Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 59:15 - ಕನ್ನಡ ಸತ್ಯವೇದವು C.L. Bible (BSI)

15 ಸತ್ಯವು ಅದೃಶ್ಯವಾಗಿದೆ. ಕೇಡನ್ನು ಕೈಬಿಟ್ಟವನೇ ಖೂನಿಗೆ ಗುರಿಯಾಗುತ್ತಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಸತ್ಯವು ಇಲ್ಲವೇ ಇಲ್ಲ, ಕೇಡನ್ನು ಬಿಟ್ಟವನು ಸೂರೆಯಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಸತ್ಯವು ಇಲ್ಲವೇ ಇಲ್ಲ, ಕೇಡನ್ನು ಬಿಟ್ಟವನು ಸೂರೆಯಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಸತ್ಯವು ಹೊರಟುಹೋಯಿತು. ಒಳ್ಳೆಯದನ್ನು ಮಾಡುವವರು ಲೂಟಿಗೆ ಗುರಿಯಾಗಿದ್ದಾರೆ. ಒಳ್ಳೆಯವರು ಇಲ್ಲದೆ ಇರುವುದನ್ನು ಕಂಡು ಯೆಹೋವನು ಬೇಸರಗೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಸತ್ಯವು ಇಲ್ಲವೇ ಇಲ್ಲ, ಕೇಡನ್ನು ಬಿಟ್ಟವನು ಬೇಟೆಯಾಗುತ್ತಾನೆ. ಯೆಹೋವ ದೇವರು ಇದನ್ನು ನೋಡಿ ನ್ಯಾಯವಿಲ್ಲವಲ್ಲಾ ಎಂದು ವ್ಯಸನಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 59:15
35 ತಿಳಿವುಗಳ ಹೋಲಿಕೆ  

ನಾಡಿನಲ್ಲಿ ದೈವಭಕ್ತರೆಲ್ಲರು ನಾಶವಾದರು; ಸಜ್ಜನರಾರೂ ಉಳಿದಿಲ್ಲ. ಇರುವವರು ಬಲೆಯೊಡ್ಡಿ ಒಬ್ಬರನ್ನೊಬ್ಬರು ಬೇಟೆಯಾಡುತ್ತಾರೆ. ರಕ್ತಪಾತಕ್ಕಾಗಿ ಹೊಂಚುಹಾಕುತ್ತಾರೆ.


ಪವಿತ್ರಗ್ರಂಥದಲ್ಲಿ ಹೀಗೆ ಬರೆಯಲಾಗಿದೆ: ದಿನವಿಡೀ ನಿಮಗೋಸ್ಕರವೇ ಸಾವಿಗೀಡಾಗುತಿಹೆವು ನಾವು ವಧ್ಯಸ್ಥಾನಕ್ಕೆ ಒಯ್ದ ಕುರಿಗಳಂತೆ ಪರಿಗಣಿತರಾಗುತಿಹೆವು ನಾವು.”


ಕೆಲವು ದಿನಗಳಾದ ಮೇಲೆ, ಯೆಹೂದ್ಯರು ಸೌಲನನ್ನು ಕೊಲ್ಲಲು ಒಳಸಂಚು ಮಾಡಿದರು.


ಇತ್ತ ಸೌಲನು ಯೇಸುಸ್ವಾಮಿಯ ಅನುಯಾಯಿಗಳಿಗೆ ಬೆದರಿಕೆ ಹಾಕುತ್ತಾ ಅವರನ್ನು ಸಂಹರಿಸಬೇಕೆಂದಿದ್ದನು.


ನಮಗೆ ಬುದ್ಧಿಭ್ರಮಣೆಯಾಗಿದೆಯೆಂದು ಭಾವಿಸುತ್ತೀರೋ? ಹಾಗಿದ್ದರೆ ಅದು ದೇವರ ಮಹಿಮೆಗಾಗಿ ನಾವು ಸ್ವಸ್ಥಬುದ್ಧಿಯುಳ್ಳವರೆಂದು ನೆನೆಸುತ್ತೀರೋ? ಹಾಗಿದ್ದರೆ ಅದು ನಿಮ್ಮ ಹಿತಕ್ಕಾಗಿ.


ಈ ರೀತಿ ಪೌಲನು ತನ್ನ ಪರವಾಗಿ ವಾದಿಸುತ್ತಿದ್ದಾಗ ಫೆಸ್ತನು, “ಪೌಲನೇ, ನಿನಗೆ ಹುಚ್ಚು ಹಿಡಿದಿದೆ; ಅಧಿಕ ಪಾಂಡಿತ್ಯ ನಿನ್ನನ್ನು ಹುಚ್ಚನನ್ನಾಗಿಸಿದೆ,” ಎಂದು ಗಟ್ಟಿಯಾಗಿ ಕೂಗಿದನು.


:ಈತನಿಗೆ ಹುಚ್ಚು ಹಿಡಿದಿದೆ,” ಎಂದು ಜನರು ಮಾತಾಡಿಕೊಳ್ಳುತ್ತಿದ್ದರು. ಆದ್ದರಿಂದ ಯೇಸುವಿನ ಬಂಧುಗಳು ಯೇಸುವನ್ನು ಹಿಡಿದುತರಲು ಹೊರಟರು.


ಇಗೋ, ದಂಡನೆಯ ದಿನಗಳು ಸಮೀಪಿಸಿವೆ; ಮುಯ್ಯಿ ತೀರಿಸುವ ದಿನಗಳು ಬಂದಿವೆ. ಇಸ್ರಯೇಲರಿಗೆ ಇದು ತಿಳಿದಿರಲಿ. “ಪ್ರವಾದಿಯು ಹುಚ್ಚನು; ದೇವರಾತ್ಮಪ್ರೇರಿತನು ಮೂರ್ಖನು,” ಎಂದು ಹೇಳಿಕೊಳ್ಳುತ್ತೀರಿ. ಅತ್ಯಧಿಕವಾಗಿರುವ ನಿಮ್ಮ ಅಧರ್ಮ, ಮಿತಿಮೀರಿರುವ ನಿಮ್ಮ ದ್ವೇಷ ಇದಕ್ಕೆ ಕಾರಣ.


‘ಸರ್ವೇಶ್ವರ ನಿನ್ನನ್ನು ಯೆಹೋಯಾದನ ಸ್ಥಾನದಲ್ಲಿ ದೇವಾಲಯದ ಯಾಜಕನನ್ನಾಗಿ ನೇಮಿಸಿದ್ದಾರೆ. ಯಾವನಾದರು ಮೈದುಂಬಿ ಪ್ರವಾದಿಯಾಗಿ ನಟಿಸಿದ್ದೇ ಆದರೆ ಅವನನ್ನು ಕೊಳಕ್ಕೆಹಾಕಿ, ಕೊರಳಿಗೆ ಕವೆಯೊಡ್ಡುವ ಅಧಿಕಾರವನ್ನು ನಿನಗೆ ವಹಿಸಿದ್ದಾರೆ.


ಆದಕಾರಣ ನೀನು ಅವರಿಗೆ - ‘ತನ್ನ ದೇವರಾದ ಸರ್ವೇಶ್ವರನ ಮಾತಿಗೆ ಕಿವಿಗೊಡದ, ದಂಡಿಸಿದರೂ ತಿದ್ದುಕೊಳ್ಳದ ಜನಾಂಗ ಇದುವೇ; ಸತ್ಯವೆಂಬುದು ಅಳಿದುಹೋಗಿದೆ, ಇದರ ಬಾಯಿಂದ ಕಡಿದುಹೋಗಿದೆ’ ಎಂದು ಹೇಳು.”


ಇಸ್ರಯೇಲೆಂಬ ನಾಮಧಾರಿಗಳೇ, ಯೆಹೂದ ವಂಶೋತ್ಪನ್ನರೇ, ಯಕೋಬ ಮನೆತನದವರೇ, ಇಡುತ್ತೀರಿ ನೀವು ಸರ್ವೇಶ್ವರನ ಮೇಲೆ ಆಣೆ ಸ್ಮರಿಸುತ್ತೀರಿ ನಿಸ್ಸಂದೇಹವಾಗಿ ಇಸ್ರಯೇಲಿನ ದೇವರನೆ. ಆದರೆ, ದೂರವಾಗಿದೆ ಸತ್ಯಕ್ಕೂ ಧರ್ಮಕ್ಕೂ ನಿಮ್ಮ ಕಾರ್ಯಾಚರಣೆ.


ಅವರ ಬಾಯಲಿ ಹುಸಿನುಡಿ, ಹೃದಯವಾದರೊ ವಿನಾಶದ ಶರಧಿ I ಅವರ ಜಿಹ್ವೆಯಲಿ ಮುಖಸ್ತುತಿ, ಕಂಠವಾದರೋ ತೆರೆದ ಸಮಾಧಿ II


ಆದರೂ ಸರ್ವೇಶ್ವರ ದಾವೀದನಿಗೆ, “ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ,” ಎಂದು ಪ್ರಮಾಣ ಮಾಡಿ ಹೇಳಿದ್ದರಿಂದ ಆ ದಾವೀದನ ಮನೆತನದವರನ್ನು ನಾಶಮಾಡುವುದಕ್ಕೆ ಇಷ್ಟಪಡಲಿಲ್ಲ.


ದುಃಖಕಾಲ ತೀರಿದನಂತರ ದಾವೀದನು ಆಕೆಯನ್ನು ತನ್ನ ಮನೆಗೆ ಕರೆಯಿಸಿ ತನ್ನ ಹೆಂಡತಿಯನ್ನಾಗಿ ಮಾಡಿಕೊಂಡನು. ಆಕೆ ಅವನಿಂದ ಒಬ್ಬ ಮಗನನ್ನು ಹೆತ್ತಳು. ದಾವೀದನ ಈ ಕೃತ್ಯ ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದಾಗಿತ್ತು.


“ನೀನು ದೆವ್ವಹಿಡಿದವನೆಂದು ಈಗ ನಮಗೆ ಸ್ಪಷ್ಟವಾಯಿತು. ಅಬ್ರಹಾಮನು ಸತ್ತುಹೋದನು; ಪ್ರವಾದಿಗಳೂ ಸತ್ತುಹೋದರು. ಆದರೂ ನೀನು, ‘ನನ್ನ ಮಾತಿಗೆ ಶರಣಾಗಿ ನಡೆಯುವವನು ಎಂದೆಂದಿಗೂ ಸಾವಿಗೆ ತುತ್ತಾಗನು,’ ಎಂದು ಹೇಳುತ್ತಿರುವೆ;


ಯೇಹುವು ಮರಳಿ ತನ್ನ ಒಡೆಯನ ಸೇವಕರ ಹತ್ತಿರ ಬಂದನು. ಅವರು ಅವನನ್ನು, “ಶುಭವಾರ್ತೆಯೋ? ಆ ಹುಚ್ಚನು ನಿನ್ನ ಬಳಿಗೆ ಬಂದದ್ದೇಕೆ?” ಎಂದು ಕೇಳಿದರು. ಅದಕ್ಕೆ ಅವನು, “ಆ ಮನುಷ್ಯ ಎಂಥವನು, ಅವನ ಮಾತು ಎಂಥದು ಎಂಬುದು ನಿಮಗೆ ಗೊತ್ತಲ್ಲವೆ?” ಎಂದು ಉತ್ತರಕೊಟ್ಟನು.


ಈ ನಡತೆ ಸರ್ವೇಶ್ವರ ಸ್ವಾಮಿಯ ದೃಷ್ಟಿಯಲ್ಲಿ ಕೆಟ್ಟದಾಗಿತ್ತು. ಆದ್ದರಿಂದ ಸರ್ವೇಶ್ವರ ಅವನನ್ನೂ ಸಾವಿಗೀಡುಮಾಡಿದರು.


ಅವರಲ್ಲಿ ಹಲವರು, “ಅವನಿಗೆ ದೆವ್ವಹಿಡಿದಿದೆ: ಅವನೊಬ್ಬ ಹುಚ್ಚ, ಅವನಿಗೇಕೆ ಕಿವಿಗೊಡುತ್ತೀರಿ?” ಎಂದರು.


ಅಯ್ಯೋ, ಸುವ್ರತೆಯಂತಿದ್ದ ನಗರಿ ಈಗ ಸೂಳೆಯಂತಿದ್ದಾಳಲ್ಲ! ನ್ಯಾಯನೀತಿವಂತರಿಗೆ ನೆಲೆಯಾಗಿದ್ದವಳು ಈಗ ಕೊಲೆಪಾತಕರಿಗೆ ಬೀಡಾಗಿದ್ದಾಳಲ್ಲಾ!


ಲಂಚಕ್ಕೋಸ್ಕರ ನಿರ್ದೋಷಿಗಳನ್ನು ಅಪರಾಧಿಗಳೆಂದು ತೀರ್ಮಾನಿಸಿ ವಂಚಿಸುವವರಿಗೆ ಧಿಕ್ಕಾರ !


ನೀವು ದಲಿತರಿಗೆ ನ್ಯಾಯ ದೊರಕದಂತೆ ಮಾಡುತ್ತೀರಿ. ಬಡಬಗ್ಗರಿಂದ ಹಕ್ಕುಬಾಧ್ಯತೆಗಳನ್ನು ಕಸಿದುಕೊಳ್ಳುತ್ತೀರಿ. ವಿಧವೆಯರನ್ನು ಸೂರೆಮಾಡುತ್ತೀರಿ. ಅನಾಥರನ್ನು ಕೊಳ್ಳೆಹೊಡೆಯುತ್ತೀರಿ.


ಸುಳ್ಳುಸಾಕ್ಷಿ ಹೇಳಿ ತಪ್ಪುಹೊರಿಸುವವರು, ನ್ಯಾಯಸ್ಥಾನದಲ್ಲಿ ದೋಷವನ್ನು ಖಂಡಿಸುವವರಿಗೆ ಉರುಲೊಡ್ಡುವರು, ನೀತಿವಂತನಿಗೆ ನ್ಯಾಯ ತಪ್ಪಿಸುವವರು - ಹೀಗೆ ಅಧರ್ಮದಲ್ಲಿ ನಿರತರಾಗಿರುವ ಇವರೆಲ್ಲರು ನಿರ್ಮೂಲರಾಗುವರು.


ಕಳ್ಳನ ಸಾಧನಗಳು ಕೆಟ್ಟವುಗಳೇ. ಅವನ ಯೋಜನೆಗಳು ಅಬದ್ಧವಾದುವೇ. ದೀನದಲಿತರ ಕೋರಿಕೆಗಳು ನ್ಯಾಯಬದ್ಧವಾಗಿದ್ದರೂ ಸುಳ್ಳುಮಾತುಗಳಿಂದ ಅವರನ್ನು ಹಾಳುಮಾಡುತ್ತಾನೆ.


ನ್ಯಾಯಸ್ಥಾನದಲ್ಲಿ ನ್ಯಾಯಾನುಸಾರ ವಾದಿಸುವವನು ಯಾರೂ ಇಲ್ಲ; ಸತ್ಯಾನುಸಾರ ತೀರ್ಪುಕೊಡುವವನು ಯಾರೂ ಇಲ್ಲ; ನೀವು ಶೂನ್ಯವಾದುದ್ದನ್ನೇ ನಂಬುತ್ತೀರಿ, ಅಬದ್ಧವಾದುದನ್ನೇ ಆಡುತ್ತೀರಿ, ಕೇಡನ್ನು ಬಸಿರಿಸಿ ಅಕ್ರಮವನ್ನು ಹೆರುತ್ತೀರಿ.


ಕಂಡ ದೋಷವನ್ನು ಮಂಟಪದಲ್ಲಿ ಖಂಡಿಸುವವನನ್ನು ನೀವು ಹಗೆಮಾಡುತ್ತೀರಿ; ನ್ಯಾಯವಾದಿಗಳ ಮೇಲೆ ದ್ವೇಷ ಸಾಧಿಸುತ್ತೀರಿ.


ಧರ್ಮಕ್ಕೆ ದೂರವಾದ ಹಟಮಾರಿಗಳೇ, ಕಿವಿಗೊಡಿರಿ ನೀವು ನನ್ನ ಮಾತಿಗೆ.


ನೀವೆಲ್ಲರು ಕೊಲೆಗೆ ಗುರಿಯಾಗುವಿರಿ, ಕತ್ತಿಗೆ ತುತ್ತಾಗುವಿರಿ. ಏಕೆಂದರೆ, ನಾನು ಕೂಗಿದಾಗ ನೀವು ಉತ್ತರಕೊಡಲಿಲ್ಲ, ನಾನು ಹೇಳಿದಾಗ ನೀವು ಕೇಳಲಿಲ್ಲ. ನನ್ನ ಚಿತ್ತಕ್ಕೆ ವಿರುದ್ಧವಾದುದನ್ನೇ ನಡೆಸಿ ನನಗೆ ಇಷ್ಟವಿಲ್ಲದ್ದನ್ನೇ ಆಯ್ಕೆಮಾಡಿಕೊಂಡಿರಿ.


ಆದುದರಿಂದ ಅವರಿಗೆ ಆಪತ್ತು ಬಂದೊದಗುವಂತೆ ಮಾಡುವೆನು. ಅವರು ಅಂಜುತ್ತಿದ್ದ ವಿಪತ್ತುಗಳನ್ನೇ ಅವರ ಮೇಲೆ ಬರಮಾಡುವೆನು. ಏಕೆಂದರೆ, ನಾನು ಕೂಗಿದಾಗ ಯಾರೂ ಉತ್ತರಿಸಲಿಲ್ಲ, ನಾನು ಹೇಳಿದಾಗ ಅವರು ಕೇಳಲಿಲ್ಲ. ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರು, ನನಗೆ ಇಷ್ಟವಲ್ಲದ್ದನ್ನೇ ಆಯ್ಕೆಮಾಡಿಕೊಂಡರು.”


ಅನ್ಯಾಯವಾಗಿ ವ್ಯಾಜ್ಯತೀರಿಸುವುದನ್ನೂ ಸ್ವಾಮಿ ಲಕ್ಷ್ಯಕ್ಕೆ ತಂದುಕೊಳ್ಳದೆ ಇರುತ್ತಾನೆಯೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು