Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 6:6 - ಕನ್ನಡ ಸತ್ಯವೇದವು C.L. Bible (BSI)

6 ಆಗ ಸೆರಾಫಿಯರಲ್ಲಿ - ತೇಜಸ್ವಿಯೊಬ್ಬನು ಬಲಿಪೀಠದಿಂದ, ಉರಿಯುವ ಕೆಂಡವೊಂದನ್ನು ಇಕ್ಕಳದಿಂದ ಹಿಡಿದುಕೊಂಡು ನನ್ನತ್ತ ಹಾರಿಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಸೆರಾಫಿಯರಲ್ಲಿ ಒಬ್ಬನು ಯಜ್ಞವೇದಿಯಿಂದ ತಾನು ಉರಿಯುವ ಕೆಂಡವನ್ನು ಕೈಯಲ್ಲಿ ಹಿಡಿದುಕೊಂಡು ನನ್ನ ಬಳಿಗೆ ಹಾರಿ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಸೆರಾಫಿಯರಲ್ಲಿ ಒಬ್ಬನು ಯಜ್ಞವೇದಿಯಿಂದ ತಾನು ತಂಡಸದಲ್ಲಿ ತೆಗೆದ ಕೆಂಡವನ್ನು ಕೈಯಲ್ಲಿ ಹಿಡಿದುಕೊಂಡು ನನ್ನ ಬಳಿಗೆ ಹಾರಿ ಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯಜ್ಞವೇದಿಕೆಯ ಮೇಲೆ ಬೆಂಕಿ ಇತ್ತು. ಸೆರಾಫಿಯರಲ್ಲೊಬ್ಬನು ಇಕ್ಕುಳಿಯಲ್ಲಿ ಬೆಂಕಿಯೊಳಗಿಂದ ಉರಿಯುವ ಕೆಂಡವನ್ನು ತೆಗೆದು ನನ್ನ ಬಳಿಗೆ ಹಾರಿಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಸೆರಾಫಿಯರಲ್ಲಿ ಒಬ್ಬನು ಬಲಿಪೀಠದಿಂದ ತಾನು ಉರಿಯುವ ಕೆಂಡವನ್ನು ತನ್ನ ಕೈಯಲ್ಲಿ ಹಿಡಿದುಕೊಂಡು ಹಾರಿ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 6:6
14 ತಿಳಿವುಗಳ ಹೋಲಿಕೆ  

ನಾರಿನ ಬಟ್ಟೆಯನ್ನು ಹೊದ್ದುಕೊಂಡಿದ್ದ ಆ ಪುರಷನಿಗೆ ದೇವರು, “ನೀನು ಗರಗರನೆ ತಿರುಗುವ ಗಾಲಿಗಳ ನಡುವೆ, ಕೆರೂಬಿಯ ಕೆಳಗೆ ಪ್ರವೇಶಿಸಿ, ಕೆರೂಬಿಗಳ ಮಧ್ಯೆಯಿಂದ ಬೊಗಸೆಯಲ್ಲಿ ಕೆಂಡಗಳನ್ನು ತುಂಬಿ ತಂದು ಪಟ್ಟಣದ ಮೇಲೆ ಎರಚು,” ಎಂದು ಅಪ್ಪಣೆಕೊಟ್ಟರು. ಅವನು ನನ್ನ ಕಣ್ಣೆದುರಿಗೇ ಹೋಗಿ ಅಲ್ಲಿ ಪ್ರವೇಶಿಸಿದನು.


ನಮಗೊಂದು ಬಲಿಪೀಠವಿದೆ; ಅಲ್ಲಿ ಅರ್ಪಿಸಲಾಗುವ ಬಲಿಯನ್ನು ಭುಜಿಸಲು ಯೆಹೂದ್ಯ ಗುಡಾರಗಳಲ್ಲಿ ಸೇವೆಸಲ್ಲಿಸುವ ಯಾಜಕರಿಗೆ ಹಕ್ಕಿಲ್ಲ.


ದೇವದೂತರ ವಿಷಯದಲ್ಲಿ - “ದೇವರು ತಮ್ಮ ದೂತರನ್ನು ಬೀಸುಗಾಳಿಯನ್ನಾಗಿಯೂ ತಮ್ಮ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿಯೂ ಮಾಡುತ್ತಾರೆ,” ಎಂದು ಹೇಳಿದ್ದಾರೆ.


ಅವರ ಸುತ್ತಲು ಸೆರಾಫಿಯರೆಂಬ ತೇಜಸ್ವಿಗಳು ಇದ್ದರು. ಪ್ರತಿಯೊಬ್ಬರಿಗೂ ಆರಾರು ರೆಕ್ಕೆಗಳಿದ್ದವು. ಎರಡು ರೆಕ್ಕೆಗಳಿಂದ ಅವರ ಮುಖ ಮುಚ್ಚಿತ್ತು. ಇನ್ನೆರಡು ರೆಕ್ಕೆಗಳಿಂದ ಅವರ ಪಾದಗಳು ಮುಚ್ಚಿದ್ದವು. ಮತ್ತೆರಡು ರೆಕ್ಕೆಗಳನ್ನು ಬಡಿಯುತ್ತಾ ನೆಲಸೋಕದೆ ನಿಂತಿದ್ದರು.


ಅವನು ತನಗೋಸ್ಕರವಾದ ಆ ಹೋರಿಯನ್ನು ವಧಿಸಿದ ಮೇಲೆ ಸರ್ವೇಶ್ವರನ ಸನ್ನಿಧಿಯಲ್ಲಿರುವ ವೇದಿಕೆಯಿಂದ ಕೆಂಡಗಳನ್ನು ಧೂಪಾರತಿಯಲ್ಲಿ ತುಂಬಿಸಿ ಪರಿಮಳ ಧೂಪದ್ರವ್ಯದ ಚೂರ್ಣದಲ್ಲಿ ಎರಡು ಹಿಡಿ ತೆಗೆದುಕೊಂಡು ತೆರೆಯನ್ನು ದಾಟಿ,


ದೂತರೆಲ್ಲರೂ ಕೇವಲ ಸೇವೆಮಾಡುವ ಆತ್ಮಗಳಲ್ಲವೇ? ಜೀವೋದ್ಧಾರವನ್ನು ಬಾಧ್ಯವಾಗಿ ಹೊಂದಬೇಕಾದವರ ಊಳಿಗಕ್ಕಾಗಿ ಕಳುಹಿಸಲಾದವರಲ್ಲವೇ?


ಅಲ್ಲದೆ ಅಗ್ನಿಜ್ವಾಲೆಗಳು ಕೆನ್ನಾಲಿಗೆಯಂತೆ ಕಾಣಿಸಿಕೊಂಡವು. ಅವು ವಿಂಗಡ ವಿಂಗಡವಾಗಿ ಪ್ರತಿಯೊಬ್ಬರ ಮೇಲೂ ನೆಲೆಸಿದವು.


ಹೃದಯ ಪರಿವರ್ತನೆಯ ಗುರುತಾಗಿ ನಾನು ನಿಮಗೆ ನೀರಿನಿಂದ ಸ್ನಾನದೀಕ್ಷೆ ಕೊಡುತ್ತಿದ್ದೇನೆ. ಆದರೆ ನನ್ನ ನಂತರ ಬರುವ ಒಬ್ಬರು ನಿಮಗೆ ಪವಿತ್ರಾತ್ಮ ಹಾಗೂ ಅಗ್ನಿಯಿಂದ ದೀಕ್ಷಾಸ್ನಾನ ಕೊಡುವರು. ಅವರು ನನಗಿಂತಲೂ ಶಕ್ತರು. ಅವರ ಪಾದರಕ್ಷೆಗಳನ್ನು ಹೊರಲು ಸಹ ನಾನು ಅರ್ಹನಲ್ಲ.


ಮೋಶೆ, ಆರೋನನನ್ನು ಉದ್ದೇಶಿಸಿ, “ಸರ್ವೇಶ್ವರನಿಗೆ ಕೋಪವುಂಟಾಗಿದೆ: ಈ ಜನರೊಳಗೆ ಘೋರ ವ್ಯಾಧಿಯೊಂದು ಪ್ರಾರಂಭವಾಗಿಬಿಟ್ಟಿದೆ. ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಬಲಿಪೀಠದಿಂದ ಕೆಂಡಗಳನ್ನು ಇಟ್ಟು ಧೂಪ ಹಾಕಿ ಸಮುದಾಯದವರ ಬಳಿಗೆ ಬೇಗ ಹೋಗು; ಅವರ ಪರವಾಗಿ ದೋಷಪರಿಹಾರವನ್ನು ಮಾಡು,” ಎಂದು ಹೇಳಿದನು.


ದೀಪದ ಕುಡಿ ತೆಗೆಯುವ ಕತ್ತರಿಗಳನ್ನೂ ಬಟ್ಟಲುಗಳನ್ನೂ ಚೊಕ್ಕ ಬಂಗಾರದಿಂದ ಮಾಡಿಸಬೇಕು.


ಬಳಿಕ ಸ್ವಾಮಿ ಕೈಚಾಚಿ ನನ್ನ ಬಾಯನ್ನು ಮುಟ್ಟಿ, “ಇಗೋ, ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟಿದ್ದೇನೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು