿಸಿದ ಕೊಳ್ಳಿಗಳ ನಡುವೆ ನಡೆದರೂ ನಡೆಯಿರಿ. ಇಗೋ, “ನನ್ನ ಹಸ್ತದಿಂದ ನಿಮಗಾಗುವ ಗತಿಯು ಇದೇ, ದುಃಖಕ್ಕೆ ಒಳಗಾಗಿ ಸಾಯುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಓಹೋ, ಬೆಂಕಿಯಿಕ್ಕಿ ಸುತ್ತುಮುತ್ತಲು ಕೊಳ್ಳಿಗಳನ್ನು ಹತ್ತಿಸಿಕೊಂಡಿರುವವರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕೊಳ್ಳಿಗಳ ನಡುವೆಯೂ ನಡೆದರೂ ನಡೆಯಿರಿ. ಇಗೋ, ನನ್ನ ಹಸ್ತದಿಂದ ನಿಮಗಾಗುವ ಗತಿಯು ಇದೇ, ದುಃಖಕ್ಕೆ ಒಳಗಾಗಿ ಸಾಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಆದರೆ ನೀವು ನಿಮ್ಮ ದಾರಿಯಲ್ಲಿಯೇ ಜೀವಿಸಬೇಕೆಂದಿದ್ದೀರಿ, ನೀವು ನಿಮ್ಮ ಬೆಂಕಿಗಳನ್ನೂ ದೀವಟಿಗೆಗಳನ್ನೂ ಹಚ್ಚುತ್ತೀರಿ, ನಿಮಗೆ ಇಷ್ಟಬಂದ ರೀತಿಯಲ್ಲಿ ಜೀವಿಸುತ್ತೀರಿ. ಆದ್ದರಿಂದ ನೀವು ಶಿಕ್ಷಿಸಲ್ಪಡುವಿರಿ. ನಿಮ್ಮ ಬೆಂಕಿಯಲ್ಲಿಯೂ ದೀವಟಿಗೆಗಳಲ್ಲಿಯೂ ನೀವೇ ಬಿದ್ದು ಸುಟ್ಟುಹೋಗುವಿರಿ. ಇದನ್ನು ನಾನೇ ನೆರವೇರಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಕಿಡಿಗಳಿಂದ ಆವರಿಸಿಕೊಳ್ಳುವವರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ, ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಕೈಯಿಂದ ನಿಮಗಾಗುವುದು ಇದೇ. ನೀವು ಯಾತನೆಯಲ್ಲಿ ಬಿದ್ದುಕೊಂಡಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 50:11
30 ತಿಳಿವುಗಳ ಹೋಲಿಕೆ  

ದೇವರೊಡನೆ ಸತ್ಸಂಬಂಧವನ್ನು ಪಡೆಯುವ ಮಾರ್ಗವನ್ನು ಅರಿಯದೆ ತಮ್ಮದೇ ಆದ ಧರ್ಮವನ್ನು ಸ್ಥಾಪಿಸಲು ಅವರು ಪ್ರಯತ್ನಿಸಿದರು. ಎಂದೇ ಅವರು ದೈವ ಸತ್ಸಂಬಂಧಕ್ಕೆ ಬಾಹಿರರಾದರು.


ನಿಮ್ಮ ಪಾಪಗಳಲ್ಲೇ ನೀವು ಸಾಯುವಿರೆಂದು ನಾನು ಹೇಳಿದುದು ಇದಕ್ಕಾಗಿಯೇ. ‘ಇರುವಾತನೇ ನಾನು’ ಎಂಬುದನ್ನು ನೀವು ವಿಶ್ವಾಸಿಸದೆಹೋದರೆ ನಿಮ್ಮ ಪಾಪಗಳಲ್ಲೇ ಸಾಯುವಿರಿ,” ಎಂದು ಯೇಸು ಅವರಿಗೆ ಹೇಳಿದರು.


ನಿರರ್ಥಕ ವಿಗ್ರಹಗಳನಾರಾಧಿಪ ಜನರು ತೊರೆದಿಹರು ಹಾರ್ದಿಕ ಭಕ್ತಿಯನು


ಮೃಗವನ್ನು ಸೆರೆಹಿಡಿಯಲಾಯಿತು. ಅದರ ಜೊತೆಯಲ್ಲಿ ಕಪಟ ಪ್ರವಾದಿಯೂ ಸೆರೆಸಿಕ್ಕಿಬಿದ್ದನು. ಮೃಗದ ಮುಂದೆ ಪವಾಡ ಕಾರ್ಯಗಳನ್ನೆಸಗಿ ಅದರ ಮುದ್ರೆ ಒತ್ತಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಪೂಜೆ ಮಾಡಿದವರನ್ನು ಮರುಳುಗೊಳಿಸಿದವನು ಇವನೇ. ಇವರಿಬ್ಬರನ್ನೂ ಜೀವಸಹಿತ ಹಿಡಿದು ಗಂಧಕದಿಂದ ಉರಿಯುವ ಅಗ್ನಿಸರೋವರಕ್ಕೆ ಎಸೆಯಲಾಯಿತು.


ಆಗ ಯೇಸು, “ಕುರುಡರು ಕಾಣುವಂತೆಯೂ ಕಾಣುವವರು ಕುರುಡರಾಗುವಂತೆಯೂ ತೀರ್ಪುಕೊಡಲೆಂದೇ ನಾನು ಈ ಲೋಕಕ್ಕೆ ಬಂದುದು,” ಎಂದು ನುಡಿದರು.


“ಇಸ್ರಯೇಲ್ ವಂಶದವರೇ, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಹೋಗಿರಿ, ನಿಮ್ಮ ವಿಗ್ರಹಗಳನ್ನು ಪೂಜಿಸಿರಿ; ಮುಂದಕ್ಕಾದರು ನನ್ನ ಮಾತನ್ನು ಕೇಳಿಯೇ ಕೇಳುವಿರಿ; ಇನ್ನು ಮೇಲಾದರು ನನ್ನ ಪರಿಶುದ್ಧನಾಮವನ್ನು ನಿಮ್ಮ ಬಲಿಗಳಿಂದ ಹಾಗೂ ವಿಗ್ರಹಗಳಿಂದ ನೀವು ಅಪಕೀರ್ತಿಗೆ ಒಳಪಡಿಸಲಾರಿರಿ.


ಆಕಾಶವನ್ನು ದಿಟ್ಟಿಸಿ ನೋಡಿದರೂ ಭೂಮಿಯನ್ನು ದುರುಗುಟ್ಟಿ ನೋಡಿದರೂ ಅವರಿಗೆ ಕಾಣುವುದು ಕಷ್ಟಸಂಕಟಗಳ ಕತ್ತಲೆ, ಭಯಂಕರವಾದ ಕಾಳಗತ್ತಲೆಯಲ್ಲದೆ ಮತ್ತೇನೂ ಅಲ್ಲ. ಅಂಥ ಕರಾಳ ಕತ್ತಲೆಯೊಳಗೆ ಅವರನ್ನು ದೂಡಲಾಗುವುದು.


ಯಾರ ಯಾರ ಹೆಸರು ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿಲ್ಲವೋ ಅಂಥವರನ್ನು ಅಗ್ನಿಸರೋವರಕ್ಕೆ ಎಸೆಯಲಾಯಿತು.


ನಾಲಿಗೆಯು ಆ ಬೆಂಕಿಯ ಕಿಡಿಯಂತೆ. ಅದು ಅಧರ್ಮಲೋಕದ ಪ್ರತೀಕ. ಅಂಗಾಂಗಗಳ ನಡುವೆ ಇದ್ದು ಇಡೀ ಶರೀರವನ್ನು ಮಲಿನಗೊಳಿಸುತ್ತದೆ. ನರಕಾಗ್ನಿಯಿಂದ ಹೊತ್ತಿಕೊಂಡು ಅದು ಬಾಳಿನ ಚಕ್ರಕ್ಕೆ ಬೆಂಕಿಯನ್ನು ಹಚ್ಚುತ್ತದೆ.


ಆಗ ರಾಜನು ಪರಿಚಾರಕರಿಗೆ, ‘ಇವನ ಕೈಕಾಲುಗಳನ್ನು ಕಟ್ಟಿ ಹೊರಗಿನ ಕತ್ತಲೆಗೆ ದಬ್ಬಿರಿ; ಅಲ್ಲಿರುವವರೊಡನೆ ಹಲ್ಲುಕಡಿದು ಗೋಳಾಡಲಿ,’ ಎಂದು ಹೇಳಿದ.


ಆದರೆ ಯಾರು ಈ ಸಾಮ್ರಾಜ್ಯಕ್ಕೆ ಬಾಧ್ಯಸ್ಥರೋ ಅವರನ್ನೇ ಹೊರಗೆ ದಬ್ಬಲಾಗುವುದು; ಅಲ್ಲಿ, ಆ ಕಾರ್ಗತ್ತಲಲ್ಲಿ, ಅವರ ಗೋಳಾಟವೇನು! ಹಲ್ಲು ಕಡಿತವೇನು!”


ಆಹಾರವಲ್ಲದ್ದಕ್ಕೆ ಹಣವನು ವ್ಯಯಮಾಡುವುದೇಕೆ? ತೃಪ್ತಿ ತರದ ಪದಾರ್ಥಕ್ಕೆ ನಿಮ್ಮ ದುಡಿತದ ವೆಚ್ಚವೇಕೆ? ಕಿವಿಗೊಡಿ ನನಗೆ, ಒಳಿತನ್ನು ತಿಂದು ಆನಂದಪಡಿ ಆ ಮೃಷ್ಟಾನ್ನವನುಂಡು.


ನೆರೆಯವನನ್ನು ಮೋಸಗೊಳಿಸಿ “ತಮಾಷೆಗಾಗಿ ಮಾಡಿದೆ” ಎನ್ನುವನವನು


‘ದುಷ್ಟರ ಕಷ್ಟನಷ್ಟಗಳು ಅನೇಕ I ಪ್ರಭುವನು ನಂಬಿದವರ ಸುತ್ತ ಮರುಕ’ ” II


ಅನ್ಯದೇವರನ್ನು ಬಯಸುವವರನ್ನು ಕಾದಿದೆ ಕಠಿಣ ಕಷ್ಟ I ಅವರಂತೆ ರಕ್ತಪಾನತರ್ಪಣೆ ಮಾಡಲೆನಗಿಲ್ಲ ಇಷ್ಟ I ಆ ದೇವರುಗಳ ನಾಮೋಚ್ಚಾರಣೆ ನನ್ನ ತುಟಿಗೆ ಅನಿಷ್ಟ II


ದುಷ್ಟತನ ಬೆಂಕಿಗೆ ಸಮಾನ. ಅದು ಮುಳ್ಳುಗಿಳ್ಳುಗಳನ್ನು ಸುಟ್ಟುಹಾಕುತ್ತದೆ. ಕಾಡುಪೊದೆಗಳನ್ನು ಭಸ್ಮಮಾಡುತ್ತದೆ. ಹೊಗೆಯಾಡುತ್ತಾ ಮುಗಿಲಂತೆ ಮೇಲೆ ಬೀಳುತ್ತದೆ.


“ಬಿಸಿಗಾಳಿಯನ್ನು ಕಳುಹಿಸಿ ನಿಮ್ಮ ಪೈರು ಒಣಗುವಂತೆ ಮಾಡಿದೆ. ನಿಮ್ಮ ಬೆಳೆ ಬೂಷ್ಟು ಹಿಡಿದು ನಾಶವಾಗುವಂತೆ ಮಾಡಿದೆ. ನಿಮ್ಮ ವನವೃಕ್ಷಗಳನ್ನೂ ದ್ರಾಕ್ಷಾತೋಟಗಳನ್ನೂ ಹಾಳುಮಾಡಿದೆ. ನಿಮ್ಮ ಅಂಜೂರದ ಗಿಡಗಳನ್ನೂ ಎಣ್ಣೆಮರಗಳನ್ನೂ ಮಿಡತೆಗಳು ತಿಂದುಬಿಡುವಂತೆ ಮಾಡಿದೆ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವಶಕ್ತ ಸರ್ವೇಶ್ವರ.


“ಹಿಂದೊಮ್ಮೆ ಈಜಿಪ್ಟಿಗೆ ನಾನು ಮಾಡಿದಂತೆ ನಿಮ್ಮನ್ನು ವ್ಯಾಧಿಯಿಂದ ಬಾಧಿಸಿದೆ. ನಿಮ್ಮ ಯುವಜನರು ಖಡ್ಗಕ್ಕೆ ತುತ್ತಾಗುವಂತೆ ಮಾಡಿದೆ. ನಿಮ್ಮ ಕುದುರೆಗಳು ಸೂರೆಯಾಗುವಂತೆ ಮಾಡಿದೆ. ನಿಮ್ಮ ದಂಡಿನವರ ಹೆಣಗಳು ಕೊಳೆತು ನಾರುವ ದುರ್ವಾಸನೆ ನಿಮ್ಮ ಮೂಗಿಗೆ ಬಡಿಯುವಂತೆ ಮಾಡಿದೆ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವೇಶ್ವರಸ್ವಾಮಿ.


ಜನರು ದುಡಿದದ್ದು ಬೆಂಕಿಗೆ ತುತ್ತಾಗುವುದು. ಜನಾಂಗಗಳು ಪಟ್ಟ ಪರಿಶ್ರಮ ವ್ಯರ್ಥವಾಗುವುದು. ಇದೆಲ್ಲ ಸೇನಾಧೀಶ್ವರ ಸರ್ವೇಶ್ವರನ ಚಿತ್ತವಷ್ಟೆ.


ನಾನು ನಿಮಗೆ ಹಕ್ಕು ಬಾಧ್ಯತೆಯಾಗಿ ದಯಪಾಲಿಸಿದ ಸೊತ್ತನ್ನು ನೀವು ದೋಷದಿಂದಲೆ ಕಳೆದುಕೊಳ್ಳುವಿರಿ. ನೀವು ನೋಡದ ನಾಡಿನಲ್ಲಿ ನಿಮ್ಮನ್ನು ನಿಮ್ಮ ಶತ್ರುಗಳಿಗೇ ಊಳಿಗದವರನ್ನಾಗಿ ಮಾಡುವೆನು. ನೀವು ನನ್ನ ಕೋಪಾಗ್ನಿಯನ್ನು ಹೊತ್ತಿಸಿದ್ದೀರಿ. ಅದು ನಿರಂತರವಾಗಿ ಉರಿಯುತ್ತಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು