Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 55:10 - ಕನ್ನಡ ಸತ್ಯವೇದವು C.L. Bible (BSI)

10 ಮಳೆಯೂ ಹಿಮವೂ ಆಕಾಶಮಂಡಲದಿಂದಿಳಿದು ಬಂದು ತೋಯಿಸಿ, ಹಸಿರುಗೊಳಿಸಿ, ಹುಲುಸು ಮಾಡುತ್ತವೆ ಭೂಮಿಯನು. ಬಿತ್ತುವವನಿಗೆ ಬೀಜ, ಉಣ್ಣುವವನಿಗೆ ಆಹಾರ ಒದಗಿಸದೆ, ಹಿಂದಿರುಗಿ ಬರುವುದಿಲ್ಲ ಅವು ಸುಮ್ಮನೆ ಬಂದಲ್ಲಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮಳೆಯೂ, ಹಿಮವೂ ಆಕಾಶದಿಂದ ಬಿದ್ದು, ಭೂಮಿಯನ್ನು ತೋಯಿಸಿ, ಹಸರುಗೊಳಿಸಿ ಫಲಿಸುವಂತೆ ಮಾಡಿ, ಬಿತ್ತುವವನಿಗೆ ಬೀಜವನ್ನು, ಉಣ್ಣುವವನಿಗೆ ಆಹಾರವನ್ನು ಒದಗಿಸಿದ ಹೊರತು ಹೇಗೆ ಆಕಾಶಕ್ಕೆ ಸುಮ್ಮನೆ ಹಿಂದಿರುಗುವುದಿಲ್ಲವೋ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಮಳೆಯೂ ಹಿಮವೂ ಆಕಾಶದಿಂದ ಬಿದ್ದು ಭೂವಿುಯನ್ನು ತೋಯಿಸಿ ಹಸಿರುಗೊಳಿಸಿ ಫಲಿಸುವಂತೆ ಮಾಡಿ ಬಿತ್ತುವವನಿಗೆ ಬೀಜವನ್ನು, ಉಣ್ಣುವವನಿಗೆ ಆಹಾರವನ್ನು ಒದಗಿಸಿದ ಹೊರತು ಹೇಗೆ ಆಕಾಶಕ್ಕೆ ಸುಮ್ಮನೆ ಹಿಂದಿರುಗುವದಿಲ್ಲವೋ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಮಳೆಯೂ ಹಿಮವೂ ಆಕಾಶದಿಂದ ಬೀಳುವವು. ಅವು ನೆಲವನ್ನು ತೇವಮಾಡದೆ ಆಕಾಶಕ್ಕೆ ಹಿಂತಿರುಗುವುದಿಲ್ಲ. ಆಗ ನೆಲವು ಬೀಜವನ್ನು ತೋಯಿಸಿ ಸಸಿ ಚಿಗುರುವಂತೆ ಮಾಡುವದು. ಆ ಸಸಿಗಳು ವ್ಯವಸಾಯಗಾರನಿಗೆ ಧಾನ್ಯವನ್ನು ಫಲಿಸುತ್ತವೆ. ಜನರು ಆ ಧಾನ್ಯದಿಂದ ರೊಟ್ಟಿಗಳನ್ನು ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಮಳೆಯೂ, ಹಿಮವೂ ಆಕಾಶದಿಂದ ಬಿದ್ದು, ಭೂಮಿಯನ್ನು ತೋಯಿಸಿ, ಹಸಿರುಗೊಳಿಸಿ, ಫಲಿಸುವಂತೆ ಮಾಡಿ, ಬಿತ್ತುವವನಿಗೆ ಬೀಜವನ್ನು, ಉಣ್ಣುವವನಿಗೆ ಆಹಾರವನ್ನು ಒದಗಿಸದ ಹೊರತು ಹೇಗೆ ಆಕಾಶಕ್ಕೆ ಸುಮ್ಮನೆ ಹಿಂದಿರುಗುವುದಿಲ್ಲವೋ, ಹಾಗೆಯೇ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 55:10
13 ತಿಳಿವುಗಳ ಹೋಲಿಕೆ  

ನನ್ನ ಉಪದೇಶ ಹಸಿಹುಲ್ಲಿನ ಮೇಲೆ ಮೆಲ್ಲನೆ ಸುರಿವ ತುಂತುರುಗಳಂತೆ ನನ್ನ ಬೋಧೆ ಕಾಯಿಪಲ್ಯಗಳ ಮೇಲೆ ಮಂಜಿನಂತೆ ಬೀಳುವ ಹದಮಳೆಯಂತೆ.


ಆಗ ಸರ್ವೇಶ್ವರ ಹೊಲದ ಬಿತ್ತನೆಗೆ ಬೇಕಾದ ಮಳೆಯನ್ನು ನಿಮಗೆ ಸುರಿಸುವರು. ಆ ಹೊಲದ ಬೆಳೆಯಿಂದ ಸಾರವತ್ತಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವರು. ಅಂದು ನಿಮ್ಮ ದನಕರುಗಳು ವಿಶಾಲವಾದ ಹುಲ್ಲುಗಾವಲುಗಳಲ್ಲಿ ಮೇಯುವುವು.


ನಾನು ಅವರನ್ನೂ ನನ್ನ ಪರ್ವತದ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿಸಿ ಸುಖಪಡಿಸುವೆನು; ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ಶುಭದಾಯಕ ವೃಷ್ಟಿ ಆಗುವುದು.


ನಾನು ಇಂತೆಂದೆ: “ಪಾಳುಬಿದ್ದ ನೆಲವನ್ನು ಉತ್ತು ಹದಮಾಡಿರಿ; ನೀತಿಯ ಬೀಜವನ್ನು ಬಿತ್ತಿರಿ; ಪ್ರೀತಿಯ ಫಲವನ್ನು ಕೊಯ್ಯಿರಿ. ಸಮಯವು ಸನ್ನಿಹಿತವಾಗಿದೆ. ಸರ್ವೇಶ್ವರ ಆಗಮಿಸಿ ನಿಮ್ಮ ಮೇಲೆ ನೀತಿಯನ್ನು ಮಳೆಗರೆಯುವಂತೆ ಅವರಿಗೆ ಶರಣುಹೋಗಬೇಕು.


ಬುವಿಯು ತನ್ನಿಂದ ಬೀಜವನು ಮೊಳೆಯಿಸುವಂತೆ ತೋಟವು ತನ್ನೊಳು ಸಸಿಯನು ಬೆಳೆಸುವಂತೆ ಸ್ವಾಮಿ ಸರ್ವೇಶ್ವರ, ಸಮಸ್ತ ರಾಷ್ಟ್ರಗಳ ಮುಂದೆ ವೃದ್ಧಿಗೊಳಿಸುವನು ಸದ್ಧರ್ಮವನೆ, ಸ್ತುತಿಸ್ತೋತ್ರವನೆ.


ತಾವು ಪ್ರವಾದನೆ ಮಾಡುವ ದಿನಗಳಲ್ಲಿ ಮಳೆ ಬಾರದಂತೆ ಆಕಾಶವನ್ನು ಮುಚ್ಚಿಬಿಡುವ ಸಾಮರ್ಥ್ಯ ಇವರಿಗಿದೆ. ಇದಲ್ಲದೆ, ಇವರಿಗೆ ಇಷ್ಟಬಂದಾಗಲೆಲ್ಲಾ ನೀರನ್ನು ರಕ್ತವನ್ನಾಗಿ ಪರಿವರ್ತಿಸುವ ಹಾಗು ಸಕಲ ವಿಧವಾದ ಉಪದ್ರವಗಳಿಂದ ಜಗತ್ತನ್ನು ಪೀಡಿಸುವ ಅಧಿಕಾರ ಇವರಿಗೆ ಇರುತ್ತದೆ.


ಬಂಜರು ಭೂಮಿಯಾಗಿಸುವೆನು ಅದನ್ನು; ಕುಡಿಕತ್ತರಿಸುವರಾರೂ ಇರರು ಅದಕ್ಕೆ. ಮುಳ್ಳುಕಳೆ ಬೆಳೆಯುವುದು ಅದರೊಳಗೆ. ನೀಡುವೆನು ಆಣತಿಯೊಂದನು ಮೋಡಗಳಿಗೆ; ಸುರಿಸವು ತುಂತುರು ಮಳೆಯನ್ನೂ ಅದಕ್ಕೆ.


ಆದುದರಿಂದ ಮತ್ತೆ ಸರ್ವೇಶ್ವರನನ್ನು ಕೇಳಿದನು. ಅವರು, “ನೀನೆದ್ದು ಕೆಯೀಲಾಕ್ಕೆ ಹೋಗು; ನಾನು ಫಿಲಿಷ್ಟಿಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು,” ಎಂದು ಉತ್ತರಕೊಟ್ಟರು.


ಸರ್ವೇಶ್ವರ ಇಂತೆನ್ನುತ್ತಾರೆ: ಆ ದಿನದಂದು ಪ್ರೀತಿಸುವೆನು ನಿನ್ನನು; ಆಲಿಸುವೆನು ಆಗಸದ ಮೊರೆಯನು.


ಒದಗಿಸುವೆ ಬೇಸಾಯದ ಆಹಾರವನು I ಹೃದಯವನು ಮುದಗೊಳಿಸುವ ದ್ರಾಕ್ಷಾರಸವನು I ಮುಖಕೆ ಮೆರಗನ್ನೀಯುವ ತಿಳಿತೈಲಗಳನು I ದೇಹವನು ಗಟ್ಟಿಮುಟ್ಟಾಗಿಸುವ ರೊಟ್ಟಿಯನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು