Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 6:12 - ಕನ್ನಡ ಸತ್ಯವೇದವು C.L. Bible (BSI)

12 “ನಾನು ಜನರನ್ನು ದೂರ ತೊಲಗಿಸಿ, ನಾಡನ್ನು ನಾಶಗೊಳಿಸಿ, ನಗರಗಳನ್ನು ನಿರ್ಜನಗೊಳಿಸಿ, ಮನೆಗಳನ್ನು ಬರಿದಾಗಿಸಿ, ಧರೆಯನ್ನು ಪೂರ್ತಿಯಾಗಿ ನಾಶಗೊಳಿಸುವ ತನಕ ಪರಿಸ್ಥಿತಿ ಹೀಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೆಹೋವನು ಮನುಷ್ಯರನ್ನು ದೂರಮಾಡುವವರೆಗೂ, ಅವರನ್ನು ದೇಶದ ಮಧ್ಯದಿಂದ ತೊಲಗಿಸಿಬಿಡುವವರೆಗೂ ಅದು ಹೀಗೆ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ದೇಶದಲ್ಲಿ ಹಾಳು ಹೆಚ್ಚಿ ಪಟ್ಟಣಗಳು ಜನರಿಲ್ಲದೆ ಮನೆಗಳು ನಿವಾಸಿಗಳಿಲ್ಲದೆ ಧ್ವಂಸವಾಗಿ ಭೂವಿುಯು ತೀರಾ ಹಾಳಾಗುವ ತನಕ ಹೀಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಜನರು ಬಹುದೂರ ಹೋಗುವಂತೆ ಯೆಹೋವನು ಮಾಡುವನು. ದೇಶದೊಳಗೆ ನಿರ್ಜನವಾದ ಸ್ಥಳಗಳು ಬೇಕಾದಷ್ಟು ಇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೆಹೋವ ದೇವರಾದ ನಾನು ಮನುಷ್ಯರನ್ನು ದೂರ ಮಾಡುವವರೆಗೂ, ಅವರನ್ನು ದೇಶದ ಮಧ್ಯದಿಂದ ತೊಲಗಿಸಿಬಿಡುವವರೆಗೂ ಅದು ಹೀಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 6:12
15 ತಿಳಿವುಗಳ ಹೋಲಿಕೆ  

ರಾಹುತರ ಹಾಗೂ ಬಿಲ್ಲುಗಾರರ ಅಬ್ಬರಕ್ಕೆ ಓಡುತ್ತಿರುವವರು ಪಟ್ಟಣಿಗರೆಲ್ಲರು ಇತ್ತ ಪೊದೆಗಳಲ್ಲಿ ಅವಿತುಕೊಳ್ಳುತ್ತಾರೆ. ಅತ್ತ ಬಂಡೆಗಳನ್ನು ಹತ್ತುತ್ತಿದ್ದಾರೆ. ಪ್ರತಿಯೊಂದು ಪಟ್ಟಣ ಪಾಳುಬಿದ್ದ ಬೀಡು ಅದರಲ್ಲಿ ಮತ್ತೆ ವಾಸಮಾಡುವವರು ಒಬ್ಬರೂ ಇಲ್ಲ.


“ಭೂಮಂಡಲದ ಚತುರ್ದಿಕ್ಕುಗಳಲ್ಲಿರುವ ಎಲ್ಲ ಜನಾಂಗಗಳಲ್ಲಿಯೂ ಸರ್ವೇಶ್ವರ ನಿಮ್ಮನ್ನು ಚದುರಿಸುವರು; ಅಲ್ಲಿ ನಿಮಗಾಗಲಿ ನಿಮ್ಮ ಪಿತೃಗಳಿಗಾಗಲಿ ಗೊತ್ತಿಲ್ಲದ ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.


ನಮ್ಮನ್ನೇಕೆ ಮರೆತುಬಿಟ್ಟೆ ಇಷ್ಟುಕಾಲ ನಮ್ಮನ್ನೇಕೆ ಕೈಬಿಟ್ಟೆ ಇಲ್ಲಿಯ ತನಕ?


ಈ ಜನರನ್ನು ಜಗದ ರಾಜ್ಯಗಳೆಲ್ಲವು ಭಯೋತ್ಪಾದಕರೆಂದು ಭಾವಿಸುವಂತೆ ಮಾಡುವೆನು. ಹಿಜ್ಕೀಯನ ಮಗನು ಹಾಗು ಜುದೇಯದ ಅರಸನು ಆದ ಮನಸ್ಸೆಯು ಜೆರುಸಲೇಮಿನಲ್ಲಿ ನಡೆಸಿದ ದುಷ್ಕೃತ್ಯಕ್ಕೆ ಇದು ಪ್ರತೀಕಾರವಾಗಿರುವುದು.”


“ನಾನು ನನ್ನ ಮನೆಯನ್ನೇ ತೊರೆದಿದ್ದೇನೆ ನನ್ನ ಸ್ವಂತ ಸೊತ್ತನ್ನೇ ನಿರಾಕರಿಸಿದ್ದೇನೆ ನನಗೆ ಪ್ರಾಣಪ್ರಿಯರಾದ ಜನರನ್ನು ಅವರ ಶತ್ರುಗಳ ಕೈಗೊಪ್ಪಿಸಿದ್ದೇನೆ.


ಹೆಚ್ಚಿಸಿರುವೆ ಸರ್ವೇಶ್ವರಾ, ನಿನ್ನ ಜನರನು ಹೌದು, ವೃದ್ಧಿಗೊಳಿಸಿರುವೆ ನಿನ್ನ ಪ್ರಜೆಯನು. ವಿಸ್ತರಿಸಿರುವೆ ನಾಡಿನ ಮೇರೆಗಳನು ಈಪರಿ ಪಡೆದಿರುವೆ ಮಹಿಮೆಯನು.


ಅವನು ಅವರನ್ನು ಅಲ್ಲಿಯೇ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯಾಳುಗಳಾಗಿ ತಮ್ಮ ನಾಡನ್ನೇ ಬಿಟ್ಟು ಹೋಗಬೇಕಾಯಿತು.


ರಕ್ಷಾದಳದ ಅಧಿಪತಿಯಾದ ನೆಬೂಜರದಾನನು ನಗರದಲ್ಲಿ ಉಳಿದವರನ್ನು, ಮೊದಲೇ ಬಾಬಿಲೋನಿನ ಅರಸನಿಗೆ ಮರೆಹೊಕ್ಕವರನ್ನು ಹಾಗು ಬೇರೆ ಜನರೆಲ್ಲರನ್ನು ಸೆರೆಗೆ ಒಯ್ದನು.


ಇಸ್ರಯೇಲರು ತಿರಸ್ಕೃತರಾದ್ದರಿಂದ ಜಗತ್ತು ದೇವರೊಡನೆ ಸಂಧಾನವಾಗಲು ಸಾಧ್ಯವಾಯಿತಾದರೆ ಅವರು ಸ್ವೀಕೃತರಾಗುವಾಗ ಇನ್ನೇನು ತಾನೆ ಸಂಭವಿಸದು! ಸತ್ತವರು ಜೀವಕ್ಕೆ ಎದ್ದುಬಂದಂತಾಗುವುದಲ್ಲವೆ?


ಸೇನಾಧೀಶ್ವರಸ್ವಾಮಿಯಿಂದ ನಾನು ಕಿವಿಯಾರೆ ಕೇಳಿದಂತೆ ಹಲವಾರು ಮಂದಿರಗಳು ಬರಿದಾಗುವುವು. ಸುಂದರ ಹಾಗೂ ಸವಿಸ್ತಾರವಾದ ಭವನಗಳು ನಿವಾಸಿಗಳಿಲ್ಲದೆ ಪಾಳುಬೀಳುವುವು.


ಅಳಿದುಳಿದ ಜನರು ಅಪರಂಜಿಗಿಂತಲೂ ಓಫೀರಿನ ಬಂಗಾರಕ್ಕಿಂತಲೂ ವಿರಳವಾಗಿರುವಂತೆ ಮಾಡುವೆನು.


ಅರಸನು ಅವರನ್ನು ಅಲ್ಲಿಯೇ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯಾಳುಗಳಾಗಿ ತಮ್ಮ ನಾಡನ್ನೆ ಬಿಟ್ಟುಹೋಗಬೇಕಾಯಿತು.


ಮನುಷ್ಯರು, ಮೃಗಗಳು, ಆಕಾಶದ ಪಕ್ಷಿಗಳು, ಸಮುದ್ರದ ಮೀನುಗಳು - ಇವೆಲ್ಲವನ್ನು ನಾಶಪಡಿಸುವೆನು. ದುರ್ಜನರು ಬಿದ್ದು ಸಾಯುವಂತೆ ಮಾಡುವೆನು; ನರಸಂತಾನವನ್ನು ಧರೆಯ ಮೇಲಿಂದ ಕಿತ್ತುಹಾಕುವೆನು.” ಇದು ಸರ್ವೇಶ್ವರಸ್ವಾಮಿಯ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು