Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 51:18 - ಕನ್ನಡ ಸತ್ಯವೇದವು C.L. Bible (BSI)

18 ಅವಳನ್ನು ಕರೆದುಕೊಂಡು ಹೋಗುವವನಾರೂ ಇಲ್ಲ, ಆಕೆ ಹೆತ್ತಾ ಮಕ್ಕಳೊಳು; ಅವಳ ಕೈಹಿಡಿದು ನಡೆಸುವವನು ಒಬ್ಬನೂ ಇಲ್ಲ, ಆಕೆ ಸಾಕಿದ ಕುವರರೊಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವಳು ಹೆತ್ತ ಮಕ್ಕಳಲ್ಲಿ ಅವಳನ್ನು ನಡೆಸಿಕೊಂಡು ಹೋಗುವವನು ಯಾರೂ ಇಲ್ಲ. ಸಾಕಿದ ಆ ಸಕಲ ಕುಮಾರರಲ್ಲಿ ಅವಳ ಕೈ ಹಿಡಿಯುವವನು ಒಬ್ಬನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಹೆತ್ತ ಮಕ್ಕಳಲ್ಲೆಲ್ಲಾ ಅವಳನ್ನು ಕರೆದುಕೊಂಡು ಹೋಗುವವನು ಯಾರೂ ಇಲ್ಲ; ಸಾಕಿದ ಆ ಸಕಲ ಕುಮಾರರಲ್ಲಿ ಅವಳ ಕೈ ಹಿಡಿಯುವವನು ಒಬ್ಬನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಜೆರುಸಲೇಮಿನಲ್ಲಿ ಅನೇಕ ಜನರಿದ್ದರೂ ಅವರಲ್ಲಿ ಯಾರೂ ಅವಳಿಗಾಗಿ ನಾಯಕರಾಗಲಿಲ್ಲ. ಆಕೆಯು ಅನೇಕ ಮಕ್ಕಳನ್ನು ಪಡೆದವಳಾಗಿದ್ದರೂ ಆಕೆಯನ್ನು ನಡೆಸಲು ಮಾರ್ಗದರ್ಶಕರು ಯಾರೂ ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವಳು ಹೆತ್ತ ಎಲ್ಲಾ ಪುತ್ರರಲ್ಲಿ ಅವಳನ್ನು ನಡೆಸುವುದಕ್ಕೆ ಒಬ್ಬನೂ ಇಲ್ಲ. ಅವಳು ಬೆಳೆಯಿಸಿದ ಎಲ್ಲಾ ಪುತ್ರರಲ್ಲಿ, ಅವಳ ಕೈಯನ್ನು ಹಿಡಿಯುವವನು ಒಬ್ಬನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 51:18
18 ತಿಳಿವುಗಳ ಹೋಲಿಕೆ  

ಆಗ ನೀನು ಹೀಗೆಂದುಕೊಳ್ಳುವೆ ಮನದೊಳು : “ನಾನೋ ಮಕ್ಕಳನು ಕಳೆದುಕೊಂಡವಳು, ಪುತ್ರಹೀನಳು, ದೇಶಭ್ರಷ್ಟಳು, ತಿರುಕಳು. ಇಷ್ಟೊಂದು ಮಕ್ಕಳನು ಕೊಟ್ಟವರಾರು ನನಗೆ? ಇವರನ್ನು ಪೋಷಿಸಿದವರಾರು ಹೀಗೆ? ಇವರೆಲ್ಲಿದ್ದರು? ನಾನೋ ಒಬ್ಬಂಟಿಗಳಾಗಿದ್ದೆ!”


ಬಂಧುಮಿತ್ರರನು ನನ್ನಿಂದ ದೂರ ಮಾಡಿರುವೆ I ಅಂಧಕಾರದೊಡನೆ ಸಂಗಾತಿಯನ್ನಾಗಿಸಿರುವೆ II


ಯೇಸು ಕುರುಡನ ಕೈಹಿಡಿದು, ಅವನನ್ನು ಊರ ಹೊರಗೆ ಕರೆದೊಯ್ದರು. ಅವನ ಮೇಲೆ ಕೈಯಿಟ್ಟು, “ನಿನಗೆ ಏನಾದರೂ ಕಾಣುತ್ತಿದೆಯೇ?’ ಎಂದು ಕೇಳಿದರು.


ಅವರನ್ನು ಅವರಷ್ಟಕ್ಕೇ ಬಿಡಿ; ಅವರೊ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸಲು ಹೋಗುತ್ತಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಇಬ್ಬರೂ ಹಳ್ಳದಲ್ಲಿ ಬೀಳುತ್ತಾರಷ್ಟೆ,” ಎಂದರು.


ಆ ಜನಸಮೂಹವನ್ನು ಕಂಡಾಗ ಅವರ ಮನ ಕರಗಿತು.


ಇಂತೆಂದರು ಸರ್ವೇಶ್ವರ ತಾನು ಅಭಿಷೇಕಿಸಿದ ಕೋರೆಷನಿಗೆ “ರಾಷ್ಟ್ರಗಳನ್ನು ನೀ ಸದೆಬಡಿಯುವಂತೆ ರಾಜಮಹಾರಾಜರನು ನಿಶ್ಯಸ್ತ್ರರನ್ನಾಗಿ ಮಾಡುವಂತೆ ಮುಚ್ಚಲಾಗದ ಹಾಗೆ ಬಾಗಿಲು ಹೆಬ್ಬಾಗಿಲುಗಳನ್ನು ತೆರೆಯುವಂತೆ ನಾ ನಿನ್ನ ಕೈಹಿಡಿದು ನಡೆಸುವೆನು ಮುಂದೆ.


ನಿನ್ನ ದೇವರಾದ ಸರ್ವೇಶ್ವರ ನಾನೇ ಭಯಪಡಬೇಡ, ನಿನಗೆ ನಾನೇ ನೆರವಾಗುವೆ ಎಂತಲೇ, ನಿನ್ನ ಕೈ ಹಿಡಿದುಕೊಳ್ಳುವೆ.


ಅಕ್ಕಪಕ್ಕದಲಿ ಸಹಾಯಕರಾರೂ ಇಲ್ಲ I ಆಶ್ರಯರಹಿತ, ಹಿತಚಿಂತಕರಾರೂ ನನಗಿಲ್ಲ II


ಈ ಒಡಂಬಡಿಕೆ, ನಾನು ಪೂರ್ವಜರನ್ನು ಈಜಿಪ್ಟ್ ದೇಶದಿಂದ ಕೈಹಿಡಿದು ಕರೆತಂದಾಗ ಮಾಡಿದ ಒಡಂಬಡಿಕೆಯಂತಲ್ಲ; ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲ; ಎಂದೇ, ನಾನು ಅವರನ್ನು ಲಕ್ಷಿಸಲೂ ಇಲ್ಲ, ಎಂದರು ಸರ್ವೇಶ್ವರ.


ನೀನು ಬೆಳಕನ್ನು ಕಾಣದೆ ಕೆಲವು ಕಾಲ ಕುರುಡನಾಗಿರುವೆ,” ಎಂದನು. ಆ ಕ್ಷಣವೇ ಎಲಿಮನ ಕಣ್ಣು ಮಬ್ಬಾಯಿತು; ಕತ್ತಲೆ ಕವಿದಂತಾಯಿತು; ಯಾರಾದರೂ ಕೈಹಿಡಿದು ನಡೆಸಲೆಂದು ಅವನು ತಡವರಿಸಲಾರಂಭಿಸಿದನು.


ಸೌಲನು ಮೇಲಕ್ಕೆದ್ದು ಕಣ್ಣರಳಿಸಿ ನೋಡಿದರೂ ಅವನಿಗೇನೂ ಕಾಣಿಸಲಿಲ್ಲ. ಆದುದರಿಂದ ಸಂಗಡಿಗರು ಅವನ ಕೈಹಿಡಿದು ದಮಸ್ಕಸ್ ಪಟ್ಟಣಕ್ಕೆ ಕರೆದುಕೊಂಡು ಹೋದರು.


ಈ ಒಡಂಬಡಿಕೆ, ನಾನು ಅವರ ಪೂರ್ವಜರನ್ನು ಕೈ ಹಿಡಿದು ಈಜಿಪ್ಟಿನಿಂದ ಕರೆದು ತಂದಾಗ ಅವರೊಡನೆ ಮಾಡಿಕೊಂಡ ಒಡಂಬಡಿಕೆ ಅಂಥದಾಗಿ ಇರುವುದಿಲ್ಲ. ನಾನು ಅವರಿಗೆ ಯಜಮಾನನಾಗಿ ಇದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿನಡೆದರು.


ದೇವರು ನಿರ್ದೋಷಿಯನು ತ್ಯಜಿಸಿಬಿಡುವುದಿಲ್ಲ ಕೆಡುಕರಿಗೆ ನೆರವಾಗಲು ಆತ ಕೈ ನೀಡುವುದಿಲ್ಲ.


“ಶೋಷಣೆಗೆ, ಬಿರುಗಾಳಿಗೆ, ನಿರ್ಗತಿಗೆ ಗುರಿಯಾದವಳೇ, ನಿರ್ಮಿಸುವೆ ನಿನ್ನನು ವಜ್ರವೈಡೂರ್ಯಗಳಿಂದ ಅಸ್ತಿವಾರ ಹಾಕುವೆ ನಿನಗೆ ನೀಲಮಣಿಗಳಿಂದ.


ನನ್ನ ಗುಡಾರ ಹಾಳಾಗಿದೆ, ಹಗ್ಗಗಳು ಕಿತ್ತುಹೋಗಿವೆ. ಮಕ್ಕಳು ನನ್ನನ್ನು ಬಿಟ್ಟು ಕಾಣದೆಹೋಗಿದ್ದಾರೆ ಗುಡಾರ ಹಾಕಲು, ಪರದೆ ಬಿಗಿಯಲು, ಯಾರೂ ಇಲ್ಲವಾಗಿದ್ದಾರೆ.”


“ಕನ್ಯೆ ಇಸ್ರಯೇಲಳು ಬಿದ್ದಿಹಳು ಕೆಳಗೆ ಅಶಕ್ತಳು ಆಕೆ ಮರಳಿ ಏಳಲು ಮೇಲಕೆ ದಿಕ್ಕಿಲ್ಲದೆ ಒರಗಿಹಳು ಧರೆಯ ಮೇಲೆ ಮೇಲೆತ್ತಲು ಯಾರೂ ಗತಿಯಿಲ್ಲದ ಅಬಲೆ.”


ನನ್ನ ಕುರಿಗಳು ಮಲೆನಾಡಿನಲ್ಲೆಲ್ಲಾ ಎತ್ತರವಾದ ಪ್ರತಿಯೊಂದು ಬೆಟ್ಟದ ಮೇಲೆ ಅಲೆದಾಡಿದವು; ಹೌದು, ನನ್ನ ಕುರಿಗಳು ಭೂಮಂಡಲದಲ್ಲೆಲ್ಲಾ ಚದರಿಹೋದವು; ಯಾರೂ ಅವುಗಳ ಹಿಂದೆ ಹೋಗಿ ಹುಡುಕಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು