Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 51:11 - ಕನ್ನಡ ಸತ್ಯವೇದವು C.L. Bible (BSI)

11 ಹಿಂದಿರುಗುವರು ಸರ್ವೇಶ್ವರನಿಂದ ರಕ್ಷಣೆ ಪಡೆದವರು ಉತ್ಸಾಹ ಗೀತೆಯೊಂದಿಗೆ ಸಿಯೋನನ್ನು ಸೇರುವರವರು. ಧರಿಸಿಕೊಳ್ಳುವರು ಶಾಶ್ವತ ಸಂತಸವೆಂಬ ಕಿರೀಟವನು ಅನುಭವಿಸುವರು ಹರ್ಷಾನಂದಗಳನು ತೊಲಗಿ ಓಡುವುವು ದುಃಖದುಗುಡಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನು ವಿಮೋಚಿಸಿದವರು ಹಿಂದಿರುಗಿ ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು. ಹರ್ಷಾನಂದಗಳನ್ನು ಅನುಭವಿಸುವರು, ಮೊರೆಯೂ ಕರಕರೆಯೂ ತೊಲಗಿಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನು ವಿಮೋಚಿಸಿದವರು ಹಿಂದಿರುಗಿ ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು; ಹರ್ಷಾನಂದಗಳನ್ನು ಅನುಭವಿಸುವರು, ಮೊರೆಯೂ ಕರಕರೆಯೂ ತೊಲಗಿಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವನು ತನ್ನ ಜನರನ್ನು ರಕ್ಷಿಸುತ್ತಾನೆ. ಅವರು ಚೀಯೋನಿಗೆ ಸಂತೋಷದಿಂದ ಮರಳಿ ಬರುತ್ತಾರೆ. ಅವರು ಬಹಳ ಸಂತೋಷಪಡುವರು. ಅವರ ಹರ್ಷವು ಅವರ ತಲೆಯ ಮೇಲೆ ಕಿರೀಟದಂತೆ ನಿತ್ಯಕಾಲಕ್ಕೂ ಇರುವುದು. ಅವರು ಹರ್ಷದಿಂದ ಹಾಡುವರು. ಅವರ ದುಃಖವೆಲ್ಲಾ ಬಹುದೂರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದಕಾರಣ ಯೆಹೋವ ದೇವರು ವಿಮೋಚಿಸಿದವರು, ಹಿಂದಿರುಗಿಕೊಂಡು ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು, ಉತ್ಸಾಹ ಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು. ದುಃಖವೂ, ನಿಟ್ಟುಸಿರೂ ಓಡಿಹೋಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 51:11
29 ತಿಳಿವುಗಳ ಹೋಲಿಕೆ  

ಮರಣವನ್ನು ಶಾಶ್ವತವಾಗಿ ನಿರ್ನಾಮಮಾಡುವರು. ಸರ್ವೇಶ್ವರ ಸ್ವಾಮಿ ಎಲ್ಲರ ಕಣ್ಣೀರನ್ನು ಒರೆಸಿಬಿಡುವರು. ತಮ್ಮ ಪ್ರಜೆಗಾದ ಅವಮಾನವನ್ನು ಜಗದಿಂದಲೇ ತೊಲಗಿಸಿಬಿಡುವರು. ಸರ್ವೇಶ್ವರ ಸ್ವಾಮಿಯೇ ಇಂತೆಂದು ನುಡಿದಿದ್ದಾರೆ.


ಒರಸುವನಾತ ಅವರ ಕಂಬನಿಯನೆಲ್ಲಾ ಇರದಿನ್ನು ಸಾವುನೋವು ಅವರಿಗೆಲ್ಲಾ; ಇರವು ಶೋಕ ದುಃಖಗಳಾವುವು ಮರೆಯಾಗಿ ಹೋದವು ಹಿಂದಿನದೆಲ್ಲವು.”


ನಿಂತಿಹನು ಕುರಿಮರಿಯಾದಾತನು ಸಿಂಹಾಸನದ ನಡುವೆ ಕಾಯುವನು ಅವರುಗಳನು ಕುರುಬನಂತೆ ನಡೆಸುವನು ಅವರನು ಜೀವಜಲದ ಒರತೆಗಳ ಬಳಿಗೆ ದೇವನೊರಸುವನು ಅವರ ಕಂಬನಿಗಳನು ಬಿಡದೆ', “ ಎಂದು ನನಗೆ ತಿಳಿಸಿದನು.


ಹಿಂದಿರುಗುವರು ಸರ್ವೇಶ್ವರನಿಂದ ವಿಮೋಚನೆ ಪಡೆದವರು ಜಯಜಯಕಾರದೊಂದಿಗೆ ಸಿಯೋನನು ಸೇರುವರು. ನಿತ್ಯಾನಂದ ಸುಖವಿರುವುದು ಕಿರೀಟಪ್ರದವಾಗಿ ಸಿಗುವುದವರಿಗೆ ಹರ್ಷಾನಂದದ ಸವಿ ತೊಲಗುವುದು ದುಃಖದುಗುಡದ ಕಹಿ.


ನಮ್ಮನ್ನು ಪ್ರೀತಿಸಿ ನಿತ್ಯಾದರಣೆಯನ್ನೂ ಉತ್ತಮ ನಿರೀಕ್ಷೆಯನ್ನೂ ಅನುಗ್ರಹವಾಗಿ ಕೊಟ್ಟಿರುವ ನಮ್ಮ ಪ್ರಭುವಾದ ಯೇಸುಕ್ರಿಸ್ತರು ಹಾಗೂ ಪಿತನಾದ ದೇವರು ನಿಮ್ಮ ಹೃನ್ಮನಗಳನ್ನು ಉತ್ತೇಜನಗೊಳಿಸಲಿ.


ಸಿಗುವುದು ನಿಮಗಾದ ಅವಮಾನಕೆ ಇಮ್ಮಡಿ ಹಿರಿತನ ಆದ ತಿರಸ್ಕಾರಕೆ ಪ್ರತಿಯಾಗಿ ಸಂತಸ ಸಿರಿತನ. ದ್ವಿಗುಣವಾಗುವುದು ನಿಮಗೆ ನಾಡಿನ ಸಂಪದ ಅನಂತಕಾಲಕ್ಕು ನಿಮಗಿರುವುದು ಆನಂದ.


ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ, ಇವು ಮತ್ತೆ ಕೇಳಿಬರುವುವು. ‘ಸೇನಾಧೀಶ್ವರ ಸರ್ವೇಶ್ವರನಿಗೆ ಕೃತಜ್ಞತಾಸ್ತೋತ್ರ ಮಾಡಿ; ಆತ ಒಳ್ಳೆಯವನು, ಆತನ ಪ್ರೀತಿ ಶಾಶ್ವತ’ ಎಂದು ಹಾಡುತ್ತಾ ಕೃತಜ್ಞತಾಬಲಿಯನ್ನು ದೇವಾಲಯಕ್ಕೆ ತರುವರು. ಅವರ ಗಾನ ನಿಮ್ಮ ಕಿವಿಗೆ ಬೀಳುವುದು. ನಾಡನ್ನು ಬಿಡುಗಡೆಮಾಡಿ ಹಿಂದಿನ ಸುಸ್ಥಿತಿಗೆ ಏರಿಸುವೆನು.


ಶಾಪಗ್ರಸ್ತವಾದುದು ಯಾವುದೂ ಆ ನಗರದಲ್ಲಿ ಇರದು. ದೇವರ ಮತ್ತು ಯಜ್ಞದ ಕುರಿಮರಿಯ ಸಿಂಹಾಸನವು ಅಲ್ಲಿರುವುದು. ಸದಾ ಯಾಜಕ ಸೇವೆ ಸಲ್ಲಿಸುವ ಅವರ ದಾಸರಿಗೆ ಅದರ ಮುಖ ದರ್ಶನವಾಗುವುದು.


ಪಾಪದಲ್ಲಿ ಎಡವಿ ಬೀಳದಂತೆ ನಿಮ್ಮನ್ನು ಕಾಪಾಡುವ ತಮ್ಮ ಮಹಿಮಾಸನ್ನಿಧಿಯಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿಯೂ ಹರ್ಷಭರಿತರನ್ನಾಗಿಯೂ ನಿಲ್ಲಿಸಲು ಶಕ್ತರಾಗಿರುವ


ನಾನು ಕೂಡ ಜೆರುಸಲೇಮನ್ನು ನೋಡಿ ಆನಂದಿಸುವೆನು, ಅದರ ಜನರನ್ನು ದೃಷ್ಟಿಸಿ ಹರ್ಷಗೊಳ್ಳುವೆನು. ಇನ್ನು ಅಲ್ಲಿ ಅಳುವಾಗಲಿ, ಆಕ್ರೋಶವಾಗಲಿ ಕೇಳಿಬರದು.


ಜಯ ಜಯಕಾರ ಮಾಡು ಓ ಆಕಾಶವೇ, ಜಯಘೋಷ ಮಾಡು ಭೂ ತಳವೇ, ಹರ್ಷಧ್ವನಿಗೈಯಿರಿ ಬೆಟ್ಟಗುಡ್ಡಗಳೇ ವನವೃಕ್ಷಗಳೇ. ವಿಮೋಚಿಸಿದನು ಸರ್ವೇಶ್ವರ ಯಕೋಬನನು, ಇಸ್ರಯೇಲನ್ನು ರಕ್ಷಿಸಿ ಪ್ರಚಾರಗೊಳಿಸಿದನು ತನ್ನ ಮಹಿಮೆಯನು.


ಹರ್ಷಧ್ವನಿಗೈ ಆಕಾಶವೇ ಉಲ್ಲಾಸಪಡು ಪೊಡವಿಯೇ ತಟ್ಟಾಡಿರಿ ಬೆಟ್ಟಗುಡ್ಡಗಳೇ ಏಕೆನೆ ಸಂತೈಸಿಹನು ಸರ್ವೇಶ್ವರ ತನ್ನ ಪ್ರಜೆಯನು ಕನಿಕರಿಸಿಹನು ಶೋಷಿತರಾದ ತನ್ನ ಜನರನು.


ಹೊರಡಿರಿ ಬಾಬಿಲೋನ್ ನಗರದಿಂದ, ಓಡಿರಿ ಕಸ್ದೀಯರ ಕಡೆಯಿಂದ ಪ್ರಚುರಪಡಿಸಿರಿ ಹರ್ಷಧ್ವನಿಯಿಂದ, ಪ್ರಕಟಿಸಿರಿ ಭೂಮಿಯ ಕಟ್ಟಕಡೆಯ ತನಕ, ಈ ಪರಿ ತಿಳಿಸಿರಿ : “ಸರ್ವೇಶ್ವರ, ತಮ್ಮ ದಾಸ ಯಕೋಬನ ಉದ್ಧಾರಕ".


ತರುವಾಯ ನೂತನ ಆಕಾಶಮಂಡಲವನ್ನೂ ನೂತನ ಭೂಮಂಡಲವನ್ನೂ ಕಂಡೆ. ಮೊದಲಿದ್ದ ಆಕಾಶಮಂಡಲವೂ ಮೊದಲಿದ್ದ ಭೂಮಂಡಲವೂ ಕಣ್ಮರೆಯಾಗಿ ಹೋದವು. ಸಮುದ್ರವು ಇನ್ನಿಲ್ಲವಾಯಿತು.


ಅಳುತಳುತ್ತಾ ಬಿತ್ತುವವರು I ನಲಿನಲಿಯುತ್ತಾ ಕೊಯ್ಯುವರು II


ಆತ ಬತ್ತಿಸುವನು ಈಜಿಪ್ಟಿನ ಕೊಲ್ಲಿಯನ್ನು, ಒಣಗಿಸುವನು ಬಿಸಿಗಾಳಿಯಿಂದ ಯೂಫ್ರೆಟಿಸ್ ನದಿಯನ್ನು, ಸೀಳುವನದನ್ನು ಏಳು ತೊರೆಗಳನ್ನಾಗಿ. ಈ ಪರಿ ದಾಟುವರು ಜನರು ಕೆರ ಮೆಟ್ಟಿದವರಾಗಿ.


ಹೊರಡುವಿರಿ ನೀವು ಆನಂದಭರಿತರಾಗಿ ಬರುವಿರಿ ನೆಮ್ಮದಿಯಿಂದ ಸಾಲಾಗಿ. ನಿಮ್ಮ ಮುಂದೆ ತಟ್ಟಾಡುವುವು ಬೆಟ್ಟಗುಡ್ಡಗಳು ಚಪ್ಪಾಳೆ ಹೊಡೆಯುವುವು ಅಡವಿಯ ಗಿಡಮರಗಳು.


ನನ್ನ ಭಕ್ತರು ಹೃದಯಾನಂದದಿಂದ ಹಿಗ್ಗಿ ಹಾಡುವರು; ನೀವಾದರೋ ಮನನೊಂದು ಮೊರೆಯಿಡುವಿರಿ; ದುಃಖದಿಂದ ಅಳುವಿರಿ.


ಆಗ ನಾಟ್ಯವಾಡಿ ನಲಿವಳು ಯುವತಿ ಹರ್ಷಿಸುವರು ಯುವಕರು ಮುದುಕರು ಜೊತೆಯಾಗಿ. ಅವರ ದುಃಖವನ್ನು ಸಂತೋಷವಾಗಿಸುವೆನು ವ್ಯಸನ ತೊರೆದು ಆನಂದಿಸುವಂತೆ ಅವರನ್ನು ಸಂತೈಸುವೆನು.


ಉಕ್ಕಿತಾಗ ಮುಖತುಂಬ ನಗು, ಬಾಯ್ತುಂಬ ಹರ್ಷಗೀತೆ I “ಎಂಥ ಮಹತ್ಕಾರ್ಯವೆಸಗಿದನಾ ಪ್ರಭು ಇವರ ಪರತೆ” I ಇಂತೆಂದು ಆಡಿಕೊಂಡರು ತಂತಮ್ಮೊಳಗೆ ಅನ್ಯಜನತೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು