Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 59:14 - ಕನ್ನಡ ಸತ್ಯವೇದವು C.L. Bible (BSI)

14 ನ್ಯಾಯವನ್ನು ಓಡಿಸಿಬಿಟ್ಟಿದ್ದೇವೆ; ನೀತಿ ಸಮೀಪಿಸದಂತೆ ಮಾಡಿದ್ದೇವೆ. ಸತ್ಯವು ಸಾರ್ವಜನಿಕ ಚೌಕದಲ್ಲಿ ಬಿದ್ದುಹೋಗಿದೆ; ಸದಾಚಾರವು ಪ್ರವೇಶಿಸಲಾಗದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನ್ಯಾಯವು ಹಿಂದಕ್ಕೆ ತಳ್ಳಲ್ಪಟ್ಟಿದೆ, ಧರ್ಮವು ದೂರದಲ್ಲಿ ನಿಂತಿದೆ, ಸತ್ಯವು ಚಾವಡಿಯಲ್ಲಿ ಬಿದ್ದುಹೋಗಿದೆ, ಯಥಾರ್ಥತ್ವವು ಪ್ರವೇಶಿಸಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನ್ಯಾಯವು ಹಿಂದಕ್ಕೆ ತಳ್ಳಲ್ಪಟ್ಟಿದೆ, ಧರ್ಮವು ದೂರದಲ್ಲಿ ನಿಂತಿದೆ, ಸತ್ಯವು ಚಾವಡಿಯಲ್ಲಿ ಬಿದ್ದುಹೋಗಿದೆ, ಯಥಾರ್ಥವು ಪ್ರವೇಶಿಸಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನ್ಯಾಯವು ನಮ್ಮಿಂದ ತೊಲಗಿಹೋಗಿದೆ. ಸತ್ಯವು ಬೀದಿ ಪಾಲಾಗಿದೆ. ನೀತಿಯು ಪಟ್ಟಣದೊಳಕ್ಕೆ ಪ್ರವೇಶಿಸಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಾವು ನ್ಯಾಯವನ್ನು ಸಹ ಹಿಂದಕ್ಕೆ ತಳ್ಳಿಬಿಟ್ಟಿದ್ದೇವೆ. ನೀತಿಯನ್ನು ದೂರದಲ್ಲಿ ನಿಲ್ಲಿಸಿಬಿಟ್ಟಿದ್ದೇವೆ. ಸತ್ಯವು ಬೀದಿಯಲ್ಲಿ ಎಡವುತ್ತದೆ. ಯಥಾರ್ಥತೆಗೆ ಪ್ರವೇಶಿಸ ಇಲ್ಲಾ. ಸತ್ಯವು ಬೀದಿಯಲ್ಲಿ ಎಡವುತ್ತದೆ. ಯಥಾರ್ಥತೆಯು ಪ್ರವೇಶಿಸಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 59:14
25 ತಿಳಿವುಗಳ ಹೋಲಿಕೆ  

ಜಡವಾಗಿಹೋಗಿದೆ ಧರ್ಮಶಾಸ್ತ್ರ; ಸ್ತಬ್ಧವಾಗಿದೆ ನ್ಯಾಯನೀತಿಯ ಚಕ್ರ. ಸಜ್ಜನರಿಗಿಂತ ದುರ್ಜನರ ಕೈ ಮೇಲಾಗಿದೆ; ಎಂದೇ ನ್ಯಾಯನೀತಿ ತಲೆಕೆಳಗಾಗಿದೆ.


ಬಡಬಗ್ಗರನ್ನು ತುಳಿಯುತ್ತೀರಿ; ಅವರ ದವಸಧಾನ್ಯಗಳನ್ನು ಕಸಿದುಕೊಳ್ಳುತ್ತೀರಿ. ಆದ್ದರಿಂದ ನೀವು ಕಟ್ಟಿರುವ ಕೆತ್ತನೆಯ ಕಲ್ಲುಮನೆಗಳಲ್ಲಿ ವಾಸಮಾಡಲಾರಿರಿ. ನೀವು ನೆಟ್ಟಿರುವ ಫಲಭರಿತ ದ್ರಾಕ್ಷಾಬಳ್ಳಿಗಳಿಂದ ರಸವನ್ನು ಕುಡಿಯಲಾರಿರಿ.


ಪ್ರವಾದಿಗಳೇ ಸುಳ್ಳು ಪ್ರವಾದನೆಮಾಡುತ್ತಾರೆ. ಯಾಜಕರು ಅಂಥವರಿಂದ ಅಧಿಕಾರ ಪಡೆದು ದೊರೆತನಮಾಡುತ್ತಾರೆ. ನನ್ನ ಜನರಿಗೆ ಚೆನ್ನಾಗಿ ಹಿಡಿಸುವುದು ಇಂಥದ್ದೇ. ಆದರೆ ಅಂತ್ಯ ಬಂದಾಗ ಏನು ಮಾಡುವರು?”


ಲಂಚಕ್ಕೋಸ್ಕರ ನಿರ್ದೋಷಿಗಳನ್ನು ಅಪರಾಧಿಗಳೆಂದು ತೀರ್ಮಾನಿಸಿ ವಂಚಿಸುವವರಿಗೆ ಧಿಕ್ಕಾರ !


ಅಯ್ಯೋ, ಸುವ್ರತೆಯಂತಿದ್ದ ನಗರಿ ಈಗ ಸೂಳೆಯಂತಿದ್ದಾಳಲ್ಲ! ನ್ಯಾಯನೀತಿವಂತರಿಗೆ ನೆಲೆಯಾಗಿದ್ದವಳು ಈಗ ಕೊಲೆಪಾತಕರಿಗೆ ಬೀಡಾಗಿದ್ದಾಳಲ್ಲಾ!


ಇದಲ್ಲದೆ, ನಾನು ಲೋಕವನ್ನು ದೃಷ್ಟಿಸಿನೋಡಿ ನ್ಯಾಯಸ್ಥಾನದಲ್ಲೂ ಧರ್ಮಸ್ಥಾನದಲ್ಲೂ ಅಧರ್ಮ ಇರುವುದನ್ನು ಗಮನಿಸಿದೆ.


ನ್ಯಾಯವನ್ನು ಕಹಿಯಾಗಿಸುವವರೇ, ಧರ್ಮವನ್ನು ಕಸವಾಗಿಸುವವರೇ, ನಿಮಗೆ ಧಿಕ್ಕಾರ!


ನ್ಯಾಯಸ್ಥಾನದಲ್ಲಿ ನ್ಯಾಯಾನುಸಾರ ವಾದಿಸುವವನು ಯಾರೂ ಇಲ್ಲ; ಸತ್ಯಾನುಸಾರ ತೀರ್ಪುಕೊಡುವವನು ಯಾರೂ ಇಲ್ಲ; ನೀವು ಶೂನ್ಯವಾದುದ್ದನ್ನೇ ನಂಬುತ್ತೀರಿ, ಅಬದ್ಧವಾದುದನ್ನೇ ಆಡುತ್ತೀರಿ, ಕೇಡನ್ನು ಬಸಿರಿಸಿ ಅಕ್ರಮವನ್ನು ಹೆರುತ್ತೀರಿ.


ಇಸ್ರಯೇಲ್ ಮನೆತನವೇ ಸೇನಾಧೀಶ್ವರ ಸರ್ವೇಶ್ವರ ನೆಟ್ಟ ಆ ದ್ರಾಕ್ಷಿಯ ತೋಟ. ಜುದೇಯದ ಜನರೇ ಆತ ನಾಟಿಮಾಡಿದಾ ಸುಂದರ ಸಸಿತೋಟ. ನ್ಯಾಯನೀತಿಯನು ನಿರೀಕ್ಷಿಸಿದನಾತ ಆದರೆ ಸಿಕ್ಕಿತವನಿಗೆ ರಕ್ತಪಾತ ! ಸತ್ಸಂಬಂಧವನು ಎದುರುನೋಡಿದನಾತ ಇಗೋ, ದಕ್ಕಿತವನಿಗೆ ದುಃಖಿತರ ಆರ್ತನಾದ !


ಧರ್ಮಕ್ಕೆ ದೂರವಾದ ಹಟಮಾರಿಗಳೇ, ಕಿವಿಗೊಡಿರಿ ನೀವು ನನ್ನ ಮಾತಿಗೆ.


ಆಗ ಜನರು ಹೀಗೆನ್ನುತ್ತಾರೆ : ಈ ಕಾರಣದಿಂದಲೇ ನ್ಯಾಯನಿರ್ಣಯವು ನಮ್ಮಿಂದ ದೂರವಾಗಿದೆ, ಸದ್ಧರ್ಮವು ನಮಗೆ ದೊರಕದೆ ಇದೆ. ಬೆಳಕಿಗಾಗಿ ಕಾದಿರುವ ನಮ್ಮನ್ನು ಕತ್ತಲು ಆವರಿಸಿದೆ. ಜ್ಯೋತಿಯನ್ನು ನಿರೀಕ್ಷಿಸುತ್ತಿರುವ ನಮ್ಮನ್ನು ಅಂಧಕಾರವೇ ಬೆನ್ನಟ್ಟುತ್ತಿದೆ.


ಗುರುಗುಟ್ಟುತ್ತೇವೆ ಕರಡಿಗಳಂತೆ, ಮುಲುಗುತ್ತೇವೆ ಪಾರಿವಾಳಗಳಂತೆ. ನ್ಯಾಯನಿರ್ಣಯವನ್ನು ಎದುರುನೋಡಿದರೂ ಅದು ನಮಗೆ ಸಿಗದಿದೆ; ಜೀವೋದ್ಧಾರವನ್ನು, ನಿರೀಕ್ಷಿಸಿದರೂ ಅದು ನಮ್ಮಿಂದ ದೂರವಿದೆ.


ಆದಕಾರಣ ನೀನು ಅವರಿಗೆ - ‘ತನ್ನ ದೇವರಾದ ಸರ್ವೇಶ್ವರನ ಮಾತಿಗೆ ಕಿವಿಗೊಡದ, ದಂಡಿಸಿದರೂ ತಿದ್ದುಕೊಳ್ಳದ ಜನಾಂಗ ಇದುವೇ; ಸತ್ಯವೆಂಬುದು ಅಳಿದುಹೋಗಿದೆ, ಇದರ ಬಾಯಿಂದ ಕಡಿದುಹೋಗಿದೆ’ ಎಂದು ಹೇಳು.”


ಆತನ ಪವಿತ್ರಾಲಯವನ್ನು ಕೆಡವಿತು. ಅನುದಿನದ ಬಲಿಯರ್ಪಣೆಯನ್ನು ಅಡಗಿಸುವುದಕ್ಕಾಗಿ ನೀಚತನದಿಂದ ಒಂದು ಸೈನ್ಯವನ್ನೆಬ್ಬಿಸಿತು. ಸತ್ಯಧರ್ಮವನ್ನು ನೆಲಕ್ಕೆ ದೊಬ್ಬಿತು. ತನ್ನ ಇಷ್ಟಾರ್ಥವನ್ನು ಈಡೇರಿಸಿಕೊಂಡು ವೃದ್ಧಿಗೆ ಬಂದಿತು.


ಕಲ್ಲುಬಂಡೆಗಳ ಮೇಲೆ ಕುದುರೆಗಳು ಓಡಾಡುವುದುಂಟೋ? ಎತ್ತು ಹೋರಿಗಳಿಂದ ಕಡಲನ್ನು ಉಳುವುದುಂಟೋ? ನೀವೋ, ವಿಷವನ್ನಾಗಿಸಿದ್ದೀರಿ ನ್ಯಾಯನೀತಿಯನ್ನು, ಕಹಿಯಾಗಿಸಿದ್ದೀರಿ ಧರ್ಮದ ಸತ್ಫಲವನ್ನು.


ಅವನು ದೇವರನ್ನೂ ಅರಸನನ್ನೂ ಶಪಿಸಿದವನು ಎಂಬುದಾಗಿ ಇಬ್ಬರು ದುಷ್ಟಮನುಷ್ಯರಿಂದ ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಿಸಿರಿ; ಅವನನ್ನು ಹೊರಗೆ ಒಯ್ದು, ಕಲ್ಲೆಸೆದು ಕೊಲ್ಲಿರಿ,” ಎಂದು ಬರೆದಿದ್ದಳು.


ಅವನ ಊರಿನ ಹಿರಿಯರೂ ಪ್ರಧಾನಪುರುಷರೂ ಈಜೆಬೆಲಳು ಕಳುಹಿಸಿದ ಪತ್ರದಲ್ಲಿ ಬರೆದಿದ್ದಂತೆಯೇ ಮಾಡಿದರು.


ದುಷ್ಕರ್ಮಿಗಳು ಬಂದಿಹರೆನ್ನ ಸಮೀಪಕ್ಕೆ I ದೂರವಿರುವರು ಅವರು ನಿನ್ನ ಧರ್ಮಶಾಸ್ತ್ರಕೆ II


“ನಾನು ನನ್ನ ಜನರ ದುರವಸ್ಥೆಯನ್ನು ನೀಗಿಸಿ ಇಸ್ರಯೇಲನ್ನು ಸ್ವಸ್ಥಗೊಳಿಸಬೇಕೆಂದಿರುವಾಗ ಎಫ್ರಯಿಮಿನ ಅಕ್ರಮ ಮತ್ತು ಸಮಾರ್ಯದ ದುಷ್ಟತನ ಬಯಲಿಗೆ ಬರುತ್ತವೆ. ಅವರು ಒಬ್ಬರಿಗೊಬ್ಬರು ಮೋಸಮಾಡುತ್ತಾರೆ. ಕಳ್ಳರಂತೆ ನುಗ್ಗಿ ಕನ್ನಹಾಕುತ್ತಾರೆ. ದರೋಡೆಗಾರರಂತೆ ದಾರಿಯಲ್ಲೇ ಸುಲಿಗೆಮಾಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು