Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 52:2 - ಕನ್ನಡ ಸತ್ಯವೇದವು C.L. Bible (BSI)

2 ಖೈದಿಯಾಗಿ ಬಿದ್ದಿರುವ ಸಿಯೋನ್ ಕನ್ಯೆಯೆ, ಕಿತ್ತುಬಿಡು ಬಂಧನವನು ನಿನ್ನ ಕುತ್ತಿಗೆಯಿಂದ ಸಿಂಹಾಸನಾರೂಢಳಾಗು ಜೆರುಸಲೇಮೆ ಝಾಡಿಸಿ ಎದ್ದುನಿಂತು ದುಂಬುಧೂಳಿನಿಂದ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆರೂಸಲೇಮೇ, ಧೂಳನ್ನು ಝಾಡಿಸಿಕೋ! ಎದ್ದು ಆಸನದ ಮೇಲೆ ಕುಳಿತುಕೋ! ಸೆರೆಯಲ್ಲಿ ಬಿದ್ದ ಚೀಯೋನ್ ಪುತ್ರಿಯೇ, ನಿನ್ನ ಕುತ್ತಿಗೆಯ ಬಂಧನವನ್ನು ಬಿಚ್ಚಿಕೋ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆರೂಸಲೇಮೇ, ದೂಳನ್ನು ಝಾಡಿಸಿಕೋ! ಎದ್ದು ಆಸನದ ಮೇಲೆ ಕೂಡ್ರು! ಸೆರೆಬಿದ್ದ ಚೀಯೋನ್ ಕನ್ಯೆಯೇ, ನಿನ್ನ ಕತ್ತಿನ ಪಾಶವನ್ನು ಬಿಚ್ಚಿಬಿಡು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಿನ್ನ ಧೂಳನ್ನು ಝಾಡಿಸು. ನಿನ್ನ ಮನೋಹರವಾದ ವಸ್ತ್ರಗಳನ್ನು ಧರಿಸಿಕೊ. ಚೀಯೋನಿನ ಕುಮಾರ್ತೆಯಾದ ಜೆರುಸಲೇಮೇ, ನೀನು ಒಮ್ಮೆ ಸೆರೆಯಾಳಾಗಿದ್ದೆ. ಈಗ ನೀನು ನಿನ್ನ ಕುತ್ತಿಗೆಗೆ ಬಂಧಿಸಲ್ಪಟ್ಟ ಸಂಕೋಲೆಗಳಿಂದ ಬಿಡಿಸಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೆರೂಸಲೇಮೇ ಧೂಳನ್ನು ಝಾಡಿಸಿಕೋ, ಎದ್ದು ಆಸನದ ಮೇಲೆ ಕುಳಿತುಕೋ. ಸೆರೆಯಾದ ಚೀಯೋನ್ ಪುತ್ರಿಯೇ, ನಿನ್ನ ಕುತ್ತಿಗೆಯ ಬಂಧನಗಳನ್ನು ಬಿಚ್ಚಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 52:2
19 ತಿಳಿವುಗಳ ಹೋಲಿಕೆ  

“ದೇವರಾತ್ಮ ನನ್ನ ಮೇಲಿದೆ ದೀನದಲಿತರಿಗೆ ಶುಭಸಂದೇಶವನ್ನು ಬೋಧಿಸಲೆಂದು ಅವರೆನ್ನನು ಅಭಿಷೇಕಿಸಿದ್ದಾರೆ; ಬಂಧಿತರಿಗೆ ಬಿಡುಗಡೆಯನ್ನು, ಅಂಧರಿಗೆ ದೃಷ್ಟಿದಾನವನ್ನು ಪ್ರಕಟಿಸಲೂ ಶೋಷಿತರಿಗೆ ಸ್ವಾತಂತ್ರ್ಯ ನೀಡಲೂ


“ಕತ್ತಿಯಿಂದ ತಪ್ಪಿಸಿಕೊಂಡವರೇ, ಸುಮ್ಮನೆ ನಿಂತುಕೊಳ್ಳದೆ ನಡೆಯಿರಿ. ದೂರವಿರುವಾಗಲು ಸರ್ವೇಶ್ವರನನ್ನು ಸ್ಮರಿಸಿರಿ. ಜೆರುಸಲೇಮನ್ನು ಕುರಿತು ಮನಸ್ಸಾರೆ ಹಂಬಲಿಸಿರಿ.


ನನ್ನ ಜನರೇ, ಬಾಬಿಲೋನನ್ನು ಬಿಟ್ಟು ಹೊರಡಿ. ನನ್ನ ಕೋಪಾಗ್ನಿಯಿಂದ ತಪ್ಪಿಸಿಕೊಳ್ಳಿ.


ನನ್ನ ಮೇಲಿದೆ ಸರ್ವೇಶ್ವರ ಸ್ವಾಮಿಯ ಆತ್ಮ; ನನಗೆ ಅಭಿಷೇಕಮಾಡಿ, ಕಳುಹಿಸಿಹನು ಆತ : ದೀನದಲಿತರಿಗೆ ಶುಭಸಂದೇಶ ಬೋಧಿಸಲೆಂದೆ ಮನನೊಂದವರನು ಸಂತೈಸಿ ಗುಣಪಡಿಸಲೆಂದೆ ಬಂಧಿತರಿಗೆ ಬಿಡುಗಡೆಯನು ಪ್ರಕಟಿಸಲೆಂದೆ; ಸೆರೆಯಾಳುಗಳಿಗೆ ಬಂಧವಿಮುಕ್ತಿಯಾಗುವುದನು,


ಸೆರೆಯಲ್ಲಿ ಸೊರಗಿದವನು ಸಾಯನು; ಇಳಿಯನವನು ಪಾತಾಳಕ್ಕೆ, ಬಿಡುಗಡೆಯಾಗುವನು ಬೇಗನೆ, ಇರದವನಿಗೆ ಅನ್ನದ ಕೊರತೆ.


ಸ್ವರ್ಗದಿಂದ ಬಂದ ಮತ್ತೊಂದು ವಾಣಿಯನು ಕೇಳಿದೆ. ಅದು : ನನ್ನ ಜನರೇ, ಅವಳನ್ನು ತೊರೆದು ಹೊರಬನ್ನಿ ಪಾಲುಗಾರರಾಗದಿರಿ ಅವಳ ಪಾಪಗಳಲಿ ತುತ್ತಾಗದಿರಿ ಅವಳಿಗೆ ಬಂದೆರಗುವ ವಿಪತ್ತುಗಳಲಿ !


ಸರ್ವೇಶ್ವರ ತಮ್ಮ ಜನರಿಗೆ ಇಂತೆನ್ನುತ್ತಾರೆ: “ಚತುರ್ದಿಕ್ಕುಗಳಿಗೆ ನಿಮ್ಮನ್ನು ಚದರಿಸಿದವನು ನಾನೇ. ಆದರೆ ಈಗ ಎಚ್ಚೆತ್ತುಕೊಳ್ಳಿ, ಹೊರನಾಡುಗಳಿಂದ ಓಡಿಬನ್ನಿ, ಇದು ಸರ್ವೇಶ್ವರನ ನುಡಿ. ಬಾಬಿಲೋನಿಗೆ ಸೆರೆಹೋದ ಸಿಯೋನಿನವರೇ, ಅಲ್ಲಿಂದ ತಪ್ಪಿಸಿಕೊಂಡು ಬನ್ನಿ.


ಕೆಲವರು ಕತ್ತಿಯ ಬಾಯಿಗೆ ತುತ್ತಾಗುವರು. ಮತ್ತೆ ಕೆಲವರು ಬಂಧಿತರಾಗಿ ದೇಶದೇಶಗಳಿಗೆ ಕೊಂಡೊಯ್ಯಲ್ಪಡುವರು; ಅನ್ಯದೇಶೀಯರು ತಮ್ಮ ಕಾಲಾವಧಿಯ ತನಕ ಜೆರುಸಲೇಮನ್ನು ತುಳಿದುಹಾಕುವರು.


ನೀನು ಕುಗ್ಗಿ ಭೂಮಿಯೊಳಗಿಂದ ಮಾತಾಡುವೆ. ನಿನ್ನ ನುಡಿ ಮಣ್ಣಿನೊಳಗಿಂದ ಶಿಥಿಲ ಸ್ವರವಾಗಿ ಹೊರಡುವುದು. ನಿನ್ನ ಧ್ವನಿ ಭೂತದ ಧ್ವನಿಯಂತೆ ನೆಲದೊಳಗಿಂದ ಬರುವುದು. ಧೂಳಿನೊಳಗಿಂದ ನಿನ್ನ ಮಾತು ಲೊಚಗುಟ್ಟುವಂತೆ ಕೇಳಿಸುವುದು.


ನಿನ್ನ ಪುರದ್ವಾರಗಳಲ್ಲಿ ದುಃಖ ಪ್ರಲಾಪ ತುಂಬಿರುವುದು. ನೀನು ನಗ್ನಳಂತೆ ನೆಲದ ಮೇಲೆ ಕುಳಿತುಬಿಡುವೆ.


ಕೊಡುವೆ ಆ ಕೋಪದ ಕೊಡವನು ನಿನ್ನನು ಶೋಷಿಸಿದವರಿಗೆ ‘ನಾವು ತುಳಿದು ಹಾದುಹೋಗುವಂತೆ ನೆಲಕಚ್ಚಿ ಬೀಳು ಕೆಳಗೆ’ ಎಂದು ನಿಮ್ಮ ಬೆನ್ನನೆ ನೆಲವಾಗಿಸಿ, ಬೀದಿಕಸವನ್ನಾಗಿಸಿದವರಿಗೆ.”


ಆಗ ನೀನು ಹೀಗೆಂದುಕೊಳ್ಳುವೆ ಮನದೊಳು : “ನಾನೋ ಮಕ್ಕಳನು ಕಳೆದುಕೊಂಡವಳು, ಪುತ್ರಹೀನಳು, ದೇಶಭ್ರಷ್ಟಳು, ತಿರುಕಳು. ಇಷ್ಟೊಂದು ಮಕ್ಕಳನು ಕೊಟ್ಟವರಾರು ನನಗೆ? ಇವರನ್ನು ಪೋಷಿಸಿದವರಾರು ಹೀಗೆ? ಇವರೆಲ್ಲಿದ್ದರು? ನಾನೋ ಒಬ್ಬಂಟಿಗಳಾಗಿದ್ದೆ!”


ನೀವು ಬಾಬಿಲೋನಿನಿಂದ ಓಡಿಹೋಗಿ ನಿಮ್ಮ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿ, ಅದಕ್ಕೆ ಉಂಟಾಗುವ ದಂಡನೆಗೆ ನೀವು ಒಳಗಾಗಬೇಡಿ. ಸರ್ವೇಶ್ವರನಾದ ನಾನು ಮುಯ್ಯಿತೀರಿಸುವ ಕಾಲಬಂದಿದೆ. ಬಾಬಿಲೋನಿಗೆ ತಕ್ಕ ಪ್ರತೀಕಾರ ಮಾಡುವೆನು.


ಮುರಿದುಹಾಕಿದೆ ಭಾರವಾದ ಅವರ ನೊಗವನು ಅವರ ಬೆನ್ನನ್ನು ಬಡಿದ ಬೆತ್ತವನು ದಬ್ಬಾಳಿಕೆ ನಡೆಸಿದವರ ದೊಣ್ಣೆಯನು; ಮಿದ್ಯಾನನ್ನು ಗೆದ್ದ ದಿನದಂದು ಹಾಗೆಯೆ ಮಾಡಿದೆಯಲ್ಲವೆ ನೀನು?


ಆ ದಿನ ಬಂದಾಗ ಅವರು ನಿಮ್ಮ ಮೇಲೆ ಹೊರಿಸಿರುವ ಗುಲಾಮಗಿರಿಯನ್ನು ಕಳಚಿಹಾಕಲಾಗುವುದು. ನಿಮ್ಮ ಕೊರಳಿಗೆ ಕಟ್ಟಿದ ದಾಸ್ಯದ ನೊಗವನ್ನು ಮುರಿದುಹಾಕಲಾಗುವುದು.”


ನಶಿಸಿಬಿಡುವೆನಾ ಅಸ್ಸೀರಿಯರನು ನನ್ನ ನಾಡಿನಲಿ, ತುಳಿದುಬಿಡುವೆನು ಅವರನು ನನ್ನ ಬೆಟ್ಟಗಳಲಿ, ನೀಗುವುದಾಗ ನನ್ನ ಜನರಿಂದ ಅವರು ಹೂಡಿದ ನೊಗವು, ತೊಲಗುವುದಾಗ ಅವರು ಹೊರಿಸಿದ ಹೊರೆಯು.


ನಿನಗೆ ಬೆಳಕು ಬಂದಿದೆ ಜೆರುಸಲೇಮೇ, ಏಳು, ಪ್ರಕಾಶಿಸು; ನಿನ್ನ ಮೇಲೆ ಉದಯಿಸಿದೆ ಸರ್ವೇಶ್ವರನ ತೇಜಸ್ಸು.


ತೋಟದ ಮರಗಳು ಹಣ್ಣುಬಿಡುವುವು; ಹೊಲಗಳು ಒಳ್ಳೆಯ ಬೆಳೆಕೊಡುವುವು; ಜನರು ಸ್ವದೇಶದಲ್ಲಿ ನೆಮ್ಮದಿಯಾಗಿರುವರು; ಅವರ ಮೇಲೆ ಹೇರಿದ ನೊಗಗಳನ್ನು ನಾನು ಮುರಿದುಹಾಕಿ, ಅವರನ್ನು ಅಡಿಯಾಳಾಗಿ ಮಾಡಿಕೊಂಡವರ ಅಧೀನದಿಂದ ಬಿಡಿಸಿದಾಗ, ನಾನೇ ಸರ್ವೇಶ್ವರ ಎಂದು ಅವರಿಗೆ ದೃಢವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು