Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 51:8 - ಕನ್ನಡ ಸತ್ಯವೇದವು C.L. Bible (BSI)

8 ನುಸಿ ಅವರನ್ನು ತಿಂದುಹಾಕುವುದು ಬಟ್ಟೆಯಂತೆ ಹುಳು ಅವರನ್ನು ಮೆದ್ದುಬಿಡುವುದು ಉಣ್ಣೆಯಂತೆ. ನಾ ನೀಡುವ ಮುಕ್ತಿಯೋ ನಿಲ್ಲುವುದು ಶಾಶ್ವತವಾಗಿ ನಾ ಕೊಡುವ ವಿಮೋಚನೆ ಸದಾ ಇರುವುದು ನೆಲೆಯಾಗಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನುಸಿಯು ಅವರನ್ನು ಬಟ್ಟೆಯಂತೆ ತಿಂದುಹಾಕುವುದು, ಹುಳವು ಅವರನ್ನು ಉಣ್ಣೆಯಂತೆ ತಿಂದುಬಿಡುವುದು. ನನ್ನ ರಕ್ಷಣಧರ್ಮದ ಕಾರ್ಯವೋ ಶಾಶ್ವತವಾಗಿ ನಿಲ್ಲುವುದು. ನನ್ನ ವಿಮೋಚನ ಕ್ರಿಯೆಯು ತಲತಲಾಂತರಕ್ಕೂ ನೆಲೆಯಾಗಿರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನನ್ನ ರಕ್ಷಣ ಧರ್ಮದ ಕಾರ್ಯವೋ ಶಾಶ್ವತವಾಗಿ ನಿಲ್ಲುವದು, ನನ್ನ ವಿಮೋಚನ ಕ್ರಿಯೆಯು ತಲತಲಾಂತರಕ್ಕೂ ನೆಲೆಯಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯಾಕೆಂದರೆ ನುಸಿಯು ಅವರನ್ನು ಬಟ್ಟೆಯಂತೆ ತಿಂದುಹಾಕುವುದು. ಅವರು ಉಣ್ಣೆಯಂತಿರುವರು, ನುಸಿಯು ಅದನ್ನು ತಿಂದುಬಿಡುವುದು. ಆದರೆ ನನ್ನ ಒಳ್ಳೆಯತನವು ಶಾಶ್ವತವಾದದ್ದು. ನನ್ನ ರಕ್ಷಣೆಯು ಸದಾಕಾಲವಿರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಏಕೆಂದರೆ ನುಸಿಯು ಬಟ್ಟೆಯನ್ನು ತಿನ್ನುವಂತೆ, ಅವರನ್ನು ತಿಂದುಬಿಡುವುದು ಮತ್ತು ಹುಳವು ಅವರನ್ನು ಉಣ್ಣೆಯಂತೆ ತಿನ್ನುವುದು. ಆದರೆ ನನ್ನ ನೀತಿಯು ಶಾಶ್ವತವಾಗಿರುವುದು ಮತ್ತು ನನ್ನ ರಕ್ಷಣೆಯು ತಲತಲಾಂತರಗಳಿಗೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 51:8
12 ತಿಳಿವುಗಳ ಹೋಲಿಕೆ  

ಆಕಾಶಮಂಡಲವನು ನೋಡಿ ಕಣ್ಣೆತ್ತಿ ಭೂಮಂಡಲದತ್ತ ನೋಡಿ ಕೆಳಗೆ ದಿಟ್ಟಿಸಿ. ಆಕಾಶ ಚದರಿಹೋಗುವುದು ಹೊಗೆಯಂತೆ ಭೂಮಿ ಹರಿದುಹೋಗುವುದು ಬಟ್ಟೆಯಂತೆ ಸಾಯುವರು ಭೂನಿವಾಸಿಗಳು ಅದರಂತೆ. ನಾ ಕೊಡುವ ವಿಮೋಚನೆಯೋ ನಿಲ್ಲುವುದು ಶಾಶ್ವತವಾಗಿ ನಾ ನೀಡುವ ಮುಕ್ತಿಯೋ ಅಳಿದುಹೋಗದು ಭಂಗವಾಗಿ.


ಇಗೋ, ಸ್ವಾಮಿ ಸರ್ವೇಶ್ವರ ನಿಂತಿಹರು ನನಗೆ ನೆರವಾಗಿ ನಿರ್ಣಯಿಸುವವನು ಯಾರು ನನ್ನನ್ನು ಅಪರಾಧಿಯಾಗಿ? ನುಸಿತಿಂದ ವಸ್ತ್ರದಂತೆ ಅಳಿದುಹೋಗುವರವರು ಜೀರ್ಣವಾಗಿ.


ಆತನಲ್ಲಿ ಭಯಭಕ್ತಿಯುಳ್ಳವರಿಗೆ I ಆತನ ಪ್ರೀತಿ ತಲತಲಾಂತರದವರೆಗೆ II


ನಾನು ಎಫ್ರಯಿಮಿಗೆ ನುಸಿಯಾಗಿದ್ದೇನೆ; ಯೆಹೂದ ಕುಲಕ್ಕೆ ಕುಟ್ಟೆಯಾಗಿದ್ದೇನೆ.


ಅವರು ಹೊರಟುಹೋಗುವಾಗ ನೋಡುವರು ನನಗೆ ದ್ರೋಹವೆಸಗಿದವರ ಹೆಣಗಳನು ಸಾಯುವುದಿಲ್ಲ ಅವುಗಳನ್ನು ಕಡಿಯುವ ಹುಳು ಆರುವುದಿಲ್ಲ ಅವುಗಳನ್ನು ಸುಡುವ ಬೆಂಕಿಯು ಎಲ್ಲ ಮನುಜರಿಗವು ಅಸಹ್ಯವಾಗಿರುವುವು.”


ಇಂತಿರಲು ದೂಳಿನಲ್ಲಿ ತಳವೂರಿ, ಮಣ್ಣಿನೊಡಲ ಹೊಕ್ಕು ಬಾಳಿ ಹುಳುವಿನಷ್ಟು ಸುಲಭವಾಗಿ ಅಳಿದುಹೋಗುವವರಲ್ಲಿ ಮತ್ತೆಷ್ಟು ತಪ್ಪೆಣಿಸಲಾರನಾತ ಅಂಥ ನರಮಾನವರಲ್ಲಿ?


ಬರಮಾಡುವೆನು ಮುಕ್ತಿಯನು ಹತ್ತಿರಕೆ ಅದಿನ್ನು ದೂರವಿರದು ನಿಮಗೆ. ತಡವಾಗದು ನಿಮಗೆ ನನ್ನ ರಕ್ಷಣೆ ಸಾಧಿಸುವೆನು ರಕ್ಷಣೆಯನ್ನು ಸಿಯೋನಿನಲೇ, ಬೀರುವೆನು ನನ್ನ ಮಹಿಮೆಯನ್ನು ಇಸ್ರಯೇಲ ಮೇಲೆ.”


ಇಸ್ರಯೇಲಿಗಾದರೋ, ದೊರೆವುದು ಶಾಶ್ವತ ರಕ್ಷಣೆ ಸರ್ವೇಶ್ವರನಿಂದ; ಯುಗಯುಗಾಂತರಕ್ಕೂ ಅದಕ್ಕಾಗದು ಲಜ್ಜೆ, ಮಾನಭಂಗ.”


ಕೊಳೆತ ಪದಾರ್ಥದಂತೆ, ನುಸಿಹಿಡಿದ ಬಟ್ಟೆಯಂತೆ ನಾನು ಕ್ಷಯಿಸಿ ಹೋಗುತ್ತಿರುವೆ.”


ಇಳಿದಿದೆ ನಿನ್ನ ವೈಭವ, ವೀಣಾನಾದ ಪಾತಾಳಕೆ ನಿನಗೀಗ ಹುಳುಗಳೇ ಹಾಸಿಗೆ, ಕ್ರಿಮಿಗಳೇ ಹೊದಿಕೆ.


“ಅಧರ್ಮವನ್ನು ಕೊನೆಗಾಣಿಸುವುದಕ್ಕೆ ಪಾಪಗಳನ್ನು ತೀರಿಸುವುದಕ್ಕೆ, ಅಪರಾಧವನ್ನು ನಿವಾರಿಸುವುದಕ್ಕೆ, ಸನಾತನ ಧರ್ಮವನ್ನು ಸ್ಥಾಪಿಸುವುದಕ್ಕೆ, ದರ್ಶನವನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥ ಮಾಡುವುದಕ್ಕೆ, ಅತಿಪರಿಶುದ್ಧವಾದುದನ್ನು ಅಭಿಷೇಕಿಸುವುದಕ್ಕೆ ನಿನ್ನ ಜನಕ್ಕೂ ನಿನ್ನ ಪವಿತ್ರನಗರಕ್ಕೂ ಏಳೆಪ್ಪತ್ತು ವರ್ಷಗಳು ಕಳೆಯಬೇಕೆಂದು ನಿಷ್ಕರ್ಷೆಯಾಗಿದೆ.


“ಶಪಥಮಾಡಿದೆ ನಾನು ನೋಹನ ದಿನದಂದು: ಜಲಪ್ರಳಯವು ಭೂಮಿಯನು ಇ‍ನ್ನು ಮುಳುಗಿಸದೆಂದು. ಶಪಥಮಾಡುವೆ ಈಗ ‘ಕೋಪಮಾಡೆನು’ ಎಂದು ‘ಇನ್ನು ನಿನ್ನನು ಗದರಿಸೆನು’ ಎಂದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು