Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 59:20 - ಕನ್ನಡ ಸತ್ಯವೇದವು C.L. Bible (BSI)

20 ಸರ್ವೇಶ್ವರ ಸ್ವಾಮಿ ಜನರಿಗೆ ಹೀಗೆನ್ನುತ್ತಾರೆ : “ಸಿಯೋನಿಗೆ ಹಾಗೂ ಪಾಪವನ್ನು ತೊರೆದುಬಿಟ್ಟ ಯಕೋಬ್ಯರ ಬಳಿಗೆ ನಾನು ಉದ್ಧಾರಕನಾಗಿ ಬರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 “ಒಬ್ಬ ವಿಮೋಚಕನು ಚೀಯೋನಿಗೂ, ದ್ರೋಹವನ್ನು ಬಿಟ್ಟುಬಿಟ್ಟ ಯಾಕೋಬ್ಯರ ಬಳಿಗೂ ಬರುವನು”, ಯೆಹೋವನೇ ಇದನ್ನು ನುಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆದರೆ ಚೀಯೋನಿಗೂ ದ್ರೋಹವನ್ನು ಬಿಟ್ಟುಬಿಟ್ಟ ಯಾಕೋಬ್ಯರ ಬಳಿಗೂ ವಿಮೋಚಕನಾಗಿ ಬರುವನು. ಯೆಹೋವನೇ ಇದನ್ನು ನುಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆಗ ಒಬ್ಬ ರಕ್ಷಕನು ಚೀಯೋನಿಗೆ ಬರುವನು. ಜನರು ಪಾಪಮಾಡಿದ್ದರೂ ದೇವರ ಬಳಿಗೆ ಹಿಂತಿರುಗಿ ಬಂದ ಯಾಕೋಬನ ಜನರ ಬಳಿಗೆ ಆತನು ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ವಿಮೋಚಕನು ಚೀಯೋನಿಗೂ ಯಾಕೋಬಿನಲ್ಲಿ ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಡುವವರಿಗಾಗಿಯೂ ಬರುವನು,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 59:20
18 ತಿಳಿವುಗಳ ಹೋಲಿಕೆ  

ಎಲ್ಲರೊಂದಿಗೂ ಶಾಂತಿಸಮಾಧಾನದಿಂದಿರಲು ಪ್ರಯತ್ನಿಸಿರಿ; ಪರಿಶುದ್ಧತೆಯನ್ನು ಅರಸಿರಿ; ಪರಿಶುದ್ಧತೆಯಿಲ್ಲದೆ ಯಾರೂ ದೇವರನ್ನು ಕಾಣುವಂತಿಲ್ಲ.


ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿರಿ. ಅವರು ನಿಮ್ಮ ಪಾಪಗಳನ್ನು ಪರಿಹರಿಸುವರು.


ಆದರೆ ಸರ್ವೇಶ್ವರಸ್ವಾಮಿಯ ನಾಮಸ್ಮರಣೆ ಮಾಡುವವರೆಲ್ಲರೂ ಜೀವೋದ್ಧಾರವನ್ನು ಪಡೆಯುವರು. ಅವರೇ ತಿಳಿಸಿರುವಂತೆ ಸಿಯೋನ್ ಪರ್ವತದಲ್ಲೂ ಜೆರುಸಲೇಮಿನಲ್ಲೂ ಅನೇಕರಿಗೆ ಮುಕ್ತಿ ದೊರಕುವುದು. ಅಳಿದುಳಿದವರಲ್ಲಿ ಆ ಸ್ವಾಮಿಯ ಕರೆಹೊಂದಿದವರು ಬದುಕುವರು.”


ದಮಸ್ಕಸ್ ಮೊದಲ್ಗೊಂಡು ಜೆರುಸಲೇಮಿಗೂ ಮತ್ತು ಎಲ್ಲ ಜುದೇಯ ನಾಡಿಗೂ ಹಾಗೂ ಅನ್ಯಧರ್ಮೀಯರಲ್ಲಿಗೂ ಹೋಗಿ, ಜನರು ತಮ್ಮತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೈವಾಭಿಮುಖಿಗಳಾಗಬೇಕೆಂದು ಬೋಧಿಸಿದೆ; ಪಶ್ಚಾತ್ತಾಪ ಸೂಚಕಕಾರ್ಯಗಳನ್ನು ಕೈಗೊಳ್ಳುವಂತೆ ಘೋಷಿಸಿದೆ.


ಅಂತೆಯೇ, ಅವರು ತಮ್ಮ ದಾಸನನ್ನು ಎಬ್ಬಿಸಿದ್ದಾರೆ. ನಿಮ್ಮೆಲ್ಲರನ್ನು ದುರ್ಮಾರ್ಗದಿಂದ ದೂರಮಾಡಿ ಧನ್ಯರಾಗಿಸಲು ಅವರನ್ನು ಮೊತ್ತಮೊದಲು ನಿಮ್ಮಲ್ಲಿಗೆ ಕಳುಹಿಸಿದ್ದಾರೆ.”


ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆಯೇ ಈ ವಿಪತ್ತೆಲ್ಲಾ ನಮ್ಮ ಮೇಲೆ ಬಂದಿದೆ. ಆದರೂ ನಾವು ನಮ್ಮ ಧರ್ಮಮಾರ್ಗಗಳನ್ನು ತೊರೆದುಬಿಟ್ಟಿದ್ದೇವೆ. ನಿಮ್ಮ ಸತ್ಯೋಪದೇಶವನ್ನು ಗ್ರಹಿಸಿ ನಡೆಯುವಂತೆ ನಮ್ಮ ದೇವರಾದ ಸರ್ವೇಶ್ವರನೆಂಬ ನಿಮ್ಮ ದಯೆಯನ್ನು ಬೇಡಿಕೊಳ್ಳಲಿಲ್ಲ.


ಪರ್ವತವನ್ನೇರು ಶುಭಸಂದೇಶಕಳಾದ ಸಿಯೋನೇ, ಧ್ವನಿಯೇರಿಸು, ಶುಭವಾರ್ತೆ ಸಾರಬಲ್ಲ ಜೆರುಸಲೇಮೇ, ಧ್ವನಿಯೇರಿಸು, ನಿರ್ಭಯದಿಂದ ಏರಿಸು ‘ಇಗೋ, ನಿಮ್ಮ ದೇವರು’ ಎಂದು ಜೂದ ನಗರಗಳಿಗೆ ಸಾರು.


ಮೊಲೆಯೂಡಿಸುವರು ಜನಾಧಿಪತಿಗಳು ನಿನಗೆ ಮೊಲೆಗೂಸಾಗುವೆ ನೀನು ಜನಾಂಗಗಳಿಗೆ. ಆಗ ತಿಳಿಯುವೆ ನಿನ್ನನುದ್ಧರಿಸಿದ ಸರ್ವೇಶ್ವರ ನಾನೆಂದು ನಿನ್ನ ವಿಮೋಚಕನು, ಯಕೋಬ್ಯರ ಪರಾಕ್ರಮಿಯು ನಾನೆಂದು.


ನಾನಂತು ಬಲ್ಲೆ, ನನ್ನ ಉದ್ಧಾರಕ ಜೀವಸ್ವರೂಪನೆಂದು ಕಡೆಯ ದಿನದಂದು ಧರೆಗಾತ ಇಳಿದುಬರುವನೆಂದು.


ಯಕೋಬ ಮನೆತನದವರಲ್ಲಿ ಅಳಿದುಳಿದ ಕೆಲವರು ಪರಾಕ್ರಮಿಯಾದ ದೇವರ ಕಡೆಗೆ ತಿರುಗಿಕೊಳ್ಳುವರು.


ಇಸ್ರಯೇಲೇ, ನಿನ್ನ ಜನರು ಸಮುದ್ರದ ಮರಳಿನಂತೆ ಅಸಂಖ್ಯಾತರಾಗಿ ಇದ್ದರೂ ಅವರಲ್ಲಿ ಕೆಲವರು ಮಾತ್ರ ಉಳಿದು ಹಿಂದಿರುಗುವರು. ಅವರ ಅಳಿವು ಶಾಸನಬದ್ಧವಾದುದು ಹಾಗೂ ಸಂಪೂರ್ಣವಾಗಿ ನ್ಯಾಯಸಮ್ಮತವಾದುದು.


ಇಗೋ, ಸಮೀಪಿಸುತ್ತಿದೆ ನೀವು ಮುಕ್ತಿಹೊಂದುವದಿನ ಆತನೊಂದಿಗಿದೆ ಆತ ನೀಡುವ ಬಹುಮಾನ ಆತನ ಮುಂದಿದೆ ಆತ ಗಳಿಸಿದ ವರಮಾನ. ಇದನು ತಿಳಿಯಹೇಳಿರಿ ಸಿಯೋನೆಂಬಾಕೆಗೆ ಸರ್ವೇಶ್ವರನ ಆಜ್ಞೆಯಿದು ಜಗದ ದಿಗಂತದವರೆಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು