Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 55:4 - ಕನ್ನಡ ಸತ್ಯವೇದವು C.L. Bible (BSI)

4 ನೇಮಿಸಿರುವೆ ಆತನನು ಜನಗಳಿಗೆ ಸಾಕ್ಷಿಯನ್ನಾಗಿ ಜನಾಂಗಗಳಿಗೆ ನಾಯಕನನ್ನಾಗಿ, ಅಧಿಪತಿಯನ್ನಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇಗೋ, ನಾನು ಅವನನ್ನು ಜನಾಂಗಗಳಿಗೆ ಸಾಕ್ಷಿಯನ್ನಾಗಿಯೂ, ನಾಯಕನನ್ನಾಗಿಯೂ ಅಧಿಪತಿಯನ್ನಾಗಿಯೂ ನೇಮಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇಗೋ, ನಾನು ಅವನನ್ನು ಜನಾಂಗಗಳಿಗೆ ಸಾಕ್ಷಿಯನ್ನಾಗಿಯೂ ನಾಯಕನನ್ನಾಗಿಯೂ ಅಧಿಪತಿಯನ್ನಾಗಿಯೂ ನೇವಿುಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದಾವೀದನು ನನ್ನ ಸಾಮರ್ಥ್ಯದ ವಿಷಯದಲ್ಲಿ ಎಲ್ಲ ಜನಾಂಗಗಳವರಿಗೆ ಸಾಕ್ಷಿಯಾಗಿರುವಂತೆ ನಾನೇ ಮಾಡಿದೆನು. ನಾನು ದಾವೀದನಿಗೆ, ‘ನೀನು ಅಧಿಪತಿಯಾಗುವೆ ಮತ್ತು ಅನೇಕ ಜನಾಂಗಗಳಿಗೆ ನೀನು ಸೈನ್ಯಾಧಿಪತಿಯಾಗುವೆ’ ಎಂದು ಪ್ರಮಾಣ ಮಾಡಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಾನು ಅವನನ್ನು ಜನರಿಗೆ ಸಾಕ್ಷಿಯನ್ನಾಗಿಯೂ, ಜನರಿಗೆ ನಾಯಕನನ್ನಾಗಿಯೂ, ಅಧಿಪತಿಯನ್ನಾಗಿಯೂ ಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 55:4
30 ತಿಳಿವುಗಳ ಹೋಲಿಕೆ  

ನಂಬಲರ್ಹವಾದ ಸಾಕ್ಷಿಯೂ ಮೃತ್ಯುವಿನಿಂದ ಪುನರುತ್ಥಾನ ಹೊಂದಿದವರಲ್ಲಿ ಪ್ರಪ್ರಥಮರೂ ಭೂರಾಜರ ಒಡೆಯರೂ ಆದ ಯೇಸುಕ್ರಿಸ್ತರಿಂದಲೂ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದಿಂದ ನಮ್ಮ ಪಾಪಗಳನ್ನು ತೊಳೆದವರೂ


ಇದನ್ನು ತಿಳಿದು ಮನದಟ್ಟು ಮಾಡಿಕೊ, ‘ಹಿಂದಿರುಗಿ ಜೆರುಸಲೇಮನ್ನು ಪುನರ್‍ ನಿರ್ಮಿಸಿ’ ಎಂಬ ದೈವೋಕ್ತಿ ಹೊರಡುವಂದಿನಿಂದ ಪ್ರಭುವಾಗಿ ಅಭಿಷಿಕ್ತನಾದವನು ಬರುವುದರೊಳಗೆ ಏಳು ಸಾರಿ ಏಳು ವರ್ಷಗಳು ಕಳೆಯಬೇಕು. ಅದು ಪುನಃ ಬೀದಿ ಚೌಕಗಳಿಂದಲೂ ಕೋಟೆಕೊತ್ತಲುಗಳಿಂದಲೂ ಕಟ್ಟಲ್ಪಟ್ಟು ಏಳು ಸಾರಿ ಅರವತ್ತೆರಡು ವರ್ಷಗಳು ಇರುವುದು. ಆ ಕಾಲವು ಬಹು ಕಷ್ಟಕರವಾದ ಕಾಲವಾಗಿರುವುದು.


ಸಮಸ್ತವನ್ನೂ ಸೃಷ್ಟಿಸಿ ಪರಿಪಾಲಿಸಿಕೊಂಡುಬರುವ ದೇವರು ತಮ್ಮ ಮಹಿಮೆಯಲ್ಲಿ ಪಾಲುಗೊಳ್ಳಲು ಮಕ್ಕಳನೇಕರನ್ನು ಕರೆತರುವಂತೆ ಉದ್ಧಾರ ಪ್ರವರ್ತಕರಾದ ಯೇಸುವನ್ನು ಹಿಂಸೆಬಾಧೆಗಳ ಮೂಲಕ ಪರಿಪೂರ್ಣವಾಗಿಸಿದ್ದು ಯುಕ್ತವೇ ಸರಿ.


ಪಿಲಾತನು, “ಹಾಗಾದರೆ ನೀನೊಬ್ಬ ಅರಸನೋ?’ ಎಂದು ಕೇಳಲು ಯೇಸು, “ ‘ಅರಸ’ ಎನ್ನುವುದು ನೀವು ಹೇಳುವ ಮಾತು. ಸತ್ಯವನ್ನು ಕುರಿತು ಸಾಕ್ಷಿ ಹೇಳುವುದು ನನ್ನ ಕೆಲಸ. ಅದಕ್ಕಾಗಿಯೇ ನಾನು ಹುಟ್ಟಿದುದು. ಅದಕ್ಕಾಗಿಯೇ ನಾನು ಜಗತ್ತಿಗೆ ಬಂದುದು. ಸತ್ಯಪರರೆಲ್ಲರೂ ನನ್ನ ಮಾತಿಗೆ ಕಿವಿಗೊಡುತ್ತಾರೆ,” ಎಂದು ಹೇಳಿದರು.


ತದನಂತರ ಇಸ್ರಯೇಲಿನವರು ತಮ್ಮ ದೇವರಾದ ಸರ್ವೇಶ್ವರನನ್ನು ಮತ್ತು ಅರಸ ದಾವೀದನನ್ನು ಆಶ್ರಯಿಸುವರು. ಅಂತಿಮ ದಿನಗಳಲ್ಲಿ ಅವರು ಭಯಭಕ್ತಿಯುಳ್ಳವರಾಗಿ ಸರ್ವೇಶ್ವರಸ್ವಾಮಿಯನ್ನೂ ಅವರ ಕೃಪಾಶ್ರಯವನ್ನೂ ಮರೆಹೋಗುವರು.


ಅವರು ತಮ್ಮ ದೇವರಾದ ಸರ್ವೇಶ್ವರನೆಂಬ ನನಗೆ ಮತ್ತು ಅವರಿಗಾಗಿ ನಾನು ಏರ್ಪಡಿಸಲಿರುವ ರಾಜ ದಾವೀದನಿಗೆ ಸೇವೆಸಲ್ಲಿಸುವರು.)


ಜನರ ಒಳಕಲಹದಿಂದೆನ್ನ ನೀ ತಪ್ಪಿಸಿದೆ I ನನ್ನನುಳಿಸಿ ಜನಾಂಗಗಳಿಗೆ ಜನಪನಾಗಿಸಿದೆ I ನಾನರಿಯದ ಜನರನೂ ನನಗಧೀನರನ್ನಾಗಿಸಿದೆ II


“ಲವೊದಿಕೀಯದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ : ವಿಶ್ವಾಸಪಾತ್ರನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಗೆ ಮೂಲಾಧಾರನೂ ಆದ ‘ಆಮೆನ್’ ಎಂಬಾತನು ನೀಡುವ ಸಂದೇಶವಿದು :


ಹೀಗೆ, ಅವರು ಸ್ವತಃ ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ಶಾಶ್ವತ ಜೀವೋದ್ಧಾರಕ್ಕೆ ಕಾರಣರಾದರು.


ಸಕಲ ಸೃಷ್ಟಿಗೂ ಜೀವದಾತರಾದ ದೇವರ ಸನ್ನಿಧಿಯಲ್ಲಿ ಪೊಂತಿಯ ಪಿಲಾತನ ಮುಂದೆ ಸೂಕ್ತ ಸಾಕ್ಷಿ ನೀಡಿದ ಪ್ರಭು ಯೇಸುವಿನ ಸನ್ನಿಧಿಯಲ್ಲಿ ನಾನು ಆಜ್ಞಾಪಿಸುವುದೇನೆಂದರೆ:


ನನ್ನ ಸೇವೆಮಾಡಬೇಕೆಂದಿರುವವನು ನನ್ನನ್ನು ಹಿಂಬಾಲಿಸಲಿ. ಆಗ ನಾನಿರುವಲ್ಲಿಯೇ ನನ್ನ ಸೇವಕನೂ ಇರುತ್ತಾನೆ. ನನ್ನ ಸೇವೆಮಾಡುವವನು ನನ್ನ ಪಿತನಿಂದ ಸನ್ಮಾನಹೊಂದುತ್ತಾನೆ,” ಎಂದರು


ದೇವರು ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕೈಕ ಪುತ್ರನನ್ನೇ ಧಾರೆಯೆರೆದರು; ಆತನಲ್ಲಿ ವಿಶ್ವಾಸವಿಟ್ಟ ಯಾರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ದೇವರ ಉದ್ದೇಶ.


‘ಜುದೇಯ ನಾಡಿನ ಬೆತ್ಲೆಹೇಮೇ, ಜುದೇಯದ ಪ್ರಮುಖ ಪಟ್ಟಣಗಳಲ್ಲಿ ನೀನು ಅಲ್ಪಳೇನೂ ಅಲ್ಲ. ಕಾರಣ ನನ್ನ ಪ್ರಜೆ ಇಸ್ರಯೇಲನ್ನು ಪರಿಪಾಲಿಸುವವನು ನಿನ್ನಿಂದಲೇ ಉದಯಿಸಲಿರುವನು’. ಎಂದು ಪ್ರವಾದಿ ಬರೆದಿದ್ದಾನೆ” ಎಂದು ಉತ್ತರವಿತ್ತರು.


ಧರ್ಮಸಭೆ ಕ್ರಿಸ್ತಯೇಸುವಿನ ಆಡಳಿತಕ್ಕೆ ಒಳಪಟ್ಟಿರುವಂತೆ ಪತ್ನಿಯೂ ಸಹ ಎಲ್ಲಾ ವಿಷಯಗಳಲ್ಲೂ ತನ್ನ ಪತಿಯ ಆಡಳಿತಕ್ಕೆ ಒಳಪಟ್ಟಿರಬೇಕು.


‘ಬೋಧಕರೇ, ಪ್ರಭುವೇ’ ಎಂದು ನೀವು ನನ್ನನ್ನು ಕರೆಯುತ್ತೀರಿ; ನೀವು ಹಾಗೆ ಹೇಳುವುದು ಸರಿಯೆ. ನಾನು ಬೋಧಕನೂ ಹೌದು, ಪ್ರಭುವೂ ಹೌದು.


ನನ್ನ ಕುರಿಗಳಾದರೋ ನನ್ನ ಸ್ವರವನ್ನು ಗುರುತಿಸುತ್ತವೆ. ನಾನು ಅವನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.


ಕಾವಲುಗಾರನು ಅವನಿಗೆ ಬಾಗಿಲು ತೆರೆಯುತ್ತಾನೆ. ಕುರಿಗಳು ಅವನ ಸ್ವರವನ್ನು ಕೇಳುತ್ತವೆ. ಅವನು ತನ್ನ ಕುರಿಗಳನ್ನು ಹೆಸರಿಟ್ಟು ಕರೆದು ಹೊರಗೆ ಬಿಡುತ್ತಾನೆ.


ಸ್ಥಾಪಿತವಾಗುವುದಾಗ ಅಚಲ ಒಲವಿನ ಸಿಂಹಾಸನವು, ಅದನಲಂಕರಿಸುವನು ಪ್ರಾಮಾಣಿಕ ದಾವೀದ ವಂಶಜನು. ದೊರಕಿಸುವನಾತ ನ್ಯಾಯನೀತಿಯನು, ಶೀಘ್ರದಲೆ ನೆರವೇರಿಸುವನು ಸರಿಕಂಡದುದನು.”


ನನ್ನ ದಾಸ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗು ಒಬ್ಬನೇ ಪಾಲಕನಿರುವನು; ಅವರು ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು.


ನನ್ನ ದಾಸ ಯಕೋಬನಿಗೆ ನಾನು ದಯಪಾಲಿಸಿದ ನಾಡಿನಲ್ಲಿ ಅವರು ವಾಸಿಸುವರು. ಹೌದು, ನಿಮ್ಮ ಪಿತೃಗಳು ವಾಸಿಸಿದ ನಾಡಿನಲ್ಲಿ ಅವರೂ ಅವರ ಸಂತಾನದವರೂ ತಲತಲಾಂತರವಾಗಿ ವಾಸಿಸುವರು; ನನ್ನ ದಾಸ ದಾವೀದನು ಅವರಿಗೆ ಸದಾ ಪ್ರಭುವಾಗಿರುವನು.


ನನ್ನ ಜನರ ಒಳಕಲಹದಿಂದೆನ್ನ ನೀ ತಪ್ಪಿಸಿದೆ ನನ್ನನುಳಿಸಿ ಜನಾಂಗಗಳಿಗೆ ಜನಪನಾಗಿಸಿದೆ ನಾನರಿಯದ ಜನರನ್ನೂ ನನಗಧೀನರನ್ನಾಗಿಸಿದೆ.


ಇಂತೆನ್ನುತ್ತಾರೆ ಸರ್ವೇಶ್ವರ : “ನೀವೇ ನನಗೆ ಸಾಕ್ಷಿಗಳು; ನನ್ನಿಂದ ಆಯ್ಕೆಯಾದ ನನ್ನ ದಾಸರು; ಏಕೆನೆ ನಾನೇ ಪರಮಾತ್ಮನೆಂದು ಅರಿತು, ವಿಶ್ವಾಸವಿಟ್ಟು, ಗ್ರಹಿಸಬೇಕಾದವರು; ದೇವರಾರೂ ನನಗಿಂತ ಮುಂದೆ ಇರಲಿಲ್ಲ ನನ್ನಾನಂತರವೂ ಇರುವುದಿಲ್ಲ.


ಶ್ರುತಪಡಿಸಿದವನು ನಾನೇ, ಉದ್ಧರಿಸಿದವನು ನಾನೇ, ಘೋಷಿಸಿದವನು ನಾನೇ. ಇದನ್ನು ಮಾಡಿಲ್ಲ ಅನ್ಯದೇವರಾರು ನಿಮ್ಮ ಮಧ್ಯೆ. ನನಗೆ ಸಾಕ್ಷಿಗಳು ನೀವೇ, ದೇವರು ನಾನೊಬ್ಬನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು