Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 51:20 - ಕನ್ನಡ ಸತ್ಯವೇದವು C.L. Bible (BSI)

20 ನಿನ್ನ ಮಕ್ಕಳು ಬಿದ್ದರು ಬೀದಿ ಚೌಕಗಳಲಿ ಬಲೆಗೆ ಬಿದ್ದ ಜಿಂಕೆಮರಿಯಂತಿಹರು ಪ್ರಜ್ಞೆತಪ್ಪಿ. ನಿನ್ನ ದೇವರನು ಮೂದಲಿಸಿಹರು ಸರ್ವೇಶ್ವರನ ರೋಷವನ್ನನುಭವಿಸಿಹರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಿನ್ನ ಮಕ್ಕಳು ಪ್ರಜ್ಞೆತಪ್ಪಿದವರಾಗಿ ಬಲೆಗೆ ಸಿಕ್ಕಿದ ಜಿಂಕೆಗಳಂತೆ ಬೀದಿಗಳಲ್ಲಿ, ಚೌಕದಲ್ಲಿ ಬಿದ್ದಿದ್ದಾರೆ. ಯೆಹೋವನ ರೋಷವನ್ನೂ, ನಿನ್ನ ದೇವರ ಗದರಿಕೆಯನ್ನೂ ಸಾಕಷ್ಟು ಅನುಭವಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಿನ್ನ ಮಕ್ಕಳು ಪ್ರಜ್ಞೆತಪ್ಪಿದವರಾಗಿ ಬಲೆಗೆ ಸಿಕ್ಕಿದ ಜಿಂಕೆಯಂತೆ ಬೀದಿಗಳೆಲ್ಲಾ ಕೂಡುವ ಚೌಕದಲ್ಲಿ ಬಿದ್ದಿದ್ದಾರೆ; ಯೆಹೋವನ ರೋಷವನ್ನೂ ನಿನ್ನ ದೇವರ ತರ್ಜನವನ್ನೂ ಹೊಟ್ಟೆ ತುಂಬಾ ಕುಡಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಿನ್ನ ಜನರು ಬಲಹೀನರಾದರು. ಅವರು ನೆಲದ ಮೇಲೆ ಬಿದ್ದು ಅಲ್ಲಿಯೇ ಮಲಗಿದರು. ಆ ಜನರು ರಸ್ತೆಯ ಮೂಲೆಮೂಲೆಗಳಲ್ಲಿ ಬಿದ್ದುಕೊಂಡಿರುತ್ತಾರೆ. ಅವರು ಬಲೆಯೊಳಗೆ ಸಿಕ್ಕಿಬಿದ್ದ ಜಿಂಕೆಯಂತಿರುವರು. ಯೆಹೋವನ ಕೋಪದಿಂದ ಇನ್ನೂ ಹೆಚ್ಚಿನ ಶಿಕ್ಷೆಯನ್ನು, ತಾಳಲಾರದಷ್ಟು ಶಿಕ್ಷೆಯನ್ನು ಅನುಭವಿಸಿದರು. ದೇವರು ಇನ್ನೂ ಹೆಚ್ಚಾಗಿ ಶಿಕ್ಷೆಕೊಡುವುದಾಗಿ ಹೇಳಿದಾಗ ಅವರು ಕಂಗಾಲಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಿನ್ನ ಪುತ್ರರು ಮೂರ್ಛೆ ಹೋಗಿ, ಬಲೆಗೆ ಸಿಕ್ಕಿದ ಕಾಡು ಗೂಳಿಗಳಂತೆ, ಎಲ್ಲಾ ಬೀದಿಗಳು ಕೂಡುವ ಚೌಕಗಳಲ್ಲಿ ಅವರು ಬಿದ್ದಿದ್ದಾರೆ. ಅವರು ಯೆಹೋವ ದೇವರ ರೋಷದಿಂದಲೂ, ನಿನ್ನ ದೇವರ ಗದರಿಕೆಯಿಂದಲೂ ತುಂಬಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 51:20
27 ತಿಳಿವುಗಳ ಹೋಲಿಕೆ  

ಅಂಥವನು ದೇವರ ಕೋಪಾಗ್ನಿಯೆಂಬ ಪಾತ್ರೆಯಲ್ಲಿ ದೇವರ ಅಪ್ಪಟ ರೋಷವೆಂಬ ಮದ್ಯವನ್ನು ಕುಡಿಯಬೇಕಾಗುತ್ತದೆ. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯ ಮುಂದೆಯೂ ಅಂಥವನು ಬೆಂಕಿಯಲ್ಲೂ ಗಂಧಕದಲ್ಲೂ ಬೆಂದು ನರಳುವನು.


ನಾನು ನಿಮಗಾಗಿ ವಧಿಸಿರುವ ಯಜ್ಞಪಶುಗಳ ಮಾಂಸವನ್ನು ಹೊಟ್ಟೆತುಂಬಾ ತಿನ್ನುವಿರಿ, ರಕ್ತವನ್ನು ಅಮಲೇರುವಷ್ಟು ಕುಡಿಯುವಿರಿ.


ನಾನು ಅವನಿಗೆ ನನ್ನ ಬಲೆಯೊಡ್ಡುವೆನು; ನಾನು ಹಾಕಿದ ಉರುಳಿನಲ್ಲಿ ಸಿಕ್ಕಿಬೀಳುವನು. ಅವನನ್ನು ಬಾಬಿಲೋನಿಗೆ ತಂದು, ಅಲ್ಲೇ ಅವನೊಂದಿಗೆ ವಾದಿಸಿ, ಅವನು ನನಗೆ ಮಾಡಿದ ಅಪರಾಧವನ್ನು ಅವನ ಮೇಲೆ ಹೊರಿಸುವೆನು.


ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರುಲಿನಲ್ಲಿ ಸಿಕ್ಕಿಬೀಳುವನು: ಬಾಬಿಲೋನಿಯಾ ದೇಶದ ಬಾಬಿಲೋನ್ ನಗರಕ್ಕೆ ಅವನನ್ನು ಒಯ್ಯುವೆನು; ಅಲ್ಲೇ ಇದ್ದು ಸಾಯುವನು, ಆದರೂ ಆ ದೇಶವನ್ನು ನೋಡನು.


ನಮ್ಮ ಯುವಕರಿಗೆ ಬೀಸುವ ಕಲ್ಲು ಹಿಡಿವ ಗತಿ ನಮ್ಮ ಮಕ್ಕಳಿಗೆ ಸೌದೆ ಹೊತ್ತು ಮುಗ್ಗರಿಸುವ ಪರಿಸ್ಥಿತಿ.


ಅಯ್ಯೋ, ಅಪರಂಜಿಯಂತೆ ಅಮೂಲ್ಯವಾಗಿದ್ದ ಸಿಯೋನ್ ಪ್ರಜೆ ಇಂದು ಬೇಡವೆಂದು ಬಿಸಾಡಿದ ಕುಂಬಾರನ ಮಣ್ಣುಮಡಕೆ! ಅಮೂಲ್ಯವಾಗಿದ್ದರು ಸಿಯೋನಿನ ಪ್ರಜೆಗಳು ಅಪರಂಜಿಯಂತೆ ಅಯ್ಯೋ ಈಗ ಅವರಾಗಿಹರು ಕುಂಬಾರನೆ ಬಿಸಾಡಿದ ಮಡಕೆಯಂತೆ.


“ನನ್ನ ಪ್ರಿಯರನ್ನು ಕರೆದೆ; ಅವರೇ ಮೋಸಮಾಡಿದರೆನಗೆ. ನನ್ನ ಯಾಜಕರೂ ಪ್ರಮುಖರೂ ಪಟ್ಟಣದಲ್ಲೇ ಪ್ರಾಣತೆತ್ತರು, ಉಸಿರನ್ನು ಉಳಿಸಿಕೊಳ್ಳಲು ಊಟವನ್ನು ಹುಡುಕುತ್ತಿರಲು.


“ಸ್ವಾಮಿ ತೃಣೀಕರಿಸಿದನು ನನ್ನ ಶೂರರನ್ನೆಲ್ಲಾ ನನ್ನ ಕಣ್ಮುಂದೆಯೇ. ಸೈನ್ಯಸಮೂಹವನ್ನೆ ಬರಮಾಡಿದನು ನನ್ನ ಯುವಕರನ್ನು ಸದೆಬಡಿಯಲೆಂದೇ. ಯೆಹೂದಿಯೆಂಬ ಯುವತಿಯನ್ನು ತುಳಿಸಿದನು ತೊಟ್ಟಿಯಲ್ಲಿ ದ್ರಾಕ್ಷಿ ತುಳಿವಂತೆ.


ಊರುಬಿಟ್ಟು ಹೊರಗೆ ಹೋದರೆ ಅಲ್ಲಿ ಕಾಣಿಸುತ್ತಾರೆ ಖಡ್ಗದಿಂದ ಸತ್ತವರು. ಊರ ಒಳಗೆ ಬಂದರೆ ಅಲ್ಲಿ ಕಾಣಿಸುತ್ತಾರೆ ಕ್ಷಾಮದಿಂದ ನರಳುವವರು. ಅಪರಿಚಿತನಾಡಿಗೆ ಗಡೀಪಾರಾಗಿದ್ದಾರೆ ಪ್ರವಾದಿಗಳು ಮತ್ತು ಯಾಜಕರು’.”


ಅವರ ಪ್ರವಾದನೆಗೆ ಕಿವಿಗೊಡುವ ಜನರು ಕೂಡ ಕ್ಷಾಮಖಡ್ಗಗಳಿಗೆ ತುತ್ತಾಗುವರು. ಜೆರುಸಲೇಮಿನ ಬೀದಿಗಳಲ್ಲಿ ಬಿಸಾಡಲ್ಪಡುವರು. ಅವರನ್ನೂ ಅವರ ಮಡದಿ ಮಕ್ಕಳನ್ನೂ ಹೂಣಲು ಸಹ ಯಾರೂ ಇರುವುದಿಲ್ಲ. ಅವರ ದುಷ್ಟತನವನ್ನು ಅವರ ಮೇಲೆಯೆ ಸುರಿದುಬಿಡುವೆನು.”


ಇಂತಿರಲು ಶೋಷಿತಳೇ, ಕೇಳು ನನ್ನ ಮಾತನು ದ್ರಾಕ್ಷಾರಸದಿಂದಲ್ಲ ನೀ ಅಮಲೇರಿರುವುದು.


ಎಚ್ಚೆತ್ತುಕೊ, ಎಚ್ಚೆತ್ತುಕೊ, ನೀನೆದ್ದು ನಿಲ್ಲು ಜೆರುಸಲೇಮೆ! ಕುಡಿದುಬಿಟ್ಟಿರುವೆ ನೀ ಮತ್ತು ತರುವ ಪಾನಪಾತ್ರೆಯಿಂದ ತೊಟ್ಟನ್ನೂ ಬಿಡದೆ ಹೀರಿರುವೆ ಸರ್ವೇಶ್ವರನ ಕೋಪ ತುಂಬಿದಾ ಕೊಡದಿಂದ !


ಮಾಡುವೆನು ನಿನ್ನ ಹಿಂಸಕರು ಸ್ವಮಾಂಸವನ್ನು ತಿನ್ನುವಂತೆ ಅಮಲೇರುವರು ಸ್ವಂತ ರಕ್ತವನ್ನು ಕುಡಿದು ದ್ರಾಕ್ಷಾರಸದಂತೆ. ಅರಿವರು ನರಮಾನವರೆಲ್ಲರು ಇಂತು : ನಾನೇ ಸರ್ವೇಶ್ವರ, ನಿನ್ನ ರಕ್ಷಕ, ನಿನ್ನ ನಿನ್ನ ವಿಮೋಚಕನೆಂದು; ನಾನೇ ಯಕೋಬ ವಂಶದ ಬಲಾಢ್ಯ ದೇವನೆಂದು.


ನಿಮ್ಮನ್ನು ನೀವೇ ಬೆರಗುಮಾಡಿಕೊಂಡು ನಿಬ್ಬೆರಗಾಗಿರಿ. ಕುರುಡು ಮಾಡಿಕೊಂಡು ಕಡುಕುರುಡರಾಗಿರಿ. ಮದ್ಯಪಾನ ಮಾಡದೆಯೇ ಮತ್ತರಾಗಿರಿ, ಕುಡಿಯದೆಯೇ ಓಲಾಡಿರಿ.


ಜನರು ಘೋರ ಕಷ್ಟಗಳಿಗೆ ಒಳಗಾಗುವರು. ಹಸಿದು ದೇಶದಲ್ಲೆಲ್ಲ ಅಲೆದಾಡುವರು. ಹಸಿವಿನಿಂದ ರೋಷಗೊಂಡು ಅರಸನನ್ನೂ ದೇವರನ್ನೂ ಹಳಿಯುವರು.


ಎಂದೇ ತಮ್ಮ ಜನರ ವಿರುದ್ಧ ಸ್ವಾಮಿಯ ಕೋಪ ಭುಗಿಲೆದ್ದಿದೆ. ಹೊಡೆಯುವುದಕ್ಕೆ ಅವರ ಕೈ ಮೇಲಕ್ಕೆತ್ತಿದೆ. ಬೆಟ್ಟಗುಡ್ಡಗಳು ನಡುಗುವುವು. ಸತ್ತ ಹೆಣಗಳು ಕಸದಂತೆ ಬೀದಿಯಲ್ಲಿ ಬಿದ್ದಿರುವುವು. ಇಷ್ಟೆಲ್ಲ ನಡೆದರೂ ಸ್ವಾಮಿಯ ಕೋಪ ತಣಿಯದು, ಎತ್ತಿದ ಕೈ ಇಳಿಯದು.


ಯಾವುವೆಂದರೆ - ದನ, ಕುರಿ, ಆಡು, ದುಪ್ಪಿ, ಜಿಂಕೆ, ಸಾರಂಗ, ಕಾಡುಮೇಕೆ, ಚಿಗರಿ, ಕಡವೆ, ಕೊಂಡಗುರಿ ಇವುಗಳೇ.


ಯುವಕರೂ ದಣಿದು ಬಳಲುವರು ತರುಣರೂ ಸೊರಗಿ ಮುಗ್ಗರಿಸುವರು.


“ನೀವು ದುರ್ನಡತೆಯುಳ್ಳವರಾಗಿ ಸರ್ವೇಶ್ವರನನ್ನು ಬಿಟ್ಟದ್ದರಿಂದ ಅವರು ನಿಮ್ಮ ಎಲ್ಲ ಪ್ರಯತ್ನಗಳಲ್ಲೂ ವಿಪತ್ತು, ಕಳವಳ, ಶಾಪ, ಇವುಗಳನ್ನುಂಟುಮಾಡುತ್ತಾ ನಿಮ್ಮನ್ನು ಬೇಗನೆ ನಾಶಮಾಡುವರು.


ಸರ್ವೇಶ್ವರ ಬರುವನಿದೋ ಅಗ್ನಿಮಯನಾಗಿ ಆತನ ರಥಗಳು ಬಿರುಗಾಳಿಯಂತೆ ರಭಸವಾಗಿ ತೋರಿಸುವನು ತನ್ನ ಸಿಟ್ಟನ್ನು ರೌದ್ರವೇಶದಿಂದ ಖಂಡಿಸುವನು ಧಗಧಗಿಸುವ ಜ್ವಾಲೆಯಿಂದ


ರಾತ್ರಿಯ ಒಂದೊಂದು ಜಾವದಲ್ಲೂ ಎದ್ದು ಗೋಳಾಡಿರಿ. ನಿಮ್ಮ ಹೃದಯ ಕರಗಿ, ನೀರಾಗಿ ಸ್ವಾಮಿಯ ಮುಂದೆ ಹರಿಯಲಿ. ನಿಮ್ಮ ಮಕ್ಕಳ ಪ್ರಾಣವನ್ನು ಉಳಿಸಬೇಕೆಂದು ಕೈ ಮುಗಿದು ಪ್ರಾರ್ಥನೆಮಾಡಿ. ಹಸಿವಿನಿಂದ ಅವು ಮೂರ್ಛೆಹೋಗಿವೆ, ಬೀದಿಯ ಮೂಲೆಮೂಲೆಗಳಲ್ಲಿ.


ಸುರಿಸಿದ್ದಾನೆ ಸರ್ವೇಶ್ವರ ತನ್ನ ರೋಷಾಗ್ನಿಯನ್ನು ತೀರಿಸಿಕೊಂಡಿದ್ದಾನೆ ತನ್ನ ಉಗ್ರಕೋಪವನ್ನು. ಆತ ಹೊತ್ತಿಸಿದ ಬೆಂಕಿಗೆ ಸಿಯೋನಿನ ಅಸ್ತಿವಾರ ಆಹುತಿಯಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು