Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 60:13 - ಕನ್ನಡ ಸತ್ಯವೇದವು C.L. Bible (BSI)

13 ಬರುವುದು ನಿನ್ನಲ್ಲಿಗೆ ಲೆಬನೋನಿನ ವೈಭವವು ಅದರ ತುರಾಯಿ, ಅಗಸೆ, ತಿಲಕ ಈ ಮರಗಳಾವುವು. ಅಲಂಕರಿಸುವುವು ನನ್ನ ಪವಿತ್ರಾಲಯವನು ಮಹಿಮೆಪಡಿಸುವೆನು ನನ್ನ ಪಾದಪೀಠದ ಮಂದಿರವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನನ್ನ ಪವಿತ್ರಾಲಯವನ್ನು ಭೂಷಿಸುವುದಕ್ಕಾಗಿ ತುರಾಯಿ, ತಪಸಿ, ತಿಲಕ ಈ ವೃಕ್ಷರೂಪವಾದ ಲೆಬನೋನಿನ ಮಹಿಮೆಯು ನಿನಗಾಗುವುದು; ನನ್ನ ಪಾದಸನ್ನಿಧಿಯ ಮಂದಿರವನ್ನು ವೈಭವಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನನ್ನ ಪವಿತ್ರಾಲಯವನ್ನು ಭೂಷಿಸುವದಕ್ಕಾಗಿ ತುರಾಯಿ, ತಪಸಿ, ತಿಲಕ ಈ ವೃಕ್ಷರೂಪವಾದ ಲೆಬನೋನಿನ ಮಹಿಮೆಯು ನಿನಗಾಗುವದು; ನನ್ನ ಪಾದಸನ್ನಿಧಿಯ ಮಂದಿರವನ್ನು ವೈಭವಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಲೆಬನೋನಿನ ಎಲ್ಲಾ ಅಮೂಲ್ಯವಸ್ತುಗಳನ್ನು ನಿನಗೆ ಕೊಡಲಾಗುವುದು. ಜನರು ದೇವದಾರು ಮರಗಳನ್ನೂ ಇತರ ವಿಶೇಷ ಮರಗಳನ್ನೂ ನಿನಗೆ ತಂದುಕೊಡುವರು. ಈ ಮರಗಳಿಂದ ತೊಲೆಗಳನ್ನು ಮಾಡಿ ನನ್ನ ಪವಿತ್ರ ಆಲಯವನ್ನು ಸೌಂದರ್ಯಗೊಳಿಸುವರು. ಅದು ನನ್ನ ಸಿಂಹಾಸನದ ಮುಂದಿರುವ ಪಾದಪೀಠದಂತಿರುವದು. ಅದಕ್ಕೆ ನಾನು ಹೆಚ್ಚಾದ ಗೌರವ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಲೆಬನೋನಿನ ವೈಭವವು ತುರಾಯಿ, ಅಗಸೆ, ಹೊನ್ನೆ ಮರಗಳು ಕೂಡ ನನ್ನ ಪರಿಶುದ್ಧ ಸ್ಥಳವನ್ನು ಶೃಂಗರಿಸುವುದಕ್ಕೆ ನಿನ್ನ ಬಳಿಗೆ ಬರುವುವು. ನನ್ನ ಪಾದಗಳ ಸ್ಥಳವನ್ನು ನಾನು ಗೌರವವುಳ್ಳದ್ದಾಗಿ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 60:13
13 ತಿಳಿವುಗಳ ಹೋಲಿಕೆ  

ಉಲ್ಲಾಸಿಸಲಿ ಅದು ಹುಲುಸಾಗಿ ಹೂಬಿಟ್ಟು ಹೌದು, ಸಂತಸ ಸಂಗೀತ ಹಾಡುವಷ್ಟು, ದೊರಕಲಿ ಅದಕ್ಕೆ ಲೆಬನೋನಿನ ಮಹಿಮೆಯು ಕರ್ಮೆಲಿನ ಮತ್ತು ಶಾರೋನಿನ ವೈಭವವು. ಕಾಣುವುವು ಸರ್ವೇಶ್ವರನ ಮಹಿಮೆಯನು ನೋಡುವುವು ಇವೆಲ್ಲ ನಮ್ಮ ದೇವರ ವೈಭವವನು.


ಅವರು ಕೂಡಿಬಂದಾಗ ಅರಸ ದಾವೀದನು ಎದ್ದು ನಿಂತು ಅವರಿಗೆ, “ನನ್ನ ಸಹೋದರರೇ, ಪ್ರಜೆಗಳೇ, ಕೇಳಿ; ಸರ್ವೇಶ್ವರನ ನಿಬಂಧನ ಮಂಜೂಷಕ್ಕಾಗಿ ಹಾಗೂ ನಮ್ಮ ದೇವರ ಪಾದಪೀಠಕ್ಕಾಗಿ ಆಲಯವನ್ನು ಕಟ್ಟಿಸಬೇಕೆಂದು ಮನಸ್ಸುಮಾಡಿ ಎಲ್ಲವನ್ನೂ ಸಿದ್ಧಪಡಿಸಿದೆ.


ಹೋಗೋಣ ಬನ್ನಿರಿ ಆತನ ಮಂದಿರಕೆ I ಅಡ್ಡಬೀಳೋಣ ಆತನ ಪಾದಪೀಠಕೆ II


ಇವೆ ಮಹಿಮೆ, ಮಹತ್ವ, ಆತನ ಸನ್ನಿಧಿಯಲಿ I ಶಕ್ತಿಸೌಂದರ್ಯ ಆತನ ಗರ್ಭಗುಡಿಯಲಿ II


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಆಕಾಶವೇ ನನಗೆ ಸಿಂಹಾಸನವಾಗಿರಲು, ಭೂಮಿಯೇ ನನಗೆ ಪಾದಪೀಠವಾಗಿರಲು ನೀವು ನನಗೆ ಕಟ್ಟುವ ಮನೆ ಇನ್ನು ಎಂಥದ್ದು? ನನ್ನ ವಿಶ್ರಾಂತಿಗೆ ತಕ್ಕ ಸ್ಥಳ ಯಾವುದು?


ಬೆಳೆಯುವುದು ಮುಳ್ಳಿಗೆ ಬದಲಾಗಿ ದೇವದಾರು, ದತ್ತೂರಿಗೆ ಪ್ರತಿಯಾಗಿ ಸುಗಂಧದ ಮರವು. ಉಳಿದಿರುತ್ತದೆ ಆ ವನವು ಶಾಶ್ವತ ಗುರುತಾಗಿ ಸರ್ವೇಶ್ವರ ಸ್ವಾಮಿಯ ನಾಮಸ್ಮರಣೆಗಾಗಿ.”


ಎಜ್ರನ ಮಾತುಗಳು ಇವು: “ನಮ್ಮ ಪಿತೃಗಳ ದೇವರಾದ ಸರ್ವೇಶ್ವರಸ್ವಾಮಿಗೆ ಸ್ತೋತ್ರವಾಗಲಿ! ಜೆರುಸಲೇಮಿನಲ್ಲಿರುವ ದೇವಾಲಯವನ್ನು ಶೋಭಿಸುವ ಸ್ಥಿತಿಗೆ ತರುವುದಕ್ಕೆ ಸರ್ವೇಶ್ವರನ ಪ್ರೇರಣೆಯಿಂದಲೇ ಅರಸನು ಮನಸ್ಸು ಮಾಡಿದ್ದಾನೆ:


ಪರಮ ಪಾವನನು ನಮ್ಮೀ ಸ್ವಾಮಿ ದೇವನು I ಹೊಗಳಿರಿ, ಆತನ ಪಾದಪೀಠಕೆ ಅಡ್ಡಬೀಳಿರಿ ನೀವೆಲ್ಲರು II


ನಿನ್ನಲ್ಲಿ ಕೂಡುವುವು ಕೇದಾರಿನ ಸಕಲ ಮಂದೆಗಳು ಬಲಿಯರ್ಪಣೆಗೊದಗುವುವು ನೆಬಾಯೋತಿನ ಟಗರುಗಳು. ಏರುವುವು ನನಗೆ ಸಮರ್ಪಕವಾದ ಹೋಮವಾಗಿ ಬಲಿಪೀಠವನು. ಚಂದಗೊಳಿಸುವೆನು ನನ್ನ ಸುಂದರವಾದ ಆಲಯವನು.


ನಾನು ಹಿಂದಿರುಗಲು, ಇಗೋ, ತೊರೆಯ ಎರಡು ದಡಗಳಲ್ಲಿಯೂ ಅನೇಕಾನೇಕ ವೃಕ್ಷಗಳು ಕಾಣಿಸಿದವು.


ಈಗ ನನ್ನ ಒಡೆಯರಾದ ತಾವು ಮಾತುಕೊಟ್ಟ ಮೇರೆಗೆ ಗೋದಿ, ಜವೆಗೋದಿ, ಎಣ್ಣೆ, ದ್ರಾಕ್ಷಾರಸ ಇವುಗಳನ್ನು ತನ್ನ ಸೇವಕರಿಗೆ ಕಳುಹಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು