Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 6:13 - ಕನ್ನಡ ಸತ್ಯವೇದವು C.L. Bible (BSI)

13 “ನಾಡಿನ ಹತ್ತನೇ ಒಂದು ಭಾಗ ಉಳಿದಿದ್ದರೂ ಅದು ಕೂಡ ನಾಶವಾಗುವುದು. ಏಲಾ ಮರವನ್ನಾಗಲೀ ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ ಉಳಿಯುವುದು ಬುಡ ಮಾತ್ರ” ಎಂದರು. ಹೀಗೆ ಉಳಿದ ಬುಡವು ಮುಂದೆ ದೇವಜನರಾಗಿ ಚಿಗುರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ದೇಶದಲ್ಲಿ ಹತ್ತನೆಯ ಒಂದು ಭಾಗ ಉಳಿದಿದ್ದರೂ, ಅದೂ ಸಹ ನಾಶವಾಗುವುದು. ಏಲಾ ಮರವನ್ನಾಗಲೀ, ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ, ಉಳಿಯುವುದು ಬುಡ ಮಾತ್ರ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ದೇಶದಲ್ಲಿ ಹತ್ತನೆಯ ಒಂದು ಭಾಗ ಉಳಿದಿದ್ದರೂ ಅದೂ ಕೂಡಾ ನಾಶವಾಗುವದು; ಏಲಾ ಅಲ್ಲೋನ್ ಮರಗಳನ್ನೂ ಕಡಿದ ಮೇಲೆ ಅವುಗಳ ಬುಡವು ನಿಲ್ಲುವ ಹಾಗೆ ದೇವಕುಲವು ಮೋಟುಬುಡವಾಗಿ ನಿಲ್ಲುವದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದರೆ ದೇಶದಲ್ಲಿ ಹತ್ತನೆ ಒಂದು ಭಾಗದಷ್ಟು ಜನರು ಮಾತ್ರ ಉಳಿಯುವರು. ಇವರು ನಾಶವಾಗುವುದಿಲ್ಲ. ಯಾಕೆಂದರೆ ಇವರು ಯೆಹೋವನ ಬಳಿಗೆ ಹಿಂತಿರುಗಿ ಬಂದವರು. ಇವರು ಓಕ್ ಮರದಂತಿರುವರು. ಆ ಮರವು ಕಡಿಯಲ್ಪಟ್ಟರೂ ಅದರ ಬುಡವು ಹಾಗೆಯೇ ಉಳಿಯುವದು. ಈ ಕಾಂಡದ ಬುಡವು ಬಹು ವಿಶೇಷವಾದ ಬೀಜವಾಗಿರುವದು ಮತ್ತು ಅದು ಪುನಃ ಬೆಳೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದರೆ ದೇಶದಲ್ಲಿ ಹತ್ತನೆಯ ಪಾಲು ಉಳಿದಿದ್ದರೂ, ಅದು ಕೂಡ ನಾಶವಾಗುವುದು. ಏಲಾ ಮರವನ್ನಾಗಲೀ, ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ ಉಳಿಯುವುದು ಬುಡ ಮಾತ್ರ. ಅದೇ ರೀತಿಯಾಗಿ ಪವಿತ್ರ ಜನರು ದೇಶದಲ್ಲಿ ಬುಡವಾಗಿ ಉಳಿದಿರುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 6:13
25 ತಿಳಿವುಗಳ ಹೋಲಿಕೆ  

ನೀನು ನನ್ನ ಮಾತನ್ನು ಕೇಳಿದ್ದರಿಂದ ವಿಶ್ವದ ಎಲ್ಲ ರಾಷ್ಟ್ರಗಳಿಗೂ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವುದು ಎಂಬುದಾಗಿ ಸರ್ವೇಶ್ವರನೇ ಆಣೆಯಿಟ್ಟು ಹೇಳಿದ್ದಾರೆ,” ಎಂದನು.


ಇಸ್ರಯೇಲರಲ್ಲಿ ಸಾಧಾರಣಜನರು, ಯಾಜಕರು, ಲೇವಿಯರು ತಮಗೆ ಹಾಗು ತಮ್ಮ ಗಂಡುಮಕ್ಕಳಿಗೆ ಅವರಿಂದ ಹೆಣ್ಣುಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ದೇವಕುಲವು ಅನ್ಯದೇಶಗಳವರೊಡನೆ ಮಿಶ್ರವಾಗುತ್ತಿದೆ; ನಾಯಕರೇ, ಮುಖ್ಯಸ್ಥರೇ, ಈ ದ್ರೋಹಕ್ಕೆ ಮುಂದಾಳುಗಳಾಗುತ್ತಿದ್ದಾರೆ,” ಎಂದು ತಿಳಿಸಿದರು.


ಸರ್ವೇಶ್ವರ ಆ ದಿನಗಳ ಅವಧಿಯನ್ನು ಕಡಿಮೆಮಾಡದಿದ್ದರೆ ಯಾವ ಮಾನವನೂ ಉಳಿಯುವಂತಿಲ್ಲ. ಆದರೆ ತಾವು ಆರಿಸಿಕೊಂಡವರ ಪ್ರಯುಕ್ತ ಆ ದಿನಗಳ ಅವಧಿಯನ್ನು ಅವರು ಕಡಿಮೆಮಾಡಿದ್ದಾರೆ.


ದೇವರು ನಿನ್ನ ಮತ್ತು ಆಕೆಯ ತನುಮನಗಳನ್ನು ಒಂದಾಗಿ ಮಾಡಲಿಲ್ಲವೆ? ಅವರ ಉದ್ದೇಶವಾದರೂ ಏನಾಗಿತ್ತು? ದೇವರ ಮಕ್ಕಳಾಗಿ ಬಾಳುವ ಸಂತಾನಪ್ರಾಪ್ತಿಯೇ ಅವರ ಉದ್ದೇಶವಾಗಿತ್ತು. ಆದಕಾರಣ ಯೌವ್ವನದಲ್ಲಿ ಮಡದಿಗೆ ದ್ರೋಹವೆಸಗದಂತೆ, ಪ್ರತಿಯೊಬ್ಬನೂ ಎಚ್ಚರಿಕೆಯಿಂದಿರಲಿ.


ಸೇನಾಧೀಶ್ವರ ಸರ್ವೇಶ್ವರ ಕೆಲವು ಜನರನ್ನಾದರೂ ಉಳಿಸದೆಹೋಗಿದ್ದರೆ, ಸೊದೋಮಿನ ಗತಿಯೇ, ಗೊಮೋರದ ದುರ್ದೆಶೆಯೇ ನಮಗೆ ಸಂಭವಿಸುತ್ತಿತ್ತು.


ಅಬ್ರಹಾಮ್, ಇಸಾಕ್ ಮತ್ತು ಯಕೋಬ ಎಂಬ ಪಿತಾಮಹರೂ ಸಹ ಇವರಿಗೆ ಸೇರಿದವರೇ. ಶಾರೀರಿಕವಾಗಿ ಕ್ರಿಸ್ತಯೇಸುವೂ ಇವರ ವಂಶದಲ್ಲಿ ಹುಟ್ಟಿದವರೇ. ಸಕಲಕ್ಕೂ ಒಡೆಯರಾದ ದೇವರಿಗೆ ನಿರಂತರ ಸ್ತುತಿಸ್ತೋತ್ರ ಸಲ್ಲಲಿ, ಆಮೆನ್.


ಸಿಯೋನಿನಲ್ಲಿ ಉಳಿದವರು, ಜೆರುಸಲೇಮಿನಲ್ಲಿ ಮಿಕ್ಕವರು - ಅಂದರೆ ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿರುವ ಜೆರುಸಲೇಮಿನ ನಿವಾಸಿಗಳೆಲ್ಲರು - ಪವಿತ್ರರೆನಿಸಿಕೊಳ್ಳುವರು.


ಆ ದಿನಗಳ ಅವಧಿಯನ್ನು ಕಡಿಮೆಮಾಡದೆ ಇದ್ದಲ್ಲಿ ಯಾವ ಮಾನವನೂ ಉಳಿಯುವಂತಿಲ್ಲ. ಆದರೆ ದೇವರು ಆರಿಸಿಕೊಂಡವರ ಪ್ರಯುಕ್ತ ಆ ದಿನಗಳನ್ನು ಕಡಿಮೆಮಾಡಲಾಗುವುದು.


ಏಕೆಂದರೆ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲಾದ ಜನರು; ಜಗದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನರಾಗಲು ಅವರು ಆಯ್ದುಕೊಂಡಿದ್ದಾರೆ.


ಜೆಸ್ಸೆಯನ ಬುಡದಿಂದ ಒಡೆಯುವುದೊಂದು ಚಿಗುರು; ಅದರ ಬೇರಿನಿಂದ ಫಲಿಸುವುದೊಂದು ತಳಿರು.


ಆದರೂ ನಾನು ಜನಶೇಷವನ್ನು ಉಳಿಸುವೆನು; ಹೇಗೆಂದರೆ ನೀವು ಅನ್ಯದೇಶಗಳಿಗೆ ಚದರಿಹೋಗುವಾಗ ನಿಮ್ಮಲ್ಲಿ ಕೆಲವರು ಆ ಜನಾಂಗಗಳ ಮಧ್ಯೆ ಕತ್ತಿಗೆ ತಪ್ಪಿಸಿಕೊಳ್ಳುವರು.


ಒಡೆಯರಾದ ಸರ್ವೇಶ್ವರ ಇಂತೆನ್ನುತ್ತಾರೆ: “ಯುದ್ಧಕ್ಕೆ ಹೊರಟ ಸಾವಿರ ಮಂದಿ ಸೈನಿಕರಲ್ಲಿ ಪಟ್ಟಣಕ್ಕೆ ಮರಳಿದವರು ನೂರೇ ಮಂದಿ: ರಣರಂಗಕ್ಕೆ ಹೊರಟ ನೂರು ಮಂದಿ ಯೋಧರಲ್ಲಿ ಇಸ್ರಯೇಲಿಗೆ ಮರಳಿದವರು ಹತ್ತೇ ಮಂದಿ.”


ಹತರಾಗುವರು ನಾಡಿನ ಮೂರರಲ್ಲೆರಡು ಭಾಗದವರು, ಮೂರನೆಯ ಭಾಗದವರು ಉಳಿಯುವರಲ್ಲಿ, ಸರ್ವೇಶ್ವರಸ್ವಾಮಿಯ ನುಡಿಯಿದು.


ನಕ್ಷತ್ರಗಳಷ್ಟು ಅಸಂಖ್ಯರಾಗಿರುವ ನೀವು, ನಿಮ್ಮ ದೇವರಾದ ಸರ್ವೇಶ್ವರನ ಮಾತಿನಲ್ಲಿ ಲಕ್ಷ್ಯವಿಡದೆ ಹೋದುದರಿಂದ ಸ್ವಲ್ಪ ಮಂದಿಯೇ ಉಳಿಯುವಿರಿ.


ಆದರೂ ನಮ್ಮ ದೇವರಾದ ಸರ್ವೇಶ್ವರಾ, ಒಂದು ಕ್ಷಣ ನಮಗೆ ನೀವು ಪ್ರಸನ್ನರಾಗಿ ನಮ್ಮಲ್ಲಿ ಸ್ವಲ್ಪ ಜನರನ್ನಾದರೂ ರಕ್ಷಣೆಗಾಗಿ ಉಳಿಸಿ, ತಮ್ಮ ಪರಿಶುದ್ಧಸ್ಥಳದಲ್ಲಿ ಮೊಳೆಯುವಂತೆ, ನಮ್ಮನ್ನು ನೆಲೆಗೊಳಿಸಿ, ನಮ್ಮ ಕಣ್ಣುಗಳನ್ನು ಬೆಳಗಿಸಿ‌, ನಮ್ಮ ದಾಸತ್ವದಲ್ಲಿ ನಮಗೆ ಸ್ವಲ್ಪಮಟ್ಟಿಗೆ ನವಜೀವವನ್ನು ಅನುಗ್ರಹಿಸಿದಿರಿ.


ಅಸ್ಸೀರಿಯದವರು ಇವರ ಶಸ್ತ್ರಾಸ್ತ್ರಗಳಿಗೆ ತುತ್ತಾಗುವರು. ನಿಮ್ರೋದ್ ಸೀಮೆಯ ಪ್ರವೇಶದ್ವಾರಗಳು ಧ್ವಂಸವಾಗುವುವು. ಅಸ್ಸೀರಿಯದವರು ನಮ್ಮ ನಾಡಿಗೆ ನುಗ್ಗಿ ನಮ್ಮ ಕೋಟೆಯನ್ನು ಆಕ್ರಮಿಸುವಾಗ, ಆ ಶಾಂತಿದಾತನು ನಮ್ಮನ್ನು ರಕ್ಷಿಸುವನು.


ದೀನರೂ ನಮ್ರರೂ ಆದ ಜನರನ್ನು ನಿನ್ನಲ್ಲಿ ಉಳಿಸುವೆನು. ಅವರು ಪ್ರಭುವಿನ ನಾಮದಲ್ಲಿ ಭಯಭಕ್ತಿಯಿಂದಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು