Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 60:17 - ಕನ್ನಡ ಸತ್ಯವೇದವು C.L. Bible (BSI)

17 ಒದಗಿಸುವೆ ನಿನಗೆ ಮರವಿದ್ದಲ್ಲಿ ತಾಮ್ರವನು ಹಿತ್ತಾಳೆಗೆ ಬದಲಾಗಿ ಬಂಗಾರವನು ಕಬ್ಬಿಣಕ್ಕೆ ಪ್ರತಿಯಾಗಿ ಬೆಳ್ಳಿಯನು ಕಲ್ಲುಗಳ ಸ್ಥಾನದಲ್ಲಿ ಕಬ್ಬಿಣವನು ಮಾಡುವೆ ಶಾಂತಿಯನ್ನೇ ನಿನಗೆ ಅಧಿಪತಿಯನ್ನಾಗಿ ಸದ್ಧರ್ಮವನ್ನೇ ನಿನಗೆ ಅಧಿಕಾರಿಯನ್ನಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ತಾಮ್ರಕ್ಕೆ ಬದಲಾಗಿ ಚಿನ್ನವನ್ನು, ಕಬ್ಬಿಣಕ್ಕೆ ಪ್ರತಿಯಾಗಿ ಬೆಳ್ಳಿಯನ್ನು, ಮರವಿದ್ದಲ್ಲಿ ತಾಮ್ರವನ್ನು, ಕಲ್ಲುಗಳ ಸ್ಥಾನದಲ್ಲಿ ಕಬ್ಬಿಣವನ್ನು ಒದಗಿಸುವೆನು; ಸಮಾಧಾನವನ್ನು ನಿನಗೆ ಅಧಿಪತಿಯನ್ನಾಗಿ, ಧರ್ಮವನ್ನು ನಿನಗೆ ಅಧಿಕಾರಿಯನ್ನಾಗಿ ನೇಮಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ತಾಮ್ರಕ್ಕೆ ಬದಲಾಗಿ ಚಿನ್ನವನ್ನು, ಕಬ್ಬಿಣಕ್ಕೆ ಪ್ರತಿಯಾಗಿ ಬೆಳ್ಳಿಯನ್ನು, ಮರವಿದ್ದಲ್ಲಿ ತಾಮ್ರವನ್ನು, ಕಲ್ಲುಗಳ ಸ್ಥಾನದಲ್ಲಿ ಕಬ್ಬಿಣವನ್ನು ಒದಗಿಸುವೆನು; ಸಮಾಧಾನವನ್ನು ನಿನಗೆ ಅಧಿಪತಿಯನ್ನಾಗಿ ಧರ್ಮವನ್ನು ನಿನಗೆ ಅಧಿಕಾರಿಯನ್ನಾಗಿ ನೇವಿುಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ಈಗ ನಿನ್ನಲ್ಲಿ ತಾಮ್ರವಿದೆ. ನಾನು ನಿನಗೆ ಬಂಗಾರವನ್ನು ತರುವೆನು. ಈಗ ನಿನ್ನಲ್ಲಿ ಕಬ್ಬಿಣವಿದೆ. ನಾನು ನಿನಗೆ ಬೆಳ್ಳಿಯನ್ನು ತರುವೆನು. ನಿನ್ನ ಮರವನ್ನು ತಾಮ್ರವನ್ನಾಗಿ ಪರಿವರ್ತಿಸುವೆನು. ನಿನ್ನ ಕಲ್ಲುಬಂಡೆಗಳನ್ನು ಕಬ್ಬಿಣವನ್ನಾಗಿ ಮಾಡುವೆನು. ನಿಮ್ಮ ಶಿಕ್ಷೆಯನ್ನು ಸಮಾಧಾನವನ್ನಾಗಿ ಮಾಡುವೆನು. ಈಗ ನಿನ್ನನ್ನು ಹಿಂಸಿಸುವ ಜನರು ನಿನಗೆ ಸಹಾಯ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಕಂಚಿನ ಬದಲಾಗಿ ನಿನಗೆ ಬಂಗಾರವನ್ನು ತರುವೆನು. ಕಬ್ಬಿಣಕ್ಕೆ ಬದಲಾಗಿ ಬೆಳ್ಳಿಯನ್ನೂ, ಮರಕ್ಕೆ ಬದಲಾಗಿ ಕಂಚನ್ನೂ, ಕಲ್ಲುಗಳಿಗೆ ಬದಲಾಗಿ ಕಬ್ಬಿಣವನ್ನೂ ತರುವೆನು. ಸಮಾಧಾನವನ್ನು ನಿನಗೆ ಅಧಿಪತಿಯನ್ನಾಗಿ, ನೀತಿಯನ್ನು ನಿನಗೆ ಅಧಿಕಾರಿಯನ್ನಾಗಿ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 60:17
15 ತಿಳಿವುಗಳ ಹೋಲಿಕೆ  

ಏಕೆಂದರೆ, ದೇವರು ನಮ್ಮೆಲ್ಲರಿಗೋಸ್ಕರ, ಶ್ರೇಷ್ಠವಾದ ಯೋಜನೆಯೊಂದನ್ನು ರೂಪಿಸಿ, ನಮ್ಮೊಡನೆಯೇ ಅಂದಿನ ವಿಶ್ವಾಸಿಗಳೂ ಸಿದ್ಧಿಗೆ ಬರಬೇಕೆಂದು ಸಂಕಲ್ಪಿಸಿದರು.


ಅಂದು, ಸರ್ವೇಶ್ವರ ಜೆರುಸಲೇಮಿನ ನಿವಾಸಿಗಳನ್ನು ಕೋಟೆಯಂತೆ ಕಾಪಾಡುವರು. ಈ ಕಾರಣ, ಅವರಲ್ಲಿ ದುರ್ಬಲನು ದಾವೀದನಂತೆ ಬಲಾಢ್ಯನಾಗುವನು. ದಾವೀದನವಂಶ ದೇವದೂತರಂತೆ, ಹೌದು, ದೇವರಂತೆ, ಅವರಿಗೆ ಮುಂದಾಳಾಗುವುದು.


ಇದಲ್ಲದೆ ಚಂದ್ರನ ಬೆಳಕು ಸೂರ್ಯನ ಬೆಳಕಿನಂತಿರುವುದು. ಸೂರ್ಯನ ಬೆಳಕು ಏಳ್ಮಡಿ ಹೆಚ್ಚುವುದು. ಏಳು ದಿನಗಳ ಬೆಳಕು ಒಂದೇ ದಿನದ ಬೆಳಕಿನಂತಾಗುವುದು. ಅಂದು ಸರ್ವೇಶ್ವರ ತಮ್ಮ ಜನರ ಹುಣ್ಣುಗಳನ್ನು ಕಟ್ಟುವರು. ತಮ್ಮ ಪೆಟ್ಟಿನಿಂದ ಜನರಿಗಾದ ಗಾಯಗಳನ್ನು ಗುಣಪಡಿಸುವರು.


ಪೂರ್ವದಲ್ಲಿದ್ದಂತೆ ನಿಮಗೆ ನ್ಯಾಯಾಧಿಪತಿಗಳನ್ನೂ ಮಂತ್ರಿಗಳನ್ನೂ ಮತ್ತೆ ನೇಮಿಸುವೆನು. ಆಗ ಜೆರುಸಲೇಮ್ ‘ಧರ್ಮಪುರಿ’, ‘ಸುವ್ರತನಗರಿ’ ಎನಿಸಿಕೊಳ್ಳುವುದು.


ನಾವಾದರೋ, ದೇವರ ವಾಗ್ದಾನದ ಪ್ರಕಾರ ನೀತಿಯ ನೆಲೆಯಾಗಿರುವ ನೂತನ ಆಕಾಶಮಂಡಲವೂ ನೂತನ ಭೂಮಂಡಲವೂ ಬರುವುದನ್ನು ಎದುರು ನೋಡುತ್ತಿರುವೆವು.


ನಿನ್ನ ಪ್ರಾಂತದೊಳಗೆಲ್ಲಾ ಇರುವುದು ನೆಮ್ಮದಿ I ನೀಡುವನು ನಿನಗೆ ಅತ್ಯುತ್ತಮ ಗೋದಿ II


ಮೊಲೆಯೂಡಿಸುವರು ಜನಾಧಿಪತಿಗಳು ನಿನಗೆ ಮೊಲೆಗೂಸಾಗುವೆ ನೀನು ಜನಾಂಗಗಳಿಗೆ. ಆಗ ತಿಳಿಯುವೆ ನಿನ್ನನುದ್ಧರಿಸಿದ ಸರ್ವೇಶ್ವರ ನಾನೆಂದು ನಿನ್ನ ವಿಮೋಚಕನು, ಯಕೋಬ್ಯರ ಪರಾಕ್ರಮಿಯು ನಾನೆಂದು.


ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು ನಿನ್ನ ದೇಶದಲಿ ನಾಶವಿನಾಶಗಳ ವಾರ್ತೆಯೇ ಕೇಳಿಬರದು ನಿನ್ನ ಪ್ರಾಂತ್ಯಗಳಲಿ. ಆಗ ಹೆಸರಿಡುವೆ ನಿನ್ನ ಪೌಳಿಗೋಡೆಗೆ ‘ದೈವಮುಕ್ತಿ’ ಎಂದು ನಿನ್ನೀ ಪುರದ್ವಾರಗಳಿಗೆ “ದೈವಸ್ತುತಿ’ ಎಂದು.


“ಅವನ ಸ್ಥಾನದಲ್ಲಿ ಮತ್ತೊಬ್ಬನು ರಾಜ್ಯವಾಳುವನು. ಇವನು ರಾಜ್ಯದಲ್ಲಿನ ಶಿರೋಮಣಿಯಂಥ ನಾಡನ್ನೆಲ್ಲ ದೋಚಿಕೊಳ್ಳಬಲ್ಲ ಉದ್ಯೋಗಿಯನ್ನು ನೇಮಿಸುವನು. ಆದರೆ ಕೆಲವೇ ದಿನಗಳಲ್ಲಿ ಅವನು ಕದನದಿಂದ ಅಲ್ಲ, ಕೋಪದಿಂದ ಅಲ್ಲ, ಹಾಗೆಯೇ ಮಡಿದುಹೋಗುವನು.


ಬೆಳ್ಳಿ ನನ್ನದು, ಬಂಗಾರವೆಲ್ಲ ನನ್ನದು.


ದೇವಾಲಯದ ಒಳಗೆ ಮತ್ತು ಹೊರಗಿನ ನೆಲವನ್ನು ಬಂಗಾರದ ತಗಡುಗಳಿಂದ ಹೊದಿಸಿದನು.


ಬೆಟ್ಟಗುಡ್ಡಗಳಿಂದ ಬರಲಿ ಸಮೃದ್ಧಿ I ನಿನ್ನ ಪ್ರಜೆಗೆ ಫಲಿಸಲಿ ನ್ಯಾಯನೀತಿ II


ಬೆಳೆಯುವುದು ಮುಳ್ಳಿಗೆ ಬದಲಾಗಿ ದೇವದಾರು, ದತ್ತೂರಿಗೆ ಪ್ರತಿಯಾಗಿ ಸುಗಂಧದ ಮರವು. ಉಳಿದಿರುತ್ತದೆ ಆ ವನವು ಶಾಶ್ವತ ಗುರುತಾಗಿ ಸರ್ವೇಶ್ವರ ಸ್ವಾಮಿಯ ನಾಮಸ್ಮರಣೆಗಾಗಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು