Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 60:12 - ಕನ್ನಡ ಸತ್ಯವೇದವು C.L. Bible (BSI)

12 ನಾಶವಾಗುವುವು ನಿನ್ನ ಸೇವೆಮಾಡಲೊಲ್ಲದ ರಾಜ್ಯಗಳು, ಜನಾಂಗಗಳು; ಹೌದು, ಸಂಪೂರ್ಣವಾಗಿ ಹಾಳಾಗುವುವು ಆ ಜನಾಂಗಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಿನ್ನನ್ನು ಆರಾಧಿಸದ ಜನಾಂಗ ಮತ್ತು ರಾಜ್ಯಗಳು ನಾಶವಾಗುವವು; ಹೌದು, ಆ ಜನಾಂಗಗಳು ಹಾಳಾಗಿ ಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಿನ್ನನ್ನು ಸೇವಿಸಲೊಲ್ಲದ ಜನಾಂಗ ರಾಜ್ಯಗಳು ನಾಶವಾಗುವವು; ಹೌದು, ಆ ಜನಾಂಗಗಳು ಹಾಳೇ ಹಾಳಾಗಿ ಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಿನ್ನ ಸೇವೆಮಾಡದ ಯಾವ ರಾಜ್ಯವಾಗಲಿ ನಾಶಮಾಡಲ್ಪಡುವದು. ಹೌದು, ಆ ರಾಜ್ಯಗಳು ಸರ್ವನಾಶವಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಿನ್ನನ್ನು ಸೇವಿಸದ ಜನಾಂಗವೂ, ರಾಜ್ಯವೂ ನಾಶವಾಗುವುದು. ಆ ಜನಾಂಗಗಳು ಸಂಪೂರ್ಣವಾಗಿ ಹಾಳಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 60:12
18 ತಿಳಿವುಗಳ ಹೋಲಿಕೆ  

ನಿನ್ನ ಮೇಲೆ ಆಕ್ರಮಣಕೆ ಬರುವವನು ಪಡೆದಿಲ್ಲ ಅನುಮತಿ ನನ್ನಿಂದ ನಿನ್ನ ಮೇಲೆ ಆಕ್ರಮಣ ಮಾಡುವವನು ಪಡೆವನು ಸೋಲನು ನಿನ್ನಿಂದ.


ಆಗ ಕಬ್ಬಿಣ-ಮಣ್ಣು-ಕಂಚು-ಬೆಳ್ಳಿ-ಬಂಗಾರ ಇವುಗಳೆಲ್ಲವೂ ಪುಡಿಪುಡಿಯಾದವು; ಸುಗ್ಗಿಯ ಕಣಗಳ ಹೊಟ್ಟಿನಂತಾದವು. ಗಾಳಿ ಅವುಗಳನ್ನು ತೂರಿಕೊಂಡುಹೋಯಿತು. ಅವುಗಳಿಗೆ ನೆಲೆಯೇ ಇಲ್ಲವಾಯಿತು. ಪ್ರತಿಮೆಗೆ ಬಡಿದ ಆ ಬಂಡೆ ಮಹಾ ಪರ್ವತವಾಗಿ ಭೂಲೋಕದಲ್ಲೆಲ್ಲಾ ತುಂಬಿಕೊಂಡಿತು.


ಆಶಾಭಂಗಪಟ್ಟು ಅವಮಾನ ಹೊಂದುವರು ನಿನ್ನ ಮೇಲೆ ಕೋಪಗೊಂಡವರು ನಾಶವಾಗಿ ನಿರ್ಮೂಲವಾಗುವರು ನಿನ್ನ ಸಂಗಡ ವ್ಯಾಜ್ಯವಾಡಿದವರು.


ರಾಷ್ಟ್ರಗಳೇ ಇಸ್ರಯೇಲರನ್ನು ಕರೆತಂದು ಸೇರಿಸುವುವು ಸ್ವಂತ ನಾಡಿಗೆ ಸರ್ವೇಶ್ವರನ ಆ ನಾಡಿನಲಿ ದಾಸದಾಸಿಯರನ್ನಾಗಿಸಿಕೊಳ್ಳುವುದು ಇಸ್ರಯೇಲ್ ಮನೆತನವು ಆ ರಾಷ್ಟ್ರಗಳನ್ನೇ. ಸೆರೆಹಿಡಿಯುವರು ತಮ್ಮನ್ನು ಸೆರೆಹಿಡಿದವರನ್ನೇ ಅಧೀನಪಡಿಸುವರು ತಮ್ಮನ್ನು ಹಿಂಸಿಸಿದವರನ್ನೇ.


ಇಲ್ಲದಿರೆ ಭುಗಿಲೆದ್ದೀತು ಆತನ ಕೋಪಾವೇಶ I ಮಾರ್ಗಮಧ್ಯದಲೇ ಕಾದಿರಬಹುದು ನಿಮಗೆ ವಿನಾಶ I ಆತನನು ಆಶ್ರಯಿಸುವವರಿಗಿದೆ ಸೌಭಾಗ್ಯ ಸಂತೋಷ II


“ಅಲ್ಲದೆ, ‘ನಾನು ತಮಗೆ ರಾಜನಾಗುವುದು ಬೇಡವೆಂದ ನನ್ನ ಶತ್ರುಗಳನ್ನು ಇಲ್ಲಿಗೆ ಎಳೆದು ತಂದು ನನ್ನ ಮುಂದೆಯೇ ಸಂಹರಿಸಿರಿ,” ಎಂದ.”


ಅಷ್ಟೇ ಅಲ್ಲದೆ, ಆ ಕಲ್ಲಿನ ಮೇಲೆ ಬೀಳುವವನು ಛಿದ್ರಛಿದ್ರನಾಗುವನು. ಯಾವನ ಮೇಲೆ ಆ ಕಲ್ಲು ಬೀಳುವುದೋ ಅವನು ಜಜ್ಜಿಹೋಗುವನು’.”


ಸೇವೆಗೈಯಲಿ ನಿನಗೆ ಹೊರನಾಡುಗಳು ಅಡ್ಡಬೀಳಲಿ ನಿನಗೆ ಹೊರಜನಾಂಗಗಳು ಒಡೆಯನಾಗು ಸೋದರರಿಗೆ ಅಡ್ಡಬೀಳಲಿ ತಾಯಕುಡಿ ನಿನಗೆ ಶಾಪವಿರಲಿ ನಿನ್ನನ್ನು ಶಪಿಸುವವರಿಗೆ ಆಶೀರ್ವಾದವು ನಿನ್ನನ್ನು ಹರಸುವವರಿಗೆ!”


ನಮ್ಮ ಪರ ದೇವನಿರಲು ಹೆಣಗುವೆವು ಶೂರರಾಗಿ I ವೈರಿಗಳನು ತುಳಿದುಬಿಡುವನು ಆತ ಖರೆಯಾಗಿ II


ಆದರೆ ಯಾವ ಜನಾಂಗ ಕೇಳುವುದಿಲ್ಲವೋ ಅದನ್ನು ನಾನು ಕಿತ್ತುಹಾಕುವೆನು. ಹೌದು, ಬೇರುಸಹಿತ ಕಿತ್ತುಹಾಕಿ ನಾಶಮಾಡುವೆನು. ಇದು ಸರ್ವೇಶ್ವರನಾದ ನನ್ನ ನುಡಿ.”


ನೀವು ನೋಡುತ್ತಿದ್ದ ಹಾಗೆ ಬೆಟ್ಟದಿಂದ ಒಂದು ಗುಂಡು ಬಂಡೆ, ಯಾವ ಕೈಯೂ ಮುಟ್ಟದೆಯೇ, ಸಿಡಿದುಬಂದು ಆ ಪ್ರತಿಮೆಯ ಕಬ್ಬಿಣ ಮಣ್ಣಿನಿಂದಾದ ಆ ಪಾದಗಳಿಗೆ ಬಡಿದು ಚೂರುಚೂರು ಮಾಡಿಬಿಟ್ಟಿತು.


ಆದರೆ ರಾಜ್ಯಾಧಿಕಾರ ಲಭಿಸುವುದು ಮಹೋನ್ನತರ ಪವಿತ್ರ ಪ್ರಜೆಗೆ. ಅದನ್ನು ತಲತಲಾಂತರಕ್ಕೂ ಶಾಶ್ವತವಾಗಿ ಅನುಭವಿಸುವವರು ಅವರೇ,” ಎಂದು ಆ ವಿಷಯಗಳ ತಾತ್ಪರ್ಯವನ್ನು ವಿವರಿಸಿ ತಿಳಿಸಿದನು.


ರಾಜ್ಯಭಾರವೂ ದೊರೆತನವೂ ಸಮಸ್ತ ಲೋಕದಲ್ಲಿನ ರಾಜ್ಯಗಳ ಮಹಿಮೆಯೂ ಮಹೋನ್ನತರ ಭಕ್ತಜನರಿಗೆ ಕೊಡಲಾಗುವುದು. ಅವರ ರಾಜ್ಯ ಶಾಶ್ವತರಾಜ್ಯ. ಎಲ್ಲ ದೇಶಾಧಿಪತಿಗಳೂ ಅವರಿಗೆ ಅಧೀನರಾಗಿ ಸೇವೆಮಾಡುವರು,” ಎಂದು ಹೇಳಿದನು.


ಕಿತ್ತುಹಾಕುವೆನು ಎಫ್ರಯಿಮಿನ ರಥಬಲವನು ನಿಶ್ಶೇಷಮಾಡುವೆನು ಜೆರುಸಲೇಮಿನ ಅಶ್ವಬಲವನು ಮುರಿಯಲಾಗುವುದು ಯುದ್ಧದ ಬಿಲ್ಲುಗಳನು. ಘೋಷಿಸುವೆನು ಶಾಂತಿಯನು ರಾಷ್ಟ್ರಗಳಿಗೆ ಆತನ ರಾಜ್ಯಭಾರ ಸಮುದ್ರದಿಂದ ಸಮುದ್ರದವರೆಗೆ ಯೂಫ್ರೆಟಿಸ್ ನದಿಯಿಂದ ಭುವಿಯ ಕಟ್ಟಕಡೆಯವರೆಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು