Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 56:11 - ಕನ್ನಡ ಸತ್ಯವೇದವು C.L. Bible (BSI)

11 ಹೊಟ್ಟೆಬಾಕ ಕುನ್ನಿಗಳು; ಎಂದಿಗೂ ತೃಪ್ತಿ ಪಡೆಯದ ಶುನಕಗಳು. ಇಂಥವರು ಕುರಿಗಳನ್ನು ಕಾಯಲು ಯೋಗ್ಯರೋ? ಇವರು ಬುದ್ಧಿಹೀನರು. ಇವರಲ್ಲಿ ಪ್ರತಿಯೊಬ್ಬನು ಕೊಳ್ಳೆಹೊಡೆಯಬೇಕೆಂದು ತನ್ನದೇ ಆದ ಮಾರ್ಗವನ್ನು ಹಿಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇವು ಹೊಟ್ಟೆಬಾಕ ನಾಯಿಗಳು, ಇವುಗಳಿಗೆ ಎಂದಿಗೂ ಸಾಕು ಎನಿಸದು. ಇಂಥವರು ಕುರಿಗಳನ್ನು ಕಾಯತಕ್ಕವರೋ! ಬುದ್ಧಿಹೀನರಾಗಿದ್ದಾರೆ, ಇವರಲ್ಲಿ ಯಾರೂ ತಪ್ಪದೆ ಪ್ರತಿಯೊಬ್ಬನೂ ಕೊಳ್ಳೆಹೊಡೆಯಬೇಕೆಂದು ತನ್ನ ತನ್ನ ಮಾರ್ಗಕ್ಕೆ ತಿರುಗಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮತ್ತು ಇವು ಹೊಟ್ಟೆಬಾಕ ನಾಯಿಗಳು, ಇವುಗಳಿಗೆ ಎಂದಿಗೂ ಸಾಕು ಎನಿಸದು. ಇಂಥವರು ಕುರಿಗಳನ್ನು ಕಾಯತಕ್ಕವರೋ! ಬುದ್ಧಿಹೀನರಾಗಿದ್ದಾರೆ, ಇವರಲ್ಲಿ ಯಾವನೂ ತಪ್ಪದೆ ಪ್ರತಿಯೊಬ್ಬನೂ ಕೊಳ್ಳೆಹೊಡೆಯಬೇಕೆಂದು ತನ್ನ ತನ್ನ ಮಾರ್ಗಕ್ಕೆ ತಿರುಗಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅವರು ಹಸಿದ ನಾಯಿಗಳಂತಿದ್ದಾರೆ. ಅವರು ಎಂದಿಗೂ ತೃಪ್ತಿ ಹೊಂದುವವರಲ್ಲ. ಕುರುಬರಿಗೆ ತಾವು ಮಾಡುವುದೇ ತಿಳಿಯದು. ಅವರು ತಮ್ಮ ಕುರಿಗಳ ಹಾಗೆ ದಾರಿತಪ್ಪಿದ್ದಾರೆ. ಅವರೆಲ್ಲಾ ಅತ್ಯಾಶೆಯುಳ್ಳವರು; ತಮ್ಮನ್ನು ತೃಪ್ತಿಪಡಿಸುವದೇ ಅವರ ಕೆಲಸ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಹೌದು, ಎಂದಿಗೂ ಸಾಕೆನ್ನದ ಹೊಟ್ಟೆಬಾಕ ನಾಯಿಗಳು ಮತ್ತು ಅವರು ಗ್ರಹಿಕೆ ಇಲ್ಲದ ಕುರುಬರು, ಅವರೆಲ್ಲರೂ ತಮ್ಮ ತಮ್ಮ ಸ್ವಂತ ಮಾರ್ಗಕ್ಕೂ, ಪ್ರತಿಯೊಬ್ಬನೂ ತನ್ನ ಲಾಭ ಸಿಕ್ಕುವ ಕಡೆಗೂ ತಿರುಗಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 56:11
36 ತಿಳಿವುಗಳ ಹೋಲಿಕೆ  

ನಿಮ್ಮ ಮುಖಂಡರು ಲಂಚಕ್ಕಾಗಿ ನ್ಯಾಯತೀರಿಸುತ್ತಾರೆ. ನಿಮ್ಮ ಯಾಜಕರು ಸಂಬಳಕ್ಕಾಗಿ ಉಪದೇಶಮಾಡುತ್ತಾರೆ. ಆದರೂ ಸರ್ವೆಶ್ವರಸ್ವಾಮಿಯ ಮೇಲೆ ಭಾರಹಾಕಿದವರಂತೆ, “ಸ್ವಾಮಿ ನಮ್ಮೊಡನೆ ಇಲ್ಲವೆ? ನಮಗೆ ಕೇಡು ಸಂಭವಿಸುವುದಾದರೂ ಹೇಗೆ?” ಎಂದುಕೊಳ್ಳುತ್ತಾರೆ.


ನೀವು ಹಿಡಿಯುವಷ್ಟೆ ಜವೆಗೋಧಿಗೆ, ಚೂರುಪಾರು ರೊಟ್ಟಿಗೆ ಆಸೆಪಟ್ಟು, ಸುಳ್ಳುಮಾತಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಜೀವಿಸತಕ್ಕವರನ್ನು ಸಾಯಿಸಿ, ಸಾಯತಕ್ಕವರನ್ನು ಉಳಿಸಿ, ನನ್ನ ಜನರ ನಡುವೆ ನನ್ನ ಘನತೆಗೆ ಕುಂದುತಂದಿದ್ದೀರಿ.”


ಆದರೆ ಶುನಕ ಸಮಾನರೂ ಮಾಟಮಂತ್ರಗಾರರೂ ಕಾಮುಕರೂ ಕೊಲೆಗಾರರೂ ವಿಗ್ರಹಾರಾಧಕರೂ ಅಸತ್ಯವಾದಿಗಳೂ ನಗರದ ಹೊರಗೆ ಬಿದ್ದಿರುವರು.


ಏಕೆಂದರೆ, ಸಭಾಧ್ಯಕ್ಷನು ದೇವರ ಸೇವೆಯಲ್ಲಿ ಮೇಲ್ವಿಚಾರಕನಾಗಿರುವುದರಿಂದ ನಿಂದಾರಹಿತನಾಗಿರಬೇಕು. ಆತನು ಗರ್ವಿ ಅಥವಾ ಮುಂಗೋಪಿಯಾಗಿರಬಾರದು. ಕುಡಿತವಾಗಲಿ, ಹಿಂಸಾಚಾರವಾಗಲಿ, ಹಿಂಸಾಪ್ರವೃತ್ತಿಯಾಗಲಿ ಅವನಲ್ಲಿರಬಾರದು. ಅವನು ಲಾಭಕೋರನಾಗಿರಬಾರದು.


ನಾನು ಹೇಳುವುದು ನಿಮಗೆ ಅರ್ಥವಾಗುವುದಿಲ್ಲ, ಏಕೆ? ನನ್ನ ಸಂದೇಶಕ್ಕೆ ಕಿವಿಗೊಡಲು ನಿಮ್ಮಿಂದಾಗದಿರುವುದೇ ಇದಕ್ಕೆ ಕಾರಣ.


ನನ್ನ ಜನರ ದುರಾಶೆಯ ದೋಷದ ನಿಮಿತ್ತ ನಾನು ಕೋಪಗೊಂಡೆ, ದಂಡಿಸಿದೆ, ಮುಖ ಮರೆಸಿಕೊಂಡೆ, ರೋಷಭರಿತನಾದೆ. ಅವರಾದರೋ ಮೊಂಡುತನದಿಂದ ಮನಸ್ಸಿಗೆ ತೋಚಿದ ಹಾಗೆ ನಡೆಯುತ್ತಾ ಬಂದಿದ್ದಾರೆ.


ಎತ್ತು ಯಜಮಾನನನ್ನು, ಕತ್ತೆ ಒಡೆಯನ ಕೊಟ್ಟಿಗೆಯನ್ನು ಬಲ್ಲವು. ಆದರೆ ನನ್ನ ಪ್ರಜೆಗಳಾದ ಇಸ್ರಯೇಲರಿಗೆ ಅಷ್ಟೂ ತಿಳಿದಿಲ್ಲ. ಅವರಿಗೆ ಏನೂ ತಿಳಿಯುವುದಿಲ್ಲ.


ಈ ದುರ್ಬೋಧಕರು ಗುಣಗುಟ್ಟುವವರು, ಅತೃಪ್ತರು, ದುರಾಶೆಗಳಿಗೆ ಬಲಿಯಾದವರು, ಬಡಾಯಿಕೊಚ್ಚಿಕೊಳ್ಳುವವರು, ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುವವರು.


ಇವರ ದುರ್ಗತಿ ಭಯಂಕರವಾದುದು! ಇವರು ಕಾಯಿನನ ಮಾರ್ಗವನ್ನು ಹಿಡಿದಿದ್ದಾರೆ; ಲಾಭಕೋರರಾಗಿ ಬಿಳಾಮನ ಭ್ರಾಂತಿಯಲ್ಲಿ ಬೀಳಹೋಗುತ್ತಾರೆ; ಕೋರಹನಂತೆ ದಂಗೆ ಎದ್ದು ವಿನಾಶವಾಗುತ್ತಿದ್ದಾರೆ.


ಅವರು ದ್ರವ್ಯಾಶೆಪೀಡಿತರಾಗಿ ಕಟ್ಟುಕತೆಗಳನ್ನು ಹೇಳುತ್ತಾ ನಿಮ್ಮಿಂದ ಲಾಭಗಳಿಸುವರು. ದೀರ್ಘಕಾಲದಿಂದ ಅವರಿಗಾಗಿ ಸಿದ್ಧವಾಗಿರುವ ದಂಡನೆಯ ತೀರ್ಪು ಸಮೀಪಿಸುತ್ತಿದೆ. ಅವರನ್ನು ನಾಶಗೊಳಿಸುವವರೇನೂ ನಿದ್ರಿಸುತ್ತಿಲ್ಲ.


ನನ್ನ ಜೊತೆಹಿರಿಯರೇ, ದೇವರು ನಿಮಗೆ ವಹಿಸಿಕೊಟ್ಟಿರುವ ಮಂದೆಯನ್ನು ಕಾಯಿರಿ. ಕಡ್ಡಾಯದಿಂದಲ್ಲ, ದೇವರ ಚಿತ್ತಾನುಸಾರ ಅಕ್ಕರೆಯಿಂದ ಕಾಯಿರಿ. ದ್ರವ್ಯದ ದುರಾಶೆಯಿಂದಲ್ಲ, ಸೇವಾಸಕ್ತಿಯಿಂದ ಕಾಯಿರಿ.


ಇವರ ಬಾಯಿ ಮುಚ್ಚಿಸಬೇಕಾಗಿದೆ. ಏಕೆಂದರೆ, ಇವರು ಹಣಸಂಪಾದನೆಯ ದುರುದ್ದೇಶದಿಂದ ಮಾಡಬಾರದ ಬೋಧನೆಯನ್ನು ಮಾಡಿ ಅನೇಕ ಕುಟುಂಬಗಳನ್ನು ಹಾಳುಮಾಡುತ್ತಿದ್ದಾರೆ.


ಸಭಾಸೇವಕರು ಸಜ್ಜನರಾಗಿರಬೇಕು. ಎರಡು ನಾಲಿಗೆಯುಳ್ಳವರೂ ಕುಡುಕರೂ ಲಾಭಕೋರರೂ ಆಗಿರಬಾರದು.


ಅವನು ಕುಡುಕನು, ಕಲಹಪ್ರಿಯನು ಮತ್ತು ಹೊಡೆದಾಡುವವನು ಆಗಿರಬಾರದು. ಶಾಂತನೂ ದಯಾವಂತನೂ ಹಣದ ವ್ಯಾಮೋಹ ಇಲ್ಲದವನೂ ಆಗಿರಬೇಕು.


ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕಾರ್ಯಗಳಲ್ಲಿಯೇ ಅವರಿಗೆ ಹೆಮ್ಮೆ, ನಶ್ವರವಾದ ವಿಷಯಗಳಲ್ಲಿಯೇ ಅವರಿಗೆ ವ್ಯಾಮೋಹ. ಹೀಗಾಗಿ, ವಿನಾಶವೇ ಅವರ ಅಂತ್ಯ.


ಇವರು ವಿಶ್ವಾಸಿಸುವುದಿಲ್ಲ. ಏಕೆಂದರೆ, ಪೃಥ್ವಿಯ ಮಿಥ್ಯ ದೈವವು ಇವರ ಮನಸ್ಸನ್ನು ಮಂಕಾಗಿಸಿದೆ; ದೇವರ ಪ್ರತಿರೂಪವಾಗಿರುವ ಕ್ರಿಸ್ತಯೇಸುವಿನ ಮಹಿಮೆಯನ್ನು ಸಾರುವ ಶುಭಸಂದೇಶದ ಬೆಳಕನ್ನು ಕಾಣದಂತೆ ಇವರನ್ನು ಕುರುಡಾಗಿಸಿದೆ.


ನಾನು ಯಾರ ಬೆಳ್ಳಿಬಂಗಾರಕ್ಕೂ ಬಟ್ಟೆಬರೆಗೂ ಆಶೆಪಟ್ಟವನಲ್ಲ.


ನಾನು ಹೋದ ಬಳಿಕ ಕ್ರೂರವಾದ ತೋಳಗಳು ನಿಮ್ಮ ಮಧ್ಯೆ ನುಗ್ಗುವುವು ಎಂದು ನಾನು ಬಲ್ಲೆ. ಅವು ಮಂದೆಗೆ ಹಾನಿಮಾಡದೆ ಬಿಡವು.


“ನನ್ನ ಬಲಿಪೀಠದ ಮೇಲೆ ಯಾರೂ ಜ್ಯೋತಿಯನ್ನು ವ್ಯರ್ಥವಾಗಿ ಬೆಳಗಿಸದಂತೆ ಮಹಾದೇವಾಲಯದ ಬಾಗಿಲನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೆಯದು. ನಾನು ನಿಮ್ಮನ್ನು ಮೆಚ್ಚಿಕೊಂಡಿಲ್ಲ. ನಿಮ್ಮ ಕೈಯಿಂದ ಕಾಣಿಕೆಗಳನ್ನು ನಾನು ಸ್ವೀಕರಿಸುವುದಿಲ್ಲ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಆದರೆ ನಿನ್ನ ದೃಷ್ಟಿ, ನಿನ್ನ ಮನಸ್ಸು ನೆಲೆಗೊಂಡಿವೆ ದುರ್ಲಾಭದಲ್ಲಿ, ನಿರ್ದೋಷಿಯ ರಕ್ತ ಸುರಿಸುವುದರಲ್ಲಿ ದಬ್ಬಾಳಿಕೆಯಲ್ಲಿ, ಹಿಂಸಾಚಾರಗಳಲ್ಲಿ.”


ಹಣದಾಸೆಯುಳ್ಳವನಿಗೆ ಎಷ್ಟು ಹಣ ಇದ್ದರೂ ತೃಪ್ತಿಯಿಲ್ಲ. ಆಸ್ತಿ ಬಯಸುವವನಿಗೆ ಎಷ್ಟು ಆದಾಯವಿದ್ದರೂ ನೆಮ್ಮದಿಯಿಲ್ಲ. ಇದೂ ಸಹ ವ್ಯರ್ಥವೇ.


ಆದರೆ ನನ್ನ ಪ್ರಜೆ ಇಸ್ರಯೇಲರು ನನ್ನ ಆಜ್ಞಾನುಸಾರ ನನ್ನ ಮಂದಿರಕ್ಕೆ ತರುವ ಬಲಿದಾನಗಳ ಹಾಗು ನೈವೇದ್ಯಗಳ ಘನತೆಯನ್ನು ನೀವು ಭಂಗಪಡಿಸಿದ್ದೀರಿ. ಅವುಗಳ ಶ್ರೇಷ್ಠಭಾಗಗಳಿಂದ ನಿಮ್ಮನ್ನೇ ಕೊಬ್ಬಿಸಿಕೊಳ್ಳುತ್ತಿದ್ದೀರಿ; ಏಕೆ? ನೀನು ನನ್ನನ್ನು ಗೌರವಿಸುವುದಕ್ಕಿಂತ ಹೆಚ್ಚಾಗಿ ನಿನ್ನ ಮಕ್ಕಳನ್ನೇ ಗೌರವಿಸುವುದು ಸರಿಯೇ?


ಅಲ್ಲದೆ ಬಡವನ ಮೇಲಿನ ಕರುಣೆಯಿಂದ ಪಕ್ಷಪಾತದ ತೀರ್ಮಾನವನ್ನು ಮಾಡಬಾರದು.


ನಿಮಗೆ ಸುನ್ನತಿಯಾಗಬೇಕೆಂದು ಬೋಧಿಸುವವರ ವಿಷಯದಲ್ಲಿ ಜಾಗರೂಕರಾಗಿರಿ. ಅವರು ದುಷ್ಕರ್ಮಿಗಳು, ಶ್ವಾನಗಳಿಗೆ ಸಮಾನರು.


ಯಾಜಕರು, ಪ್ರವಾದಿಗಳು ಮದ್ಯಪಾನದಿಂದ ಮತ್ತರಾಗಿದ್ದಾರೆ; ದ್ರಾಕ್ಷಾರಸದಿಂದ ಓಲಾಡುತ್ತಿದ್ದಾರೆ; ಕುಡಿತದಿಂದ ತೂರಾಡುತ್ತಿದ್ದಾರೆ. ದ್ರಾಕ್ಷಾರಸವೇ ಅವರನ್ನು ಮುಳುಗಿಸಿಬಿಟ್ಟಿದೆ. ಹೌದು, ಅವರು ಮದ್ಯದಲ್ಲಿ ತೇಲಾಡುತ್ತಿದ್ದಾರೆ. ದೈವದರ್ಶನವಾಗುತ್ತಿರುವಾಗಲೂ ಅವರು ಓಲಾಡುತ್ತಾರೆ.


ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಅನ್ಯಾಯವಾಗಿ ದೋಚಿಕೊಳ್ಳುತ್ತಲೇ ಇದ್ದಾರೆ. ಪ್ರವಾದಿಗಳು ಮೊದಲಾಗಿ ಯಾಜಕರವರೆಗೆ ಸಕಲರು ಮೋಸಮಾಡುತ್ತಾ ಇದ್ದಾರೆ.


ಆದುದರಿಂದಲೇ ಇವರ ಹೆಂಡತಿಯರನ್ನು ಅನ್ಯರಿಗೂ ಇವರ ಹೊಲಗದ್ದೆಗಳನ್ನು ಆಕ್ರಮಿಸುವವರಿಗೂ ಕೊಟ್ಟುಬಿಡುವೆನು. ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಅನ್ಯಾಯವಾಗಿ ದೋಚಿಕೊಳ್ಳುತ್ತಲೇ ಇದ್ದಾರೆ. ಪ್ರವಾದಿಗಳು ಮೊದಲಾಗಿ ಯಾಜಕರವರೆಗೆ ಸಕಲರೂ ಮೋಸಮಾಡುತ್ತಾರೆ.


ನನ್ನ ಜನರ ಪಾಪವೇ ಅವರಿಗೆ ಜೀವನಾಧಾರ. ಎಂತಲೇ ಅವರು ಪಾಪಕೃತ್ಯಗಳನ್ನೇ ಅಧಿಕವಾಗಿ ಬಯಸುತ್ತಾರೆ.


ಮೋವಾಬ್ಯರ ಹಾಗೂ ಮಿದ್ಯಾನ್ಯರ ಮುಖ್ಯಸ್ಥರು ಭವಿಷ್ಯವಾಣಿ ಕೇಳಲು ಸಲ್ಲಿಸಬೇಕಾದ ಕಾಣಿಕೆಯನ್ನು ತೆಗೆದುಕೊಂಡು ಬಿಳಾಮನ ಹತ್ತಿರಕ್ಕೆ ಬಂದರು. ಬಾಲಾಕನು ಹೇಳಿಕಳಿಸಿದ್ದ ಮಾತುಗಳನ್ನು ತಿಳಿಸಿದರು.


ಯಾಜಕನು ಈ ಮಾತನ್ನು ಕೇಳಿ ಸಂತೋಷಪಟ್ಟು ಏಫೋದನ್ನೂ ದೇವತಾಪ್ರತಿಮೆಗಳನ್ನೂ ಕೆತ್ತನೆಯ ವಿಗ್ರಹವನ್ನೂ ತೆಗೆದುಕೊಂಡು ಅವರೊಡನೆ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು