Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 6:4 - ಕನ್ನಡ ಸತ್ಯವೇದವು C.L. Bible (BSI)

4 ಆ ಶಬ್ದಕ್ಕೆ ದೇವಾಲಯದ ಅಸ್ತಿವಾರವೇ ಕಂಪಿಸಿತು. ಧೂಮವು ಆಲಯವನ್ನೆಲ್ಲ ತುಂಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಕೂಗುವವನ ಶಬ್ದಕ್ಕೆ ದ್ವಾರದ ಅಸ್ತಿವಾರವು ಕದಲಿದವು ಮತ್ತು ಧೂಮವು ಆಲಯದಲ್ಲೆಲ್ಲಾ ತುಂಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಕೂಗುವವನ ಶಬ್ದಕ್ಕೆ ದ್ವಾರದ ಅಸ್ತಿವಾರವು ಕದಲಿತು; ಧೂಮವು ಮಂದಿರದಲ್ಲೆಲ್ಲಾ ತುಂಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅವರ ಗಟ್ಟಿಯಾದ ಸ್ವರಕ್ಕೆ ಬಾಗಿಲಿನ ನಿಲುವುಗಳು ಅಲುಗಾಡುತ್ತಿದ್ದವು; ಆಲಯವು ಹೊಗೆಯಿಂದ ತುಂಬಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಕೂಗುವವನ ಸ್ವರಕ್ಕೆ ದ್ವಾರದ ನಿಲುವುಗಳು ಕದಲಿದವು; ಧೂಮವು ಆಲಯವನ್ನೆಲ್ಲ ತುಂಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 6:4
12 ತಿಳಿವುಗಳ ಹೋಲಿಕೆ  

ದೇವರ ಸಾನ್ನಿಧ್ಯದ ತೇಜಸ್ಸು ಮತ್ತು ಪ್ರಭಾವಗಳು ದೇವಾಲಯವನ್ನು ಧೂಮದಿಂದ ತುಂಬಿದವು. ಇದರಿಂದಾಗಿ, ಆ ಏಳು ದೇವದೂತರು ತಂದ ಏಳು ವಿಪತ್ತುಗಳು ಮುಗಿಯುವ ತನಕ ಆ ದೇವಾಲಯವನ್ನು ಪ್ರವೇಶಿಸಲು ಯಾರಿಂದಲೂ ಸಾಧ್ಯವಾಗಲಿಲ್ಲ.


ಆಗ ಸ್ವರ್ಗದಲ್ಲಿನ ದೇವಾಲಯವು ತೆರೆಯಿತು. ದೇವರ ಒಡಂಬಡಿಕೆಯ ಮಂಜೂಷವು ಅಲ್ಲಿರುವುದು ಕಾಣಿಸಿತು; ಇದಲ್ಲದೆ ಮಿಂಚುಗಳು, ಗುಡುಗು, ಗರ್ಜನೆಗಳು ಉಂಟಾದವು. ಭೂಕಂಪವೂ ಆಯಿತು. ಜೋರಾದ ಆಲಿಕಲ್ಲಿನ ಮಳೆ ಸುರಿಯಿತು.


ಆಗ ಕೆರೂಬಿಗಳ ರೆಕ್ಕೆಗಳ ಶಬ್ದ ಸರ್ವಶಕ್ತನಾದ ದೇವರು ಮಾತಾಡುವ ಧ್ವನಿಯಷ್ಟು ಗಂಭೀರವಾಗಿ ಹೊರಗಣ ಆವರಣದ ಪರ್ಯಂತವೂ ಕೇಳಿಸಿತು.


ಮಂಜೂಷವನ್ನು ಒಳಗಿಟ್ಟ ಯಾಜಕರು ದೇವಾಲಯದಿಂದ ಹೊರಗೆ ಬಂದ ಕೂಡಲೆ ಒಕ್ಕೊರಲಿನಿಂದ ಸ್ವರವೆತ್ತಿ ಸರ್ವೇಶ್ವರನನ್ನು ಕೀರ್ತಿಸುವುದಕ್ಕಾಗಿ, ತುತೂರಿ ಊದುವವರೂ ಗಾಯನಮಾಡುವವರೂ ಅಲ್ಲಿ ನಿಂತಿದ್ದರು. ತುತೂರಿ, ತಾಳ ಮೊದಲಾದ ವಾದ್ಯಗಳ ಧ್ವನಿ ಹಾಗೂ ‘ಸರ್ವೇಶ್ವರ ಒಳ್ಳೆಯವರು, ಅವರ ಅಚಲ ಪ್ರೀತಿ ಶಾಶ್ವತವಾದುದು’ ಎಂದು ಕೃತಜ್ಞತಾಸ್ತುತಿ ಮಾಡುವವರ ಸ್ವರ ಕೇಳಿಸಿದೊಡನೆ ಮೇಘವೊಂದು ಸರ್ವೇಶ್ವರನ ಆಲಯದಲ್ಲಿ ತುಂಬಿಕೊಂಡಿತು.


ಆಗ ಮೇಘವೊಂದು ದೇವದರ್ಶನದ ಗುಡಾರವನ್ನು ಮುಚ್ಚಿತು; ಸರ್ವೇಶ್ವರನ ತೇಜಸ್ಸು ಗುಡಾರವನ್ನು ತುಂಬಿತು.


ಆಗ ಸರ್ವೇಶ್ವರಸ್ವಾಮಿ ಬಲಿಪೀಠದ ಪಕ್ಕದಲ್ಲಿ ನಿಂತಿರುವುದನ್ನು ಕಂಡೆನು. ಅವರು ನನಗೆ ಹೀಗೆಂದು ಅಪ್ಪಣೆಮಾಡಿದರು: “ಹೊಸ್ತಿಲುಗಳು ಕದಲುವಂತೆ ಕಂಬಗಳ ಬೋದಿಗೆಗೆ ಬಲವಾಗಿ ಹೊಡೆ. ಅವು ಕುಸಿದು ಎಲ್ಲರ ತಲೆಯ ಮೇಲೆ ಬೀಳಲಿ. ಅಳಿದುಳಿದವರನ್ನು ಖಡ್ಗಕ್ಕೆ ತುತ್ತಾಗಿಸುವೆನು. ಅವರಲ್ಲಿ ಯಾರೂ ಓಡಿಹೋಗರು; ಯಾರೂ ತಪ್ಪಿಸಿಕೊಳ್ಳರು.


ಹೊರಬಂದಿತು ಹೊಗೆ ಆತನ ಮೂಗಿಂದ I ಹೊರಟಿತು ಅಗ್ನಿಜ್ವಾಲೆ ಆತನ ಬಾಯಿಂದ I ಕಾದುಕೆಂಡವಾಗಿಸಿತದು ಎದುರಿಗೆ ಸಿಕ್ಕಿದ್ದನೆಲ್ಲ II


ಅವು ಮುಂದುವರಿಯುವಾಗ ಅವುಗಳ ರೆಕ್ಕೆಗಳ ಶಬ್ದವು ಜಲಪ್ರವಾಹದ ಘೋಷದಂತೆ, ಸರ್ವಶಕ್ತನ ಧ್ವನಿಯಂತೆ, ಆರ್ಭಟಿಸುವ ಸೈನ್ಯದ ಕೋಲಾಹಲದಂತೆ ನನಗೆ ಕೇಳಿಸಿತು; ಅವು ನಿಂತಾಗ ರೆಕ್ಕೆಗಳನ್ನು ಮುದುರಿಕೊಳ್ಳುತ್ತಿದ್ದವು.


ಗರ್ಭಗೃಹ, ಪ್ರಾಕಾರದಲ್ಲಿನ ದ್ವಾರಮಂಟಪಗಳು, ಹೊಸ್ತಿಲುಗಳು, ತೆರೆಯಲಾಗದ ಕಿಟಕಿಗಳು, ಹೊಸ್ತಿಲಿನ ಎದುರಿಗೆ ಮೂರಂತಸ್ತಾಗಿ ಸುತ್ತಲು ಕಟ್ಟಲಾಗಿದ್ದ ಗೋಡೆಯಟ್ಟಗಳು, ಇವುಗಳನ್ನೂ ಅಳೆದನು.


ಬಳಿಕ ಆ ಪುರಷನು ಉತ್ತರ ಹೆಬ್ಬಾಗಿಲ ಮಾರ್ಗವಾಗಿ ನನ್ನನ್ನು ದೇವಸ್ಥಾನದ ಮುಂದುಗಡೆಗೆ ಕರೆದುತಂದನು; ಏನಾಶ್ಚರ್ಯ! ನಾನು ನೋಡುತ್ತಿದ್ದಂತೆ ಸರ್ವೇಶ್ವರನ ತೇಜಸ್ಸು ದೇವಾಲಯವನ್ನು ತುಂಬಿಕೊಂಡಿತ್ತು; ಅದನ್ನು ನೋಡಿ ಅಡ್ಡಬಿದ್ದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು