Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 55:5 - ಕನ್ನಡ ಸತ್ಯವೇದವು C.L. Bible (BSI)

5 ಎಲೈ ಇಸ್ರಯೇಲೇ, ನಿನ್ನ ದೇವರಾದ ಸರ್ವೇಶ್ವರನಿಗೋಸ್ಕರ ನಿನ್ನ ಮಹಿಮೆಪಡಿಸಿದ ಇಸ್ರಯೇಲಿನ ಪರಮಪಾವನನಿಗೋಸ್ಕರ ನೀ ಕರೆಗೊಡುವೆ ನಿನಗೆ ಗೊತ್ತಿಲ್ಲದ ಜನಾಂಗಕೆ. ಆಗ ಅಪರಿಚಿತರೂ ಓಡಿಬರುವರು ನಿನ್ನಾಶ್ರಯಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಎಲೈ, ಇಸ್ರಾಯೇಲೇ, ಅವನಂತೆ ನೀನೂ ನಿನಗೆ ಗೊತ್ತಿಲ್ಲದ ಜನಾಂಗವನ್ನು ನಿನ್ನ ಅಧೀನಕ್ಕೆ ಕರೆಯುವಿ, ಇಸ್ರಾಯೇಲಿನ ಸದಮಲಸ್ವಾಮಿ ಎನಿಸಿಕೊಳ್ಳುವ ನಿನ್ನ ದೇವರಾದ ಯೆಹೋವನು ನಿನಗೆ ವೈಭವ ಕೊಟ್ಟಿರುವುದನ್ನು ನೋಡಿ ನಿನ್ನನ್ನು ತಿಳಿಯದ ಜನಾಂಗವು ನಿನ್ನ ಆಶ್ರಯಕ್ಕೆ ಓಡಿಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಎಲೈ, [ಇಸ್ರಾಯೇಲೇ], [ಅವನಂತೆ ನೀನೂ] ನಿನಗೆ ಗೊತ್ತಿಲ್ಲದ ಜನಾಂಗವನ್ನು ನಿನ್ನ ಅಧೀನಕ್ಕೆ ಕರೆಯುವಿ, ಇಸ್ರಾಯೇಲಿನ ಸದಮಲಸ್ವಾವಿು ಎನಿಸಿಕೊಳ್ಳುವ ನಿನ್ನ ದೇವರಾದ ಯೆಹೋವನು ನಿನಗೆ ವೈಭವ ಕೊಟ್ಟಿರುವದನ್ನು ನೋಡಿ ನಿನ್ನನ್ನು ತಿಳಿಯದ ಜನಾಂಗವು ನಿನ್ನ ಆಶ್ರಯಕ್ಕೆ ಓಡಿಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಿನಗೆ ಗೊತ್ತಿರದ ಸ್ಥಳಗಳಲ್ಲಿ ಜನಾಂಗಗಳು ನೆಲೆಸಿವೆ. ಆ ದೇಶಗಳನ್ನು ನೀನು ಕರೆಯುವೆ. ಆ ದೇಶಗಳಿಗೆ ನಿನ್ನ ಪರಿಚಯವಿರುವದಿಲ್ಲ. ಆದರೆ ಅವುಗಳು ನಿನ್ನ ಬಳಿಗೆ ಓಡಿಬರುವವು. ಇವೆಲ್ಲಾ ನಿನ್ನ ದೇವರಾದ ಯೆಹೋವನ ಚಿತ್ತಕ್ಕನುಸಾರವಾಗಿ ಆಗುತ್ತವೆ. ಇಸ್ರೇಲಿನ ಪರಿಶುದ್ಧ ದೇವರು ನಿನ್ನನ್ನು ಗೌರವಿಸುವದರಿಂದ ಇದನ್ನು ನೆರವೇರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಿನ್ನ ದೇವರಾದ ಯೆಹೋವ ದೇವರ ನಿಮಿತ್ತವೂ, ಇಸ್ರಾಯೇಲಿನ ಪರಿಶುದ್ಧನ ನಿಮಿತ್ತವೂ ನೀನು ತಿಳಿಯದ ಜನಾಂಗಗಳನ್ನು ಕರೆಯುವೆ, ಏಕೆಂದರೆ ಆತನು ನಿನಗೆ ಕೊಟ್ಟ ವೈಭವದಿಂದ ನಿನ್ನನ್ನು ತಿಳಿಯದ ಜನಾಂಗಗಳು ನಿನ್ನ ಬಳಿಗೆ ಓಡಿ ಬರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 55:5
30 ತಿಳಿವುಗಳ ಹೋಲಿಕೆ  

ನಿರೀಕ್ಷಿಸುತ್ತಿಹರು ನನ್ನನು ದೂರದ ನಿವಾಸಿಗಳು ಮುಂದಾಗಿ ಬರುತಿಹವು ತಾರ್ಷೀಷಿನ ಹಡಗುಗಳು, ನಿನ್ನ ದೇವರಾದ ಸರ್ವೇಶ್ವರನ ಶ್ರೀನಾಮ ನಿಧಿಯಾದ ಇಲ್ಲಿಗೆ; ನಿನ್ನ ಘನಪಡಿಸಿದ ಇಸ್ರಯೇಲಿನ ಪರಮಪಾವನನ ಸನ್ನಿಧಿಗೆ. ಹೊತ್ತು ತರುತಿಹರು ನಿನ್ನ ಮಕ್ಕಳನು ಜೊತೆಗೆ ಅವರ ಬೆಳ್ಳಿಬಂಗಾರಗಳನು.


ಇದನ್ನು ನೋಡಿ ನೀ ಬೆಳಗುವೆ ಕಾಂತಿಯಿಂದ ಉಬ್ಬುವುದು ನಿನ್ನ ಎದೆ ಆನಂದದಿಂದ. ಹರಿಯುವುದು ನಿನ್ನೆಡೆಗೆ ಸಮುದ್ರ ವ್ಯಾಪಾರ ಸಮೃದ್ಧಿ ದೊರಕುವುದು ನಿನಗೆ ಅನ್ಯಜನಾಂಗಗಳ ಆಸ್ತಿಪಾಸ್ತಿ.


ಆ ದಿನದಂದು ಹಲವಾರು ರಾಷ್ಟ್ರಗಳು ಸರ್ವೇಶ್ವರಸ್ವಾಮಿಯನ್ನು ಆಶ್ರಯಿಸಿಕೊಳ್ಳುವರು. ಅವರು ಆ ಸ್ವಾಮಿಯ ಜನರಾಗುವರು. ಸ್ವಾಮಿ ಅವರ ಮಧ್ಯೆ ವಾಸಿಸುವರು. ಸೇನಾಧೀಶ್ವರರಾದ ಆ ಸ್ವಾಮಿಯೇ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ ಎಂಬುದು ಆಗ ನಿಮಗೆ ಗೊತ್ತಾಗುವುದು.


ಮತ್ತೊಬ್ಬನು ಹಾಕಿದ ಅಸ್ತಿವಾರದ ಮೇಲೆ ನಾನು ಕಟ್ಟುವುದು ಸರಿ ಅಲ್ಲವೆಂಬುದು ನನ್ನ ಅಭಿಪ್ರಾಯ. ಆದಕಾರಣ ಕ್ರಿಸ್ತಯೇಸುವಿನ ನಾಮವು ಪ್ರಚಾರವಾಗದಕಡೆ ಹೋಗಿ ಶುಭಸಂದೇಶವನ್ನು ಸಾರಬೇಕೆಂಬುದೇ ನನ್ನ ಆಕಾಂಕ್ಷೆ.


ದೇವರು ಅವರನ್ನು ತಮ್ಮ ಬಲಪಾರ್ಶ್ವಕ್ಕೆ ಏರಿಸಿ ಮುಂದಾಳನ್ನಾಗಿಯೂ ಲೋಕೋದ್ಧಾರಕನನ್ನಾಗಿಯೂ ನೇಮಿಸಿದ್ದಾರೆ. ಇಸ್ರಯೇಲಿನ ಜನರು ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿ ಪಾಪಕ್ಷಮೆಯನ್ನು ಪಡೆಯಲು ಇವರ ಮುಖಾಂತರ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ.


ಪಿತಾಮಹ ಅಬ್ರಹಾಮ, ಇಸಾಕ ಮತ್ತು ಯಕೋಬರ ದೇವರು, ಅಂದರೆ ನಮ್ಮ ಪೂರ್ವಜರ ದೇವರು, ತಮ್ಮ ದಾಸ ಯೇಸುವಿನ ಮಹಿಮೆಯನ್ನು ಬೆಳಗಿಸಿದ್ದಾರೆ. ನೀವಾದರೋ ಅವರನ್ನು ಅಧಿಕಾರಿಗಳ ಕೈಗೊಪ್ಪಿಸಿದಿರಿ. ರಾಜ್ಯಪಾಲ ಪಿಲಾತನು ಅವರನ್ನು ಬಿಡುಗಡೆಮಾಡಲು ನಿರ್ಧರಿಸಿದಾಗ ಕೂಡ ಅವನ ಸಮ್ಮುಖದಲ್ಲೇ ಅವರನ್ನು ಧಿಕ್ಕರಿಸಿದಿರಿ.


ಇಸ್ರಯೇಲಿನ ಸೆರೆಹೋದ ಜನರನ್ನು ಬರಮಾಡಿಕೊಳ್ಳುವ ದೇವರಾದ ಸರ್ವೇಶ್ವರ, “ನಾನು ಕೂಡಿಸಿಕೊಂಡ ಇಸ್ರಯೇಲ ಜನರೊಂದಿಗೆ ಇನ್ನೂ ಹಲವರನ್ನು ಕೂಡಿಸುವೆನು” ಎಂದಿದ್ದಾರೆ.


ನೇಮಿಸಿರುವೆ ಆತನನು ಜನಗಳಿಗೆ ಸಾಕ್ಷಿಯನ್ನಾಗಿ ಜನಾಂಗಗಳಿಗೆ ನಾಯಕನನ್ನಾಗಿ, ಅಧಿಪತಿಯನ್ನಾಗಿ.


ಪ್ರತಿಯೊಬ್ಬರು ಮೊಣಕಾಲೂರುವರು ನನಗೆ ಎಲ್ಲರು ನಾನೇ ದೇವರೆಂದು ಮಾಡುವರು ಪ್ರತಿಜ್ಞೆ. ಆ ನುಡಿ ಹೊರಟಿದೆ ನನ್ನ ಸತ್ಯದ ಬಾಯಿಂದ ಅದನ್ನು ಹಿಂತೆಗೆಯೆನು ನನ್ನ ಮೇಲಿಟ್ಟ ಆಣೆಯಿಂದ.


ಜನರ ಒಳಕಲಹದಿಂದೆನ್ನ ನೀ ತಪ್ಪಿಸಿದೆ I ನನ್ನನುಳಿಸಿ ಜನಾಂಗಗಳಿಗೆ ಜನಪನಾಗಿಸಿದೆ I ನಾನರಿಯದ ಜನರನೂ ನನಗಧೀನರನ್ನಾಗಿಸಿದೆ II


ರಾಜ್ಯಾಧಿಕಾರ ಪಡೆದವನು ಬರುವ ತನಕ ರಾಷ್ಟ್ರಗಳು ಆತನಿಗೆ ತಲೆಬಾಗುವ ತನಕ ತಪ್ಪದು ರಾಜದಂಡ ಯೆಹೂದನ ಕೈಯಿಂದ ಕದಲದು ಮುದ್ರೆಕೋಲು ಅವನ ವಂಶದಿಂದ.


ಯೇಸು ಸ್ವಾಮಿ ಅವರೊಡನೆ ಹೀಗೆ ಮಾತನಾಡಿದ ಮೇಲೆ ಆಕಾಶದತ್ತ ಕಣ್ಣೆತ್ತಿ ನೋಡಿ, “ಪಿತನೇ, ನಿರೀಕ್ಷಿಸಿದ ಗಳಿಗೆ ಬಂದಿದೆ. ನಿಮ್ಮ ಪುತ್ರನು ನಿಮ್ಮ ಮಹಿಮೆಯನ್ನು ಬೆಳಗಿಸುವಂತೆ ನೀವು ಆತನ ಮಹಿಮೆಯನ್ನು ಬೆಳಗಿಸಿರಿ.


ಆದರೂ ಇಸ್ರಯೇಲ್ ಜನಾಂಗ ಅಳೆಯುವುದಕ್ಕೂ ಎಣಿಸುವುದಕ್ಕೂ ಅಸಾಧ್ಯವಾದ ಕಡಲತೀರದ ಮರಳಿನಂತಾಗುವುದು. ದೇವರು ಅವರಿಗೆ ಇಂದು, “ನೀವು ನನ್ನ ಪ್ರಜೆಯಲ್ಲ” ಎಂದಿದ್ದಾರೆ; ಆದರೂ, “ನೀವು ಜೀವಸ್ವರೂಪಿಯಾದ ದೇವರ ಮಕ್ಕಳು” ಎನಿಸಿಕೊಳ್ಳುವ ದಿನ ಬರುವುದು.


ಅಂತೆಯೇ ಹಲರಾಷ್ಟ್ರಗಳು ಚಕಿತವಾಗುವುವು ಅಚ್ಚರಿಗೊಂಡು ಬಾಯಿಮುಚ್ಚಿಕೊಳ್ಳುವರು ಅರಸರು ಆತನನು ಕಂಡು. ಏಕೆನೆ, ನೋಡುವರವರು ಅಪೂರ್ವ ಸಂಗತಿಯೊಂದನು ಗ್ರಹಿಸಿಕೊಳ್ಳುವರವರು ಎಂದೂ ಕೇಳದ ವಿಷಯವನು.


ಮತ್ತೆ ಆತ ಇಂತೆಂದನು ನನಗೆ : “ಮಹತ್ಕಾರ್ಯವೇನೂ ಅಲ್ಲ ನನ್ನ ದಾಸನಾದ ನಿನಗೆ ಕುಲಗಳನು ಉದ್ಧರಿಸುವ ಮಾತ್ರಕೆ ಇಸ್ರಯೇಲರಲಿ ರಕ್ಷಿತರಾದವರನ್ನು ಮರಳಿ ಬರಮಾಡುವ ಮಾತ್ರಕೆ. ನೇಮಿಸಿರುವೆನು ನಿನ್ನನ್ನು ಜ್ಯೋತಿಯನ್ನಾಗಿ ಸರ್ವಜನಾಂಗಗಳಿಗೆ ನನ್ನ ರಕ್ಷಣೆ ವ್ಯಾಪಿಸಿರುವಂತೆ ಮಾಡಲು ಜಗದ ಕಟ್ಟಕಡೆಯವರೆಗೆ.”


ಕ್ರಿಸ್ತಯೇಸು ಅನುಭವಿಸಬೇಕಾಗಿದ್ದ ಮರಣವನ್ನು, ಯಾತನೆಯನ್ನು ಮತ್ತು ಅನಂತರದ ಪುನರುತ್ಥಾನದ ಮಹಿಮೆಯನ್ನು ಈ ಪ್ರವಾದಿಗಳು ಪ್ರವಾದಿಸುವಾಗ, ತಮ್ಮಲ್ಲಿದ್ದ ಕ್ರಿಸ್ತಾತ್ಮವು ಇದಕ್ಕೆ ಯಾವ ಸಮಯ ಸಂದರ್ಭವನ್ನು ಸೂಚಿಸುತ್ತದೆ ಎಂಬುದನ್ನು ಕಂಡುಹಿಡಿಯಲು ಪ್ರಯತ್ನಿಸಿದರು.


ಅದೇ ರೀತಿ ಕ್ರಿಸ್ತಯೇಸು, ಪ್ರಧಾನಯಾಜಕನೆಂಬ ಉನ್ನತ ಪದವಿಗೆ ತನ್ನನ್ನೇ ಏರಿಸಿಕೊಳ್ಳಲಿಲ್ಲ. “ನೀನೇ ನನ್ನ ಪುತ್ರನು; ನಾನೇ ನಿನ್ನನ್ನು ಪಡೆದಿದ್ದೇನೆ,” ಎಂದ ದೇವರೇ ಅವರನ್ನು ಆ ಪದವಿಗೆ ಏರಿಸಿದರು.


ಹಿಂದಿನ ಕಾಲದವರಿಗೆ ಈ ರಹಸ್ಯವನ್ನು ತಿಳಿಸಿರಲಿಲ್ಲ. ಆದರೆ ಈಗ ದೇವರು ಪವಿತ್ರಾತ್ಮರ ಮುಖಾಂತರ ಪೂಜ್ಯಪ್ರೇಷಿತರಿಗೂ ಪ್ರವಾದಿಗಳಿಗೂ ಅದನ್ನು ಪ್ರಕಟಿಸಿದ್ದಾರೆ.


ಕ್ರಿಸ್ತನು ಇಂತಹ ಸಂಕಷ್ಟಗಳನ್ನು ಅನುಭವಿಸಿ ತನ್ನ ಮಹಿಮಾಸಿದ್ಧಿಯನ್ನು ಪಡೆಯಬೇಕಿತ್ತು ಅಲ್ಲವೇ?” ಎಂದರು.


ಹಿಂದೊಮ್ಮೆ ನೀವು ಅನ್ಯಜನರಾಗಿದ್ದಿರಿ ಎಂಬುದು ನಿಮ್ಮ ನೆನಪಿನಲ್ಲಿರಲಿ; ಆಗ ಶಾರೀರಿಕ ಸುನ್ನತಿ ಪಡೆದವರು ನಿಮ್ಮನ್ನು ‘ಸುನ್ನತಿಯಿಲ್ಲದವರು’ ಎಂದು ತುಚ್ಛೀಕರಿಸಿ ಕರೆಯುತ್ತಿದ್ದರು.


ನನ್ನ ಜನರ ಒಳಕಲಹದಿಂದೆನ್ನ ನೀ ತಪ್ಪಿಸಿದೆ ನನ್ನನುಳಿಸಿ ಜನಾಂಗಗಳಿಗೆ ಜನಪನಾಗಿಸಿದೆ ನಾನರಿಯದ ಜನರನ್ನೂ ನನಗಧೀನರನ್ನಾಗಿಸಿದೆ.


ಕೇಳಿರಿ ಸರ್ವೇಶ್ವರನ ಈ ಮಾತನ್ನು : “ನಿಮ್ಮದಾಗುವುದು ಈಜಿಪ್ಟಿನ ಸಿರಿಯು, ಸುಡಾನಿನ ಸಂಪದವು. ನಿಮ್ಮನ್ನು ಸೇರಿ ನಿಮಗಧೀನರಾಗುವರು ಎತ್ತರದ ಸೆಬಾಯರು. ಬೇಡಿತೊಟ್ಟು ಅಡ್ಡಬೀಳುವರು ನಿಮ್ಮ ಮುಂದೆ ಅರಿಕೆಮಾಡಿಕೊಳ್ಳುವರು ಹೀಗೆಂದೆ : ‘ನಿಶ್ಚಯವಾಗಿ ನಿಮ್ಮಲ್ಲಿಹರು ದೇವರು ಅವರಲ್ಲದೆ ದೇವರಿಲ್ಲ ಬೇರೆಯಾರು.’


“ಎಲ್ಲೆ ಎಲ್ಲೆಗಳಲ್ಲಿರುವ ಜನರೇ, ತಿರುಗಿಕೊಳ್ಳಿರಿ ನನ್ನ ಕಡೆಗೆ, ಆಗ ಉದ್ಧಾರವಾಗುವಿರಿ. ದೇವರು ಬೇರಾರೂ ಇಲ್ಲ, ನಾನೊಬ್ಬನೆ ಎಂಬುದನರಿಯಿರಿ.


ನೋಡಿ, ಬರುತಿಹರು ನನ್ನ ಜನರು ದೂರದಿಂದ ಹೌದು, ಬರುತಿಹರು ಉತ್ತರ ಪಶ್ಚಿಮದಿಂದ ದಕ್ಷಿಣದ ಆ ಅಶ್ವಾನ್ ನಾಡಿನಿಂದ.


ಅವುಗಳಿಂದ ಸ್ತುತಿಸ್ತೋತ್ರ ಕೇಳಿಬರುವುದು ಅಲ್ಲಿಂದ ನಲಿವುನಾದ ಕೇಳಿಸುವುದು. ಆ ಜನರನ್ನು ಹೆಚ್ಚಿಸುವೆನು, ಅವರು ಕೊಂಚವಾಗಿರರು. ಅವರನ್ನು ಘನಪಡಿಸುವೆನು, ಅವರು ಹೀನರಾಗಿರರು.


ನಾನು ನನ್ನ ಪವಿತ್ರನಾಮವನ್ನು ನನ್ನ ಜನರಾದ ಇಸ್ರಯೇಲರ ನಡುವೆ ವ್ಯಕ್ತಗೊಳಿಸುವೆನು, ಅದನ್ನು ಇನ್ನು ಮುಂದೆ ಅಪಕೀರ್ತಿಗೆ ಗುರಿಯಾಗಲುಬಿಡೆನು; ನಾನೇ ಸರ್ವೇಶ್ವರ, ಇಸ್ರಯೇಲಿನ ಪರಮಪಾವನಸ್ವಾಮಿ ಎಂದು ಜನಾಂಗಗಳಿಗೆ ಗೊತ್ತಾಗುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು