Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 54:1 - ಕನ್ನಡ ಸತ್ಯವೇದವು C.L. Bible (BSI)

1 ಆನಂದ ಗೀತೆಯನು ಹಾಡು ಹೆರದವಳೇ, ಬಂಜೆಯಾಗಿದ್ದವಳೇ; ಉಲ್ಲಾಸದಿಂದ ಅರಚು, ಬೇನೆಯನು ಅನುಭವಿಸದವಳೇ. ‘ಗಂಡನುಳ್ಳವಳಿಗಿಂತ ಹೆಚ್ಚು ಮಕ್ಕಳನ್ನು ಹೆರುವೆ’ ಎಂದು ಹೇಳುತ್ತಾರೆ ಸರ್ವೇಶ್ವರ ಸ್ವಾಮಿ ನಿನಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ಹೆರದವಳೇ, ಬಂಜೆಯೇ, ಹರ್ಷಧ್ವನಿಗೈ! ಪ್ರಸವ ವೇದನೆಯನ್ನು ಅನುಭವಿಸದವಳೇ, ಆನಂದ ಸ್ವರವೆತ್ತಿ ಕೂಗು! ಗಂಡನುಳ್ಳವಳಿಗಿಂತ ಗಂಡಬಿಟ್ಟವಳಿಗೆ ಮಕ್ಕಳು ಹೆಚ್ಚು” ಎಂದು ಯೆಹೋವನು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಹೆರದವಳೇ, ಬಂಜೆಯೇ, ಹರ್ಷಧ್ವನಿಗೈ! ಪ್ರಸವವೇದನೆಯನ್ನನುಭವಿಸದವಳೇ, ಆನಂದ ಸ್ವರವೆತ್ತಿ ಕೂಗು! ಗಂಡನುಳ್ಳವಳಿಗಿಂತ ಗಂಡಬಿಟ್ಟವಳಿಗೆ ಮಕ್ಕಳು ಹೆಚ್ಚು ಎಂದು ಯೆಹೋವನು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಬಂಜೆಯೇ, ಸಂತೋಷಿಸು, ನಿನಗೆ ಮಕ್ಕಳಿಲ್ಲ. ಆದ್ದರಿಂದ ನೀನು ಬಹಳವಾಗಿ ಸಂತೋಷಿಸು. ಯೆಹೋವನು ಹೇಳುವುದೇನೆಂದರೆ, “ಗಂಡ ಬಿಟ್ಟಿರುವ ಹೆಂಗಸಿಗೆ ಮದುವೆಯಾದ ಹೆಂಗಸಿಗಿಂತ ಹೆಚ್ಚು ಮಕ್ಕಳಿರುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಬಂಜೆಯೇ ಹೆರದವಳೇ, ನೀನು ಹರ್ಷಧ್ವನಿಗೈ! ಪ್ರಸವವೇದನೆ ಪಡದವಳೇ, ಸ್ವರವೆತ್ತಿ ಹರ್ಷದಿಂದ ಕೂಗು! ಏಕೆಂದರೆ ಗಂಡನುಳ್ಳವಳಿಗಿಂತ ಗಂಡ ಬಿಟ್ಟವಳಿಗೆ ಮಕ್ಕಳು ಹೆಚ್ಚು,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 54:1
21 ತಿಳಿವುಗಳ ಹೋಲಿಕೆ  

“ಸಂತಾನವಿಲ್ಲದ ಸ್ತ್ರೀಯೇ, ಸಂತೋಷಿಸು ಪ್ರಸವವೇದನೆಯನರಿಯದವಳೇ, ಹರ್ಷೋದ್ಗಾರಮಾಡು ಗಂಡನುಳ್ಳವಳಿಗಿಂತ ಕೈಬಿಟ್ಟವಳ ಸಂತಾನ ಹೆಚ್ಚು.” ಎಂದು ಪವಿತ್ರಗ್ರಂಥದಲ್ಲೇ ಲಿಖಿತವಾಗಿದೆ.


“ಎನ್ನ ಮನದನ್ನೆ” ಎನಿಸಿಕೊಳ್ಳುವೆ ನೀನು “ಸುವಿವಾಹಿತೆ” ಎನಿಸಿಕೊಳ್ಳುವುದು ನಿನ್ನ ನಾಡು. ನಿನ್ನಲ್ಲಿದೆ ಉಲ್ಲಾಸ ಸರ್ವೇಶ್ವರನಿಗೆ ವಿವಾಹವಾಗುವುದಿದೆ ನಿನ್ನ ನಾಡಿಗೆ.


ಉಂಡು ಸುಖದಿಂದಿರುವರು ಹಸಿವುಗೊಂಡವರು ಹೊಟ್ಟೆಗಾಗಿ ಕೂಲಿಮಾಡುತ್ತಿಹರು ತೃಪ್ತರಿದ್ದವರು. ಬಂಜೆ ಹೆರುವಳು ಆರೇಳು ಮಕ್ಕಳನು ಒಬ್ಬಂಟಿಗಳಾಗಿರುವಳು ಮಕ್ಕಳಿವೆ ಎಂದವಳು.


ಸಂತೋಷಿಸಿರಿ, ಆನಂದಿಸಿರಿ, ಸಿಯೋನಿನ ನಿವಾಸಿಗಳೇ, ಹರ್ಷೋದ್ಗಾರ ಮಾಡಿರಿ, ಜೆರುಸಲೇಮಿನ ಜನಗಳೇ, ಇಗೋ, ಬರುತಿಹನು ನಿಮ್ಮ ಅರಸನು ನ್ಯಾಯವಂತನು, ಜಯಶೀಲನು ಆತನು ವಿನಮ್ರನು, ಹೇಸರಗತ್ತೆಯನ್ನೇರಿ ಸಾಗಿಬರುತಿಹನು.


ಬಂಜೆಯಾದವಳನು ಮಕ್ಕಳ ತಾಯಾಗಿಸುವನು I ಆನಂದದಿಂದಾಕೆ ಬೆಳಗಿಸುವಳಾ ಮನೆಯನು II


ಹರ್ಷಧ್ವನಿಗೈ, ಸಿಯೋನ್ ಕುವರಿಯೇ ಘೋಷಿಸು, ಇಸ್ರಯೇಲ್ ದೇಶವೇ, ಹೃತ್ಪೂರ್ವಕವಾಗಿ ಸಂತೋಷಿಸು, ಜೆರುಸಲೇಮ್ ನಗರವೇ.


ಹರ್ಷಧ್ವನಿಗೈ ಆಕಾಶವೇ ಉಲ್ಲಾಸಪಡು ಪೊಡವಿಯೇ ತಟ್ಟಾಡಿರಿ ಬೆಟ್ಟಗುಡ್ಡಗಳೇ ಏಕೆನೆ ಸಂತೈಸಿಹನು ಸರ್ವೇಶ್ವರ ತನ್ನ ಪ್ರಜೆಯನು ಕನಿಕರಿಸಿಹನು ಶೋಷಿತರಾದ ತನ್ನ ಜನರನು.


“ಸರಿದುಕೊ, ನಮಗೆ ಸ್ಥಳಾವಕಾಶ ಸಾಲದು” ಎಂದು ಪೇಳ್ವರು ನಿನ್ನ ಕಿವಿಯೊಳು ಮಕ್ಕಳು ನೀ ಪರದೇಶಿಯಾಗಿದ್ದಾಗ ನಿನಗೆ ಹುಟ್ಟಿದಾ ಮಕ್ಕಳು.


ಜಯ ಜಯಕಾರ ಮಾಡು ಓ ಆಕಾಶವೇ, ಜಯಘೋಷ ಮಾಡು ಭೂ ತಳವೇ, ಹರ್ಷಧ್ವನಿಗೈಯಿರಿ ಬೆಟ್ಟಗುಡ್ಡಗಳೇ ವನವೃಕ್ಷಗಳೇ. ವಿಮೋಚಿಸಿದನು ಸರ್ವೇಶ್ವರ ಯಕೋಬನನು, ಇಸ್ರಯೇಲನ್ನು ರಕ್ಷಿಸಿ ಪ್ರಚಾರಗೊಳಿಸಿದನು ತನ್ನ ಮಹಿಮೆಯನು.


ಇನ್ನೂ ಸ್ತನ ಬಾರದ ತಂಗಿ ನಮಗಿದ್ದಾಳೆ ನಾವೇನು ಮಾಡೋಣ ಅವಳನ್ನು ವರಿಸಲು ಬಂದರೆ?


ಸಾರಳು ಇಂತೆಂದುಕೊಂಡಳು: “ತಂದಿಹನಿದೋ ಎನಗೊಂದು ‘ನಗು’ವನು ಆ ದೇವನು, ನಕ್ಕು ನಲಿವರೆನ್ನೊಡನೆ ಇದನು ಕೇಳುವವರೆಲ್ಲರು.”


ಸಿಯೋನಿನ ನಿವಾಸಿಗಳೇ, ಹಾಡಿರಿ, ಮಾಡಿರಿ ಭಜನ ನಿಮ್ಮ ಮಧ್ಯೆಯಿರುವ ಆ ಘನವಂತನ ಇಸ್ರಯೇಲಿನಾ ಸ್ವಾಮಿ ಪರಮಪಾವನ.”


ಆರ್ಭಟಿಸುವರು ಅಳಿದುಳಿದವರು ಆನಂದದಿಂದ, ಕೊಂಡಾಡುವರು ಸರ್ವೇಶ್ವರನ ಮಹಿಮೆಯನು ಪಡುವಣದಿಂದ,


ಪಾಳುಬಿದ್ದ ನಿನ್ನ ಪ್ರದೇಶಗಳು ಬೀಳುಬಿದ್ದ ನಿನ್ನ ಭೂಮಿಗಳು ಕೆಡವಿಬಿದ್ದ ನಿನ್ನ ಬೀಡುಗಳು ಕಿಕ್ಕಿರಿದಾಗುವುವು ನಿನ್ನ ನಿವಾಸಿಗಳಿಗೆ; ನಿನ್ನ ಕಬಳಿಸಿದವರು ದೂರವಾಗುವರು ನಿನಗೆ.


“ ‘ಪ್ರಸವವೇದನೆಗೆ ಮುಂಚೆಯೇ ಹೆರಿಗೆಯಾಯಿತು; ಪ್ರಸವವೇದನೆ ಪಡುವುದರೊಳಗೆ ಗಂಡನ್ನು ಹೆತ್ತಳು’.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು