Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 61:6 - ಕನ್ನಡ ಸತ್ಯವೇದವು C.L. Bible (BSI)

6 “ಸರ್ವೇಶ್ವರನ ಯಾಜಕರು’ ಎಂಬ ಬಿರುದು ನಿಮ್ಮದಾಗುವುದು “ನಮ್ಮ ದೇವರ ಪರಿಚಾರಕರು” ಎಂಬ ಹೆಸರು ನಿಮಗೆ ಬರುವುದು. ಅನುಭವಿಸುವಿರಿ ಅನ್ಯರಾಷ್ಟ್ರಗಳ ಸಂಪತ್ತನ್ನು ಹೆಮ್ಮೆಪಡುವಿರಿ ಆ ಸಿರಿ ನಿಮ್ಮದಾಯಿತೆಂದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೀವೋ ಯೆಹೋವನ ಯಾಜಕರೆಂಬ ಬಿರುದನ್ನು ಹೊಂದುವಿರಿ, ಜನರು ನಿಮ್ಮನ್ನು ನಮ್ಮ ದೇವರ ಸೇವಕರು ಎಂದು ಕರೆಯುವರು; ಜನಾಂಗಗಳ ಆಸ್ತಿಯನ್ನು ಅನುಭವಿಸುವಿರಿ, ಅವುಗಳ ವೈಭವವನ್ನು ಪಡೆದು ಹೊಗಳಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನೀವೋ ಯೆಹೋವನ ಯಾಜಕರೆಂಬ ಬಿರುದನ್ನು ಹೊಂದುವಿರಿ, ಜನರು ನಿಮ್ಮನ್ನು ನಮ್ಮ ದೇವರ ಸೇವಕರು ಎಂದು ಕರೆಯುವರು; ಜನಾಂಗಗಳ ಆಸ್ತಿಯನ್ನನುಭವಿಸುವಿರಿ, ಅವುಗಳ ವೈಭವವನ್ನು ಪಡೆದು ಹೊಗಳಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆಗ ನಿಮ್ಮನ್ನು “ಯೆಹೋವನ ಯಾಜಕರು” ಎಂತಲೂ “ದೇವರ ಸಹಾಯಕರು” ಎಂತಲೂ ಕರೆಯುವರು. ಭೂಲೋಕದ ಎಲ್ಲಾ ದೇಶಗಳ ಐಶ್ವರ್ಯವು ನಿಮ್ಮ ಕೈಸೇರುವುದರಿಂದ ನೀವು ಹೆಚ್ಚಳಪಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೆ ನೀವು ಯೆಹೋವ ದೇವರ ಯಾಜಕರೆಂಬ ಬಿರುದನ್ನು ಹೊಂದುವಿರಿ. ನಮ್ಮ ದೇವರ ಸೇವಕರೆಂದು ನಿಮಗೆ ಹೆಸರಾಗುವುದು, ಜನಾಂಗಗಳ ಆಸ್ತಿಯನ್ನು ಅನುಭವಿಸುವಿರಿ. ಅವರ ವೈಭವವನ್ನು ಪಡೆದು ಹೊಗಳಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 61:6
25 ತಿಳಿವುಗಳ ಹೋಲಿಕೆ  

ಅಲ್ಲದೆ ನೀವು ನನಗೆ ಯಾಜಕ ರಾಜವಂಶ ಹಾಗು ಪರಿಶುದ್ಧ ಜನಾಂಗ ಆಗುವಿರಿ,’ ಇಸ್ರಯೇಲರಿಗೆ ನೀನು ತಿಳಿಸಬೇಕಾದ ವಿಷಯವಿದು,” ಎಂದರು.


ನೀವೂ ಸಹ ಸಜೀವ ಶಿಲೆಗಳಾಗಿದ್ದೀರಿ; ಆಧ್ಯಾತ್ಮಿಕ ದೇವಾಲಯವನ್ನು ನಿರ್ಮಿಸಲು ನಿಮ್ಮನ್ನೇ ಅರ್ಪಿಸಿಕೊಳ್ಳಿ. ಆ ದೇವಾಲಯದಲ್ಲೇ ಯೇಸುಕ್ರಿಸ್ತರ ಮುಖಾಂತರ ದೇವರಿಗೆ ಮೆಚ್ಚುಗೆಯಾಗಿರುವ ಆಧ್ಯಾತ್ಮಿಕ ಬಲಿಗಳನ್ನು ಸಮರ್ಪಿಸುವ ಪವಿತ್ರ ಯಾಜಕವರ್ಗದವರು ನೀವಾಗಿರುವಿರಿ.


ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ನಾನು ಅವರಲ್ಲಿ ಕೆಲವರನ್ನು ಯಾಜಕರನ್ನಾಗಿಯೂ ಲೇವಿಯರನ್ನಾಗಿಯೂ ಆರಿಸಿಕೊಳ್ಳುವೆನು.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ಆ ಪ್ರಥಮ ಪುನರುತ್ಥಾನದಲ್ಲಿ ಸೇರಿರುವ ದೇವಜನರು ಭಾಗ್ಯವಂತರು. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಅವರು ದೇವರಿಗೂ ಕ್ರಿಸ್ತೇಸುವಿಗೂ ಯಾಜಕರಾಗಿ ಸೇವೆಸಲ್ಲಿಸುವರು; ಮತ್ತು ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳ ಕಾಲ ಆಳುವರು.


ಏರ್ಪಡಿಸಿದೆ ನೀ ಅವರನು ನಮ್ಮ ದೇವರಿಗೋಸ್ಕರ ರಾಜವಂಶವಾಗಿ, ಯಾಜಕವರ್ಗವಾಗಿ. ಆಳುವರವರು ಸಮಸ್ತ ಭುವಿಯ ಮೇಲೆ.”


ಅವರು ಕ್ರಿಸ್ತಯೇಸುವಿನ ದಾಸರೋ? (ನಾನು ಬುದ್ಧಿ ಕೆಟ್ಟವನಂತೆಯೇ ಮಾತನಾಡುತ್ತಿದ್ದೇನೆ) ಅವರಿಗಿಂತ ನಾನು ದಾಸಾನುದಾಸನು. ಅವರಿಗಿಂತ ಹೆಚ್ಚಾಗಿ ಸೇವೆಮಾಡಿದ್ದೇನೆ; ಅವರಿಗಿಂತ ಹೆಚ್ಚಾಗಿ ಸೆರೆಮನೆಗಳ ವಾಸವನ್ನು ಅನುಭವಿಸಿದ್ದೇನೆ; ಮಿತಿಮೀರಿ ಏಟುಪೆಟ್ಟುಗಳನ್ನು ತಿಂದಿದ್ದೇನೆ; ಅನೇಕ ಸಲ ಸಾವಿನ ದವಡೆಗೆ ಸಿಲುಕಿಕೊಂಡಿದ್ದೇನೆ.


ನಾವು ಕ್ರಿಸ್ತಯೇಸುವಿನ ದಾಸರೆಂದೂ ದೇವರ ಸತ್ಯಾರ್ಥಗಳ ನಂಬಿಗಸ್ಥ ನಿರ್ವಾಹಕರೆಂದೂ ಜನರು ನಮ್ಮನ್ನು ಪರಿಗಣಿಸಲಿ.


ಬದಲಿಗೆ, ಎಲ್ಲ ವಿಷಯಗಳಲ್ಲೂ ದೇವರ ದಾಸರೆಂದು ತೋರಿಸಿಕೊಳ್ಳುತ್ತೇವೆ. ಕಷ್ಟಸಂಕಟಗಳಲ್ಲೂ ದುಃಖದುರಿತಗಳಲ್ಲೂ ತಾಳ್ಮೆಯಿಂದ ವರ್ತಿಸಿದ್ದೇವೆ.


ಅಪೊಲೋಸನು ಯಾರು? ಪೌಲನು ಯಾರು? ನಿಮ್ಮನ್ನು ವಿಶ್ವಾಸಕ್ಕೆ ಕರೆತಂದ ದಾಸರು ನಾವಲ್ಲವೇ? ನಮ್ಮಲ್ಲಿ ಪ್ರತಿಯೊಬ್ಬನು ಪ್ರಭು ನಿಯಮಿಸುವ ಕಾರ್ಯವನ್ನು ನಿರ್ವಹಿಸುತ್ತೇವೆ.


ಆದುದರಿಂದ ಸಹೋದರರೇ, ದೇವರ ಅಪಾರ ಕೃಪೆಯನ್ನು ನಿಮ್ಮ ನೆನಪಿಗೆ ತಂದು ನಾನು ಬೇಡಿಕೊಳ್ಳುವುದೇನೆಂದರೆ: ನಿಮ್ಮನ್ನೇ ದೇವರಿಗೆ ಮೀಸಲಾದ, ಮೆಚ್ಚುಗೆಯಾದ ಸಜೀವವಾದ ಬಲಿಯಾಗಿ ಸಮರ್ಪಿಸಿಕೊಳ್ಳಿರಿ. ಇದೇ ನೀವು ಸಲ್ಲಿಸಬೇಕಾದ ನಿಜವಾದ ಆರಾಧನೆ.


ಹೀಗಾದರೆ ಇಸ್ರಯೇಲ್ ವಂಶದವರು ಇನ್ನು ನನ್ನನ್ನು ತೊರೆಯರು, ತಮ್ಮ ಲೆಕ್ಕವಿಲ್ಲದ ದ್ರೋಹಗಳಿಂದ ತಮ್ಮನ್ನು ಹೊಲೆಮಾಡಿಕೊಳ್ಳರು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿ ಇರುವೆನು; ಇದು ಸರ್ವೇಶ್ವರನಾದ ದೇವರ ನುಡಿ.”


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಇಗೋ, ಆಕೆಗೆ ಹರಿಯಮಾಡುವೆನು ಸುಖಶಾಂತಿಯನು ನದಿಯಂತೆ ನೀಡುವೆ ರಾಷ್ಟ್ರಗಳ ವೈಭವವನು ತುಂಬಿತುಳುಕುವ ತೊರೆಯಂತೆ ನೀವಿರುವಿರಿ ಹಾಲುಕುಡಿವ ಹಸುಳೆಯಂತೆ ಎತ್ತಿಕೊಳ್ಳಲಾಗುವುದು ನಿಮ್ಮನ್ನು ತಾಯ ಕಂಕುಳಲಿ ನಲಿದಾಡುವಿರಿ ನೀವು ಆಕೆಯ ಮಡಿಲಲಿ.


ಅವಳ ವ್ಯಾಪಾರದಿಂದ ಬಂದ ಆದಾಯ ಅವಳಿಗೆ ನಿಧಿನಿಕ್ಷೇಪವಾಗದೆ ಸರ್ವೇಶ್ವರ ಸ್ವಾಮಿಗೆ ಮೀಸಲಾಗುವುದು. ಅದು ಸರ್ವೇಶ್ವರ ಸ್ವಾಮಿಯ ಸನ್ನಿಧಾನದಲ್ಲಿ ವಾಸಮಾಡುವವರಿಗೆ ಬೇಕಾದಷ್ಟು ಆಹಾರವನ್ನೂ ಅತ್ಯುತ್ತಮವಾದ ಉಡುಪನ್ನೂ ಒದಗಿಸುವುದು.


ತಮ್ಮ ಪಿತನಾದ ದೇವರ ಸೇವೆಗೆ ನಮ್ಮನ್ನು ದೈವೀರಾಜ್ಯದ ಯಾಜಕರನ್ನಾಗಿ ಮಾಡಿದವರೂ ಆದ ಯೇಸುಕ್ರಿಸ್ತರಿಗೆ ಮಹಿಮೆ ಮತ್ತು ಅಧಿಪತ್ಯ ಯುಗಯುಗಾಂತರಕ್ಕೂ ಸಲ್ಲಲಿ! ಆಮೆನ್.


ಅನ್ಯದೇಶೀಯರಲ್ಲಿ ಯಾರು ಯಾರು ‘ಸರ್ವೇಶ್ವರ’ ಎಂದು ನನ್ನನ್ನು ಅವಲಂಭಿಸಿ, ಪೂಜಿಸಿ, ನನ್ನ ನಾಮವನ್ನು ಪ್ರೀತಿಸಿ, ನನಗೆ ದಾಸನಾಗಿ, ಸಬ್ಬತ್‍ದಿನವನ್ನು ಹೊಲೆಮಾಡದೆ ನನ್ನ ದಿನವೆಂದು ಆಚರಿಸಿ, ಜೊತೆಗೆ ನನ್ನ ಒಡಂಬಡಿಕೆಯನ್ನು ಸುಭದ್ರವಾಗಿ ಪಾಲಿಸುತ್ತಾರೋ,


ಸ್ವದೇಶದವರಿಗೆ ದೊರಕುವಂತೆ ಅವರಿಗೆ ಸೊತ್ತು ದೊರಕುವುದಿಲ್ಲ. ಸರ್ವೇಶ್ವರ ಸ್ವಾಮಿಯೇ ಲೇವಿಯರ ಸೊತ್ತು. ಇದನ್ನು ಸ್ವಾಮಿಯೇ ಅವರಿಗೆ ಹೇಳಿದ್ದಾರೆ.


ಏಕೆಂದರೆ ಹಬ್ಬಿಕೊಳ್ಳುವೆ ನೀನು ಎಡಬಲದೊಳು ಎಲ್ಲೆಲ್ಲು, ವಶಮಾಡಿಕೊಳ್ಳುವರು ನಿನ್ನ ಸಂತಾನದವರು ಜನಾಂಗಗಳನು. ಜನಭರಿತವಾಗುವಂತೆ ಮಾಡುವರು ಪಾಳುಬಿದ್ದ ಪಟ್ಟಣಗಳನು.


ಅದಕ್ಕೆ ಆ ಸಂತಾನದವರಲ್ಲಿ ಒಬ್ಬ ಗಂಡಸು ಇಲ್ಲದೆ ಇರನು. ಅಂತೆಯೇ ನನ್ನ ಸನ್ನಿಧಿಯಲ್ಲಿ ನಿರಂತರವಾಗಿ ದಹನಬಲಿಯನ್ನು, ನೈವೇದ್ಯವನ್ನು ಹಾಗೂ ಕಾಣಿಕೆಯನ್ನು ಒಪ್ಪಿಸತಕ್ಕ ಒಬ್ಬನು ಲೇವಿಕುಲದಲ್ಲಿ ಇದ್ದೇ ಇರುವನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು