Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 58:12 - ಕನ್ನಡ ಸತ್ಯವೇದವು C.L. Bible (BSI)

12 ಪುರಾತನಕಾಲದ ಪಾಳುಬಿದ್ದ ಮನೆಗಳನ್ನು ನಿಮ್ಮವರು ಮರಳಿ ಕಟ್ಟುವರು. ತಲತಲಾಂತರಗಳಿಂದ ಪಾಳುಬಿದ್ದಿರುವ ತಳಹದಿಗಳ ಮೇಲೆ ಕಟ್ಟಡಗಳನ್ನು ನೀವು ನಿರ್ಮಿಸುವಿರಿ. ‘ಬಿದ್ದ ಗೋಡೆಯನ್ನು ಎಬ್ಬಿಸಿದ ರಾಷ್ಟ್ರ’ ಎಂಬ ಬಿರುದು ನಿಮಗೆ ಬರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಿಮ್ಮ ಸಂತಾನದವರು ಪುರಾತನಕಾಲದಲ್ಲಿ ಹಾಳಾದ ನಿವೇಶನಗಳನ್ನು ಪುನಃ ಕಟ್ಟುವರು. ನೀವು ತಲತಲಾಂತರಗಳಿಂದ ಹಾಳುಬಿದ್ದಿರುವ ಅಸ್ತಿವಾರಗಳ ಮೇಲೆ ಕಟ್ಟಡಗಳನ್ನು ಎಬ್ಬಿಸುವಿರಿ; “ಬಿದ್ದ ಗೋಡೆಯನ್ನು ಕಟ್ಟುವ ಜನಾಂಗ, ಹಾದಿಗಳನ್ನು ತಿರುಗಾಡುವ ಸ್ಥಿತಿಗೆ ತರುವ ಜನಾಂಗ” ಎಂಬ ಬಿರುದುಗಳು ನಿಮಗುಂಟಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಿಮ್ಮ ಸಂತಾನದವರು ಪುರಾತನಕಾಲದಲ್ಲಿ ಹಾಳಾದ ನಿವೇಶನಗಳನ್ನು ತಿರಿಗಿ ಕಟ್ಟುವರು. ನೀವು ತಲತಲಾಂತರಗಳಿಂದ ಪಾಳುಬಿದ್ದಿರುವ ಅಸ್ತಿವಾರಗಳ ಮೇಲೆ ಕಟ್ಟಡಗಳನ್ನು ಎಬ್ಬಿಸುವಿರಿ; ಬಿದ್ದ ಗೋಡೆಯನ್ನು ಹಾಕುವ ಜನಾಂಗ, ಹಾದಿಗಳನ್ನು ತಿರುಗಾಡುವ ಸ್ಥಿತಿಗೆ ತರುವ ಜನಾಂಗ, ಎಂಬೀ ಬಿರುದುಗಳು ನಿಮಗುಂಟಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಬಹಳ ವರ್ಷಗಳಿಂದ ನಿಮ್ಮ ಪಟ್ಟಣಗಳು ಹಾಳಾಗಿ ಬಿದ್ದಿವೆ. ಆದರೆ ಹೊಸ ಪಟ್ಟಣಗಳು ಏಳುವವು. ಅವುಗಳ ಅಸ್ತಿವಾರಗಳು ಬಹಳ ವರ್ಷ ಬಾಳುವವು. ನೀವು “ಬೇಲಿ ಸರಿಮಾಡುವವರು” ಎಂದು ಕರೆಯಲ್ಪಡುವಿರಿ; “ಮನೆಗಳನ್ನು, ರಸ್ತೆಗಳನ್ನು ನಿರ್ಮಿಸುವವರು” ಎಂದು ನೀವು ಕರೆಯಲ್ಪಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ನಿನ್ನವರು ಪುರಾತನ ಕಾಲದ ಹಾಳಾದ ಸ್ಥಳಗಳನ್ನು ಕಟ್ಟುವರು. ತಲತಲಾಂತರಗಳಿಂದ ಹಾಳುಬಿದ್ದಿರುವ ಅಸ್ತಿವಾರಗಳನ್ನು ನೀನು ಎಬ್ಬಿಸುವೆ. ಬಿದ್ದ ಗೋಡೆಯನ್ನು ಎಬ್ಬಿಸುವ ದೇಶ ಎಂದೂ, ನಿವಾಸಿಗಳಿಗಾಗಿ ನಡೆದಾಡಲು ಹಾದಿಗಳನ್ನು ಉಂಟುಮಾಡುವ ದೇಶ ಎಂದೂ ನಿನಗೆ ಬಿರುದು ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 58:12
20 ತಿಳಿವುಗಳ ಹೋಲಿಕೆ  

ಮರಳಿ ಕಟ್ಟುವರಿವರು ಪಾಳುಬಿದ್ದ ಪುರಾತನ ಮನೆಗಳನು ಮತ್ತೆ ಎಬ್ಬಿಸುವರು ಬಿದ್ದ ಹಳೆಯ ಕಟ್ಟಡಗಳನು ನೂತನಗೊಳಿಸುವರು ತಲಾಂತರದ ಹಾಳುಬೀಳು ಪಟ್ಟಣಗಳನು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಾನು ನಿಮ್ಮನ್ನು ನಿಮ್ಮ ಅಪರಾಧಗಳಿಂದೆಲ್ಲಾ ಶುದ್ಧಿಮಾಡುವ ದಿನದಲ್ಲಿ ಪಟ್ಟಣಗಳನ್ನು ನಿವಾಸಿಗಳಿಂದ ತುಂಬಿಸುವೆನು. ನಿವೇಶನಗಳಲ್ಲಿ ಕಟ್ಟಡಗಳು ಏಳುವುವು.


ಬಳಿಕ ನಾನು ಅವರಿಗೆ, “ನಮ್ಮ ದುರವಸ್ಥೆ ನಿಮ್ಮ ಕಣ್ಣಮುಂದಿರುತ್ತದಲ್ಲವೇ? ಜೆರುಸಲೇಮ್ ಪಟ್ಟಣ ಹಾಳುಬಿದ್ದಿದೆ; ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ; ಬನ್ನಿ, ಜೆರುಸಲೇಮಿನ ಗೋಡೆಯನ್ನು ಕಟ್ಟೋಣ, ಹೀಗೆ ಮಾಡಿದರೆ ನಮ್ಮ ಮೇಲಿನ ನಿಂದೆ ನೀಗುವುದು,” ಎಂದು ಹೇಳಿದೆ.


ಸನಾತನ ಸೌಭಾಗ್ಯಕ್ಕೆ ಮರಳಿಸುವೆನು ನನ್ನ ಜನರಾದ ಇಸ್ರಯೇಲರನು. ವಾಸಮಾಡುವರವರು ಪಾಳುಬಿದ್ದ ಪಟ್ಟಣಗಳನು ಮತ್ತೆ ಕಟ್ಟಿಕೊಂಡು. ಕುಡಿಯುವರು ಸಮೃದ್ಧಿಯಾಗಿ ದ್ರಾಕ್ಷಾತೋಟಗಳನ್ನು ಮಾಡಿಕೊಂಡು. ತಿನ್ನುವರು ಯಥೇಚ್ಛವಾಗಿ ಫಲವೃಕ್ಷಗಳನು ಬೆಳೆಸಿಕೊಂಡು.


ಸರ್ವೇಶ್ವರ ಇಂತೆನ್ನುತ್ತಾರೆ: “ದಿನ ಬರಲಿದೆ. ಅಂದು ಬಿದ್ದುಹೋಗಿರುವ ದಾವೀದನ ಗುಡಾರವನ್ನು ಮರಳಿ ಎಬ್ಬಿಸುವೆನು. ಅದರ ಬಿರುಕುಗಳನ್ನು ಮುಚ್ಚುವೆನು. ಹಾಳಾದದ್ದನ್ನು ಎತ್ತಿ ನಿಲ್ಲಿಸುವೆನು. ಮೊದಲು ಇದ್ದಂತೆಯೇ ಪುನಃ ನಿರ್ಮಿಸುವೆನು.


ಸರ್ವೇಶ್ವರ ಹೀಗೆನ್ನುತ್ತಾರೆ: “ಇಗೋ ಕಾಲ ಬರಲಿದೆ. ಆಗ ಸರ್ವೇಶ್ವರನಾದ ನನ್ನ ಮಹಿಮೆಗಾಗಿ ಈ ನಗರವನ್ನು ಹನನೇಲನ ಗೋಪುರದಿಂದ ಮೂಲೆ ಬಾಗಿಲವರೆಗೆ ವಿಸ್ತರಿಸಲಾಗುವುದು.


ಸರ್ವೇಶ್ವರನಾದ ನಾನು ಸಂತೈಸದೆ ಬಿಡೆನು ಸಿಯೋನನ್ನು, ಉದ್ಧರಿಸುವೆನು ಆ ಹಾಳುಬಿದ್ದ ಸ್ಥಳಗಳೆಲ್ಲವನು. ಮಾರ್ಪಡಿಸುವೆನು ಕಾಡುನೆಲವನು ಏದೆನ್ ಉದ್ಯಾನದಂತೆ ಮರುಭೂಮಿಯನು, ದೇವತೆಗಳ ಉದ್ಯಾನವಾಗುವಂತೆ ಹರ್ಷೋಲ್ಲಾಸ, ಸ್ತುತಿಸ್ತೋತ್ರ, ಮಧುರಗಾನ ಅಲ್ಲಿ ನೆಲೆಸುವಂತೆ.


ತಮ್ಮ ಪ್ರಜೆಗೆ ಇಂತೆನ್ನುತ್ತಾರೆ ಸರ್ವೇಶ್ವರ ಸ್ವಾಮಿ : “ನಿನಗೆ ದಯಪಾಲಿಸುವೆನು ಸದುತ್ತರವನು ಪ್ರಸನ್ನತೆಯ ಕಾಲದಲಿ ಸಹಾಯ ನೀಡುವೆನು ರಕ್ಷಣೆಯ ದಿನದಲಿ ನಿನ್ನನು ಕಾಪಾಡಿ ನೇಮಿಸುವೆನು ಜನತೆಗೆ ಸ್ಥಿರ ಒಡಂಬಡಿಕೆಯಾಗಿ.


ಇದನ್ನು ತಿಳಿದು ಮನದಟ್ಟು ಮಾಡಿಕೊ, ‘ಹಿಂದಿರುಗಿ ಜೆರುಸಲೇಮನ್ನು ಪುನರ್‍ ನಿರ್ಮಿಸಿ’ ಎಂಬ ದೈವೋಕ್ತಿ ಹೊರಡುವಂದಿನಿಂದ ಪ್ರಭುವಾಗಿ ಅಭಿಷಿಕ್ತನಾದವನು ಬರುವುದರೊಳಗೆ ಏಳು ಸಾರಿ ಏಳು ವರ್ಷಗಳು ಕಳೆಯಬೇಕು. ಅದು ಪುನಃ ಬೀದಿ ಚೌಕಗಳಿಂದಲೂ ಕೋಟೆಕೊತ್ತಲುಗಳಿಂದಲೂ ಕಟ್ಟಲ್ಪಟ್ಟು ಏಳು ಸಾರಿ ಅರವತ್ತೆರಡು ವರ್ಷಗಳು ಇರುವುದು. ಆ ಕಾಲವು ಬಹು ಕಷ್ಟಕರವಾದ ಕಾಲವಾಗಿರುವುದು.


ಆದಕಾರಣ ಇಸ್ರಯೇಲಿನ ಪರ್ವತಗಳೇ, ಸರ್ವೇಶ್ವರನಾದ ದೇವರ ಈ ವಾಕ್ಯವನ್ನು ಕೇಳಿರಿ - ಬೆಟ್ಟಗುಡ್ಡಗಳಿಗೆ ತೊರೆತಗ್ಗುಗಳಿಗೆ, ಕಾಡಾದ ಹಾಳು ಪ್ರದೇಶಗಳಿಗೆ, ಸುತ್ತಣ ಜನಾಂಗಗಳಲ್ಲಿ ಉಳಿದವರು ಕೊಳ್ಳೆಹೊಡೆದು ಅಣಕಿಸುವ ಹಾಳು ಪಟ್ಟಣಗಳಿಗೆ ಸರ್ವೇಶ್ವರನಾದ ದೇವರು ಹೀಗೆ ನುಡಿಯುತ್ತಾರೆ :


ಜೆರುಸಲೇಮಿನ ಹಾಳುಬಿದ್ದ ಪ್ರದೇಶಗಳೇ, ಜಯಕಾರಮಾಡಿ ತಟ್ಟನೆ, ಹಾಡಿರಿ ಒಟ್ಟಿಗೆ, ಬಿಡುಗಡೆ ಮಾಡಿರುವನು ಸರ್ವೇಶ್ವರ ಜೆರುಸಲೇಮನು ತಂದಿರುವನು ತನ್ನ ಜನರಿಗೆ ಸಮಾಧಾನವನು.


ಕೋರೆಷನಿಗೆ ಇಂತೆನ್ನುವೆನು ನಾನು : ನನ್ನ ಮಂದೆ ಕಾಯುವವನು ನೀನು ನನ್ನ ಇಷ್ಟಾರ್ಥವನು ನೆರವೇರಿಸುವವನು ನೀನು; 'ಪುನಃ ನಿರ್ಮಾಣವಾಗುವೆ' ಎನ್ನುವೆ ಜೆರುಸಲೇಮಿಗೆ, ನೀನು; ‘ಪುನಃ ನಿನಗೆ ಅಸ್ತಿವಾರ ಹಾಕಿಸುವೆ’ ಎನ್ನುವೆ ಆ ದೇವಾಲಯಕೆ ನೀನು.”


ನಾನು ಗೋಡೆಯನ್ನು ಕಟ್ಟಿ ಮುಗಿಸಿ ಬಾಗಿಲುಗಳಿಗೆ ಕದಗಳನ್ನು ಇನ್ನೂ ಹಚ್ಚಿಸಿರಲಿಲ್ಲ. ಗೋಡೆಯ ಸಂದುಗೊಂದುಗಳನ್ನು ಕೂಡಿಸಿದ ಸಂಗತಿ ಸನ್ಬಲ್ಲಟ್, ಟೋಬೀಯ ಹಾಗು ಅರೇಬಿಯನಾದ ಗೆಷಮ್ ಇವರಿಗೂ


ಮತ್ತು ತಮ್ಮ ಸೇವಕನು ತಮ್ಮ ದೃಷ್ಟಿಯಲ್ಲಿ ದಯೆಗೆ ಪಾತ್ರನಾಗಿದ್ದರೆ, ನನ್ನ ಪಿತೃಗಳ ಸಮಾಧಿಗಳಿರುವ ಪಟ್ಟಣವನ್ನು ಮರಳಿ ಕಟ್ಟುವುದಕ್ಕೆ ಜುದೇಯ ನಾಡಿಗೆ ಹೋಗಲು ನನಗೆ ಅಪ್ಪಣೆಯಾಗಬೇಕು,” ಎಂದು ಹೇಳಿದೆ.


ಪಾಳು ಪೊಡವಿಯಲ್ಲಿ ನೆಲಮಾಳಿಗೆಗಳನ್ನು ನಿರ್ಮಿಸಿಕೊಂಡಿದ್ದ ರಾಜ-ಮಂತ್ರಿಗಳೊಡನೆ ನಾನಿರುತ್ತಿದ್ದೆ.


ಇದ್ದಕ್ಕಿದ್ದಂತೆ ಆ ಗೋಡೆ ತಟ್ಟನೆ ಬಿದ್ದುಹೋಗುವುದು. ಅಂತೆಯೇ ನಿಮ್ಮ ಅಪರಾಧ ನಿಮಗೆ ಅಪಾಯಕರವಾಗಿರುವುದು.


ಸರ್ವೇಶ್ವರನ ದಿನದಲ್ಲಿ ಯುದ್ಧಕ್ಕೆ ನಿಲ್ಲಬೇಕೆಂದು ನೀವು ಪೌಳಿಯ ಒಡಕುಗಳನ್ನೇರಲಿಲ್ಲ. ಇಸ್ರಯೇಲ್ ವಂಶದ ರಕ್ಷಣೆಗಾಗಿ ಗೋಡೆಯನ್ನು ಗಟ್ಟಿಮಾಡಲೂ ಇಲ್ಲ.


ಜೆರುಸಲೇಮಿನ ನಿವಾಸಿಗಳೇ, ನಿಮ್ಮ ಕೋಟೆಯ ಗೋಡೆಗಳನ್ನು ಮರಳಿ ಎಬ್ಬಿಸುವ ದಿನ ಬರುವುದು. ಅಂದು ನಿಮ್ಮ ಗಡಿಯ ವಿಸ್ತರಣೆ ಆಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು