Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 50:8 - ಕನ್ನಡ ಸತ್ಯವೇದವು C.L. Bible (BSI)

8 ನನ್ನ ಪರ ತೀರ್ಪುಕೊಡುವವನು ಇಹನು ಹತ್ತಿರದಲೆ ನನಗೆ ಪ್ರತಿಕಕ್ಷಿ ಯಾರೆ ಬರಲಿ ಮುಂದಕೆ. ನನ್ನೊಡನೆ ವ್ಯಾಜ್ಯಮಾಡಬಲ್ಲವನಾರೇ ನಿಲ್ಲಲಿ ನ್ಯಾಯಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನನ್ನ ನೀತಿ ನಿರ್ಣಯಿಸುವಾತನು ಸಮೀಪದಲ್ಲಿದ್ದಾನೆ. ನನ್ನೊಡನೆ ಯಾರು ವ್ಯಾಜ್ಯವಾಡುವರು? ನಾವಿಬ್ಬರು ನ್ಯಾಯಾಸನದ ಮುಂದೆ ನಿಂತುಕೊಳ್ಳುವ. ನನಗೆ ಪ್ರತಿಕಕ್ಷಿಯು ಯಾರು? ಅವನು ನನ್ನ ಬಳಿಗೆ ಬರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನನ್ನ ನ್ಯಾಯಸ್ಥಾಪಕನು ಸಮೀಪದಲ್ಲಿದ್ದಾನೆ; ನನ್ನೊಡನೆ ಯಾರು ವ್ಯಾಜ್ಯವಾಡುವರು? ನಾವಿಬ್ಬರು [ನ್ಯಾಯಾಸನದ ಮುಂದೆ] ನಿಂತುಕೊಳ್ಳುವ; ನನಗೆ ಪ್ರತಿಕಕ್ಷಿಯು ಯಾರು? ನನ್ನ ಬಳಿಗೆ ಬರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋವನು ನನ್ನೊಂದಿಗಿದ್ದಾನೆ. ನಾನು ತಪ್ಪಿತಸ್ಥನಲ್ಲವೆಂದು ಆತನು ತೋರಿಸುವನು. ಆದ್ದರಿಂದ ಯಾರೂ ನನ್ನನ್ನು ಅಪರಾಧಿ ಎಂದು ಹೇಳಲಾಗುವದಿಲ್ಲ. ಯಾರಾದರೂ ನನ್ನನ್ನು ತಪ್ಪಿತಸ್ಥನೆಂದು ದೃಢಪಡಿಸಬೇಕೆಂದಿದ್ದರೆ ಅವರು ಮೊದಲು ನನ್ನ ಬಳಿಗೆ ಬರಲಿ, ನಮಗೆ ವಿಚಾರಣೆಯಾಗಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನನಗೆ ನೀತಿ ನಿರ್ಣಯಿಸುವಾತನು ಸಮೀಪದಲ್ಲಿಯೇ ಇದ್ದಾನೆ, ನನ್ನೊಂದಿಗೆ ವ್ಯಾಜ್ಯವಾಡುವವರು ಯಾರು? ನಾವು ಪರಸ್ಪರ ಎದುರಿಸೋಣ! ನನ್ನ ಎದುರಾಳಿ ಯಾರು? ಅವನು ನನ್ನ ಸಮೀಪಕ್ಕೆ ಬರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 50:8
16 ತಿಳಿವುಗಳ ಹೋಲಿಕೆ  

ಸ್ವರ್ಗದಿಂದ ಬಂದ ಮಹಾಶಬ್ದವನ್ನು ನಾನು ಕೇಳಿಸಿಕೊಂಡೆ. ಅದು ಇಂತೆಂದಿತು : “ಇಗೋ, ನಮ್ಮ ದೇವನಿತ್ತ ಜೀವೋದ್ಧಾರ ಸಿದ್ಧಿಸಿದೆ ಆತನ ಶಕ್ತಿ, ಸಾಮ್ರಾಜ್ಯಗಳು ಕಂಗೊಳಿಸುತ್ತಿವೆ. ಆತನ ಕ್ರಿಸ್ತಾಧಿಪತ್ಯ ಸ್ಥಾಪಿತವಾಗಿದೆ. ನಮ್ಮ ಸೋದರರನು ದೂರಿದವನನ್ನು ದಬ್ಬಲಾಗಿದೆ. ಹಗಲಿರುಳು ನಮ್ಮ ದೇವರೆದುರು ದೂರಿತ್ತಿದ್ದವನನ್ನು ತಳ್ಳಲಾಗಿದೆ.


ದೂರದೇಶದವರೇ, ಮೌನದಿಂದ ನನಗೆ ಕಿವಿಗೊಡಿ; ರಾಷ್ಟ್ರಗಳು ಎಷ್ಟೇ ಬಲಿಷ್ಠರಾಗಿರಲಿ ಬಂದು ಮಾತಾಡಲಿ ಸಮೀಪದಲಿ. ಒಟ್ಟಿಗೆ ಸೇರೋಣ ನ್ಯಾಯಸ್ಥಾನದಲಿ.


ಮಂಡಿಸು ನನ್ನ ವಿರುದ್ಧ ನಿನ್ನ ಆಪಾದನೆಯನ್ನು; ಒಟ್ಟಿಗೆ ವಾದಿಸೋಣ ಮಂಡಿಸು ನಿನ್ನ ನ್ಯಾಯವನ್ನು; ನೀನು ನಿರ್ದೋಷಿಯೆಂದು ರುಜುಪಡಿಸು ನೋಡೋಣ.


ಯಕೋಬ್ಯರ ಅರಸನಾದ ಸರ್ವೇಶ್ವರ ಇಂತೆನ್ನುತ್ತಾರೆ : “ನಾಡದೇವತೆಗಳೇ, ಹೊರಗೆ ಬರಲಿ ನಿಮ್ಮ ವ್ಯಾಜ್ಯ ಸಾಬೀತಾಗಲಿ ನಿಮ್ಮ ನ್ಯಾಯ.


ನಿಜವಾಗಿಯೂ ನಮ್ಮ ಧರ್ಮದ ನಿಗೂಢಾರ್ಥ ಶ್ರೇಷ್ಠವಾದದ್ದು ಎಂಬುದು ನಿಸ್ಸಂದೇಹವಾದ ವಿಷಯ. “ನರಮಾನವ ರೂಪದಲಿ ಪ್ರತ್ಯಕ್ಷನಾಗಿ ದೇವರಿಗೆ ಪ್ರಿಯನೆಂದು ಪವಿತ್ರಾತ್ಮನಿಂದ ಪ್ರಕಟಿತನಾಗಿ ದೇವದೂತರಿಗೆ ಪ್ರದರ್ಶಿತವಾಗಿ ಅನ್ಯಜನರಿಗೆ ಪ್ರಬೋಧಿತನಾಗಿ ಜಗದಲ್ಲೆಲ್ಲೂ ವಿಶ್ವಾಸಪಡೆದವನಾಗಿ ಸ್ವರ್ಗಕ್ಕೇರಿದಾತ ಮಹಿಮಾನ್ವಿತ ಯೇಸುಕ್ರಿಸ್ತ.


“ನಿನ್ನ ಎದುರಾಳಿ ನಿನ್ನನ್ನು ನ್ಯಾಯಸ್ಥಾನಕ್ಕೆ ಎಳೆಯುವಾಗ ಮಾರ್ಗಮಧ್ಯದಲ್ಲೇ ಅವನೊಡನೆ ಬೇಗ ಸಮಾಧಾನಮಾಡಿಕೊ. ಇಲ್ಲದಿದ್ದರೆ, ಅವನು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಬಹುದು. ನ್ಯಾಯಾಧಿಪತಿ ನಿನ್ನನ್ನು ಪೊಲೀಸರ ವಶಕ್ಕೆ ಬಿಡಬಹುದು. ಅನಂತರ ನಿನಗೆ ಸೆರೆವಾಸ ಪ್ರಾಪ್ತವಾದೀತು!


ವ್ಯಾಜ್ಯವಾಡುವ ಆ ಇಬ್ಬರೂ ಸರ್ವೇಶ್ವರನ ಸನ್ನಿಧಿಯಲ್ಲಿ, ಯಾಜಕರ ಮುಂದೆ ಹಾಗು ಆಗ ಇರುವ ನ್ಯಾಯಾಧಿಪತಿಗಳ ಮುಂದೆ ನಿಲ್ಲಬೇಕು.


“ವಂಚನೆಯಾಯಿತೆಂಬ ಅನುಮಾನ ಹುಟ್ಟಿದ ಪ್ರತಿಯೊಂದು ವಿಷಯದಲ್ಲೂ, ಅದು ಎತ್ತು, ಕತ್ತೆ, ಕುರಿ ಅಥವಾ ಬಟ್ಟೆ ವಿಷಯವಾದರೂ ಸರಿಯೇ ಕಳೆದುಕೊಂಡ ಬೇರೆ ಯಾವ ವಸ್ತುವಿನ ವಿಷಯವಾದರೂ ಸರಿಯೇ, ಇಬ್ಬರೂ ಅದು ತಮ್ಮದೆಂದು ಹೇಳುವಾಗ ಆ ಇಬ್ಬರ ವ್ಯಾಜ್ಯವು ದೇವರ ಸನ್ನಿಧಿಗೆ ಬರಬೇಕು. ದೇವರು ಯಾರನ್ನು ದ್ರೋಹಿಯೆಂದು ನಿರ್ಣಯಿಸುತ್ತಾರೋ ಅವನು ಆ ಮತ್ತೊಬ್ಬನಿಗೆ ಎರಡರಷ್ಟು ಕೊಡಬೇಕು.


ದೇವಾ, ನನ್ನ ಮೇಲೆ ಆಪಾದನೆ ಹೊರಿಸಲು ಬರುವೆಯಾ? ಹಾಗಾದರೆ ಮೌನತಾಳಿ ನಾ ಮಾಡುವೆ ಪ್ರಾಣತ್ಯಾಗ.


ಹೇ ಪ್ರಭೂ, ನೀನಿರುವೆ ಹತ್ತಿರ I ನಿನ್ನ ಆಜ್ಞೆಗಳೆಲ್ಲ ಸುಸ್ಥಿರ II


ಸರ್ವೇಶ್ವರಸ್ವಾಮಿ ಇಂತೆನ್ನುತ್ತಾರೆ: “ಬನ್ನಿರಿ, ಈಗ ವಾದಿಸೋಣ. ನಿಮ್ಮ ಪಾಪಗಳು ಕಡುಗೆಂಪಾಗಿದ್ದರೂ ಹಿಮದಂತೆ ಬಿಳುಪಾಗುವುವು. ರಕ್ತಗೆಂಪಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವುವು.


ಪಡೆವರು ಇಸ್ರಯೇಲಿನ ವಂಶಜರೆಲ್ಲರು ಸರ್ವೇಶ್ವರನಲ್ಲೇ ಜೀವೋದ್ಧಾರವನು, ಆನಂದವನು.”


ಸಫಲವಾಗದು ನಿನ್ನ ವಿರುದ್ಧ ಪ್ರಯೋಗಿಸಿದ ಆಯುಧ ನ್ಯಾಯಸ್ಥಾನದಲ್ಲಿ ನಿನ್ನ ಪ್ರತಿವಾದಿ ಪಡೆವನು ಅಪಜಯ ನನ್ನ ದಾಸನನು ರಕ್ಷಿಸಿ ಆತನಿಗೆ ನೀಡುವೆ ವಿಜಯ” ಇದು ಸರ್ವೇಶ್ವರನ ವಾಕ್ಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು