Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 57:9 - ಕನ್ನಡ ಸತ್ಯವೇದವು C.L. Bible (BSI)

9 ಬೇಕಾದಷ್ಟು ಪರಿಮಳ ದ್ರವ್ಯವನ್ನು ಕೂಡಿಸಿಕೊಂಡು, ಸುಗಂಧ ತೈಲವನ್ನು ತೆಗೆದುಕೊಂಡು ‘ಮೋಲೆಕ್’ ದೇವತೆಯ ಬಳಿಗೆ ಯಾತ್ರೆಗೈದಿರುವೆ. (ಹೊಸ ದೇವತೆಗಳನ್ನು ಹುಡುಕಲು) ನಿನ್ನ ದೂತರನ್ನು ದೂರದೂರ ನಾಡುಗಳಿಗೆ ಕಳಿಸಿರುವೆ. ಪಾತಾಳದವರೆಗೂ ನಿನ್ನನ್ನು ತಗ್ಗಿಸಿಕೊಂಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಬಹು ಸುಗಂಧದ್ರವ್ಯಗಳನ್ನು ಕೂಡಿಸಿ, ತೈಲವನ್ನೂ ತೆಗೆದುಕೊಂಡು, ಪರರಾಜನ ಬಳಿಗೆ ಪ್ರಯಾಣಮಾಡಿದ್ದಿ; ನಿನ್ನ ರಾಯಭಾರಿಗಳನ್ನು ದೂರ ದೂರ ಕಳುಹಿಸಿದ್ದಿ; ನಿನ್ನನ್ನು ಪಾತಾಳದವರೆಗೂ ತಗ್ಗಿಸಿಕೊಂಡಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಬಹು ಸುಗಂಧದ್ರವ್ಯಗಳನ್ನು ಕೂಡಿಸಿ ತೈಲವನ್ನೂ ತೆಗೆದುಕೊಂಡು ಪರರಾಜನ ಬಳಿಗೆ ಪ್ರಯಾಣಮಾಡಿದ್ದೀ; ನಿನ್ನ ರಾಯಭಾರಿಗಳನ್ನು ದೂರ ದೂರ ಕಳುಹಿಸಿದ್ದೀ. ನಿನ್ನನ್ನು ಪಾತಾಳದವರೆಗೂ ತಗ್ಗಿಸಿಕೊಂಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಮೋಲೆಕನಿಗೆ ಅಂದವಾಗಿ ತೋರುವಂತೆ ನೀವು ನಿಮಗೆ ಎಣ್ಣೆ, ಸುಗಂಧದ್ರವ್ಯಗಳನ್ನು ಹಚ್ಚಿಕೊಂಡು ಹೋಗುವಿರಿ. ನಿಮ್ಮ ದೂತರನ್ನು ದೂರದೇಶಕ್ಕೆ ಕಳುಹಿಸುತ್ತೀರಿ. ಇವೇ ನಿಮ್ಮನ್ನು ನರಕಕ್ಕೆ ನಡಿಸುತ್ತವೆ. ಅಲ್ಲಿ ಮರಣವಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಬಹು ಸುಗಂಧದ್ರವ್ಯಗಳನ್ನು ಕೂಡಿಸಿ, ತೈಲದೊಂದಿಗೆ ರಾಜನ ಬಳಿಗೆ ಹೋಗಿದ್ದೀ. ದೂರಕ್ಕೆ ನಿನ್ನ ರಾಯಭಾರಿಗಳನ್ನು ಕಳುಹಿಸಿದ್ದೀ. ಪಾತಾಳದಷ್ಟು ನೀಚಸ್ಥಿತಿಗೆ ಇಳಿದಿದ್ದೀಯೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 57:9
12 ತಿಳಿವುಗಳ ಹೋಲಿಕೆ  

ಬಾಬಿಲೋನಿಯಾದ ಆ ವ್ಯಕ್ತಿಗಳ ಬಳಿಗೆ ದೂತರನ್ನು ಕಳುಹಿಸುತ್ತಿದ್ದಳು.


ನಿಮ್ಮಲ್ಲಿ ಕೆಲವರು ದೇವದೂತರ ಆರಾಧನೆಯಲ್ಲಿ ಆಸಕ್ತರಾಗಿದ್ದಾರೆ. ಲೌಕಿಕ ಜ್ಞಾನದಿಂದ ನಿರರ್ಥಕವಾಗಿ ಉಬ್ಬಿಕೊಂಡಿದ್ದಾರೆ. ತಾವು ಬಹಳ ವಿನಯಶಾಲಿಗಳೆಂದು ಹೆಚ್ಚಳಪಡುತ್ತಾರೆ. ಇಂಥವರು ನಿಮ್ಮನ್ನು ಕಡೆಗಾಣಿಸದಂತೆ ಎಚ್ಚರದಿಂದಿರಿ. ಇವರು ಯೇಸುಕ್ರಿಸ್ತರೆಂಬ ಶಿರಸ್ಸಿನಿಂದ ಬೇರ್ಪಟ್ಟಿದ್ದಾರೆ.


“ಎಫ್ರಯಿಮ್ ಕೇವಲ ಗಾಳಿಗೆ ಕುರಿಗಾಹಿ; ಅದು ದಿನವಿಡೀ ಗುದ್ದಾಡುತ್ತಿರುವುದು ಮೂಡಣಗಾಳಿಯನ್ನೇ. ಅದು ಮೋಸವನ್ನೂ ಹಿಂಸೆಯನ್ನೂ ನಿರಂತರವಾಗಿ ಹೆಚ್ಚಿಸುತ್ತಿದೆ. ಅಸ್ಸೀರಿಯದೊಂದಿಗೆ ಒಪ್ಪಂದಮಾಡಿಕೊಳ್ಳುತ್ತಿದೆ. ಈಜಿಪ್ಟಿಗೆ ಎಣ್ಣೆಯನ್ನು ಕಾಣಿಕೆಯಾಗಿ ಕಳುಹಿಸುತ್ತಿದೆ.”


ಎಫ್ರಯಿಮ್ ಬುದ್ಧಿವಿವೇಕವಿಲ್ಲದ ಪಾರಿವಾಳದಂತೆ; ಅದರ ಜನರು ಈಜಿಪ್ಟನ್ನು ಸಹಾಯಕ್ಕೆ ಕರೆಯುತ್ತಾರೆ. ಅಸ್ಸೀರಿಯದ ಆಶ್ರಯಕ್ಕೆ ಓಡುತ್ತಾರೆ.


“ಇಷ್ಟರಲ್ಲಿ ದೂತನನ್ನು ಕಳುಹಿಸಿ ಪುರುಷರನ್ನು ದೂರದಿಂದ ಕರೆಯಿಸಿಕೊಂಡರು. ಇಗೋ, ಅವರೂ ಬಂದರು. ಎಲೌ ಹೆಂಗಸೇ, ಅವರಿಗಾಗಿ ನೀನು ಸ್ನಾನಮಾಡಿ, ಕಣ್ಣಿಗೆ ಕಾಡಿಗೆ ಹಚ್ಚಿ,


ಸಾಮಾನ್ಯವಾಗಿ ಸೂಳೆಯರಿಗೆ ಹಣ ಕೊಡುವುದುಂಟು; ನೀನಾದರೋ ನಿನ್ನ ಎಲ್ಲಾ ಮಿಂಡರಿಗೆ ನೀನೇ ಹಣ ನೀಡುತ್ತಿರುವೆ. ಅವರು ಎಲ್ಲ ಕಡೆಯಿಂದಲೂ ಬಂದು ನಿನ್ನಲ್ಲಿ ವ್ಯಭಿಚಾರಮಾಡುವಂತೆ ಅವರಿಗೆ ಬಹುಮಾನ ಕೊಡುತ್ತಿರುವೆ.


ಮಾನವನು ತಗ್ಗಿಹೋಗಿದ್ದಾನೆ, ಅಧೋಗತಿಗೆ ಇಳಿದಿದ್ದಾನೆ. ಸ್ವಾಮೀ, ಅವನಿಗೆ ಕ್ಷಮೆ ನೀಡಬೇಡಿ.


ರಸಗಂಧ, ಅಗರು, ಲವಂಗ ಚಕ್ಕೆಗಳಿಂದ ಅದನ್ನು ಘಮಘಮಗೊಳಿಸಿರುವೆ.


“(ಉತ್ತರದ) ರಾಜನು ಮನಸ್ಸು ಬಂದ ಹಾಗೆ ನಡೆದು ತಾನು ಎಲ್ಲ ದೇವರುಗಳಿಗಿಂತಲೂ ದೊಡ್ಡವನೆಂದು ತನ್ನನ್ನೇ ಹೆಚ್ಚಿಸಿಕೊಂಡು ಗರ್ವಿಷ್ಠನಾಗುವನು. ದೇವಾಧಿದೇವರನ್ನು ಅತಿಯಾಗಿ ದೂಷಿಸುವನು. ನಿಮ್ಮ ಮೇಲಿನ ದೈವಕೋಪ ತೀರುವ ತನಕ ಅವನು ವೃದ್ಧಿಯಾಗುವನು. ದೈವಸಂಕಲ್ಪ ನೆರವೇರಲೇಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು