Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 50:2 - ಕನ್ನಡ ಸತ್ಯವೇದವು C.L. Bible (BSI)

2 ನಾನು ರಕ್ಷಿಸಲು ಬಂದಾಗ ಯಾರೂ ಕಾದಿರಲಿಲ್ಲ, ಏಕೆ? ನಾನು ಕೂಗಿಕರೆದಾಗ ಯಾರೂ ಉತ್ತರಕೊಡಲಿಲ್ಲ, ಏಕೆ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿ ನನ್ನಲ್ಲಿ ಇಲ್ಲವೋ? ಬರಿ ಗರ್ಜನೆಯಿಂದ ಬತ್ತಿಸಬಲ್ಲೆ ಸಮುದ್ರವನು ಬೆಂಗಾಡಾಗಿಸಬಲ್ಲೆ ನಾ ನದಿಸರೋವರಗಳನು ಬಾಯಾರಿ ಸತ್ತು ನಾರುವಂತೆ ಮಾಡಬಲ್ಲೆ ಅಲ್ಲಿಯ ಮೀನುಗಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಾನು ಬಂದಾಗ ಏಕೆ ಯಾರೂ ಕಾದಿರಲಿಲ್ಲ? ನಾನು ಕರೆದಾಗ ಏಕೆ ಯಾರೂ ಉತ್ತರಕೊಡಲಿಲ್ಲ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿಯು ನನ್ನಲ್ಲಿಲ್ಲವೋ? ಇಗೋ, ನನ್ನ ಗದರಿಕೆಯಿಂದಲೇ ನಾನು ಸಮುದ್ರವನ್ನು ಬತ್ತಿಸಿ ನದಿಗಳನ್ನು ಒಣಕಾಡನ್ನಾಗಿ ಮಾಡುತ್ತೇನೆ. ನೀರಿಲ್ಲದೆ ಅಲ್ಲಿನ ಮೀನುಗಳು ಬಾಯಾರಿ ಸತ್ತು ನಾರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಾನು ಬಂದಾಗ ಏಕೆ ಯಾರೂ ಕಾದಿರಲಿಲ್ಲ, ನಾನು ಕರೆದಾಗ ಏಕೆ ಯಾರೂ ಉತ್ತರಕೊಡಲಿಲ್ಲ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿಯು ನನ್ನಲ್ಲಿಲ್ಲವೋ? ಇಗೋ, ನನ್ನ ತರ್ಜನದಿಂದಲೇ ಸಮುದ್ರವನ್ನು ಬತ್ತಿಸಿ ನದಿಗಳನ್ನು ಒಣಕಾಡನ್ನಾಗಿ ಮಾಡುತ್ತೇನೆ; ನೀರಿಲ್ಲದೆ ಅಲ್ಲಿನ ಮೀನುಗಳು ಬಾಯಾರಿ ಸತ್ತು ನಾರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಾನು ಮನೆಗೆ ಬಂದಾಗ ಅಲ್ಲಿ ಯಾರೂ ಇರಲಿಲ್ಲ. ನಾನು ಎಷ್ಟು ಕರೆದರೂ ಯಾರೂ ಉತ್ತರ ಕೊಡಲಿಲ್ಲ. ನಿಮ್ಮನ್ನು ರಕ್ಷಿಸಲು ನನ್ನಿಂದ ಸಾಧ್ಯವಿಲ್ಲವೆಂದು ನೀವು ನೆನಸುತ್ತೀರಾ? ನಿಮ್ಮ ಎಲ್ಲಾ ಕಷ್ಟಗಳಿಂದ ನಿಮ್ಮನ್ನು ಪಾರುಮಾಡಲು ನನಗೆ ಸಾಮರ್ಥ್ಯವಿದೆ. ಇಗೋ, ನಾನು ಸಮುದ್ರಕ್ಕೆ ಒಣಗಿಹೋಗು ಎಂದು ಹೇಳಿದರೆ ಹಾಗೆಯೇ ಆಗುವದು. ಮೀನುಗಳು ನೀರಿಲ್ಲದೆ ಸತ್ತು ನಾರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಾನು ಬಂದಾಗ ಏಕೆ ಅಲ್ಲಿ ಒಬ್ಬನೂ ಇರಲಿಲ್ಲ? ನಾನು ಕರೆದಾಗ ಏಕೆ ಯಾರೂ ಉತ್ತರ ಕೊಡಲಿಲ್ಲ? ನನ್ನ ಕೈ ವಿಮೋಚಿಸದಂಥಾ ಮೋಟುಗೈಯೋ? ಇಲ್ಲವೆ ನನಗೆ ಬಿಡಿಸುವುದಕ್ಕೆ ಶಕ್ತಿಯಿಲ್ಲವೋ? ಇಗೋ, ನನ್ನ ಗದರಿಕೆಯಿಂದ ನಾನು ಸಮುದ್ರವನ್ನು ಒಣಗಿಸುತ್ತೇನೆ. ನಾನು ನದಿಗಳನ್ನು ಮರುಭೂಮಿಯನ್ನಾಗಿ ಮಾಡುತ್ತೇನೆ. ನೀರಿಲ್ಲದ ಕಾರಣ ಅಲ್ಲಿಯ ಮೀನುಗಳು ಬಾಯಾರಿ, ಸತ್ತು ನಾರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 50:2
46 ತಿಳಿವುಗಳ ಹೋಲಿಕೆ  

ನಾನು ಹೇಳುವುದನ್ನು ಕೇಳಿ : ಸರ್ವೇಶ್ವರ ಸ್ವಾಮಿಯ ಕೈ ನಿಮ್ಮನ್ನು ರಕ್ಷಿಸಲಾಗದಂಥ ಮೋಟುಗೈಯಲ್ಲ, ಅವರ ಕಿವಿ ಕಿವುಡಲ್ಲ.


ಸರ್ವೇಶ್ವರ ಅವನಿಗೆ, “ಸರ್ವೇಶ್ವರನ ಕೈ ಮೋಟುಗೈಯೋ? ನನ್ನ ಮಾತು ನೆರವೇರುತ್ತದೋ ಇಲ್ಲವೋ ನೀನೇ ನೋಡುವೆ” ಎಂದರು.


ಆದುದರಿಂದ ಅವರಿಗೆ ಆಪತ್ತು ಬಂದೊದಗುವಂತೆ ಮಾಡುವೆನು. ಅವರು ಅಂಜುತ್ತಿದ್ದ ವಿಪತ್ತುಗಳನ್ನೇ ಅವರ ಮೇಲೆ ಬರಮಾಡುವೆನು. ಏಕೆಂದರೆ, ನಾನು ಕೂಗಿದಾಗ ಯಾರೂ ಉತ್ತರಿಸಲಿಲ್ಲ, ನಾನು ಹೇಳಿದಾಗ ಅವರು ಕೇಳಲಿಲ್ಲ. ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರು, ನನಗೆ ಇಷ್ಟವಲ್ಲದ್ದನ್ನೇ ಆಯ್ಕೆಮಾಡಿಕೊಂಡರು.”


ಮೇಲಿಂದ ಬರುತ್ತಿದ್ದ ನೀರು ಬಹು ದೂರದಲ್ಲಿದ್ದ ಚಾರೆತಾನಿನ ಬಳಿಯಿರುವ ಆದಾಮ್ ಊರಿನ ತನಕ ರಾಶಿಯಾಗಿ ನಿಂತುಕೊಂಡಿತು. ಕೆಳಗಿನ ನೀರು ಅರಾಬಾ ತಗ್ಗಿನಲ್ಲಿರುವ ಲವಣಸಮುದ್ರಕ್ಕೆ ಹರಿದುಹೋಯಿತು. ಜನರು ಜೆರಿಕೋವಿನ ಎದುರಿನಲ್ಲಿ ನದಿ ದಾಟಿದರು.


ಸರ್ವೇಶ್ವರನಿಗೆ ಅಸಾಧ್ಯವಾದುದು ಯಾವುದು? ನಾನು ಹೇಳಿದಂತೆಯೇ ಬರುವ ವರ್ಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುತ್ತಾನೆ” ಎಂದು ಹೇಳಿದರು.


ಅವರು ನನ್ನ ಕಡೆಯಿಂದ ದೂರಹೋಗುವ ಹಠಹಿಡಿದಿದ್ದಾರೆ; ಅವರು ನೊಗದ ಭಾರವನ್ನು ತಾಳದೆ ಕೂಗಿಕೊಂಡರೂ ಅದನ್ನು ಬಿಚ್ಚುವವರು ಯಾರೂ ಇಲ್ಲ.


ನಾನು ನಿಮ್ಮನ್ನು ಕರೆದಾಗ ತಿರಸ್ಕರಿಸಿದಿರಿ. ನಾನು ನಿಮಗೆ ಕೈ ನೀಡಿದಾಗ ಗಮನಿಸದೆ ಹೋದಿರಿ.


ಅವರು ತಮ್ಮ ಸ್ವದೇಶಕ್ಕೆ ಬಂದರು; ಸ್ವಜನರೇ ಅವರನ್ನು ಬರಮಾಡಿಕೊಳ್ಳದೆಹೋದರು.


ಆತನ ಗದರಿಕೆಯೊಂದಕೆ ಬತ್ತಿಹೋಗುತ್ತದೆ ಸಮುದ್ರ; ನಂದಿಹೋಗುತ್ತವೆ ನದಿಸರೋವರ. ಕಂದುತ್ತವೆ ಕಾರ್ಮೆಲ್ ಗುಡ್ಡಗಳು ಬಾಡುತ್ತವೆ ಬಾಷಾನಿನ ಹೊಲಗಳು ಮುದುಡುತ್ತವೆ ಲೆಬನೋನಿನ ಚಿಗುರುಗಳು.


ದೂರ ಸರಿದರು ಆ ಇಸ್ರಯೇಲರು ನಾ ಕರೆದರೂ ನನ್ನ ಬಳಿಗೆ ಅರ್ಪಿಸುತ್ತಾ ಬಂದರು ಯಜ್ಞವನ್ನು ಬಾಳ್ ದೇವತೆಗಳಿಗೆ ಧೂಪಾರತಿ ಬೆಳಗುತ್ತಾ ಬಂದರು ಆ ವಿಗ್ರಹಗಳಿಗೆ.


ಸಕಲ ದೇಶ-ಕುಲ-ಭಾಷೆಗಳವರಲ್ಲಿ ಯಾರಾದರು ಶದ್ರಕ್, ಮೇಶಕ್ ಹಾಗು ಅಬೇದ್‍ನೆಗೋ ಎಂಬುವರ ದೇವರ ವಿಷಯದಲ್ಲಿ ಅಲ್ಲಸಲ್ಲದ ಮಾತನಾಡಿದರೆ ಅಂಥವರನ್ನು ತುಂಡುತುಂಡಾಗಿ ಕತ್ತರಿಸಿ ಅವರ ಮನೆಗಳನ್ನು ತಿಪ್ಪೆಗುಂಡಿಯನ್ನಾಗಿಸಬೇಕೆಂದು ಆಜ್ಞೆ ವಿಧಿಸುತ್ತೇನೆ. ಹೀಗೆ ರಕ್ಷಿಸಲು ಸಮರ್ಥನಾದ ಇನ್ನಾವ ದೇವರೂ ಇಲ್ಲವೇ ಇಲ್ಲ,” ಎಂದು ಹೇಳಿದನು.


ಈಗಲಾದರು ನೀವು ಸಿದ್ಧರಾಗಿದ್ದು ತುತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ಓಲಗ ಮುಂತಾದ ಸಕಲ ವಾದ್ಯಗಳ ಧ್ವನಿ ಕೇಳಿದ ಕೂಡಲೆ ಅಡ್ಡಬಿದ್ದು ನಾನು ಸ್ಥಾಪಿಸಿದ ಪ್ರತಿಮೆಯನ್ನು ಆರಾಧಿಸಿದರೆ ಸರಿ, ಇಲ್ಲವಾದರೆ ಈ ಗಳಿಗೆಯಲ್ಲೆ ನಿಮ್ಮನ್ನು ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಲಾಗುವುದು. ನಿಮ್ಮನ್ನು ನನ್ನ ಕೈಯಿಂದ ಬಿಡಿಸಬಲ್ಲ ದೇವರು ಯಾರಿದ್ದಾನೆ?” ಎಂದು ಹೇಳಿದನು.


ಇದಲ್ಲದೆ, ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲ ನಿಮ್ಮ ಬಳಿಗೆ ನಿರಂತರವಾಗಿ ಕಳಿಸುತ್ತಾ ಬಂದೆ. ನೀವೆಲ್ಲರು ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ. ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸದಿರಿ. ಹಾಗೆ ಮಾಡಿದರೆ ನಾನು ನಿಮಗೂ ನಿಮ್ಮ ಪೂರ್ವಜರಿಗೂ ಅನುಗ್ರಹಿಸಿದ ನಾಡಿನಲ್ಲಿ ಸುಖವಾಸಿಗಳಾಗಿರುವಿರಿ ಎಂದು ಅವರ ಮುಖಾಂತರ ಎಚ್ಚರಿಸಿದೆ. ಆದರೆ ನೀವು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.


ನೀವೆಲ್ಲರು ಕೊಲೆಗೆ ಗುರಿಯಾಗುವಿರಿ, ಕತ್ತಿಗೆ ತುತ್ತಾಗುವಿರಿ. ಏಕೆಂದರೆ, ನಾನು ಕೂಗಿದಾಗ ನೀವು ಉತ್ತರಕೊಡಲಿಲ್ಲ, ನಾನು ಹೇಳಿದಾಗ ನೀವು ಕೇಳಲಿಲ್ಲ. ನನ್ನ ಚಿತ್ತಕ್ಕೆ ವಿರುದ್ಧವಾದುದನ್ನೇ ನಡೆಸಿ ನನಗೆ ಇಷ್ಟವಿಲ್ಲದ್ದನ್ನೇ ಆಯ್ಕೆಮಾಡಿಕೊಂಡಿರಿ.


ಸರ್ವೇಶ್ವರ ಸ್ವಾಮಿ ಇದನ್ನು ನೋಡಿದ್ದಾರೆ. ನ್ಯಾಯವೇ ಇಲ್ಲದ್ದನ್ನು ಕಂಡು ಖಿನ್ನರಾಗಿದ್ದಾರೆ. ಮುಂದೆ ಬಂದು ಉದ್ಧಾರಮಾಡಬಲ್ಲ ವ್ಯಕ್ತಿ ಯಾರೂ ಇಲ್ಲದಿರುವುದನ್ನು ಅರಿತು ಸ್ತಬ್ಧರಾಗಿದ್ದಾರೆ. ಎಂತಲೇ, ಅವರು ಸ್ವಂತ ಶಕ್ತಿಯನ್ನು ಪ್ರಯೋಗಿಸಿ ಜಯಪ್ರದರಾಗುವರು. ನ್ಯಾಯನೀತಿಯೇ ಅವರಿಗೆ ಆಧಾರ.


ಸಮುದ್ರದ ಮಧ್ಯೆ ದಾರಿಮಾಡಿದವನಾರೋ, ಭೋರ್ಗರೆವ ಜಲರಾಶಿಗಳಲ್ಲಿ ಮಾರ್ಗವೇರ್ಪಡಿಸಿದವನಾರೋ,


ನಾಶಪಡಿಸುವೆನು ಬೆಟ್ಟಗುಡ್ಡಗಳನು ಒಣಗಿಸಿಬಿಡುವೆನು ಹುಲ್ಲು ಸಸಿಗಳನು. ಒಣನೆಲ ಮಾಡುವೆನು ನದಿಗಳನು ಬತ್ತಿಸಿಬಿಡುವೆನು ಕೆರೆಕುಂಟೆಗಳನು.


ಮೋಶೆ ಸಮುದ್ರದ ಮೇಲೆ ಕೈ ಚಾಚಿದಾಗ ಸರ್ವೇಶ್ವರ ಸ್ವಾಮಿ ಆ ರಾತ್ರಿಯೆಲ್ಲಾ ಪೂರ್ವದಿಕ್ಕಿನಿಂದ ಬಲವಾದ ಬಿರುಗಾಳಿ ಬೀಸುವಂತೆ ಮಾಡಿ ಸಮುದ್ರದ ನೀರನ್ನು ಒಂದುಕಡೆ ನೂಕಿ ಅದರ ತಳದಲ್ಲಿ ಒಣನೆಲವು ಕಾಣಿಸುವಂತೆ ಮಾಡಿದರು. ನೀರು ಇಬ್ಭಾಗವಾಯಿತು.


ಅದರಲ್ಲಿದ್ದ ಮೀನುಗಳು ಸತ್ತುಹೋದವು. ನದಿ ಹೊಲಸಾಗಿ ನಾರುತ್ತಿತ್ತು. ಈಜಿಪ್ಟಿನವರು ಅದರ ನೀರನ್ನು ಕುಡಿಯಲಾರದೆ ಹೋದರು. ಈಜಿಪ್ಟ್ ದೇಶವೆಲ್ಲಾ ರಕ್ತಮಯ ಆಯಿತು.


ನದಿಯಲ್ಲಿರುವ ಮೀನುಗಳು ಸಾಯುವುವು. ನದಿಯು ಹೊಲಸಾಗಿ ನಾರುವುದು. ಅದರಲ್ಲಿ ನೀರನ್ನು ಕುಡಿಯಲು ಈಜಿಪ್ಟಿನವರಿಗೆ ಹೇಸಿಗೆಯಾಗುವುದು'.”


ಆ ತೀರ್ಪು ಏನೆಂದರೆ: ಜ್ಯೋತಿ ಜಗತ್ತಿಗೆ ಬಂದಿತು: ಮಾನವರಾದರೋ ತಮ್ಮ ದುಷ್ಕೃತ್ಯಗಳಿಂದಾಗಿ ಆ ಜ್ಯೋತಿಗೆ ಬದಲು ಅಂಧಕಾರವನ್ನೇ ಅವಲಂಭಿಸಿದರು.


ಆಗ ಯೇಸು ಎಚ್ಚೆತ್ತು, ಬಿರುಗಾಳಿಯನ್ನು ಗದರಿಸಿದರು. ಸರೋವರಕ್ಕೆ, “ಶಾಂತವಾಗಿರು! ಮೊರೆಯಬೇಡ,” ಎಂದು ಆಜ್ಞಾಪಿಸಿದರು. ತಕ್ಷಣ ಬಿರುಗಾಳಿ ನಿಂತಿತು. ವಾತಾವರಣ ಪ್ರಶಾಂತವಾಯಿತು.


ದಾನಿಯೇಲನಿದ್ದ ಗವಿಯ ಸಮೀಪಕ್ಕೆ ಬಂದು, ದುಃಖ ಧ್ವನಿಯಿಂದ ದಾನಿಯೇಲನನ್ನು ಕೂಗಿ, “ದಾನಿಯೇಲನೇ, ಜೀವಸ್ವರೂಪನಾದ ದೇವರ ದಾಸನೇ, ನೀನು ದಿನನಿತ್ಯವೂ ಆರಾಧಿಸುವ ನಿನ್ನ ದೇವರಿಗೆ ನಿನ್ನನ್ನು ಸಿಂಹಗಳಿಂದ ಉದ್ಧರಿಸಲು ಸಾಧ್ಯವಾಯಿತೋ?” ಎಂದು ಕೇಳಿದನು.


ಜೆರುಸಲೇಮಿನ ಜನರೇ, ಬೀದಿಗಳಲ್ಲಿ ಅತ್ತಿತ್ತ ಓಡಾಡಿ ನೋಡಿ ಅಲ್ಲಿನ ಚೌಕಗಳಲ್ಲಿ ಹುಡುಕಾಡಿ ನೋಡಿ. ನೀತಿಯನ್ನು ಕೈಗೊಂಡು ಸತ್ಯವನ್ನರಸುವವನು ಒಬ್ಬನಾದರೂ ಇದ್ದಾನೆಯೇ? ಅಂಥ ಸತ್ಪುರುಷ ಸಿಕ್ಕುತ್ತಾನೆಯೆ ಎಂಬುದನ್ನು ನೀವೇ ನಿಶ್ಚಯಿಸಿರಿ; ಸಿಕ್ಕಿದ್ದೇ ಆದರೆ ಸರ್ವೇಶ್ವರ ಸ್ವಾಮಿ ಆ ನಗರವನ್ನು ಕ್ಷಮಿಸುವರು.


ಬಯಲಿನಲ್ಲಿ ಸರಾಗವಾಗಿ ನಡೆವ ಕುದುರೆಯಂತೆ ಆ ಜನರನ್ನು ಜಲದ ಮೇಲೆ ನಡೆಸಿದ ಸ್ವಾಮಿ ಎಲ್ಲಿ?


ಸಮುದ್ರ ಜನರಾಶಿಗಳನು ಬತ್ತಿಸಿದ ಬಾಹು ನೀನು ವಿಮುಕ್ತ ಜನ ಹಾಯುವಂತೆ ಸಮುದ್ರದಲಿ ದಾರಿಮಾಡಿದೆ ನೀನು.


ನಾ ನೋಡಲು ಅವರಲ್ಲಿ ಸಮರ್ಥರಾರು ಇಲ್ಲ ನಾ ಪ್ರಶ್ನಿಸಲು ಉತ್ತರಿಸಬಲ್ಲ ವಿವೇಕಿ ಇಲ್ಲ.


ಯಾವ ರಾಷ್ಟ್ರದ ದೇವರುಗಳೂ ತಮ್ಮ ನಾಡನ್ನು ನನ್ನ ಅರಸನ ಕೈಯಿಂದ ಬಿಡಿಸಲಾರದೆ ಹೋದಮೇಲೆ ಸರ್ವೇಶ್ವರ ಜೆರುಸಲೇಮನ್ನು ಆತನ ಕೈಯಿಂದ ಬಿಡಿಸಿ ಕಾಪಾಡಲು ಸಾಧ್ಯವೋ?’ ಎಂದು ಕೇಳಿದನು.


ನೈಲ್ ನದಿಯ ನೀರು ಬತ್ತಿಹೋಗುವುದು. ಅದರ ಪ್ರಭಾವ ಕ್ರಮೇಣ ಒಣಗಿಹೋಗುವುದು.


ನೀಚ ನಿವಾಸಿಗಳ ಕಾರಣದಿಂದ I ನದಿಗಳನೂ ಮರುಭೂಮಿಯಾಗಿಸಿದ II


ನೀವು ಹಿಜ್ಕೀಯನಿಂದ ಮರುಳಾಗಿ ಮೋಸಹೋಗಬೇಡಿ; ಅವನನ್ನು ನಂಬಲೂಬೇಡಿ. ಯಾವ ರಾಜ್ಯಜನಾಂಗಗಳ ದೇವತೆಯೂ ತನ್ನ ಪ್ರಜೆಯನ್ನು ನನ್ನ ಮತ್ತು ನನ್ನ ಪೂರ್ವಿಕರ ಕೈಯಿಂದ ಬಿಡಿಸಲಾರದೆಹೋದರು. ಅಂದ ಮೇಲೆ, ನಿಮ್ಮ ದೇವರಂಥವನು ನಿಮ್ಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಬಲ್ಲನೇ?".


ಇಸ್ರಯೇಲರಾದರೋ, ಸಮುದ್ರದೊಳಗೆ ಒಣ ನೆಲದಲ್ಲೇ ನಡೆದುಹೋದರು. ನೀರು ಅವರ ಎಡಬಲಗಳಲ್ಲಿ ಗೋಡೆಯಂತೆ ನಿಂತಿತ್ತು.


ನಾನು ಕಿವಿಗೊಟ್ಟು ಕೇಳಿದೆ. ಅವರು ಸತ್ಯವಾದುದನ್ನು ನುಡಿಯುತ್ತಿರಲಿಲ್ಲ. ಯಾವನೂ ತನ್ನ ಅಕ್ರಮಕ್ಕಾಗಿ ಪಶ್ಚಾತ್ತಾಪಪಟ್ಟು, ‘ಅಯ್ಯೋ ನಾನು ಎಂಥ ಕೆಲಸ ಮಾಡಿಬಿಟ್ಟೆ !’ ಎಂದುಕೊಳ್ಳುತ್ತಿರಲಿಲ್ಲ. ಯುದ್ಧದಲ್ಲಿ ರಭಸವಾಗಿ ಓಡುವ ಕುದುರೆಗಳಂತೆ ಪ್ರತಿಯೊಬ್ಬನೂ ತನ್ನ ತನ್ನ ಮಾರ್ಗದಲ್ಲೆ ದೌಡಾಯಿಸುತ್ತಿದ್ದಾನೆ.


ಒಣಗಿಹೋಯಿತಾ ಕೆಂಗಡಲು ಆತನ ಗದರಿಕೆಗೆ I ದಾಟಿಸಿದನಾ ಸಾಗರವನು ಅಡವಿಯೋ ಎಂಬ ಹಾಗೆ II


ಆತ ಉದ್ಧರಿಸುವಂಥವನು, ರಕ್ಷಿಸುವಂಥವನು ಭೂಮ್ಯಾಕಾಶಗಳಲ್ಲಿ ಅದ್ಭುತ ಮಹತ್ವಗಳನ್ನು ನಡೆಸುವಂಥವನು! ಆತನೇ ದಾನಿಯೇಲನನ್ನು ಸಿಂಹಗಳ ಬಾಯಿಂದ ತಪ್ಪಿಸಿದವನು!


ನಾನು ತಡಮಾಡದೆ ನುಡಿದ ಮಾತುಗಳನ್ನು ನೀವು ಕೇಳದೆ, ನಿಮ್ಮನ್ನು ಕರೆದ ನನಗೆ ಓಗೊಡದೆ, ಈ ಕೃತ್ಯಗಳನ್ನೆಲ್ಲ ಮಾಡಿದ್ದೀರಿ.


ಆತ ಬತ್ತಿಸುವನು ಈಜಿಪ್ಟಿನ ಕೊಲ್ಲಿಯನ್ನು, ಒಣಗಿಸುವನು ಬಿಸಿಗಾಳಿಯಿಂದ ಯೂಫ್ರೆಟಿಸ್ ನದಿಯನ್ನು, ಸೀಳುವನದನ್ನು ಏಳು ತೊರೆಗಳನ್ನಾಗಿ. ಈ ಪರಿ ದಾಟುವರು ಜನರು ಕೆರ ಮೆಟ್ಟಿದವರಾಗಿ.


ಸರ್ವೇಶ್ವರ ಸಮುದ್ರದ ಮೇಲೆ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾರೆ. ಕಾನಾನಿನ ದುರ್ಗಗಳನ್ನು ನಾಶಮಾಡಲು ಅಪ್ಪಣೆಕೊಟ್ಟಿದ್ದಾರೆ.


‘ಬತ್ತಿಹೋಗು’ ಎಂದು ಜಲರಾಶಿಗಳಿಗೆ ‘ಒಣಗಿಹೋಗು’ ಎಂದು ನಿನ್ನ ಸೇರುವ ನದಿಗಳಿಗೆ ಅಪ್ಪಣೆ ಕೊಡುವಾತನು ನಾನೆ.


ಗಂಡಬಿಟ್ಟು ಮನನೊಂದಿರುವ ಪತ್ನಿ ನೀನು ಹೌದು, ತ್ಯಜಿಸಲಾದ ಯೌವನದ ಪತ್ನಿ ನೀನು. ಸರ್ವೇಶ್ವರ ಕನಿಕರಿಸಿ ಕರೆದಿಹನು ನಿನ್ನನು. ಆ ನಿನ್ನ ದೇವರ ನುಡಿಯಿದು :


“ಯೆರೆಮೀಯನೇ, ನೀನು ಈ ಮಾತುಗಳನ್ನು ಅವರಿಗೆ ಹೇಳಿದರೂ ಅವರು ಕಿವಿಗೊಡುವುದಿಲ್ಲ, ಕರೆದರೂ ಅವರು ಓಗೊಡುವುದಿಲ್ಲ.


ದಿಕ್ಕು ತೋಚದವನಂತೆ ನಿಶ್ಚಲರಾಗಿರುವಿರಿ, ಏಕೆ? ರಕ್ಷಿಸಲಾಗದ ರಣಧೀರನಂತಿರುವಿರಿ, ಏಕೆ? ಆದರೂ ಸರ್ವೇಶ್ವರಾ, ನೀವು ನಮ್ಮ ಮಧ್ಯೆ ಇರುವಿರಿ; ನಾವು ನಿಮ್ಮ ಹೆಸರಿನವರು, ನಮ್ಮನ್ನು ಕೈಬಿಡಬೇಡಿ.


‘ರೇಕಾಬನ ಮಗ ಯೋನಾದಾಬನು ತನ್ನ ಸಂತಾನದವರಿಗೆ ದ್ರಾಕ್ಷಾರಸವನ್ನು ಕುಡಿಯಬಾರದೆಂದು ಕೊಟ್ಟ ಅಪ್ಪಣೆ ನೆರವೇರಿದೆ. ಅವರು ಇಂದಿನವರೆಗೂ ಕುಡಿಯಲಿಲ್ಲ. ತಮ್ಮ ಪೂರ್ವಜನ ಆಜ್ಞೆಯನ್ನು ಕೈಗೊಂಡಿದ್ದಾರೆ. ನೀವೋ, ನಾನು ನಿಮಗೆ ಪದೇ ಪದೇ ಹೇಳುತ್ತಾ ಬಂದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ.


ಮೋಡಗಳ ಮೇಲೆ ನೀ ಆಗಮಿಸಿದೆ ಏಕೆ? ಜಯರಥಗಳಲ್ಲಿ ಆಸೀನನಾಗಿ ಬಂದೆ ಏಕೆ? ಸರ್ವೇಶ, ನಿನಗೆ ರೌದ್ರವೇ ನದಿಗಳ ಮೇಲೆ? ಸಿಟ್ಟುಸಿಡುಕವೇ ಹೊಳೆಗಳ ಮೇಲೆ? ರೋಷಾವೇಷವೇ ಸಮುದ್ರದ ಮೇಲೆ?


ನಾವೆಲ್ಲರೂ ಅಶುದ್ಧರು, ನಮ್ಮ ಸತ್ಕಾರ್ಯಗಳೆಲ್ಲ ಕೊಳಕು, ತರಗೆಲೆಯಂತೆ ಒಣಗಿಹೋಗಿದ್ದೇವೆ. ಬಿರುಗಾಳಿಯಂತೆ ನಮ್ಮನ್ನು ತಳ್ಳಿಕೊಂಡು ಬಂದಿವೆ, ನಮ್ಮ ಅಪರಾಧಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು