Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 55:13 - ಕನ್ನಡ ಸತ್ಯವೇದವು C.L. Bible (BSI)

13 ಬೆಳೆಯುವುದು ಮುಳ್ಳಿಗೆ ಬದಲಾಗಿ ದೇವದಾರು, ದತ್ತೂರಿಗೆ ಪ್ರತಿಯಾಗಿ ಸುಗಂಧದ ಮರವು. ಉಳಿದಿರುತ್ತದೆ ಆ ವನವು ಶಾಶ್ವತ ಗುರುತಾಗಿ ಸರ್ವೇಶ್ವರ ಸ್ವಾಮಿಯ ನಾಮಸ್ಮರಣೆಗಾಗಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಮುಳ್ಳಿಗೆ ಬದಲಾಗಿ ತುರಾಯಿಯೂ, ದತ್ತೂರಿಗೆ ಪ್ರತಿಯಾಗಿ ಸುಗಂಧವೂ ಬೆಳೆಯುವವು; ಆ ವನವು ಯೆಹೋವನ ನಾಮಸ್ಮರಣೆಗೆ ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಮುಳ್ಳಿಗೆ ಬದಲಾಗಿ ತುರಾಯಿಯೂ ದತ್ತೂರಿಗೆ ಪ್ರತಿಯಾಗಿ ಸುಗಂಧವೂ ಬೆಳೆಯುವವು; ಆ ವನವು ಯೆಹೋವನಾಮಸ್ಮರಣೆಗೆ ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಪೊದೆಗಳು ಇದ್ದ ಸ್ಥಳಗಳಲ್ಲಿ ಎತ್ತರವಾದ ದೇವದಾರು ಮರಗಳು ಬೆಳೆಯುವವು. ಹಣಜಿಯಿರುವ ಸ್ಥಳಗಳಲ್ಲಿ ಸುಗಂಧ ಮರಗಳು ಬೆಳೆಯುವವು. ಇವು ಯೆಹೋವನಾಮವನ್ನು ಪ್ರಸಿದ್ಧಿಪಡಿಸುವವು. ಯೆಹೋವನೇ ಸರ್ವಶಕ್ತನೆಂದು ಇವು ತೋರಿಸುವವು. ಈ ಸಾಕ್ಷಿಯು ಎಂದಿಗೂ ನಾಶವಾಗುವದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಮುಳ್ಳಿಗೆ ಬದಲಾಗಿ ತುರಾಯಿ ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವುವು. ಇದು ಯೆಹೋವ ದೇವರ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 55:13
34 ತಿಳಿವುಗಳ ಹೋಲಿಕೆ  

ನೆಡುವೆನು ಅಡವಿಯಲ್ಲಿ ದೇವದಾರು ಕಸ್ತೂರಿ, ಜಾಲಿ, ಸುಗಂಧ ಓಲೀವ್ ಮರಗಳನು; ತೋಪಾಗಿ ಬೆಳೆಸುವೆನು ಅರಣ್ಯದೊಳು ತುರಾಯಿ, ತಪಸಿ, ತಿಲಕ ವೃಕ್ಷಗಳನು.


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲ ಸೌಭಾಗ್ಯಗಳ ಸುದ್ದಿಯನ್ನು ಸಕಲ ಭೂರಾಜ್ಯಗಳು ಕೇಳುವರು. ಈ ನಗರಕ್ಕೆ ನಾನು ನೀಡುವ ಸುಖಸಮಾಧಾನಗಳನ್ನು ಅವರು ನೋಡುವರು ಹಾಗೂ ಹೆದರಿ ನಡುಗುವರು. ಇದರಿಂದಾಗಿ ಆ ಎಲ್ಲ ರಾಜ್ಯಗಳ ಮುಂದೆ ನನಗೆ ಅದು ಕೀರ್ತಿಯನ್ನು, ಮಹಿಮೆಯನ್ನು ಹಾಗೂ ಆನಂದವನ್ನು ತರುವುದು.”


ದುಃಖಿತರೆಲ್ಲರಿಗೆ ಸಾಂತ್ವನ ಸಾರಲೆಂದೇ ಕಳುಹಿಸಿದನಾತ ನನ್ನನು. ಸಿಯೋನಿನ ಶೋಕಾರ್ತರಿಗೆ ಬರಿಬೂದಿಗೆ ಬದಲು ಶಿರೋಭೂಷಣ, ದುಃಖತಾಪದ ಬದಲು ಆನಂದ ತೈಲ, ಸೊರಗಿದ್ದ ಮನಕೆ ಮೆಚ್ಚಿಕೆಯ ಮೇಲ್ವಸ್ತ್ರ ಒದಗಿಸಲೆಂದೇ ನನ್ನನ್ನು ಕಳುಹಿಸಿದನಾತ. ನೆಟ್ಟಿಹನು ಇವರನು ಸರ್ವೇಶ್ವರ ತನ್ನ ಮಹಿಮೆಯಾಗಿ ಹೆಸರ ಪಡೆವರಿವರು ‘ನೀತಿವೃಕ್ಷ’ಗಳೆಂಬುದಾಗಿ.


ಯಾರಾದರೂ ಯೇಸುಕ್ರಿಸ್ತರೊಡನೆ ಒಂದಾದರೆ ಅವನು ನೂತನ ಸೃಷ್ಟಿಯಾಗುತ್ತಾನೆ. ಹಳೆಯದೆಲ್ಲಾ ಅಳಿದುಹೋಗುತ್ತದೆ. ಹೊಸದಿದೋ, ಜನ್ಮತಳೆದಿದೆ.


ಬರುವುದು ನಿನ್ನಲ್ಲಿಗೆ ಲೆಬನೋನಿನ ವೈಭವವು ಅದರ ತುರಾಯಿ, ಅಗಸೆ, ತಿಲಕ ಈ ಮರಗಳಾವುವು. ಅಲಂಕರಿಸುವುವು ನನ್ನ ಪವಿತ್ರಾಲಯವನು ಮಹಿಮೆಪಡಿಸುವೆನು ನನ್ನ ಪಾದಪೀಠದ ಮಂದಿರವನು.


ಇದನ್ನು ಅರ್ಥಮಾಡಿಕೊಳ್ಳಲು ನೀವು ಅಶಕ್ತರಾಗಿರುವುದರಿಂದ ನಾನು ಹೀಗೆ ಸಾಮಾನ್ಯ ರೀತಿಯಲ್ಲಿ ಮಾತನಾಡುತ್ತಿದ್ದೇನೆ. ಹಿಂದೊಮ್ಮೆ ನೀವು ನಿಮ್ಮ ಇಂದ್ರಿಯಗಳನ್ನು ಹೆಚ್ಚುಹೆಚ್ಚಾಗಿ ಅಶ್ಲೀಲತೆಗೂ ಅಕ್ರಮಕ್ಕೂ ಗುಲಾಮರನ್ನಾಗಿಸಿದಿರಿ; ಈಗಲಾದರೋ ಪರಿಶುದ್ಧತೆಗೂ ಸತ್ಸಂಬಂಧಕ್ಕೂ ನಿಮ್ಮ ಇಂದ್ರಿಯಗಳನ್ನು ಅಧೀನರಾಗಿಸಿರಿ.


ಬೋಧಿಸುವ ವರವನ್ನು ಪಡೆದವನು ದೇವರ ವಾಕ್ಯವನ್ನು ಬೋಧಿಸುವವನಂತೆ ಬೋಧನೆಮಾಡಲಿ. ಸೇವೆಮಾಡುವ ವರವನ್ನು ಪಡೆದವನು, ದೇವರಿಂದ ಶಕ್ತಿಯನ್ನು ಪಡೆದವನಂತೆ ಸೇವೆಮಾಡಲಿ. ಇದರಿಂದ ಯೇಸುಕ್ರಿಸ್ತರ ಮುಖಾಂತರ ಎಲ್ಲದರಲ್ಲಿಯೂ ದೇವರಿಗೆ ಸ್ತುತಿಯುಂಟಾಗುವುದು. ಅವರಿಗೆ ಸದಾಕಾಲ ಮಹಿಮೆಯೂ ಸರ್ವಾಧಿಕಾರವೂ ಸಲ್ಲಲಿ. ಆಮೆನ್.


ಸಿಯೋನಿಗೆ ಅಭಿಮುಖರಾಗಿ, ಮಾರ್ಗವನ್ನು ವಿಚಾರಿಸುತ್ತಾ, ‘ಬನ್ನಿ, ಸರ್ವೇಶ್ವರನನ್ನು ಆಶ್ರಯಿಸಿ, ಎಂದಿಗೂ ಮರೆಯಲಾಗದ ಶಾಶ್ವತ ಒಡಂಬಡಿಕೆಯನ್ನು ಅವರೊಂದಿಗೆ ಮಾಡಿಕೊಳ್ಳೋಣ’ ಎಂದು ಹೇಳುವರು.


ನೀವು ಸಮೃದ್ಧಿಯಾಗಿ ಫಲಕೊಟ್ಟು ನನ್ನ ಶಿಷ್ಯರಾಗಿ ಬೆಳಗುವುದರಿಂದಲೇ ನನ್ನ ಪಿತನ ಮಹಿಮೆ ಪ್ರಕಟವಾಗುವುದು.


“ಮಹೋನ್ನತದಲ್ಲಿ ದೇವರಿಗೆ ಮಹಿಮೆ; ಭೂಲೋಕದಲ್ಲಿ ದೇವರೊಲಿದ ಮಾನವರಿಗೆ ಶಾಂತಿಸಮಾಧಾನ,” ಎಂದು ಸರ್ವೇಶ್ವರನ ಸ್ತುತಿ ಮಾಡಿತು.


ಇಸ್ರಯೇಲ್ ವಂಶವೆಲ್ಲವು ಹಾಗು ಜುದೇಯ ವಂಶವೆಲ್ಲವು ನನಗೆ ಪ್ರಜೆಯಾಗಿರಲಿ; ನನಗೆ ಕೀರ್ತಿ, ಗೌರವ ತರಲಿ, ನನಗೆ ಆಭರಣವಾಗಿರಲಿ ಎಂದುಕೊಂಡೆ. ನಡುಕ್ಟಟನ್ನು ಸೊಂಟಕ್ಕೆ ಬಿಗಿದುಕೊಳ್ಳುವಂತೆ ಇವರನ್ನು ಬಿಗಿದುಕೊಂಡಿದ್ದೆ. ಆದರೂ ಇವರು ನನಗೆ ಕಿವಿಗೊಡದೆಹೋದರು. ಇದು ಸರ್ವೇಶ್ವರನಾದ ನನ್ನ ನುಡಿ.”


ಮೋಶೆಯ ಬಲಗೈಗೆ ತಮ್ಮ ಮಹಿಮಾ ಭುಜಬಲವನ್ನು ನೀಡಿದ ಸ್ವಾಮಿ ಎಲ್ಲಿ? ಆತನ ಕೈಯಿಂದ ಜಲರಾಶಿಯನ್ನು ಆ ಜನರ ಕಣ್ಮುಂದೆ ಇಬ್ಬಾಗಿಸಿದ ಸ್ವಾಮಿ ಎಲ್ಲಿ? ಹೀಗೆ ತಮ್ಮ ಹೆಸರನ್ನು ಶಾಶ್ವತವಾಗಿಸಿಕೊಂಡ ಸ್ವಾಮಿ ಎಲ್ಲಿ?


ಸದ್ಧರ್ಮಿಗಳಾಗಿರುವರು ನಿನ್ನ ಜನರೆಲ್ಲರು ಆಗುವರವರು ನಾಡಿಗೆ ಶಾಶ್ವತ ಬಾಧ್ಯಸ್ಥರು ನನ್ನ ಮಹಿಮೆಗಾಗಿ ನಾ ನೆಟ್ಟ ಸಸಿಗಳವರು ನನ್ನ ಕೈಗಳು ಸೃಷ್ಟಿಸಿದ ಪ್ರಜೆಗಳವರು.


ಬಿರುಕುಬಿಟ್ಟಾವು ಬೆಟ್ಟಗಳು, ಕದಲಿಯಾವು ಗುಡ್ಡಗಳು, ನನ್ನ ಅಚಲ ಪ್ರೀತಿಯಾದರೊ ಬಿಟ್ಟುಹೋಗದು ನಿನ್ನನು. ಶಾಂತಿಸಮಾಧಾನದ ನನ್ನೀ ಒಪ್ಪಂದವು ಕದಲದು. ನಿನ್ನ ಮೇಲೆ ಕರುಣೆಯಿಟ್ಟಿರುವ ಸರ್ವೇಶ್ವರನ ನುಡಿಯಿದು.”


ನಾ ಸೃಷ್ಟಿಸಿದ ಆಪ್ತ ಜನಕೆ ನೀಡುವೆನು ಜಲಪಾನವನು; ಎಂದೇ ಸ್ತುತಿಸಿಕೊಂಡಾಡುವರು ನನ್ನನು.”


ಅವರಲ್ಲಿ ಅತ್ಯುತ್ತಮನಾದವನೂ ಮುಳ್ಳಿನ ಪೊದೆಗೆ ಸಮಾನ. ಸತ್ಯವಂತನೂ ಮುಳ್ಳುಬೇಲಿಗಿಂತ ಕಡೆ. ಜನರ ದಂಡನೆಯ ದಿನ ಸಮೀಪಿಸಿದೆ. ಅವರ ಕಾವಲುಗಾರರಾದ ಪ್ರವಾದಿಗಳು ಮುಂತಿಳಿಸಿದ ಕಾಲ ಬಂದಿದೆ. ಜನರೆಲ್ಲರು ದಿಗ್ಭ್ರಾಂತರಾಗುವರು.


ಬಂಜರು ಭೂಮಿಯಾಗಿಸುವೆನು ಅದನ್ನು; ಕುಡಿಕತ್ತರಿಸುವರಾರೂ ಇರರು ಅದಕ್ಕೆ. ಮುಳ್ಳುಕಳೆ ಬೆಳೆಯುವುದು ಅದರೊಳಗೆ. ನೀಡುವೆನು ಆಣತಿಯೊಂದನು ಮೋಡಗಳಿಗೆ; ಸುರಿಸವು ತುಂತುರು ಮಳೆಯನ್ನೂ ಅದಕ್ಕೆ.


ಉಲ್ಲಾಸಿಸಲಿ ಹೊಲಗದ್ದೆಗಳು, ಪೈರುಪಚ್ಚೆಗಳು I ಹರ್ಷಧ್ವನಿಗೈಯಲಿ ಕಾಡಿನ ಫಲವೃಕ್ಷಗಳು II


“ನಿನ್ನ ದೇವರಾದ ಸರ್ವೇಶ್ವರನಿಂದ ಒಂದು ಗುರುತನ್ನು ಕೇಳಿಕೊ. ಅದು ಪಾತಾಳದಷ್ಟು ಆಳದಲ್ಲೇ ಇರಲಿ, ಆಕಾಶದಷ್ಟು ಎತ್ತರದಲ್ಲೇ ಇರಲಿ, ಕೇಳು.” ಎಂದರು.


ಅವರೆಲ್ಲ ಬಂದು ಕಡಿದಾದ ಕಣಿವೆಗಳಲ್ಲಿಯೂ ಬಂಡೆಗಳ ಸಂದುಗೊಂದುಗಳಲ್ಲಿಯೂ ಮುಳ್ಳುಪೊದೆಗಳಲ್ಲಿಯೂ ಗೋಮಾಳಗಳಲ್ಲಿಯೂ ಹುಳುಹುಪ್ಪಟೆಗಳಂತೆ ಮುತ್ತಿಕೊಳ್ಳುವರು.


ಅಲ್ಲಿ ಜನರು ಬಿಲ್ಲುಬಾಣಗಳನ್ನು ಹಿಡಿದು ಬೇಟೆಯಾಡುವರು. ನಾಡೆಲ್ಲ ಮುಳ್ಳುಪೊದೆಯಾಗಿ ಇರುವುದು.


ಇವು ಈಜಿಪ್ಟ್ ದೇಶಕ್ಕೆ ಸರ್ವೇಶ್ವರ ಸ್ವಾಮಿಯ ಸಂಕೇತವಾಗಿಯೂ ಸಾಕ್ಷಿಯಾಗಿಯೂ ಇರುವುವು. ಅವರು ತಮ್ಮನ್ನು ಬಾಧಿಸುವವರ ವಿರುದ್ಧ ಸರ್ವೇಶ್ವರ ಸ್ವಾಮಿಗೆ ಮೊರೆಯಿಟ್ಟಾಗ, ಸ್ವಾಮಿಯು ವೀರನಾದ ರಕ್ಷಕನೊಬ್ಬನನ್ನು ಕಳುಹಿಸುವರು. ಆತನು ಆ ಜನರನ್ನು ಬಿಡುಗಡೆಮಾಡಿ ಉದ್ಧರಿಸುವನು.


ನನ್ನ ಜನರ ಹೊಲಗದ್ದೆಗಳಲ್ಲಿ ಮುಳ್ಳುಪೊದರುಗಳು ಹುಟ್ಟಿಕೊಂಡಿವೆ. ಉಲ್ಲಾಸದಿಂದ ಕೂಡಿದ್ದ ಮನೆಗಳೂ ಲವಲವಿಕೆಯಿಂದ ತುಂಬಿದ್ದ ನಗರಗಳೂ ಶೂನ್ಯವಾಗಿವೆ, ಅರಮನೆ ಪಾಳುಬಿದ್ದಿದೆ.


ಆನಂದಿಸಲಿ ಅರಣ್ಯವೂ ಮರುಭೂಮಿಯೂ ಹೂಗಳಂತೆ ಅರಳಿ ಹರ್ಷಿಸಲಿ ಒಣನೆಲವು.


ಉಲ್ಲಾಸಿಸಲಿ ಅದು ಹುಲುಸಾಗಿ ಹೂಬಿಟ್ಟು ಹೌದು, ಸಂತಸ ಸಂಗೀತ ಹಾಡುವಷ್ಟು, ದೊರಕಲಿ ಅದಕ್ಕೆ ಲೆಬನೋನಿನ ಮಹಿಮೆಯು ಕರ್ಮೆಲಿನ ಮತ್ತು ಶಾರೋನಿನ ವೈಭವವು. ಕಾಣುವುವು ಸರ್ವೇಶ್ವರನ ಮಹಿಮೆಯನು ನೋಡುವುವು ಇವೆಲ್ಲ ನಮ್ಮ ದೇವರ ವೈಭವವನು.


ನನ್ನ ಆಲಯದಲ್ಲೆ, ಅದರ ಪ್ರಾಕಾರಗಳಲ್ಲೆ, ಅವರ ಸ್ಮಾರಕ ಶಿಲೆಗಳನ್ನು ಇಡುವೆನು. ಮಕ್ಕಳನ್ನು ಪಡೆದವರಿಗಿಂತಲು ಶ್ರೇಷ್ಠವಾದ ಹೆಸರನ್ನು ಅವರಿಗೆ ದಯಪಾಲಿಸುವೆನು. ಹೌದು, ಎಂದಿಗೂ ಅಳಿಯದ, ಶಾಶ್ವತವಾಗಿ ಉಳಿಯುವ, ಹೆಸರನ್ನು ಅವರಿಗೆ ದಯಪಾಲಿಸುವೆನು.


ತಪ್ಪಲಿಗೆ ಇಳಿದ ದನಕರುಗಳಂತೆ ಆ ಜನರನ್ನು ಕರೆತಂದಿತು ಸ್ವಾಮಿಯ ಆತ್ಮ ಶಾಂತಿ ನಿಲಯಕೆ. ಹೀಗೆ, ಆ ಜನರಿಗೆ ಮಾರ್ಗದರ್ಶಕರಾಗಿ ತಮ್ಮ ನಾಮವನ್ನು ಘನಪಡಿಸಿಕೊಂಡರು ಸ್ವಾಮಿ.


ಇಸ್ರಯೇಲ್ ವಂಶದವರಿಗೆ ಚುಚ್ಚುವ ಮುಳ್ಳು ಇನ್ನಿರದು; ಹೀನೈಸುವ ನೆರೆಹೊರೆಯವರೆಂಬ ಕಂಟಕದ ಬಾಧೆ ಇನ್ನಾಗದು; ನಾನೇ ಸರ್ವೇಶ್ವರನಾದ ದೇವರು ಎಂದು ಅವರಿಗೆ ವ್ಯಕ್ತವಾಗುವುದು.”


ರಾತ್ರಿಯಲ್ಲಿ ನನಗೆ ಈ ದರ್ಶನವಾಯಿತು. ಇಗೋ, ಕೆಂಪು ಕುದುರೆಯನ್ನೇರಿದ್ದ ಒಬ್ಬ ವ್ಯಕ್ತಿ ತಗ್ಗಿನಲ್ಲಿರುವ ಸುಗಂಧ ವೃಕ್ಷಗಳ ನಡುವೆ ನಿಂತಿದ್ದಾನೆ. ಅವನ ಹಿಂದೆ ಕೆಂಪು, ನಸುಗೆಂಪು ಮತ್ತು ಬಿಳಿಯ ಕುದುರೆಗಳಿವೆ.


ಒದಗಿಸುವೆ ನಿನಗೆ ಮರವಿದ್ದಲ್ಲಿ ತಾಮ್ರವನು ಹಿತ್ತಾಳೆಗೆ ಬದಲಾಗಿ ಬಂಗಾರವನು ಕಬ್ಬಿಣಕ್ಕೆ ಪ್ರತಿಯಾಗಿ ಬೆಳ್ಳಿಯನು ಕಲ್ಲುಗಳ ಸ್ಥಾನದಲ್ಲಿ ಕಬ್ಬಿಣವನು ಮಾಡುವೆ ಶಾಂತಿಯನ್ನೇ ನಿನಗೆ ಅಧಿಪತಿಯನ್ನಾಗಿ ಸದ್ಧರ್ಮವನ್ನೇ ನಿನಗೆ ಅಧಿಕಾರಿಯನ್ನಾಗಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು