Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 50:4 - ಕನ್ನಡ ಸತ್ಯವೇದವು C.L. Bible (BSI)

4 ದಣಿದವರನ್ನು ಹಿತನುಡಿಗಳಿಂದ ತಣಿಸುವಂತೆ ಅನುಗ್ರಹಿಸುತ್ತಾನೆನಗೆ ಸ್ವಾಮಿ ಸರ್ವೇಶ್ವರ ಶಿಕ್ಷಿತರ ನಾಲಗೆಯನು; ಶಿಷ್ಯನೋಪಾದಿ ನಾನು ಆತನನ್ನು ಆಲಿಸುವಂತೆ ಬೆಳಬೆಳಗೂ ನನ್ನನೆಚ್ಚರಿಸಿ ಚೇತನಗೊಳಿಸುತ್ತಾನೆ ನನ್ನ ಕಿವಿಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಬಳಲಿಹೋದವರನ್ನು ಮಾತುಗಳಿಂದ ಸುಧಾರಿಸುವುದಕ್ಕೆ ನಾನು ಬಲ್ಲವನಾಗುವಂತೆ ಕರ್ತನಾದ ಯೆಹೋವನು ಶಿಕ್ಷಿತರ ನಾಲಿಗೆಯನ್ನು ನನಗೆ ದಯಪಾಲಿಸಿದ್ದಾನೆ. ಮುಂಜಾನೆಯಿಂದ ಮುಂಜಾನೆಗೆ ನನ್ನನ್ನು ಎಚ್ಚರಿಸಿ ಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಎಚ್ಚರಗೊಳಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಬಳಲಿಹೋದವರನ್ನು ಮಾತುಗಳಿಂದ ಸುಧಾರಿಸುವದಕ್ಕೆ ನಾನು ಬಲ್ಲವನಾಗುವಂತೆ ಕರ್ತನಾದ ಯೆಹೋವನು ಶಿಕ್ಷಿತರ ನಾಲಿಗೆಯನ್ನು ನನಗೆ ದಯಪಾಲಿಸಿದ್ದಾನೆ; ಬೆಳಬೆಳಗೂ ನನ್ನನ್ನು ಎಚ್ಚರಿಸಿ ಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಜಾಗರಗೊಳಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನನ್ನ ಒಡೆಯನಾದ ಯೆಹೋವನು ನನಗೆ ಬೋಧಿಸುವ ಸಾಮರ್ಥ್ಯವನ್ನು ಅನುಗ್ರಹಿಸಿದ್ದಾನೆ. ಈಗ ನಾನು ದುಃಖದಲ್ಲಿರುವ ಈ ಜನರಿಗೆ ಬೋಧಿಸುತ್ತಿದ್ದೇನೆ. ಪ್ರತೀ ಮುಂಜಾನೆ ವಿದ್ಯಾರ್ಥಿಯೋ ಎಂಬಂತೆ ಆತನು ನನ್ನನ್ನು ಎಬ್ಬಿಸಿ ನನಗೆ ಬೋಧಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಬಳಲಿ ಹೋದವನನ್ನು ಹೇಗೆ ಮಾತಿನಿಂದ ಆದರಿಸುವೆ ಎಂಬುದನ್ನು ನಾನು ತಿಳಿಯುವ ಹಾಗೆ ಸಾರ್ವಭೌಮ ಯೆಹೋವ ದೇವರು ಶಿಕ್ಷಿತರ ನಾಲಿಗೆಯನ್ನು ನನಗೆ ಕೊಟ್ಟಿದ್ದಾರೆ. ಆತನು ಮುಂಜಾನೆಯಿಂದ ಮುಂಜಾನೆಗೆ ನನ್ನನ್ನು ಎಚ್ಚರಿಸಿ, ಸುರಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಆತನು ಎಚ್ಚರಗೊಳಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 50:4
31 ತಿಳಿವುಗಳ ಹೋಲಿಕೆ  

ಏಕೆಂದರೆ ನಿಮ್ಮ ವಿರೋಧಿಗಳಾರೂ ಪ್ರತಿಭಟಿಸಲು ಅಥವಾ ವಿರೋಧಿಸಲು ಆಗದಂಥ ವಾಕ್ಚಾತುರ್ಯವನ್ನೂ ಜ್ಞಾನಶಕ್ತಿಯನ್ನೂ ನಿಮಗೆ ಕೊಡುವೆನು.


ಬಳಿಕ ಸ್ವಾಮಿ ಕೈಚಾಚಿ ನನ್ನ ಬಾಯನ್ನು ಮುಟ್ಟಿ, “ಇಗೋ, ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟಿದ್ದೇನೆ;


ಸಮಯೋಚಿತ ಮಾತು ಬೆಳ್ಳಿ ತಟ್ಟೆಯಲ್ಲಿ ಖಚಿತವಾದ ಬಂಗಾರದ ಹಣ್ಣು.


ಸದುತ್ತರ ಕೊಡುವವನಿಗೆ ಎಷ್ಟೋ ಸಂತೋಷ; ಸಮಯೋಚಿತ ವಚನ ಎಷ್ಟೋ ಸ್ವಾರಸ್ಯ.


ಅರುಣೋದಯದಲೆದ್ದು ಮೊರೆಯಿಟ್ಟೆನು I ನಿನ್ನ ವಾಕ್ಯದಲೆ ನಂಬಿಕೆಯಿಟ್ಟೆನು II


ಬೆಳಿಗ್ಗೆ ಸ್ಮರಿಸಮಾಡು ನಿನ್ನಚಲ ಪ್ರೀತಿಯನು I ನಿನ್ನಲ್ಲಿಯೆ ಇಟ್ಟಿರುವೆನು ನನ್ನ ನಂಬಿಕೆಯನು I ತೋರಿಸು ನನಗೆ ನಾ ಹಿಡಿಯಬೇಕಾದ ಮಾರ್ಗವನು I ನಿನ್ನ ಕಡೆಗೆ ಎತ್ತಿರುವೆನು ನನ್ನ ಹೃನ್ಮನಗಳನು II


ಉದಯಕಾಲದಲ್ಲಿ ಪ್ರಭು, ನಿನಗೆ ಕೇಳಿಬರುವುದು ನನ್ನ ಸ್ವರ I ಉದಯಾರಾಧನೆ ಮಾಡಿ ಎದುರು ನೋಡುತ್ತಿರುವೆ ನಾ ಸದುತ್ತರ II


ಎಲ್ಲರೂ ಅವರನ್ನು ಬಹುವಾಗಿ ಮೆಚ್ಚಿಕೊಂಡರು. ಅವರ ಬಾಯಿಂದ ಬಂದ ಮಧುರ ಮಾತುಗಳನ್ನು ಕೇಳಿ ಅಚ್ಚರಿಗೊಂಡರು. “ಇವನು ಜೋಸೆಫನ ಮಗನಲ್ಲವೆ?” ಎಂದು ಮಾತನಾಡಿಕೊಂಡರು.


ತಮ್ಮ ಸ್ವಂತ ಊರಿಗೆ ಮರಳಿ ಬಂದು ಅಲ್ಲಿಯ ಪ್ರಾರ್ಥನಾಮಂದಿರದಲ್ಲಿ ಬೋಧನೆಮಾಡಿದರು. ಅದನ್ನು ಕೇಳುತ್ತಿದ್ದ ಜನರು ಆಶ್ಚರ್ಯಚಕಿತರಾಗಿ, “ಈ ಪರಿಜ್ಞಾನ ಇವನಿಗೆಲ್ಲಿಂದ ಬಂತು? ಈ ಮಹತ್ಕಾರ್ಯಗಳನ್ನು ಇವನು ಮಾಡುವುದಾದರೂ ಹೇಗೆ?


“ದುಡಿದು, ಭಾರಹೊತ್ತು, ಬಳಲಿ ಬೆಂಡಾಗಿರುವ ಸರ್ವಜನರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ; ನಾನು ನಿಮಗೆ ವಿಶ್ರಾಂತಿಕೊಡುತ್ತೇನೆ.


ಇದಕ್ಕೆ ಉತ್ತರವಾಗಿ ಒಂದು ಮಾತು ಹೇಳಲೂ ಫರಿಸಾಯರಿಂದ ಆಗಲಿಲ್ಲ. ಅದು ಮಾತ್ರವಲ್ಲ, ಅಂದಿನಿಂದ ಯೇಸುವನ್ನು ಪ್ರಶ್ನಿಸಲು ಯಾರೂ ಧೈರ್ಯಗೊಳ್ಳಲಿಲ್ಲ.


ಅವರು, “ಆತನು ಮಾತನಾಡುವಂತೆ ಯಾರೂ ಎಂದೂ ಮಾತನಾಡಿದ್ದಿಲ್ಲ,” ಎಂದು ಉತ್ತರಿಸಿದರು.


ನರಮಾನವರೊಳು ನೀ ಸುರಸುಂದರ I ನಿನ್ನ ಮುಖವಾಣಿ ಅತ್ಯಂತ ಮಧುರ I ದೇವಾನುಗ್ರಹ ನಿನಗಿದೆ ನಿರಂತರ II


ನಾನಾದರೋ ಪ್ರಭೂ, ಮೊರೆಯಿಡುವೆ ನಿನಗೆ I ಉದಯದಲೆ ಸೇರುವುದೆನ್ನ ಜಪ ನಿನ್ನ ಸನ್ನಿಧಿಗೆ II


ಚಿಂತೆ ಮನಸ್ಸನ್ನು ಕುಗ್ಗಿಸುತ್ತದೆ; ಸವಿಮಾತು ಅದನ್ನು ಹಿಗ್ಗಿಸುತ್ತದೆ.


ದಿವ್ಯಬೋಧನೆಯನ್ನು ಸುಭದ್ರವಾಗಿ ಇರಿಸು. ಅದನ್ನು ನನ್ನ ಶಿಷ್ಯರಿಗೆ ಉಪದೇಶಮಾಡಿ ಸುರಕ್ಷಿತವಾಗಿರಿಸು.


ಇವರು ನನ್ನನ್ನು ಕುರಿತು : “ಇವನ ಜ್ಞಾನೋಪದೇಶ ಯಾರಿಗೆ? ಇವನು ಸಾರುವ ಸಂದೇಶ ಯಾರಿಗೆ? ಮೊಲೆಬಿಟ್ಟ ಕೂಸುಗಳಿಗೋ? ಎದೆಬಿಟ್ಟ ಮಕ್ಕಳಿಗೋ?


ಅದು ಹಾದುಹೋಗುವಾಗಲೆಲ್ಲಾ ನಿಮ್ಮನ್ನು ಹಿಡಿದುಬಿಡುವುದು. ಪ್ರತಿದಿನವೂ ಹಗಲೂ ರಾತ್ರಿ ಅದು ಹಾದುಹೋಗುವುದು. ಸರ್ವೇಶ್ವರ ಸ್ವಾಮಿಯ ಈ ಸಂದೇಶವನ್ನು ಅರ್ಥಮಾಡಿಕೊಳ್ಳುವವರಿಗೆ ಭಯಭ್ರಾಂತಿ ಉಂಟಾಗುವುದು.


ಕುರುಡರ ಕಣ್ಣು ಕಾಣುವುದಾಗ ಕಿವುಡರ ಕಿವಿ ತೆರೆಯುವುದಾಗ.


ದಯಪಾಲಿಸುವನಾತ ಬಲಾಭಿವೃದ್ಧಿಯನ್ನು ಬಳಲಿದವನಿಗೆ ಅನುಗ್ರಹಿಸುವನಾತ ಚೈತನ್ಯವನು ನಿತ್ರಾಣನಿಗೆ.


ಸರ್ವೇಶ್ವರನ ದಾಸನಾದ ನನ್ನ ಮಾತುಗಳನು ಕೇಳಿ : ಭಯಭಕ್ತಿಯುಳ್ಳವನಾರು ನಿಮ್ಮೊಳು ಆ ಸರ್ವೇಶ್ವರನಲಿ? ಬೆಳಕಿಲ್ಲದೆ ಕತ್ತಲಲಿ ನಡೆಯುವವನು ಭರವಸೆಯಿಡಲಿ ಆ ಸರ್ವೇಶ್ವರನ ನಾಮದಲಿ; ಆಶ್ರಯ ಪಡೆಯಲಿ ತನ್ನಾ ದೇವನಲಿ.


ನಿನ್ನ ಮಕ್ಕಳು ಶಿಕ್ಷಿತರಾಗುವರು ನನ್ನಿಂದ ಸಮೃದ್ಧವಾಗಿ ಬಾಳುವರು ಅವರು ಸುಖಶಾಂತಿಯಿಂದ.


ಬಳಲಿ ಬೆಂಡಾದವರೆಲ್ಲರನ್ನು ತಣಿಸುವೆನು ಹಾಗೂ ತೃಪ್ತಿಪಡಿಸುವೆನು.”


“ನೀನು ಕಳಂಕರಹಿತವಾದ ಒಂದು ವರ್ಷದ ಕುರಿಯನ್ನು ಸರ್ವೇಶ್ವರನಿಗೆ ದಹನಬಲಿಯಾಗಿ ದಿನಂಪ್ರತಿ ಅರ್ಪಿಸಬೇಕು; ಪ್ರತಿದಿನ ಬೆಳಿಗ್ಗೆ ಅದನ್ನು ಅರ್ಪಿಸತಕ್ಕದ್ದು.


ಆಗ ಸರ್ವೇಶ್ವರ ನನಗೆ, ‘ಇವರು ಹೇಳಿದ್ದು ಸರಿಯಾಗಿದೆ;


ಇವರ ಸ್ವದೇಶದವರಲ್ಲಿ ನಿನ್ನಂಥ ಪ್ರವಾದಿಯನ್ನು ಅವರಿಗೆ ಏರ್ಪಡಿಸುವೆನು; ಅವನ ಬಾಯಿಂದ ನನ್ನ ಮಾತುಗಳನ್ನು ನುಡಿಸುವೆನು; ನಾನು ಅವನಿಗೆ ಆಜ್ಞಾಪಿಸಿದ್ದನ್ನೆಲ್ಲಾ ಅವನು ಅವರಿಗೆ ತಿಳಿಸುವನು.


ನಿನ್ನ ನುಡಿ ಎಡವಿಬೀಳುವವರನ್ನು ನಿಲ್ಲಗೊಳಿಸಿತು ಕುಸಿದುಬೀಳುವ ಮೊಣಕಾಲುಗಳನ್ನು ಬಲಪಡಿಸಿತು.


ನಾನೋಗೊಡುತ ಇಂತೆಂದೆ : “ಇಗೋ ನಾನೇ ಬರುತ್ತಿರುವೆ I ಗ್ರಂಥ ಸುರುಳಿಯಲಿ ನನ್ನ ಕುರಿತು ಲಿಖಿತವಾಗಿದೆಯಲ್ಲವೇ? II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು