Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 53:4 - ಕನ್ನಡ ಸತ್ಯವೇದವು C.L. Bible (BSI)

4 ನಿಜವಾಗಿ ವಹಿಸಿಕೊಂಡನಾತ ನಮ್ಮ ಬಾಧೆಗಳನು ಹೊರೆಯಂತೆ ಹೊತ್ತನಾತ ನಮ್ಮ ಕಷ್ಟಸಂಕಟಗಳನು ನಾವು ಭಾವಿಸಿದ್ದಾದರು ಏನು? ಆತ ದೇವರಿಂದ ಬಾಧಿತನೆಂದು ದಂಡನೆಗೆ ಗುರಿಯಾದವನು, ತಿರಸ್ಕೃತನಾದವನೆಂದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಿಜವಾಗಿಯೂ ನಮ್ಮ ವ್ಯಾಧಿಗಳನ್ನು ಸಂಕಷ್ಟವನ್ನು ಅನುಭವಿಸಿದನು; ಅವನು ಹೊತ್ತ ಹೊರೆಯು ನಮ್ಮ ಸಂಕಟವೇ ಹೌದು, ನಾವಾದರೋ ಅವನು ದೇವರಿಂದ ಬಾಧಿತನು, ಪೆಟ್ಟು ತಿಂದವನು, ಕುಗ್ಗಿಸಲ್ಪಟ್ಟವನು ಎಂದು ಭಾವಿಸಿಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಿಜವಾಗಿಯೂ ನಮ್ಮ ಸಂಕಷ್ಟಗಳನ್ನು ಅನುಭವಿಸಿದನು; ಅವನು ಹೊತ್ತ ಹೊರೆಯು ನಮ್ಮ ಸಂಕಟವೇ, ಹೌದು; ನಾವಾದರೋ ಅವನು ದೇವರಿಂದ ಬಾಧಿತನು, ಪೆಟ್ಟು ತಿಂದವನು, ಕುಗ್ಗಿಸಲ್ಪಟ್ಟವನು ಎಂದು ಭಾವಿಸಿಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದರೆ ಆತನು ನಮ್ಮ ಸಂಕಷ್ಟಗಳನ್ನು ತನ್ನ ಮೇಲೆ ಹೊತ್ತುಕೊಂಡನು. ನಮ್ಮ ಬೇನೆಯನ್ನು ಆತನು ಅನುಭವಿಸಿದನು. ದೇವರು ಆತನನ್ನು ಶಿಕ್ಷಿಸಿದ್ದಾನೆ ಎಂದು ನಾವು ನೆನಸಿದೆವು. ಆತನು ಏನೋ ಮಾಡಿದ್ದಕ್ಕಾಗಿ ದೇವರು ಆತನಿಗೆ ಹೊಡೆದನೆಂದು ಭಾವಿಸಿಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಿಶ್ಚಯವಾಗಿಯೂ ಆತನು ನಮ್ಮ ನೋವನ್ನು ತೆಗೆದುಕೊಂಡನು; ಹೌದು, ನಮ್ಮ ದುಃಖಗಳನ್ನು ಸಹ ಹೊತ್ತುಕೊಂಡನು. ಆದರೂ ನಾವು ಆತನನ್ನು ಪೆಟ್ಟು ತಿಂದವನು, ದೇವರಿಂದ ಶಿಕ್ಷೆಹೊಂದಿದವನು, ಬಾಧೆಪಟ್ಟವನು ಎಂದು ಭಾವಿಸಿಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 53:4
19 ತಿಳಿವುಗಳ ಹೋಲಿಕೆ  

ನಾವು ಪಾಪದ ಪಾಲಿಗೆ ಸತ್ತು, ಸತ್ಯಕ್ಕೋಸ್ಕರ ಜೀವಿಸುವಂತೆ ಕ್ರಿಸ್ತಯೇಸು ತಮ್ಮ ದೇಹದಲ್ಲಿ ನಮ್ಮ ಪಾಪಗಳನ್ನು ಹೊತ್ತು ಶಿಲುಬೆಯ ಮರವನ್ನೇರಿದರು. ಅವರ ಗಾಯಗಳಿಂದ ನೀವು ಗುಣಹೊಂದಿದಿರಿ.


ಹೀಗೆ, “ನಮ್ಮ ದುರ್ಬಲತೆಗಳನ್ನು ವಹಿಸಿಕೊಂಡನು; ನಮ್ಮ ರೋಗರುಜಿನಗಳನ್ನು ಆತನೇ ಪರಿಹರಿಸಿದನು,” ಎಂಬ ಯೆಶಾಯನ ಪ್ರವಾದನೆ ಈಡೇರಿತು.


ಮರಕ್ಕೆ ತೂಗುಹಾಕಲಾದ ಪ್ರತಿ ಒಬ್ಬನೂ ಶಾಪಗ್ರಸ್ತನು,” ಎಂದು ಬರೆದಿರುವಂತೆ, ನಮಗೋಸ್ಕರ ಕ್ರಿಸ್ತಯೇಸು ಶಾಪಸ್ವರೂಪಿಯಾಗಿ ಧರ್ಮಶಾಸ್ತ್ರದಲ್ಲಿ ಹೇಳಲಾಗಿರುವ ಶಾಪದಿಂದ ನಮ್ಮನ್ನು ಪಾರುಮಾಡಿದರು.


ಅವರೇ ನಮ್ಮ ಪಾಪಗಳನ್ನು ನಿವಾರಿಸುವ ಪರಿಹಾರ ಬಲಿಯಾಗಿದ್ದಾರೆ. ನಮ್ಮ ಪಾಪಗಳನ್ನು ಮಾತ್ರವಲ್ಲ, ಇಡೀ ಜಗತ್ತಿನ ಪಾಪಗಳನ್ನು ಅವರು ಪರಿಹರಿಸುತ್ತಾರೆ.


ಅಂತೆಯೇ ಕ್ರಿಸ್ತಯೇಸು ನೀತಿವಂತರಾಗಿದ್ದರೂ ಅನೀತಿವಂತರಿಗಾಗಿ ಪ್ರಾಣತ್ಯಾಗಮಾಡಿದರು. ಪಾಪ ನಿವಾರಣಾರ್ಥವಾಗಿ ಒಂದೇ ಸಾರಿಗೆ ಮಾತ್ರವಲ್ಲ, ಎಂದೆಂದಿಗೂ ನಮ್ಮನ್ನು ದೇವರ ಬಳಿಗೆ ಸೇರಿಸಲು ಸತ್ತರು. ದೇಹದಲ್ಲಿ ಅವರು ವಧಿತರಾದರೂ ಆತ್ಮದಲ್ಲಿ ಜೀವಂತರಾದರು.


ಹಾಗೆಯೇ, ಎಲ್ಲಾ ಮಾನವರ ಪಾಪಗಳನ್ನು ಹೊತ್ತು ಹೋಗಲಾಡಿಸಲು ಕ್ರಿಸ್ತಯೇಸು ಒಮ್ಮೆಗೇ ಎಲ್ಲಾ ಕಾಲಕ್ಕೂ ತಮ್ಮನ್ನೇ ಬಲಿಯಾಗಿ ಸಮರ್ಪಿಸಿಕೊಂಡರು. ಅವರು ಮತ್ತೆ ಪ್ರತ್ಯಕ್ಷರಾಗುವರು; ಪಾಪನಿವಾರಣೆ ಮಾಡಲೆಂದು ಅಲ್ಲ, ತಮ್ಮನ್ನು ನಂಬಿ ನಿರೀಕ್ಷಿಸಿಕೊಂಡಿರುವವರನ್ನು ಜೀವೋದ್ಧಾರ ಮಾಡಲೆಂದು.


ಅದಕ್ಕೆ ಯೆಹೂದ್ಯರು, “ನಮಗೊಂದು ಕಾನೂನು ಉಂಟು. ಅದರ ಮೇರೆಗೆ ಇವನು ಸಾಯಲೇಬೇಕು. ಏಕೆಂದರೆ, ತಾನು ದೇವರ ಪುತ್ರನೆಂದು ಹೇಳಿಕೊಂಡಿದ್ದಾನೆ,” ಎಂದು ಉತ್ತರಕೊಟ್ಟರು.


ನೀ ಗಾಯಪಡಿಸಿದವರನು ಪೀಡಿಸುತಿಹರು I ಗಾಯದ ಮೇಲೆ ಬರೆಯೆಳೆಯುತಿಹರು II


ಬಳಿಕ ಪೇತ್ರನನ್ನೂ ಜೆಬೆದಾಯನ ಇಬ್ಬರು ಕುಮಾರರನ್ನೂ ತಮ್ಮೊಂದಿಗೆ ಕರೆದುಕೊಂಡು ಮುಂದಕ್ಕೆಹೋದರು. ಅಲ್ಲಿ ಸ್ವಾಮಿ ಚಿಂತಾಕ್ರಾಂತರಾದರು, ದುಃಖಭರಿತರಾದರು.


ನಮ್ಮ ಪಾಪಗಳ ನಿಮಿತ್ತ ಯೇಸುವನ್ನು ಮರಣಕ್ಕೆ ಗುರಿಪಡಿಸಲಾಯಿತು. ನಮ್ಮನ್ನು ದೇವರೊಡನೆ ಸತ್ಸಂಬಂಧದಲ್ಲಿ ಇರಿಸುವುದಕ್ಕಾಗಿ ಅವರು ಪುನರುತ್ಥಾನ ಹೊಂದಿದರು.


ಯಾವ ಹೋತ ಅಜಾಜೇಲನದೆಂದು ಗೊತ್ತಾಗುವುದೋ ಅದನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ಸಜೀವವಾಗಿಯೇ ನಿಲ್ಲಿಸಿ, ಅದರ ಮೇಲೆ ದೋಷ ಹೊರಿಸಿ, ಮರುಭೂಮಿಗೆ ಅಜಾಜೇಲನಿಗಾಗಿ ಬಿಡಿಸಿಬಿಡಬೇಕು.


ಸರ್ವೇಶ್ವರನ ಚಿತ್ತದಂತೆ ಜಜ್ಜರಿತನಾದ ಹಿಂಸೆಬಾಧೆಗಳಿಂದ ಪಾಪ ಪ್ರಾಯಶ್ಚಿತ್ತಕ್ಕಾಗಿ ತನ್ನ ಪ್ರಾಣವನೆ ಸಮರ್ಪಿಸಿದ. ಈ ಪರಿ ಕಾಣುವನು ತನ್ನ ಸಿರಿಸಂತಾನವನು ಪಡೆಯುವನು ಚಿರಜೀವವನು ತಾನೇ ನೆರವೇರಿಸುವೆನು ಸರ್ವೇಶ್ವರನ ಸಂಕಲ್ಪವನು.


ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ನನ್ನ ಕುರಿಗಾಹಿಗೆ ವಿರುದ್ಧವಾಗಿ, ನನ್ನಾಸಂಗಡಿಗನಿಗೆದುರಾಗಿ, ಓ ಖಡ್ಗವೇ, ಎಚ್ಚರಗೊಳ್ಳು; ಕೊಲ್ಲು ಕುರಿಗಾಹಿಯನು. ಆಗ ಚದರುವುವು ಕುರಿಗಳು, ಕೈಮಾಡಲಿರುವೆ ಮರಿಗಳ ಮೇಲೂ.


ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ;


ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ,


ನನ್ನವರಿಗೇ ನಾನನ್ಯನಾದೆನಯ್ಯಾ I ಒಡ ಹುಟ್ಟಿದವರಿಗೇ ಹೊರಗಿನವನಾದೆನಯ್ಯಾ II


ದಂಡನೆ ಮೇಲೆ ದಂಡನೆಯನು ಅವರಿಗೆ ವಿಧಿಸು I ಅವರು ನಿರಪರಾಧಿಗಳೆಂಬುದನು ತಪ್ಪಿಸು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು