Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 57:4 - ಕನ್ನಡ ಸತ್ಯವೇದವು C.L. Bible (BSI)

4 ಯಾರನ್ನು ಅಣಕಿಸಿ ಹಾಸ್ಯಮಾಡುತ್ತಿದ್ದೀರಿ? ಯಾರನ್ನು ನೋಡಿ ಬಾಯಿಕಿಸಿದು ನಾಲಿಗೆಯನ್ನು ಚಾಚುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯಾರನ್ನು ಗೇಲಿಮಾಡಿ ವಿನೋದಪಡುತ್ತೀರಿ? ಯಾರನ್ನು ನೋಡಿ ಬಾಯಿದೆರೆದು ನಾಲಿಗೆಯನ್ನು ಚಾಚುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯಾರನ್ನು ನೋಡಿ ಬಾಯಿ ಕಿಸಿದು ನಾಲಿಗೆಯನ್ನು ಚಾಚುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನೀವು ಸುಳ್ಳುಹೇಳುವ ದುಷ್ಟಮಕ್ಕಳು. ನೀವು ನನ್ನನ್ನು ಪರಿಹಾಸ್ಯ ಮಾಡುತ್ತೀರಿ. ನನ್ನನ್ನು ಹಿಯಾಳಿಸುತ್ತೀರಿ; ನಿಮ್ಮ ನಾಲಿಗೆಯನ್ನು ನನ್ನತ್ತ ಚಾಚುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯಾರನ್ನು ಹಾಸ್ಯಮಾಡುತ್ತೀರಿ? ಯಾರ ವಿಷಯವಾಗಿ ನೀವು ಬಾಯಿ ಅಗಲಿಸಿ, ನಾಲಿಗೆಯನ್ನು ಚಾಚುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 57:4
33 ತಿಳಿವುಗಳ ಹೋಲಿಕೆ  

ತಾವು ಮಾಡಿದ ಕೇಡಿಗೆ ಪ್ರತಿಯಾಗಿ ಕೇಡನ್ನೇ ಪಡೆಯುತ್ತಾರೆ. ಇವರು ಹಾಡುಹಗಲಿನಲ್ಲೇ ಏನುಬೇಕಾದರೂ ಮಾಡಿ, ದೈಹಿಕ ವ್ಯಾಮೋಹಗಳನ್ನು ತಣಿಸುವುದೇ ಸುಖವೆಂದು ಎಣಿಸುತ್ತಾರೆ. ವಂಚಕರಾದ ಇವರು ಪ್ರೇಮಭೋಜನಗಳಲ್ಲಿ ನಿಮ್ಮ ಸಂಗಡ ಸೇರಿ ತಿಂದುಕುಡಿಯುವಾಗ ನಿಮಗೆ ಕಳಂಕವನ್ನೂ ಮಾನನಷ್ಟವನ್ನೂ ತರುತ್ತಾರೆ.


ಎಲೈ ಪಾಪಿಷ್ಠ ಜನವೇ, ದೋಷಭರಿತ ಪ್ರಜೆಯೇ, ದುಷ್ಟಪೀಳಿಗೆಯೇ, ಭ್ರಷ್ಟಸಂತಾನವೇ, ನಿಮ್ಮ ಗತಿಯನ್ನು ಏನೆಂದು ಹೇಳಲಿ. ನೀವು ಸರ್ವೇಶ್ವರನನ್ನು ತೊರೆದಿದ್ದೀರಿ. ಇಸ್ರಯೇಲರ ಪರಮಪಾವನ ಸ್ವಾಮಿಯನ್ನು ಧಿಕ್ಕರಿಸಿದ್ದೀರಿ. ಅವರಿಗೆ ಬೆನ್ನುಮಾಡಿ ಬೇರೆಯಾಗಿದ್ದೀರಿ.


ಎನ್ನೀ ಪರಿಸ್ಥಿತಿಯನು ಕಂಡು ಅವರು ಬಾಯಿ ಕಿಸಿದು I ನುಡಿದರು, “ಆಹಾ! ಕಣ್ಣಾರೆ ಕಂಡೆವಲ್ಲಾ” ಎಂದು II


ನೀನು ನನ್ನ ಜನರನ್ನು ಇನ್ನೂ ಹೋಗಗೊಡಿಸದೆ ಅವರ ಮುಂದೆ ಅಡ್ಡಿ ಆತಂಕಗಳನ್ನು ಒಡ್ಡುತ್ತಿರುವೆಯೋ?


ಇಂಥವುಗಳಿಗೆ ಈಡಾಗುವ ದುಷ್ಕರ್ಮಿಗಳು ದೇವರ ಕೋಪಾಗ್ನಿಗೆ ಗುರಿಯಾಗುತ್ತಾರೆ.


ಹುರುಳಿಲ್ಲದ ಮಾತುಗಳನ್ನು ಆಡುವವರಿಗೆ ಮರುಳಾಗದಿರಿ. ಇಂಥ ಕೃತ್ಯಗಳನ್ನು ಮಾಡುವ ದುಷ್ಕರ್ಮಿಗಳ ಮೇಲೆ ದೇವರ ಕೋಪ ಎರಗುತ್ತದೆ.


ಅವನು ನೆಲಕ್ಕುರುಳಿದನು. “ಸೌಲನೇ, ಸೌಲನೇ, ನನ್ನನ್ನೇಕೆ ಹಿಂಸಿಸುತ್ತಿರುವೆ?” ಎಂಬ ವಾಣಿ ಅವನಿಗೆ ಕೇಳಿಸಿತು.


ಅನಂತರ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ನಿಮ್ಮನ್ನು ಆಲಿಸುವವನು ನನ್ನನ್ನೇ ಆಲಿಸುತ್ತಾನೆ; ನಿಮ್ಮನ್ನು ಅಲಕ್ಷ್ಯಮಾಡುವವನು ನನ್ನನ್ನೇ ಅಲಕ್ಷ್ಯಮಾಡುತ್ತಾನೆ; ನನ್ನನ್ನು ಅಲಕ್ಷ್ಯಮಾಡುವವನಾದರೋ ನನ್ನನ್ನು ಕಳುಹಿಸಿದಾತನನ್ನೇ ಅಲಕ್ಷ್ಯಮಾಡುತ್ತಾನೆ,” ಎಂದರು.


ಮುಳ್ಳಿನಿಂದ ಒಂದು ಕಿರೀಟವನ್ನು ಹೆಣೆದು, ಅವರ ತಲೆಯ ಮೇಲೆ ಇರಿಸಿದರು. ಕೈಗೆ ಒಂದು ಕೋಲನ್ನು ಕೊಟ್ಟರು. ಆಮೇಲೆ ಅವರ ಮುಂದೆ ಮೊಣಕಾಲೂರಿ, “ಯೆಹೂದ್ಯರ ಅರಸನಿಗೆ ಜಯವಾಗಲಿ!” ಎಂದು ಹೇಳಿ ಪರಿಹಾಸ್ಯಮಾಡಿದರು.


ಹೊಲವೇ ಈ ಲೋಕ; ಒಳ್ಳೆಯ ಕಾಳುಗಳೇ ಶ್ರೀಸಾಮ್ರಾಜ್ಯದ ಮಕ್ಕಳು; ಕಳೆಗಳೇ ಕೇಡಿಗನ ಮಕ್ಕಳು.


“ಇಸ್ರಯೇಲ್, ನೀನು ಗಿಬ್ಯದಲ್ಲಿದ್ದ ಕಾಲದಿಂದ ನನಗೆ ವಿರುದ್ಧ ಪಾಪಮಾಡುತ್ತಲೇ ಬಂದಿರುವೆ. ನಿನ್ನ ಜನರು ಪಾಪದಲ್ಲಿಯೇ ಮುಂದುವರಿಯುತ್ತಿದ್ದಾರೆ. ಗಿಬ್ಯದ ನಿವಾಸಿಗಳು ಯುದ್ಧಕ್ಕೆ ತುತ್ತಾಗಲಿದ್ದಾರೆ.


ನಾನು ಯಾವ ಸಂತಾನದವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಆ ಸಂತಾನದವರು ನಾಚಿಕೆಗೆಟ್ಟವರೂ ಹಟಗಾರರೂ ಆಗಿದ್ದಾರೆ; ನೀನು ಅವರಿಗೆ, ‘ಸರ್ವೇಶ್ವರನಾದ ದೇವರೇ ಇಂತೆನ್ನುತ್ತಾರೆ,’ ಎಂದು ನುಡಿ.


ನನ್ನ ವಿರುದ್ಧ, ನಿನಗಿರುವ ಕ್ರೋಧ, ಗರ್ವ ತಿಳಿದಿದೆ ನನಗೆ, ಎಂದೇ ಹಾಕುವೆ ಮೂಗಿಗೆ ದಾರ, ಬಾಯಿಗೆ ಕಡಿವಾಣ. ನೀ ಬಂದ ದಾರಿಯಿಂದಲೇ ಅಟ್ಟುವೆ ನಿನ್ನನ್ನು ಹಿಂದಕ್ಕೆ’.”


ನೀನು ನಿಂದಿಸಿ ದೂಷಿಸುತ್ತಿರುವುದು ಯಾರನ್ನು? ಕಿರಿಚಿ ಹೀಯಾಳಿಸುತ್ತಿರುವುದು ಯಾರನ್ನು? ಗರ್ವದಿಂದ ದುರುಗುಟ್ಟಿ ನೋಡಿದುದು ಯಾರನ್ನು? ಇಸ್ರಯೇಲರ ಪರಮಪಾವನ ಸ್ವಾಮಿಯನ್ನಲ್ಲವೇನು?


ಇವರು ದಂಗೆ ಏಳುವ ಜನರು. ಸುಳ್ಳಾಡುವ ಪೀಳಿಗೆ, ಸರ್ವೇಶ್ವರನ ಉಪದೇಶಕ್ಕೆ ಕಿವಿಗೊಡದ ಸಂತಾನ,


ಸರ್ವೇಶ್ವರ ಸ್ವಾಮಿಯ ನುಡಿಯಿದು : “ದ್ರೋಹಿಗಳಾದ ಈ ಪೀಳಿಗೆಗೆ ಧಿಕ್ಕಾರ ! ಇವರು ನನ್ನನ್ನು ಕೇಳದೆ ತಮ್ಮದೇ ಆದ ಯೋಜನೆಯನ್ನು ಸಾಧಿಸುತ್ತಾರೆ. ನನ್ನಾತ್ಮಪ್ರೇರಣೆಯಿಲ್ಲದೆ ತಂತ್ರೋಪಾಯಗಳನ್ನು ಹೂಡುತ್ತಾರೆ. ಪಾಪದ ಮೇಲೆ ಪಾಪವನ್ನು ಸೇರಿಸಿಕೊಳ್ಳುತ್ತಾರೆ.


ಕೊಡಲಿ, ಕಡಿಯುವವನನ್ನೇ ಕಡಿಯಲು ನಿಂತೀತೆ? ಗರಗಸ, ಆಡಿಸುವವನನ್ನೇ ಕತ್ತರಿಸಲು ಎದೆಗೊಂಡೀತೆ? ಕೋಲು, ಹಿಡಿದವನನ್ನೇ ಹೊಡೆದಂತಾಯಿತು! ನಿರ್ಜೀವ ದೊಣ್ಣೆ ಸಜೀವ ಮನುಷ್ಯನನ್ನೇ ಬಡಿದಂತಾಯಿತು!


ಊರ ಬಾಗಿಲಲಿ ಕೂರುವವರ ಹರಟೆಗೆ ಕಾರಣನಾದೆನಯ್ಯಾ I ಸಾರಾಯಿ ಮದ್ಯಸಾರ ಕುಡಿವವರ ಪದ್ಯವಸ್ತುವಾದೆನಯ್ಯಾ II


ಎಣಿಸಬಹುದಿದೆ ನನ್ನೆಲುಬುಗಳೆಲ್ಲವನು I ಹಿಗ್ಗುತಿಹರು ದುರುಗುಟ್ಟಿ ನೋಡೆನ್ನನು II


ಗರ್ಜಿಸುವ ಉಗ್ರಸಿಂಹಗಳಂತೆ ವೈರಿಗಳು I ಕಾದಿಹರು ಬಾಯಿ ತೆರೆದು ನನ್ನ ಕಬಳಿಸಲು II


ನೋಡುವವರೆಲ್ಲಾ ಎನ್ನನಣಕಿಸುತಿಹರು I ತುಟಿಯೋರೆ ಮಾಡಿ ತಲೆಯಾಡಿಸುತಿಹರು II


ಇಸ್ರಯೇಲರಾದರೋ ಮಕ್ಕೇದದಲ್ಲಿದ್ದ ಯೆಹೋಶುವನ ಬಳಿಗೆ ಸುರಕ್ಷಿತವಾಗಿ ಬಂದರು. ಇಸ್ರಯೇಲರ ವಿರುದ್ಧ ಯಾರೊಬ್ಬನೂ ನಾಲಿಗೆ ಮಸೆಯಲಿಲ್ಲ.


ಆರೋನನಂಥವನಿಗೇ ವಿರೋಧವಾಗಿ ಗೊಣಗುವವರಾದ್ದರಿಂದ ನೀನು ಮತ್ತು ನಿನ್ನ ಪಂಗಡದವರೆಲ್ಲರು ಸರ್ವೇಶ್ವರನಿಗೆ ವಿರುದ್ಧ ಕೂಡಿಕೊಂಡವರಾದಿರಿ!” ಎಂದನು.


ಹೌದು, ಹೌದು ನೀ ಕೇಳಿಲ್ಲ, ತಿಳಿದೂ ಇಲ್ಲ ಅದಿಯಿಂದ ನಿನ್ನ ಕಿವಿ ತೆರೆದೂ ಇಲ್ಲ ನೀನು ಆಗರ್ಭ ದ್ರೋಹಿ, ಮಹಾ ಕುಟಿಲ ಎಂಬುದು ನನಗೆ ತಿಳಿದು ಇದೆಯಲ್ಲ !


ಓಕ್‍ಮರಗಳ ತೋಪುಗಳಲ್ಲೂ ಸೊಂಪಾಗಿ ಹರಡಿರುವ ಮರಗಳ ಅಡಿಯಲ್ಲೂ ಕಾಮಾಗ್ನಿಯಿಂದ ಕುದಿಯುತ್ತೀರಿ. ಹೊಳೆಕೊರೆದ ಡೊಗರುಗಳಲ್ಲೂ ಬಂಡೆಬಿರುಕುಗಳಲ್ಲೂ ಮಕ್ಕಳನ್ನು ಬಲಿಕೊಡುತ್ತೀರಿ. ನೀವು ವಿದ್ರೋಹಿಗಳ ಸಂತಾನ, ಸುಳ್ಳುಗಾರರ ಸಂತತಿ.


ಆದರೂ ಅವರು ದೇವಸಂದೇಶಕರನ್ನು ಗೇಲಿಮಾಡಿದರು. ದೇವರ ಮಾತುಗಳನ್ನು ತುಚ್ಛೀಕರಿಸಿ ಅವರ ಪ್ರವಾದಿಗಳನ್ನು ಹೀಯಾಳಿಸಿದರು. ಆದ್ದರಿಂದ ದೇವಕೋಪಾಗ್ನಿ ಅವರ ಪ್ರಜೆಯ ಮೇಲೆ ಉರಿಯತೊಡಗಿತು. ಅದರ ತಾಪ ಆರಿಹೋಗಲೇ ಇಲ್ಲ.


ನನ್ನ ಮಾತೆಲ್ಲ ಅರಚಾಟ ‘ಹಿಂಸಾಚಾರ, ಕೊಳ್ಳೆ’ ಇವೇ ನನ್ನ ಕೂಗಾಟ. ಸರ್ವೇಶ್ವರನ ವಾಕ್ಯವನ್ನು ನಾನು ಸಾರಿದೆ ಜನರ ನಿಂದೆ ಪರಿಹಾಸ್ಯಕ್ಕೆ ಗುರಿಯಾದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು