Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 54:10 - ಕನ್ನಡ ಸತ್ಯವೇದವು C.L. Bible (BSI)

10 ಬಿರುಕುಬಿಟ್ಟಾವು ಬೆಟ್ಟಗಳು, ಕದಲಿಯಾವು ಗುಡ್ಡಗಳು, ನನ್ನ ಅಚಲ ಪ್ರೀತಿಯಾದರೊ ಬಿಟ್ಟುಹೋಗದು ನಿನ್ನನು. ಶಾಂತಿಸಮಾಧಾನದ ನನ್ನೀ ಒಪ್ಪಂದವು ಕದಲದು. ನಿನ್ನ ಮೇಲೆ ಕರುಣೆಯಿಟ್ಟಿರುವ ಸರ್ವೇಶ್ವರನ ನುಡಿಯಿದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಬೆಟ್ಟಗಳು ಸ್ಥಳವನ್ನು ಬಿಟ್ಟುಹೋದಾವು, ಗುಡ್ಡಗಳು ಕದಲಿಯಾವು; ಆದರೆ ನನ್ನ ಕೃಪೆಯು ನಿನ್ನನ್ನು ಬಿಟ್ಟುಹೋಗದು, ಸಮಾಧಾನದ ನನ್ನ ಒಪ್ಪಂದವು ಕದಲದು ಎಂದು ನಿನ್ನನ್ನು ಕರುಣಿಸುವ ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಬೆಟ್ಟಗಳು ಸ್ಥಳವನ್ನು ಬಿಟ್ಟುಹೋದಾವು, ಗುಡ್ಡಗಳು ಕದಲಿಯಾವು; ಆದರೆ ನನ್ನ ಕೃಪೆಯು ನಿನ್ನನ್ನು ಬಿಟ್ಟುಹೋಗದು, ಸಮಾಧಾನದ ನನ್ನ ಒಪ್ಪಂದವು ಕದಲದು ಎಂದು ನಿನ್ನನ್ನು ಕರುಣಿಸುವ ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೆಹೋವನು ಹೇಳುವುದೇನೆಂದರೆ, “ಪರ್ವತಗಳು ಇಲ್ಲದೆ ಹೋದರೂ ಬೆಟ್ಟಗಳು ಧೂಳಾದರೂ ನನ್ನ ಕೃಪೆಯು ನಿನ್ನನ್ನು ಎಂದಿಗೂ ತೊರೆಯದು. ನಾನು ನಿನ್ನೊಂದಿಗೆ ನಿತ್ಯಕಾಲದ ಸಮಾಧಾನದಲ್ಲಿ ಇರುವೆನು.” ಯೆಹೋವನು ನಿನಗೆ ಕರುಣೆಯನ್ನು ತೋರುವನು. ಈ ಸಂಗತಿಗಳನ್ನು ಆತನೇ ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಪರ್ವತಗಳು ಸ್ಥಳವನ್ನು ಬಿಟ್ಟು ಹೋದರೂ, ಬೆಟ್ಟಗಳು ಕದಲಿ ಹೋದರೂ, ನನ್ನ ಕುಂದದ ಪ್ರೀತಿಯು ನಿನ್ನನ್ನು ಬಿಟ್ಟು ಹೋಗದು, ನನ್ನ ಸಮಾಧಾನದ ಒಡಂಬಡಿಕೆಯು ನಿನ್ನನ್ನು ಬಿಟ್ಟು ಕದಲದು,” ಎಂದು ನಿನ್ನನ್ನು ಕರುಣಿಸುವ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 54:10
33 ತಿಳಿವುಗಳ ಹೋಲಿಕೆ  

ಕಡಲಲ್ಲಿ ಗುಡ್ಡಗಳು ಮುಳುಗಿದರೂ ದಿಗಿಲಿಲ್ಲ I ಪೊಡವಿ ಕಂಪಿಸಿದರು ನಮಗೇನು ಭಯವಿಲ್ಲ II


ಭೂಮ್ಯಾಕಾಶಗಳು ಗತಿಸಿಹೋಗುವುವು; ಆದರೆ ನನ್ನ ಮಾತುಗಳು ಶಾಶ್ವತವಾಗಿ ನಿಲ್ಲುವುವು.


ದೇವರು ತಾವೇ ನೀಡುವ ವರಗಳನ್ನಾಗಲಿ, ಕೊಡುವ ಕರೆಯನ್ನಾಗಲಿ ಹಿಂತೆಗೆದುಕೊಳ್ಳುವವರಲ್ಲ.


ಕಿವಿಯನ್ನಿತ್ತ ತಿರುಗಿಸಿ ಬನ್ನಿ ನನ್ನ ಬಳಿಗೆ, ಬದುಕಿಬಾಳುವಿರಿ ನೀವು ಕಿವಿಗೊಟ್ಟರೆನಗೆ. ದಾವೀದನಿಗೆ ವಾಗ್ದಾನವಿತ್ತ ವರವ ಈವೆ ನಿಮಗೆ ಮಾಡಿಕೊಳ್ಳುವೆ-ಚಿರವಾದ ಒಡಂಬಡಿಕೆಯನು ನಿಮ್ಮೊಂದಿಗೆ.


“ನಾನು ಲೇವಿಯರೊಂದಿಗೆ ಮಾಡಿಕೊಂಡ ಒಡಂಬಡಿಕೆ ಜೀವದಾತ ಹಾಗು ಬದುಕಿನಲ್ಲಿ ಶಾಂತಿ ತರುವಂಥ ಒಡಂಬಡಿಕೆ. ಅವರು ಭಯಭಕ್ತಿಯಿಂದ ಬಾಳಲೆಂದೇ ನಾನು ಅದನ್ನು ಅವರಿಗೆ ವಿಧಿಸಿದ್ದು. ಅಂತೆಯೇ ಹಿಂದೆ ಅವರು ನನ್ನಲ್ಲಿ ಭಯಭಕ್ತಿಯಿಟ್ಟು ನಡೆದುಕೊಂಡರು; ನನ್ನ ನಾಮಕ್ಕೆ ಅಂಜಿ ಬಾಳಿದರು.


ತಟ್ಟನೆ ಉಕ್ಕಿ ಹರಿಯುವ ಕೋಪದಿಂದ ಕ್ಷಣಮಾತ್ರ ಮುಖಮರೆಸಿಕೊಂಡೆ ನಿನ್ನಿಂದ ಕರುಣಿಸುವೆನು ನಿನ್ನನು ಶಾಶ್ವತ ಕೃಪೆಯಿಂದ.” ಇಂತೆನ್ನುತಿಹನು ನಿನ್ನ ಉದ್ಧಾರಕ ಸರ್ವೇಶ್ವರ.


ಇರದು ಅವರಿಗೆ ಹಸಿವು ಬಾಯಾರಿಕೆ ಬಡಿಯವು ಅವರಿಗೆ ಬಿಸಿಲುಬೇಗೆ. ನಡೆಸುವೆನು ನೀರುಕ್ಕುವ ಚಿಲುಮೆಗಳ ಬಳಿಗೆ ಕರುಣಾಕರನು ದಾರಿತೋರಿಸುವನು ಅವರಿಗೆ.


ಹೌದು, ಸರ್ವೇಶ್ವರನ ಸನ್ನಿಧಿಯಲಿ ನನ್ನ ಮನೆತನ ಸುಸ್ಥಿರ ಆತನೊಂದಿಗೆ ನಾ ಮಾಡಿಲ್ಲವೆ ಚಿರವಾದ ಒಪ್ಪಂದ? ಅದೆಲ್ಲದರಲು ಸುವ್ಯವಸ್ಥಿತ, ಅದೆಂದಿಗೂ ನಿರ್ಭೀತ. ಆತನೇ ನನ್ನುದ್ಧಾರಕ್ಕೆ ಮೂಲಾಧಾರ ನನ್ನ ಆಶೆ ಆಕಾಂಕ್ಷೆಗಳ ಪೂರೈಸುವಾತ.


ಆಗ ಅವರೇ ನಮ್ಮನ್ನು ಉದ್ಧರಿಸಿದರು. ನಮ್ಮ ಸ್ವಂತ ಪುಣ್ಯಕಾರ್ಯಗಳು ನಮಗೆ ಈ ಉದ್ಧಾರವನ್ನು ತರಲಿಲ್ಲ. ಪುನರ್ಜನ್ಮವನ್ನು ಸೂಚಿಸುವ ಸ್ನಾನ ಹಾಗೂ ನೂತನ ಜೀವವನ್ನೀಯುವ ಪವಿತ್ರಾತ್ಮ ಈ ಮೂಲಕ ಅವರೇ ನಮ್ಮನ್ನು ಕರುಣೆಯಿಂದ ಉದ್ಧಾರಮಾಡಿದರು.


ನಾನು ನಿನಗೆ ಹೇಳುತ್ತೇನೆ, ಕೇಳು: “ನಿನ್ನ ಹೆಸರು ಪೇತ್ರ! ಈ ಬಂಡೆಯ ಮೇಲೆ ನನ್ನ ಧರ್ಮಸಭೆಯನ್ನು ಕಟ್ಟುವೆನು, ಪಾತಾಳಲೋಕದ ಶಕ್ತಿಯು ಅದನ್ನು ಎಂದಿಗೂ ಜಯಿಸಲಾರದು.


ಭೂಮ್ಯಾಕಾಶಗಳು ಉಳಿದಿರುವ ತನಕ ಧರ್ಮಶಾಸ್ತ್ರವೆಲ್ಲ ನೆರವೇರುವುದೇ ಹೊರತು ಅದರಲ್ಲಿ ಒಂದು ಚಿಕ್ಕ ಅಕ್ಷರವಾಗಲಿ, ಚುಕ್ಕೆಯಾಗಲಿ ನಿರರ್ಥಕವಾಗದೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


“ಇನ್ನೂ ಒಂದು ಸಾರಿ,” ಎಂಬ ಈ ಮಾತು ಸೃಷ್ಟಿಸಲಾದ ವಸ್ತುಗಳನ್ನು ಕದಲಿಸಿ ಕಿತ್ತುಹಾಕಲಾಗುವುದು ಎಂಬುದನ್ನು ಸೂಚಿಸುತ್ತದೆ. ಆಗ, ಕದಲಿಸಲಾಗದ ವಸ್ತುಗಳೆಲ್ಲಾ ಸ್ಥಿರವಾಗಿ ಉಳಿಯುತ್ತವೆ.


ಆಕಾಶವು ಸುರುಳಿಯಂತೆ ಸುತ್ತಿಕೊಂಡು ಕಣ್ಮರೆಯಾಯಿತು. ಎಲ್ಲಾ ಪರ್ವತಗಳೂ ದ್ವೀಪಗಳೂ ತಮ್ಮ ತಮ್ಮ ಸ್ಥಳಗಳಿಂದ ಚಲಿಸಿದವು.


ಆದಕಾರಣ ನಾನು ಅವನ ಸಂಗಡ ಸಮಾಧಾನದ ಒಪ್ಪಂದವನ್ನು ಮಾಡಿಕೊಳ್ಳುತ್ತೇನೆಂದು ತಿಳಿಸು.


ನೀನಾದರೋ ಉಳಿದಿರುವೆ, ಅವೋ ಅಳಿದುಹೋಗುವುವು I ಹಳೆಯದಾಗುತ್ತವೆ ಬಟ್ಟೆಯಂತೆ ಅವೆಲ್ಲವು I ಉಡುಪಿನಂತೆ ಬದಲಿಸುತ್ತ, ಮಾರ್ಪಡುತ್ತವೆ ಅವು II


ಮಗುವೊಂದು ಹುಟ್ಟಿತೆಮಗೆ ವರಪುತ್ರನನು ಕೊಟ್ಟರೆಮಗೆ. ಆತನ ಕೈಯಲ್ಲಿಹುದು ರಾಜ್ಯಾಡಳಿತ ‘ಅದ್ಭುತಶಾಲಿ’, ಮಂತ್ರಿಶ್ರೇಷ್ಠ’ ‘ಪರಾಕ್ರಮದೇವ’, ‘ಅನಂತ ಪಿತ’, ‘ಶಾಂತಿ ನೃಪ’ - ಇವು ಆತನ ನಾಮಾಂಕಿತ.


ಬಿಟ್ಟುಬಿಡಲಿ ದುಷ್ಟನು ತನ್ನ ದುರ್ಮಾರ್ಗವನು ತೊರೆದುಬಿಡಲಿ ದುರುಳನು ದುರಾಲೋಚನೆಗಳನು. ಹಿಂದಿರುಗಿ ಬರಲಿ ಸರ್ವೇಶ್ವರನ ಬಳಿಗೆ ಕರುಣೆ ತೋರುವನು ಆತನು ಅವನಿಗೆ. ಆಶ್ರಯಪಡೆಯಲಿ ಅವನು ನಮ್ಮ ದೇವರಿಂದ ಕ್ಷಮಿಸುವನಾತನು ಮಹಾಕೃಪೆಯಿಂದ.


ಹೊರಡುವಿರಿ ನೀವು ಆನಂದಭರಿತರಾಗಿ ಬರುವಿರಿ ನೆಮ್ಮದಿಯಿಂದ ಸಾಲಾಗಿ. ನಿಮ್ಮ ಮುಂದೆ ತಟ್ಟಾಡುವುವು ಬೆಟ್ಟಗುಡ್ಡಗಳು ಚಪ್ಪಾಳೆ ಹೊಡೆಯುವುವು ಅಡವಿಯ ಗಿಡಮರಗಳು.


ಅವರೊಡನೆ ನಾನು ಮಾಡಿಕೊಳ್ಳುವ ಒಡಂಬಡಿಕೆ ಇದೇ: ನಿಮ್ಮ ಮೇಲೆ ನೆಲೆಸಿರುವ ನನ್ನ ಆತ್ಮವೂ ಮತ್ತು ನಿಮ್ಮ ಬಾಯಲ್ಲಿ ನಾನಿಟ್ಟಿರುವ ವಾಕ್ಯಗಳೂ ನಿಮ್ಮ ಬಾಯಿಂದಾಗಲಿ, ನಿಮ್ಮ ಸಂತತಿಯ ಬಾಯಿಂದಾಗಲಿ, ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ, ಇಂದಿನಿಂದ ಎಂದಿಗೂ ತೊಲಗುವುದಿಲ್ಲ.” ಇದು ಸರ್ವೇಶ್ವರ ಸ್ವಾಮಿಯ ನುಡಿ.


“ಸರ್ವೇಶ್ವರ ಆದ ನಾನು ನ್ಯಾಯಪ್ರಿಯ. ಸುಲಿಗೆ ಅನ್ಯಾಯ, ನನಗೆ ಅಸಹ್ಯ. ಪ್ರಾಮಾಣಿಕವಾಗಿ ನೀಡುವೆನು ಇವರಿಗೆ ಪ್ರತಿಫಲ ಮಾಡಿಕೊಳ್ಳುವೆನು ಇವರೊಡನೆ ಅಳಿಯದ ಒಪ್ಪಂದ.


ಸ್ಮರಿಸುವೆನು ಸರ್ವೇಶ್ವರನ ಸ್ತುತ್ಯಕಾರ್ಯಗಳನು ಆತನ ಅಚಲಪ್ರೀತಿಯನು, ಕೃಪಾತಿಶಯಗಳನು. ಹೊಗಳುವೆನು ಆತನೆಮಗೆ ಅನುಗ್ರಹಿಸಿದ ಎಲ್ಲ ವರದಾನಗಳಿಗಾಗಿ ಇಸ್ರಯೇಲ್ ವಂಶಜರಿಗೆ ಮಾಡಿದ ಮಹೋಪಕಾರಗಳಿಗಾಗಿ.


ಆತನ ಮಾತು ಇವು - ಈ ಪ್ರಕೃತಿ ನಿಯಮ ನನ್ನ ಪರಾಂಬರಿಕೆಯಲ್ಲಿ ಇರುವತನಕ ಒಂದು ರಾಷ್ಟ್ರವಾಗಿ ಉಳಿವುದು ಇಸ್ರಯೇಲ್ ಸಂತಾನ.


“ಸರ್ವೇಶ್ವರನಾದ ನನ್ನ ನುಡಿ ಇದು: ಹಗಲಿರುಳೆಂಬ ನನ್ನ ನಿಬಂಧನೆಗಳನ್ನು ನಿಲ್ಲಿಸಿ, ಹಗಲನ್ನು ಮತ್ತು ಇರುಳನ್ನು ಅದರದರ ಸಮಯದಲ್ಲಿ ಉಂಟಾಗದಂತೆ ಮಾಡಲು ನಿಮ್ಮಿಂದಾದೀತೆ?


ಹೀಗೆ ನಾನು ನಿನ್ನ ಮೇಲಣ ಸಿಟ್ಟನ್ನು ತೀರಿಸುವೆನು. ಆಗ ನನ್ನ ರೋಷವು ನಿನ್ನಿಂದ ದೂರವಾಗುವುದು; ನಾನು ಶಾಂತನಾಗಿ ಇನ್ನು ಮೇಲೆ ಕೋಪಗೊಳ್ಳೆನು.


ಸಮುದ್ರ ಭೋರ್ಗರೆದರೇನು? ನೊರೆಕಾರಿದರೇನು? I ಅದರೊಡನೆ ಪರ್ವತಗಳು ಅಲುಗಾಡಿದರೇನು? II ನಮ್ಮ ಕಡೆಗಿರುವನು ಸೇನಾಧೀಶ್ವರ ಪ್ರಭುವು I ಯಕೋಬ ಕುಲದೇವನು ನಮಗಾಶ್ರಯ ದುರ್ಗವು II


ಹೆತ್ತ ತಾಯಿಗೆ ತನ್ನ ಕಂದನ ಪ್ರೀತಿ ಬತ್ತಿಹೋಗುವುದುಂಟೆ? ಆಕೆ ತನ್ನ ಮೊಲೆಗೂಸನು ಮರೆತುಬಿಡುವುದುಂಟೆ? ಒಂದು ವೇಳೆ ಆಕೆ ಮರೆತರೂ ನಾ ನಿನ್ನನು ಮರೆಯೆ.


ನಾನು ಅವರೊಂದಿಗೆ ಶಾಂತಿಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ದುಷ್ಟಮೃಗಗಳು ನಾಡಿನಲ್ಲಿ ಇನ್ನಿರದಂತೆ ಮಾಡುವೆನು; ನನ್ನ ಜನರು ಕಾಡಿನಲ್ಲಿ ನಿರ್ಭಯವಾಗಿ ವಾಸಿಸುವರು, ಅರಣ್ಯದಲ್ಲಿ ಹಾಯಾಗಿ ನಿದ್ರಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು