Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 54:9 - ಕನ್ನಡ ಸತ್ಯವೇದವು C.L. Bible (BSI)

9 “ಶಪಥಮಾಡಿದೆ ನಾನು ನೋಹನ ದಿನದಂದು: ಜಲಪ್ರಳಯವು ಭೂಮಿಯನು ಇ‍ನ್ನು ಮುಳುಗಿಸದೆಂದು. ಶಪಥಮಾಡುವೆ ಈಗ ‘ಕೋಪಮಾಡೆನು’ ಎಂದು ‘ಇನ್ನು ನಿನ್ನನು ಗದರಿಸೆನು’ ಎಂದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ನಿನ್ನನ್ನು ತ್ಯಜಿಸಿದ್ದು ನನಗೆ ನೋಹನ ಕಾಲದ ಜಲಪ್ರಳಯದಂತಿದೆ; ಇಂತಹ ಜಲಪ್ರಳಯವು ಭೂಮಿಯನ್ನು ಪುನಃ ಆವರಿಸುವುದಿಲ್ಲ ಎಂದು ನಾನು ಹೇಗೆ ಪ್ರಮಾಣಮಾಡಿದೆನೋ ಹಾಗೆಯೇ ನಾನು ನಿನ್ನ ಮೇಲೆ ಇನ್ನು ಕೋಪಮಾಡುವುದಿಲ್ಲ, ಗದರಿಸುವುದಿಲ್ಲ ಎಂದು ಈಗ ಪ್ರಮಾಣಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಿನ್ನನ್ನು ತ್ಯಜಿಸಿದ್ದು ನನಗೆ ನೋಹನ ಕಾಲದ ಜಲಪ್ರಲಯದಂತಿದೆ; ಇಂಥಾ ಜಲಪ್ರಲಯವು ಭೂವಿುಯನ್ನು ತಿರಿಗಿ ಆವರಿಸುವದಿಲ್ಲವೆಂದು ನಾನು ಹೇಗೆ ಪ್ರಮಾಣಮಾಡಿದೆನೋ ಹಾಗೆಯೇ ನಾನು ನಿನ್ನ ಮೇಲೆ ಇನ್ನು ಕೋಪಮಾಡುವದಿಲ್ಲ, ಗದರಿಸುವದಿಲ್ಲ ಎಂದು ಈಗ ಪ್ರಮಾಣಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದೇವರು ಹೇಳುವುದೇನೆಂದರೆ: “ನೋಹನ ಕಾಲದಲ್ಲಿ ನಾನು ಲೋಕವನ್ನು ಜಲಪ್ರವಾಹದ ಮೂಲಕ ಶಿಕ್ಷಿಸಿದ್ದನ್ನು ಜ್ಞಾಪಕಮಾಡಿಕೊ. ಆ ಬಳಿಕ ನಾನು ನೋಹನಿಗೆ ಪ್ರಪಂಚವನ್ನು ಜಲಪ್ರವಾಹದಿಂದ ಇನ್ನೆಂದಿಗೂ ನಾಶಪಡಿಸುವದಿಲ್ಲ ಎಂದು ಪ್ರಮಾಣ ಮಾಡಿದೆನು. ಅದೇ ರೀತಿಯಲ್ಲಿ ಇನ್ನೆಂದಿಗೂ ನಿನ್ನ ಮೇಲೆ ಕೋಪಗೊಳ್ಳುವುದಿಲ್ಲವೆಂತಲೂ ನಿನ್ನನ್ನು ಗದರಿಸುವುದಿಲ್ಲವೆಂತಲೂ ನಾನು ನಿನಗೆ ಪ್ರಮಾಣ ಮಾಡುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಇದು ನನಗೆ ನೋಹನ ಕಾಲದ ಪ್ರಳಯದಂತಿದೆ. ನೋಹನ ಕಾಲದ ಪ್ರಳಯವು ಪುನಃ ಭೂಮಿಯನ್ನು ಆವರಿಸುವುದಿಲ್ಲ ಎಂದು ನಾನು ಪ್ರಮಾಣ ಮಾಡಿದ ಹಾಗೆಯೇ, ಇನ್ನು ನಿನ್ನ ಮೇಲೆ ಕೋಪಗೊಳ್ಳುವುದಿಲ್ಲ, ನಿನ್ನನ್ನು ಗದರಿಸುವುದಿಲ್ಲ, ಎಂದು ಪ್ರಮಾಣ ಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 54:9
18 ತಿಳಿವುಗಳ ಹೋಲಿಕೆ  

ಆ ದಿನದಂದು ಹಾಡುವುದು ಜನತೆ ಹೀಗೆಂದು : “ಹೇ ಸರ್ವೇಶ್ವರಾ, ನಿನಗೆನ್ನ ವಂದನ; ನಿನಗಿತ್ತು ಎನ್ನ ಮೇಲೆ ಕೋಪ ಮನ. ಆದರೆ ಅದೀಗ ಆಗಿದೆ ಶಮನ, ಬಂದಿತೆನ್ನ ಮನಕೆ ಸಾಂತ್ವನ.


ಗಮಗಮಿಸುವ ಅದರ ಸುಗಂಧವು ಸ್ವಾಮಿಯನ್ನು ಮುಟ್ಟಿತು. ಅವರು ಮನದಲ್ಲೆ ಹೀಗೆಂದುಕೊಂಡರು: “ಇನ್ನು ಮೇಲೆ ನಾನು ಮನುಷ್ಯರ ನಿಮಿತ್ತ ಭೂಮಿಯನ್ನು ಶಪಿಸುವುದಿಲ್ಲ. ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದು. ಈಗ ಮಾಡಿದಂತೆ ಇನ್ನು ಮೇಲೆ ಎಲ್ಲ ಜೀವಿಗಳನ್ನು ನಾನು ಸಂಹರಿಸುವುದಿಲ್ಲ.


ನಾನು ಸಿದ್ಧಪಡಿಸುವ ಆ ಔತಣದಲ್ಲಿ ಕುದುರೆ, ರಾಹುತ ಶೂರ, ಸಕಲವಿಧವಾದ ಯುದ್ಧವೀರರನ್ನು ಯಥೇಚ್ಛವಾಗಿ ಭಕ್ಷಿಸುವಿರಿ; ಇದು ಸರ್ವೇಶ್ವರನಾದ ದೇವರ ನುಡಿ.”


ಅಂತೆಯೇ, ನನ್ನ ಬಾಯಿಂದ ಹೊರಡುವ ಮಾತು ನನ್ನ ಇಷ್ಟಾರ್ಥವನು ನೆರವೇರಿಸಿದ ಹೊರತು, ನನ್ನ ಉದ್ದೇಶವನು ಕೈಗೂಡಿಸಿದ ಹೊರತು. ನನ್ನ ಬಳಿಗೆ ವ್ಯರ್ಥವಾಗಿ ಹಿಂದಿರುಗದು.


ಗೊತ್ತುಮಾಡಿರುವೆ ಆ ಜಲರಾಶಿಗೆ ಮೇರೆಯನು I ಅವು ಮತ್ತೆ ಮುಚ್ಚದಂತೆ ಮಾಡಿರುವೆ ಭೂಮಿಯನು II


ಕಣ್ಣೆತ್ತಿ ಸುತ್ತಮುತ್ತಲು ನೋಡು : ಬರುತಿಹರು ನಿನ್ನ ಬಳಿಗೆ ಅವರೆಲ್ಲರು ಕೂಡಿಕೊಂಡು. ನನ್ನ ಜೀವದಾಣೆ ನಿನಗೆ ಹೇಳುವುದೇನೆಂದರೆ : ‘ವಧುವು ಒಡವೆಗಳನು ಧರಿಸಿಕೊಳ್ಳುವಂತೆ ಅವರಾಗುವರು ನಿನಗೆ ಆಭರಣಗಳಂತೆ.’


ತನ್ನ ಬಲಗೈ ಮೇಲೆ, ಭುಜಬಲದ ಮೇಲೆ ಸರ್ವೇಶ್ವರನಿಟ್ಟ ಆಣೆ : “ಕೊಡೆನಿನ್ನು ನಿನ್ನ ದವಸಧಾನ್ಯವನು ಶತ್ರುಗಳ ಆಹಾರಕ್ಕೆ ನಿನ್ನ ದುಡಿಮೆಯ ದ್ರಾಕ್ಷಾರಸವನು ಅನ್ಯಜನರು ಕುಡಿಯಲಿಕ್ಕೆ.


ಹೀಗೆ ನಾನು ನಿನ್ನ ಮೇಲಣ ಸಿಟ್ಟನ್ನು ತೀರಿಸುವೆನು. ಆಗ ನನ್ನ ರೋಷವು ನಿನ್ನಿಂದ ದೂರವಾಗುವುದು; ನಾನು ಶಾಂತನಾಗಿ ಇನ್ನು ಮೇಲೆ ಕೋಪಗೊಳ್ಳೆನು.


ಇನ್ನೆಂದಿಗೂ ಅವರಿಗೆ ವಿಮುಖನಾಗೆನು; ಇಸ್ರಯೇಲ್ ವಂಶದ ಮೇಲೆ ನನ್ನ ಆತ್ಮವನ್ನು ಸುರಿಸಿದ್ದೇನೆ; ಇದು ಸರ್ವೇಶ್ವರನಾದ ದೇವರ ನುಡಿ.”


ಮರೆತುಬಿಡುವೆ ಆಗ ನಿನ್ನ ಕಷ್ಟದುಃಖವನ್ನು ನಿನ್ನ ನೆನಪಿಗೆ ಅದು ಹರಿದುಹೋದ ನೀರು.


ಆಕಾಶಮಂಡಲವನು ನೋಡಿ ಕಣ್ಣೆತ್ತಿ ಭೂಮಂಡಲದತ್ತ ನೋಡಿ ಕೆಳಗೆ ದಿಟ್ಟಿಸಿ. ಆಕಾಶ ಚದರಿಹೋಗುವುದು ಹೊಗೆಯಂತೆ ಭೂಮಿ ಹರಿದುಹೋಗುವುದು ಬಟ್ಟೆಯಂತೆ ಸಾಯುವರು ಭೂನಿವಾಸಿಗಳು ಅದರಂತೆ. ನಾ ಕೊಡುವ ವಿಮೋಚನೆಯೋ ನಿಲ್ಲುವುದು ಶಾಶ್ವತವಾಗಿ ನಾ ನೀಡುವ ಮುಕ್ತಿಯೋ ಅಳಿದುಹೋಗದು ಭಂಗವಾಗಿ.


ನುಸಿ ಅವರನ್ನು ತಿಂದುಹಾಕುವುದು ಬಟ್ಟೆಯಂತೆ ಹುಳು ಅವರನ್ನು ಮೆದ್ದುಬಿಡುವುದು ಉಣ್ಣೆಯಂತೆ. ನಾ ನೀಡುವ ಮುಕ್ತಿಯೋ ನಿಲ್ಲುವುದು ಶಾಶ್ವತವಾಗಿ ನಾ ಕೊಡುವ ವಿಮೋಚನೆ ಸದಾ ಇರುವುದು ನೆಲೆಯಾಗಿ.”


ಕೇಳು, ಸ್ವಾಮಿ ಸರ್ವೇಶ್ವರ ಆದ ನಾ ಹೇಳುವ ಮಾತನು : ತನ್ನ ಜನರ ಪರವಾಗಿ ವಾದಿಸುವ ನಿನ್ನ ದೇವರು ನಾನು; “ಇಗೋ, ಅಮಲೇರಿಸುವ ಪಾತ್ರೆಯನು ನನ್ನ ಕೋಪದಿಂದ ತುಂಬಿತುಳುಕುವಾ ಕೊಡವನು ನೀ ಕುಡಿಯಬಾರದೆಂದು ನಿನ್ನಿಂದ ತೆಗೆದುಬಿಡುವೆನು.


ಮೇಲಿನ ಆಕಾಶಮಂಡಲವನ್ನು ಅಳೆಯಬಹುದಾದರೆ ಕೆಳಗಿನ ಭೂಮಂಡಲದ ವಿಸ್ತಾರವನ್ನು ಪರೀಕ್ಷಿಸಬಹುದಾದರೆ ಆಗ ಮಾತ್ರ ಅದರ ದುಷ್ಕೃತ್ಯಗಳನ್ನು ಮುನ್ನಿಟ್ಟು ಇಸ್ರಯೇಲ್ ವಂಶವನ್ನು ನಾನು ನಿರಾಕರಿಸಿಬಿಡಲು ಸಾಧ್ಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು