Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 55:8 - ಕನ್ನಡ ಸತ್ಯವೇದವು C.L. Bible (BSI)

8 “ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಂಥಲ್ಲ ನನ್ನ ಮಾರ್ಗಗಳು ನಿಮ್ಮ ಮಾರ್ಗಗಳಂಥಲ್ಲ” ಎಂದಿಹನು ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನು ಹೀಗೆನ್ನುತ್ತಾನೆ, “ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ, ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋವನು ಹೀಗನ್ನುತ್ತಾನೆ - ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ, ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋವನು ಹೇಳುವುದೇನೆಂದರೆ: “ನಿಮ್ಮ ಆಲೋಚನೆಗಳು ನನ್ನ ಆಲೋಚನೆಗಳಲ್ಲ. ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ. ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ, ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 55:8
19 ತಿಳಿವುಗಳ ಹೋಲಿಕೆ  

ಪ್ರಭು, ನಿನ್ನ ಕೃತ್ಯಗಳೆನಿತೋ ಅಮೂಲ್ಯ I ನಿನ್ನಾಲೋಚನೆಗಳು ಎನಿತೋ ಅಶೋಧ್ಯ II


ಪ್ರಭು, ಎನ್ನ ದೇವ, ನಿನಗೆ ಸಮಾನತೆ ಎಲ್ಲಿಯದು I ನೀನೆಸಗಿದ ಪವಾಡ ಪ್ರಯೋಜನಗಳೆನಿತು I ಅಗಣಿತವಾದವುಗಳ ವಿವರ ಅಸದಳವಾದುದು II


ಬುದ್ಧಿವಂತನು ಈ ಮಾತುಗಳನ್ನು ಗ್ರಹಿಸಿಕೊಳ್ಳಲಿ. ವಿವೇಕಿಯು ಈ ನುಡಿಗಳನ್ನು ಅರ್ಥಮಾಡಿಕೊಳ್ಳಲಿ. ಸರ್ವೇಶ್ವರಸ್ವಾಮಿಯ ಮಾರ್ಗಗಳು ನೇರವಾದವುಗಳು. ಸನ್ಮಾರ್ಗಿಗಳು ಅವುಗಳನ್ನು ಕೈಗೊಂಡು ನಡೆಯುವರು. ದುರ್ಮಾರ್ಗಿಗಳು ಅವುಗಳನ್ನು ಕೈಬಿಟ್ಟು ಮುಗ್ಗರಿಸಿ ಬೀಳುವರು.


ಆದರೆ ಇಸ್ರಯೇಲ್ ವಂಶದವರು ಸರ್ವೇಶ್ವರನ ಕ್ರಮ ಸರಿಯಲ್ಲ ಎಂದು ಹೇಳುತ್ತಿದ್ದಾರೆ; ಇಸ್ರಯೇಲ್ ವಂಶದವರೇ, ನನ್ನ ಕ್ರಮ, ಸರಿಯಿಲ್ಲವೇ? ನಿಮ್ಮ ಕ್ರಮವೇ ಸರಿಯಿಲ್ಲವಷ್ಟೆ.”


ಪ್ರಭುವಿನೊಪ್ಪಂದಗಳ ಪಾಲಕರಿಗೆ ಆತನ ಮಾರ್ಗಗಳು ಸನ್ನುತ I ಆತನ ವಿಧಿ ನಿಬಂಧನೆಗಳ ಪರಿಪಾಲಕರಿಗೆ ಅವುಗಳು ಸುಪ್ರೀತ II


ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ, ಕೀರ್ತಿಸುತ್ತೇನೆ: ಆತನ ಕಾರ್ಯಗಳೆಲ್ಲವು ಸತ್ಯ, ಆತನ ಮಾರ್ಗಗಳೆಲ್ಲವು ನ್ಯಾಯ, ಗರ್ವಿಷ್ಠರನ್ನು ಆತ ತಗ್ಗಿಸಬಲ್ಲ.


ತೊಳಲುತ್ತಿದ್ದೆವು ನಾವೆಲ್ಲರು ದಾರಿತಪ್ಪಿದ ಕುರಿಗಳಂತೆ ಹಿಡಿಯುತ್ತಿದ್ದನು ಪ್ರತಿಯೊಬ್ಬನು ತನ್ನ ತನ್ನ ದಾರಿಯನ್ನೆ. ನಮ್ಮೆಲ್ಲರ ದೋಷವನು ಸರ್ವೇಶ್ವರ ಹಾಕಿದ್ದ ಆತನ ಮೇಲೆ.


ದೋಷಿಯ ದಾರಿ ಸೊಟ್ಟಗೆ; ದೋಷರಹಿತನ ನಡತೆ ನೆಟ್ಟಗೆ.


ಆಕಾಶವು ಉನ್ನತ, ಭೂಮಿಯು ಅಗಾಧ, ಅಂತೆಯೇ ರಾಜರ ಮನಸ್ಸು ಅಗೋಚರ.


ಸರ್ವೇಶ್ವರಾ, ಸರ್ವೆಶ್ವರಾ, ಇದೂ ಸಾಲದೆಂದೆಣಿಸಿ, ನಿಮ್ಮ ದಾಸನ ಬಹು ಮುಂದಿನ ಸಂತಾನದ ವಿಷಯದಲ್ಲೂ ತಾವು ವಾಗ್ದಾನ ಮಾಡಿರುವಿರಿ. ಸರ್ವೇಶ್ವರಾ, ಸರ್ವೇಶ್ವರಾ, ತಾವು ಹೀಗೆ ವರ್ತಿಸುವುದು ನರಮಾನವರಿಗೆ ಎಂಥಾ ಭಾಗ್ಯ!


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಗಂಡನು ತ್ಯಜಿಸಿದವಳು, ಅವನಿಂದ ಹೊರಟು ಮತ್ತೊಬ್ಬನವಳಾದ ಮೇಲೆ, ಅವಳನ್ನು ಆ ಗಂಡನು ಮತ್ತೆ ಸೇರಿಸಿಕೊಳ್ಳುತ್ತಾನೆಯೆ? ಸೇರಿಸಿಕೊಂಡರೆ ಆ ನಾಡು ಕೆಟ್ಟು ಅಪವಿತ್ರವಾಗಿ ಹೋಗುವುದಿಲ್ಲವೇ? ಹೀಗಿರಲು ಓ ಇಸ್ರಯೇಲ್, ಬಹುಮಂದಿ ಮಿಂಡರೊಡನೆ ವೇಶ್ಯವಾಟಿಕೆ ನಡೆಸಿದ ನೀನು ನನ್ನ ಬಳಿಗೆ ಬರುವೆಯಾ?


ಪ್ರಭುವಿನ ಯೋಜನೆ ಶಾಶ್ವತ I ಅವನ ಸಂಕಲ್ಪ ಅನವರತ II


ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ಪ್ರತಿಜ್ಞೆಯಿದು : “ನೆರವೇರಿಯೇ ತೀರುವುದು ನಾ ಸಂಕಲ್ಪಿಸಿದ್ದು, ಈಡೇರಿಯೇ ತೀರುವುದು ನಾ ಯೋಚಿಸಿದ್ದು.


“ನೀವು ಸಬ್ಬತ್‍ದಿನವನ್ನು ತಾತ್ಸಾರಮಾಡದೆ, ಆ ನನ್ನ ಪರಿಶುದ್ಧ ದಿನದಲ್ಲಿ ನಿಮ್ಮ ದೈನಂದಿನ ವ್ಯವಹಾರವನ್ನು ನಡೆಸದೆ, ಸ್ವೇಚ್ಛೆಯಾಗಿ ವರ್ತಿಸದೆ, ಸ್ವಕಾರ್ಯದಲ್ಲೇ ನಿರತರಾಗದೆ, ಹರಟೆಮಾತುಗಳಲ್ಲಿ ಕಾಲಕಳೆಯದೆ, ಸರ್ವೇಶ್ವರ ಸ್ವಾಮಿಯ ಸಬ್ಬತ್‍ದಿನ ಪರಿಶುದ್ಧವಾದುದು, ಸಂತೋಷಕರವಾದುದು, ಮಾನ್ಯತೆಗೆ ಅರ್ಹವಾದುದು ಎಂದು ಸನ್ಮಾನಿಸಿದ್ದೇ ಆದರೆ


ನನ್ನನ್ನು ತೊರೆದು ತಮಗೆ ಇಷ್ಟಬಂದ ಹಾದಿಯನ್ನು ಹಿಡಿದು ದುಷ್ಟಮಾರ್ಗದಲ್ಲೆ ನಡೆದ ಜನತೆಯನ್ನು ಕೈಚಾಚಿ ಕರೆದೆ.


“ಅವರ ಕೃತ್ಯಗಳೂ ಆಲೋಚನೆಗಳೂ ನನಗೆ ತಿಳಿದಿವೆ. ಸಮಸ್ತ ರಾಷ್ಟ್ರಗಳನ್ನೂ ಸಕಲ ಭಾಷೆಯವರನ್ನೂ ಒಟ್ಟಿಗೆ ಬರಮಾಡುವೆನು. ಅವರು ಬಂದು ನನ್ನ ಮಹಿಮೆಯ ಪ್ರಕಾಶವನ್ನು ಕಾಣುವರು.


ಆದರೆ ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನೀನು ಅವನ ಚೆಲುವಿಕೆಯನ್ನಾಗಲಿ ಎತ್ತರವನ್ನಾಗಲಿ ನೋಡಬೇಡ; ನಾನು ಅವನನ್ನು ತಳ್ಳಿಬಿಟ್ಟಿದ್ದೇನೆ. ಸರ್ವೇಶ್ವರ ಮನುಷ್ಯರಂತೆ ಬಹಿರಂಗದ ತೋರಿಕೆಯನ್ನು ನೋಡುವುದಿಲ್ಲ; ಅಂತರಂಗವನ್ನೇ ವೀಕ್ಷಿಸುತ್ತಾನೆ,” ಎಂದರು.


ನಾಮಾನನು ಇದನ್ನು ಕೇಳಿ ಕೋಪಗೊಂಡನು . “ಇದೇನು ! ಇವನು ಖಂಡಿತ ವಾಗಿ ಹೊರಗೆಬಂದು ನಿಂತು, ತನ್ನ ದೇವರಾದ ಸರ್ವೇಶ್ವರ ನ ಹೆಸರು ಹೇಳಿ, ನನ್ನ ಚರ್ಮ ದ ಮೇಲೆ ಕೈಯಾಡಿಸಿ , ರೋಗ ವಾಸಿ ಮಾಡುವನೆಂದು ನೆನಸಿದೆ .


ಗಗನ ಮಂಡಲವನು ಕಣ್ಣೆತ್ತಿ ನೋಡು ನಿನಗೂ ಎಷ್ಟೋ ಎತ್ತರವಾದ ಮೇಘ ಮಾರ್ಗವನು ದಿಟ್ಟಿಸಿ ನೋಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು