Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 53:3 - ಕನ್ನಡ ಸತ್ಯವೇದವು C.L. Bible (BSI)

3 ಧಿಕ್ಕರಿಸಲ್ಪಟ್ಟವನು, ಮನುಜರಿಂದ ತಿರಸ್ಕೃತನು, ದುಃಖಕ್ರಾಂತನು, ಕಷ್ಟಸಂಕಟ ಅನುಭವಿಸಿದವನು. ನೋಡಿದವರು ಮುಖ ತಿರುಗಿಸುವಷ್ಟು ನಿಂದಕನು ! ನಾವೋ ಲಕ್ಷ್ಯಕ್ಕೂ ತೆಗೆದುಕೊಳ್ಳಲಿಲ್ಲ ಆತನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು, ಸಂಕಟಪಡುವವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು, ಸಂಕಷ್ಟಕ್ಕೊಳಗಾದವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು. ನಾವು ಅವನನ್ನು ಲಕ್ಷ್ಯಕ್ಕೇ ತರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಜನರು ಆತನನ್ನು ಪರಿಹಾಸ್ಯ ಮಾಡಿದರು. ಆತನ ಸ್ನೇಹಿತರು ಆತನನ್ನು ತೊರೆದರು. ಆತನು ನೋವಿನಿಂದ ಬಳಲಿದನು. ಆತನು ಕಾಯಿಲೆಯಿಂದ ಬಾಧಿತನಾಗಿದ್ದನು. ಜನರು ಆತನ ಕಡೆಗೆ ನೋಡಲೂ ಇಲ್ಲ. ನಾವು ಆತನನ್ನು ಗಮನಕ್ಕೆ ತರಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆತನು ತಿರಸ್ಕೃತನೂ ಮಾನವಕುಲದಿಂದ ನಿರಾಕರಿಸಲಾದವನೂ, ದುಃಖಿತ ಮನುಷ್ಯನೂ, ನೋವನ್ನು ಅನುಭವಿಸಿದವನೂ ಆಗಿದ್ದನು. ನಾವು ನಮ್ಮ ಮುಖಗಳನ್ನು ಆತನಿಂದ ಮರೆಮಾಡಿಕೊಂಡೆವು. ಆತನು ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು. ನಾವು ಆತನನ್ನು ಅತ್ಯಲ್ಪವಾಗಿ ಎಣಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 53:3
38 ತಿಳಿವುಗಳ ಹೋಲಿಕೆ  

ಬಳಿಕ ಅವರು ಯೇಸುಸ್ವಾಮಿಯ ಮುಖದ ಮೇಲೆ ಉಗುಳಿದರು; ಅವರನ್ನು ಗುದ್ದಿದರು.


ಸರ್ವೇಶ್ವರನ ಚಿತ್ತದಂತೆ ಜಜ್ಜರಿತನಾದ ಹಿಂಸೆಬಾಧೆಗಳಿಂದ ಪಾಪ ಪ್ರಾಯಶ್ಚಿತ್ತಕ್ಕಾಗಿ ತನ್ನ ಪ್ರಾಣವನೆ ಸಮರ್ಪಿಸಿದ. ಈ ಪರಿ ಕಾಣುವನು ತನ್ನ ಸಿರಿಸಂತಾನವನು ಪಡೆಯುವನು ಚಿರಜೀವವನು ತಾನೇ ನೆರವೇರಿಸುವೆನು ಸರ್ವೇಶ್ವರನ ಸಂಕಲ್ಪವನು.


ಪೂರ್ತಿಯಾಗಿ ತಿರಸ್ಕೃತನಾದವನಿಗೆ ಅನ್ಯಜನಾಂಗಗಳಿಗೆ ಅಸಹ್ಯವಾದವನಿಗೆ ದರ್ಪಾಧಿಪತಿಗಳಿಗೆ ದಾಸನಾದವನಿಗೆ, ಇಸ್ರಯೇಲಿನ ವಿಮೋಚಕನು ಹಾಗೂ ಪರಮಪಾವನನು ಆದ ಸರ್ವೇಶ್ವರನು ಹೀಗೆಂದು ಹೇಳುವನು : “ಸರ್ವೇಶ್ವರ ಸ್ವಾಮಿಯ ಪ್ರಾಮಾಣಿಕತೆಯನ್ನೂ ಇಸ್ರಯೇಲಿನ ಪರಮ ಪಾವನನಿಂದ ನೀನು ಆಯ್ಕೆಯಾದುದನ್ನೂ ನಿನ್ನ ಅರಸರುಗಳು ಕಂಡು, ಎದ್ದುನಿಲ್ಲುವರು ನಿನಗೆ ಅಧಿಪತಿಗಳು ಅಡ್ಡಬೀಳುವರು.”


ಅಲ್ಲಿ ಅತೀವ ದುಃಖದಿಂದ ಚಿಂತಾಕ್ರಾಂತರಾಗಿ, “ನನ್ನ ಮನೋವೇದನೆ ಪ್ರಾಣಹಿಂಡುವಷ್ಟು ತೀವ್ರವಾಗಿದೆ; ನೀವು ಇಲ್ಲೇ ಇದ್ದು ಎಚ್ಚರವಾಗಿರಿ,” ಎಂದರು.


ನಿಜವಾಗಿ ವಹಿಸಿಕೊಂಡನಾತ ನಮ್ಮ ಬಾಧೆಗಳನು ಹೊರೆಯಂತೆ ಹೊತ್ತನಾತ ನಮ್ಮ ಕಷ್ಟಸಂಕಟಗಳನು ನಾವು ಭಾವಿಸಿದ್ದಾದರು ಏನು? ಆತ ದೇವರಿಂದ ಬಾಧಿತನೆಂದು ದಂಡನೆಗೆ ಗುರಿಯಾದವನು, ತಿರಸ್ಕೃತನಾದವನೆಂದು!


ಕ್ರಿಸ್ತಯೇಸು ಈ ಭೂಲೋಕದಲ್ಲಿದ್ದಾಗ, ತಮ್ಮನ್ನು ಮರಣದಿಂದ ಕಾಪಾಡಲು‍ ಶಕ್ತರಾದ ದೇವರನ್ನು ಉಚ್ಚಸ್ವರದಿಂದ ಕೂಗುತ್ತಾ ಕಣ್ಣೀರಿಡುತ್ತಾ ವಿನಂತಿಸಿ ಪ್ರಾರ್ಥಿಸಿದರು. ಅವರ ಭಯಭಕ್ತಿಯನ್ನು ನೋಡಿ ದೇವರು ಅವರ ಮೊರೆಯನ್ನು ಆಲಿಸಿದರು.


ಬೆನ್ನುಕೊಟ್ಟೆನು ಹೊಡೆಯುವವರಿಗೆ ಗಡ್ಡ ಒಡ್ಡಿದೆನು ಅದನ್ನು ಕೀಳುವವರಿಗೆ ಮುಖ ಮರೆಮಾಡಲಿಲ್ಲ ಉಗುಳುಬುಗುಳಿಗೆ.


ಈ ಪ್ರಧಾನಯಾಜಕ, ನಮ್ಮ ದೌರ್ಬಲ್ಯಗಳನ್ನು ಕಂಡು ಅನುಕಂಪ ತೋರದೆ ಇರುವವರಲ್ಲ. ಅವರು, ನಮ್ಮಂತೆಯೇ ಇದ್ದುಕೊಂಡು ಎಲ್ಲಾ ವಿಷಯಗಳಲ್ಲೂ ಶೋಧನೆ ಸಂಕಟಗಳನ್ನು ಅನುಭವಿಸಿದರು. ಆದರೆ ಪಾಪವನ್ನು ಮಾತ್ರ ಮಾಡಲಿಲ್ಲ.


ಇದಲ್ಲದೆ, “ನರಪುತ್ರನು ಕಠಿಣವಾದ ಯಾತನೆಯನ್ನು ಅನುಭವಿಸಬೇಕಾಗಿದೆ. ಸಭಾಪ್ರಮುಖರಿಂದಲೂ ಮುಖ್ಯಯಾಜಕರಿಂದಲೂ ಧರ್ಮಶಾಸ್ತ್ರಿಗಳಿಂದಲೂ ಆತನು ತಿರಸ್ಕೃತನಾಗಿ ಕೊಲ್ಲಲ್ಪಡುವನು. ಆದರೆ ಮೂರನೇ ದಿನ ಆತನು ಪುನರುತ್ಥಾನ ಹೊಂದುವನು," ಎಂದು ಅವರಿಗೆ ತಿಳಿಸಿದರು.


ಹಣದಾಶೆಯಿಂದ ಕೂಡಿದ್ದ ಫರಿಸಾಯರು ಈ ಮಾತುಗಳನ್ನೆಲ್ಲಾ ಕೇಳಿ, ಯೇಸುವನ್ನು ಪರಿಹಾಸ್ಯಮಾಡಿದರು.


ಬಾಲಕಿ ಸತ್ತುಹೋಗಿರುವುದನ್ನು ಅರಿತಿದ್ದ ಜನರು ಯೇಸುವನ್ನು ಪರಿಹಾಸ್ಯ ಮಾಡತೊಡಗಿದರು.


ಕೋಲಿನಿಂದ ಅವರ ತಲೆಯ ಮೇಲೆ ಹೊಡೆದು, ಉಗುಳಿ, ಮೊಣಕಾಲೂರಿ ಗೌರವಿಸುವಂತೆ ನಟಿಸಿದರು.


ಅದಕ್ಕೆ ಅವರು, “ ‘ಎಲೀಯನು ಮೊದಲು ಬಂದು ಎಲ್ಲವನ್ನೂ ಸಜ್ಜುಗೊಳಿಸುವನೆಂಬುದೇನೋ ನಿಜ. ಆದರೂ ನರಪುತ್ರನು ಜನರಿಂದ ತೀವ್ರಯಾತನೆಯನ್ನು ಅನುಭವಿಸಿ ಅವರಿಂದ ತಿರಸ್ಕೃತನಾಗಬೇಕು,’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆಯಲ್ಲವೆ; ಇದು ಹೇಗೆ?


ಯೇಸು ಕಣ್ಣೀರಿಟ್ಟರು.


ಆಗ ಯೆಹೂದ್ಯರಲ್ಲಿ ಕೆಲವರು ಯೇಸು ಸ್ವಾಮಿಗೆ, “ನೀನು ಸಮಾರಿಯದವನು. ದೆವ್ವಹಿಡಿದವನು, ಎಂದು ನಾವು ಹೇಳಿದ್ದು ಸರಿಯಾಗಿದೆ ಅಲ್ಲವೆ?” ಎಂದರು.


“ಸ್ವಾಮೀ, ಆ ಮೋಸಗಾರ ಬದುಕಿದ್ದಾಗ, ‘ಮೂರು ದಿನಗಳಾದ ಮೇಲೆ ನಾನು ಪುನರ್ಜೀವಂತನಾಗಿ ಏಳುವೆನು,’ ಎಂದು ಹೇಳಿದ್ದು ನಮಗೆ ಜ್ಞಾಪಕದಲ್ಲಿದೆ.


ಸಿಯೋನ್ ನಗರಿಯೇ, ನಿನ್ನ ಸೇನಾವ್ಯೂಹಗಳನ್ನು ಒಟ್ಟುಗೂಡಿಸು. ಇಗೋ, ಶತ್ರುಗಳು ನಮಗೆ ಮುತ್ತಿಗೆಹಾಕಿದ್ದಾರೆ. ಅವರು ಇಸ್ರಯೇಲಿನ ಅಧಿಪತಿಯ ಕೆನ್ನೆಗೆ ಕೋಲಿನಿಂದ ಹೊಡೆಯುವರು!


ಒಂದೇ ತಿಂಗಳೊಳಗೆ ಮೂವರು ಕುರುಬರನ್ನು ಕೆಲಸದಿಂದ ತೆಗೆದುಹಾಕಿದೆ. ಅನಂತರ ನನಗೆ ಕುರಿಗಳ ಬಗ್ಗೆ ಅಸಹ್ಯವಾಯಿತು. ಕುರಿಗಳು ಸಹ ನನ್ನ ಬಗ್ಗೆ ಬೇಸರಗೊಂಡವು.


“ತೃಪ್ತಿಯಾಗಿ ತಿಂದನು ಯಕೋಬನು, ಕೊಬ್ಬಿಹೋದನು ಆ ಯೆಶೂರನು; ತೊರೆದುಬಿಟ್ಟನು ತನ್ನ ಪೊರೆಬಂಡೆಯನು ಮರೆತುಬಿಟ್ಟನು ತನ್ನ ಸೃಷ್ಟಿಕರ್ತನನು.


ಯೇಸುಸ್ವಾಮಿ ಜೆರುಸಲೇಮ್ ಪಟ್ಟಣಕ್ಕೆ ಇನ್ನೂ ಹತ್ತಿರವಾಗಿ ಬಂದು ಅದನ್ನು ನೋಡಿ,


ದೇವಾ, ನಾ ನೊಂದುಬೆಂದಿಹೆನಯ್ಯಾ I ಉದ್ಧರಿಸಿ ನನ್ನನು ಕಾಪಾಡಯ್ಯಾ II


“ನೋಡಿ, ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ಅಲ್ಲಿ ನರಪುತ್ರನನ್ನು ಮುಖ್ಯಯಾಜಕರ ಮತ್ತು ಧರ್ಮಶಾಸ್ತ್ರಿಗಳ ವಶಕ್ಕೆ ಒಪ್ಪಿಸುವರು. ಆತನು ಮರಣದಂಡನೆಗೆ ಅರ್ಹನೆಂದು ಅವರು ತೀರ್ಮಾನಿಸಿ, ಪರಕೀಯರ ಕೈಗೊಪ್ಪಿಸುವರು.


ಇವರು ಆತನನ್ನು ಪರಿಹಾಸ್ಯಮಾಡುವರು; ಆತನ ಮೇಲೆ ಉಗುಳುವರು; ಕೊರಡೆಗಳಿಂದ ಹೊಡೆಯುವರು; ಅನಂತರ ಕೊಂದುಹಾಕುವರು. ಆತನಾದರೋ ಮೂರು ದಿನದ ಮೇಲೆ ಪುನರುತ್ಥಾನ ಹೊಂದುವನು,” ಎಂದರು.


ಆತನ ಮುಖ ನರಮಾನವರ ಮುಖಕ್ಕಿಂತ ಆತನ ರೂಪ ನರಪುತ್ರರ ರೂಪಕ್ಕಿಂತ ವಿಕಾರಗೊಂಡಿದೆ ನಿಜ; ಆದರೆ ಹಲವರು ನೋಡಿ ಆದರು ಚಕಿತ.


ನಾನಿರುವೆ ಸಮಾಧಿ ಸೇರಲಿರುವವರಂತೆ I ಇರುವೆ ಶಕ್ತಿಯಿಲ್ಲದ ನರಮಾನವರಂತೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು