Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 60:20 - ಕನ್ನಡ ಸತ್ಯವೇದವು C.L. Bible (BSI)

20 ನಿನ್ನ ಸೂರ್ಯನು ಇನ್ನು ತೊಲಗನು. ನಿನ್ನ ಚಂದ್ರನು ಬಿಟ್ಟು ತೊಲಗನು. ಸರ್ವೇಶ್ವರನೇ ನಿನಗೆ ನಿತ್ಯಜ್ಯೋತಿ ನಿನ್ನ ದುಃಖ ದಿನಗಳಿಗಿದೆ ಸಮಾಪ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಿನ್ನ ಸೂರ್ಯನು ಇನ್ನು ಮುಳುಗನು, ನಿನ್ನ ಚಂದ್ರನು ತೊಲಗನು; ಯೆಹೋವನೇ ನಿನಗೆ ನಿತ್ಯಪ್ರಕಾಶವಾಗಿರುವನು, ನೀನು ದುಃಖಿಸುವ ದಿನಗಳು ಕೊನೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಿನ್ನ ಸೂರ್ಯನು ಇನ್ನು ಮುಣುಗನು, ನಿನ್ನ ಚಂದ್ರನು ತೊಲಗನು; ಯೆಹೋವನೇ ನಿನಗೆ ನಿತ್ಯಪ್ರಕಾಶವಾಗಿರುವನು, ನೀನು ದುಃಖಿಸುವ ದಿನಗಳು ಕೊನೆಗಾಣುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಿನ್ನ ಸೂರ್ಯನು ಮತ್ತೆ ಅಸ್ತಮಾನವಾಗುವದಿಲ್ಲ. ನಿನ್ನ ಚಂದ್ರನು ಮತ್ತೆಂದಿಗೂ ಕಪ್ಪಾಗುವದಿಲ್ಲ. ಯಾಕೆಂದರೆ ಯೆಹೋವನು ನಿನ್ನ ನಿರಂತರದ ಬೆಳಕಾಗಿರುವನು. ನಿನ್ನ ದುಃಖದ ಕಾಲವು ಅಂತ್ಯವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಿನ್ನ ಸೂರ್ಯನು ಅಸ್ತಮಿಸುವುದಿಲ್ಲ. ನಿನ್ನ ಚಂದ್ರನು ಕಾಣದೆ ಹೋಗುವುದಿಲ್ಲ. ಏಕೆಂದರೆ ಯೆಹೋವ ದೇವರು ನಿನಗೆ ನಿತ್ಯವಾದ ಬೆಳಕಾಗಿರುವರು. ನೀನು ದುಃಖಿಸುವ ದಿನಗಳು ಸಮಾಪ್ತಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 60:20
19 ತಿಳಿವುಗಳ ಹೋಲಿಕೆ  

ಒರಸುವನಾತ ಅವರ ಕಂಬನಿಯನೆಲ್ಲಾ ಇರದಿನ್ನು ಸಾವುನೋವು ಅವರಿಗೆಲ್ಲಾ; ಇರವು ಶೋಕ ದುಃಖಗಳಾವುವು ಮರೆಯಾಗಿ ಹೋದವು ಹಿಂದಿನದೆಲ್ಲವು.”


ದೇವನೆಮಗೆ ಬೆಳಕು ಕೊಡುವ ಸೂರ್ಯನು I ಕಾದಿಟ್ಟು ರಕ್ಷಿಸುವ ಗುರಾಣಿಯು I ಸನ್ಮಾರ್ಗಿಗೆ ಈವನು ಸಕಲ ವರಗಳನು II


ಹಿಂದಿರುಗುವರು ಸರ್ವೇಶ್ವರನಿಂದ ವಿಮೋಚನೆ ಪಡೆದವರು ಜಯಜಯಕಾರದೊಂದಿಗೆ ಸಿಯೋನನು ಸೇರುವರು. ನಿತ್ಯಾನಂದ ಸುಖವಿರುವುದು ಕಿರೀಟಪ್ರದವಾಗಿ ಸಿಗುವುದವರಿಗೆ ಹರ್ಷಾನಂದದ ಸವಿ ತೊಲಗುವುದು ದುಃಖದುಗುಡದ ಕಹಿ.


ಮರಣವನ್ನು ಶಾಶ್ವತವಾಗಿ ನಿರ್ನಾಮಮಾಡುವರು. ಸರ್ವೇಶ್ವರ ಸ್ವಾಮಿ ಎಲ್ಲರ ಕಣ್ಣೀರನ್ನು ಒರೆಸಿಬಿಡುವರು. ತಮ್ಮ ಪ್ರಜೆಗಾದ ಅವಮಾನವನ್ನು ಜಗದಿಂದಲೇ ತೊಲಗಿಸಿಬಿಡುವರು. ಸರ್ವೇಶ್ವರ ಸ್ವಾಮಿಯೇ ಇಂತೆಂದು ನುಡಿದಿದ್ದಾರೆ.


“ನನ್ನ ನಾಮದಲ್ಲಿ ಭಯಭಕ್ತಿಯಿಂದ ಇರುವ ನಿಮಗಾದರೋ ಜೀವೋದ್ಧಾರಕನೆಂಬ ಸೂರ್ಯನು ಉದಯಿಸಿ, ಸುಕ್ಷೇಮವನ್ನೀಯುವ ಕಿರಣಗಳನ್ನು ಬೀರುವನು. ಕೊಟ್ಟಿಗೆಯಿಂದ ಹೊರಬಂದ ಕರುಗಳಂತೆ ನೀವು ಕುಣಿದು ಕುಪ್ಪಳಿಸುವಿರಿ.


ನನಗೆ ಬೆಳಕು, ನನಗೆ ರಕ್ಷೆ, ಪ್ರಭುವೆ I ನಾನಾರಿಗೂ ಅಳುಕೆನು II ನನ್ನ ಬಾಳಿಗಾಧಾರ ಪ್ರಭುವೆ I ನಾನಾರಿಗೂ ಅಂಜೆನು II


ಜೆರುಸಲೇಮಿನಲ್ಲಿ ವಾಸಿಸುವ ಸಿಯೋನಿನ ಜನರೇ, ನೀವಿನ್ನು ಅಳಬೇಕಾಗಿಲ್ಲ. ನಿಮ್ಮ ಕೂಗನ್ನು ಕೇಳಿದ್ದೇ, ಸರ್ವೇಶ್ವರ ನಿಮಗೆ ಕೃಪೆತೋರಿಸುವರು. ನಿಮ್ಮ ಸ್ವರವನ್ನು ಕೇಳಿದಾಕ್ಷಣ ಸದುತ್ತರವನ್ನು ದಯಪಾಲಿಸುವರು.


ನಾನು ಕೂಡ ಜೆರುಸಲೇಮನ್ನು ನೋಡಿ ಆನಂದಿಸುವೆನು, ಅದರ ಜನರನ್ನು ದೃಷ್ಟಿಸಿ ಹರ್ಷಗೊಳ್ಳುವೆನು. ಇನ್ನು ಅಲ್ಲಿ ಅಳುವಾಗಲಿ, ಆಕ್ರೋಶವಾಗಲಿ ಕೇಳಿಬರದು.


ಇದಲ್ಲದೆ ಚಂದ್ರನ ಬೆಳಕು ಸೂರ್ಯನ ಬೆಳಕಿನಂತಿರುವುದು. ಸೂರ್ಯನ ಬೆಳಕು ಏಳ್ಮಡಿ ಹೆಚ್ಚುವುದು. ಏಳು ದಿನಗಳ ಬೆಳಕು ಒಂದೇ ದಿನದ ಬೆಳಕಿನಂತಾಗುವುದು. ಅಂದು ಸರ್ವೇಶ್ವರ ತಮ್ಮ ಜನರ ಹುಣ್ಣುಗಳನ್ನು ಕಟ್ಟುವರು. ತಮ್ಮ ಪೆಟ್ಟಿನಿಂದ ಜನರಿಗಾದ ಗಾಯಗಳನ್ನು ಗುಣಪಡಿಸುವರು.


ಒಡೆಯರಾದ ಸರ್ವೇಶ್ವರ ಇಂತೆನ್ನುತ್ತಾರೆ: “ಆ ದಿನದಂದು ನಡುಮಧ್ಯಾಹ್ನದಲ್ಲಿ ಸೂರ್ಯನನ್ನು ಮುಳುಗಿಸುವೆನು. ಹಾಡುಹಗಲಲ್ಲೇ ಭೂಮಿಯನ್ನು ಕತ್ತಲಾಗಿಸುವೆನು.


ನಗರಕ್ಕೆ ಬೆಳಕನ್ನು ಕೊಡಲು ಸೂರ್ಯನ ಇಲ್ಲವೆ ಚಂದ್ರನ ಅವಶ್ಯಕತೆ ಇಲ್ಲ. ಏಕೆಂದರೆ, ದೇವರ ತೇಜಸ್ಸೇ ಅದಕ್ಕೆ ಬೆಳಕು; ಯಜ್ಞದ ಕುರಿಮರಿಯೇ ಅದಕ್ಕೆ ಜ್ಯೋತಿ.


ನಾಚುವನು ಚಂದ್ರ, ಹೇಸುವನು ಸೂರ್ಯ, ಏಕೆನೆ ಆಳುವರು ಸೇನಾಧೀಶ್ವರ ಸರ್ವೇಶ್ವರ ಸಿಯೋನ್ ಪರ್ವತದೊಳು, ಜೆರುಸಲೇಮ್ ನಗರದೊಳು. ಪ್ರತ್ಯಕ್ಷವಾಗುವುದಾತನ ಮಹಿಮಾಪ್ರಭಾವವು, ಅಲ್ಲಿನ ಜನನಾಯಕರ ಸಮ್ಮುಖದೊಳು.


ಹಿಂದಿರುಗುವರು ಸರ್ವೇಶ್ವರನಿಂದ ರಕ್ಷಣೆ ಪಡೆದವರು ಉತ್ಸಾಹ ಗೀತೆಯೊಂದಿಗೆ ಸಿಯೋನನ್ನು ಸೇರುವರವರು. ಧರಿಸಿಕೊಳ್ಳುವರು ಶಾಶ್ವತ ಸಂತಸವೆಂಬ ಕಿರೀಟವನು ಅನುಭವಿಸುವರು ಹರ್ಷಾನಂದಗಳನು ತೊಲಗಿ ಓಡುವುವು ದುಃಖದುಗುಡಗಳು.


ನಿನಗೆ ಬೆಳಕು ಬಂದಿದೆ ಜೆರುಸಲೇಮೇ, ಏಳು, ಪ್ರಕಾಶಿಸು; ನಿನ್ನ ಮೇಲೆ ಉದಯಿಸಿದೆ ಸರ್ವೇಶ್ವರನ ತೇಜಸ್ಸು.


ದುಃಖಿತರೆಲ್ಲರಿಗೆ ಸಾಂತ್ವನ ಸಾರಲೆಂದೇ ಕಳುಹಿಸಿದನಾತ ನನ್ನನು. ಸಿಯೋನಿನ ಶೋಕಾರ್ತರಿಗೆ ಬರಿಬೂದಿಗೆ ಬದಲು ಶಿರೋಭೂಷಣ, ದುಃಖತಾಪದ ಬದಲು ಆನಂದ ತೈಲ, ಸೊರಗಿದ್ದ ಮನಕೆ ಮೆಚ್ಚಿಕೆಯ ಮೇಲ್ವಸ್ತ್ರ ಒದಗಿಸಲೆಂದೇ ನನ್ನನ್ನು ಕಳುಹಿಸಿದನಾತ. ನೆಟ್ಟಿಹನು ಇವರನು ಸರ್ವೇಶ್ವರ ತನ್ನ ಮಹಿಮೆಯಾಗಿ ಹೆಸರ ಪಡೆವರಿವರು ‘ನೀತಿವೃಕ್ಷ’ಗಳೆಂಬುದಾಗಿ.


ಅವರು ಬಂದು ಹಾಡುವರು ಸಿಯೋನ್ ಶಿಖರದಲ್ಲಿ ಬರುವರು ಪ್ರವಾಹ ಪ್ರವಾಹವಾಗಿ ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕುರಿ, ಕುರಿಮರಿ, ಸರ್ವೇಶ್ವರನ ಈ ವರದಾನಗಳನ್ನು ಅನುಭವಿಸಲಿಕ್ಕಾಗಿ. ಹದವಾಗಿ ನೀರುಹಾಯಿಸಿದ ಉದ್ಯಾನವನದಂತೆ ಅವರ ಜೀವನ ಇನ್ನು ಅವರಿಗಿರದು ವ್ಯಸನ.


ಹೇ ಸರ್ವೇಶ್ವರಾ, ನಮ್ಮ ಮೇಲೆ ನೀ ಬಲು ಸಿಟ್ಟುಗೊಂಡಿರುವೆಯೋ? ಬಹುಶಃ ನಮ್ಮನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿರುವೆಯೋ?


ಹಗಲಿರುಳು ಎನ್ನದೆ ನಿರಂತರವೂ ಬೆಳಕಾಗುವುದು. ಸಂಜೆಯು ಸಹ ಪ್ರಾಕಾಶಮಯವಾಗಿರುವುದು. ಆದರೆ ಇದು ಯಾವಾಗ ಸಂಭವಿಸುವುದೆಂಬುದು ಸರ್ವೇಶ್ವರಸ್ವಾಮಿಗೆ ಮಾತ್ರ ತಿಳಿದಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು