Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 62:1 - ಕನ್ನಡ ಸತ್ಯವೇದವು C.L. Bible (BSI)

1 ಸಿಯೋನಿನ ಸದ್ಧರ್ಮವು ಪ್ರಕಾಶಗೊಳ್ಳುವತನಕ ಜೆರುಸಲೇಮಿನ ಉದ್ಧಾರ ದೀಪವು ಬೆಳಗುವತನಕ ಸುಮ್ಮನಿರೆನು ನಾನು ಸಿಯೋನಿನ ಹಿತವನ್ನು ಲಕ್ಷಿಸದೆ, ಮೌನವಿರೆನು ಜೆರುಸಲೇಮಿನ ಸುಕ್ಷೇಮವನು ಚಿಂತಿಸದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಚೀಯೋನಿನ ಧರ್ಮವು ಪ್ರಕಾಶಗೊಳ್ಳುವ ತನಕ, ಯೆರೂಸಲೇಮಿನ ರಕ್ಷಣೆಯು ದೀವಿಟಿಗೆಯಂತೆ ಪ್ರಜ್ವಲಿಸುವವರೆಗೆ, ನಾನು ಮೌನವಾಗಿರದೆ ಚೀಯೋನಿನ ಹಿತವನ್ನು ಲಕ್ಷಿಸುತ್ತಿರುವೆನು; ಮೌನವಾಗಿರದೆ ಯೆರೂಸಲೇಮಿನ ಕ್ಷೇಮವನ್ನು ಚಿಂತಿಸುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಚೀಯೋನಿನ ಧರ್ಮವು ಪ್ರಕಾಶಗೊಳ್ಳುವ ತನಕ, ಯೆರೂಸಲೇವಿುನ ರಕ್ಷಣೆಯು ದೀವಿಟಿಗೆಯಂತೆ ಪ್ರಜ್ವಲಿಸುವವರೆಗೆ ನಾನು ಮೌನವಾಗಿರದೆ ಚೀಯೋನಿನ ಹಿತವನ್ನು ಲಕ್ಷಿಸುತ್ತಿರುವೆನು; ಸುಮ್ಮನಿರದೆ ಯೆರೂಸಲೇವಿುನ ಕ್ಷೇಮವನ್ನು ಚಿಂತಿಸುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಚೀಯೋನನ್ನು ನಾನು ಪ್ರೀತಿಸುತ್ತೇನೆ. ಆಕೆಯ ವಿಷಯವಾಗಿ ನಾನು ಮಾತಾಡುತ್ತಲೇ ಇರುವೆನು. ನಾನು ಜೆರುಸಲೇಮನ್ನು ಪ್ರೀತಿಸುತ್ತೇನೆ. ಅದರ ವಿಷಯವಾಗಿ ಮಾತನಾಡುವದನ್ನು ನಾನು ನಿಲ್ಲಿಸುವದಿಲ್ಲ. ಧರ್ಮವು ಬೆಳಕಿನಂತೆ ಪ್ರಕಾಶಿಸುವ ತನಕ ನಾನು ಮಾತನಾಡುವೆನು. ರಕ್ಷಣೆಯು ಬೆಂಕಿಯಂತೆ ಪ್ರಜ್ವಲಿಸುವವರೆಗೆ ನಾನು ಮಾತನಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಚೀಯೋನಿಗೋಸ್ಕರ ನಾನು ಮೌನವಾಗಿರುವುದಿಲ್ಲ! ಯೆರೂಸಲೇಮಿಗೋಸ್ಕರ ಅದರ ವಿಮೋಚನೆಯು ಪ್ರಕಾಶದಂತೆಯೂ, ಅದರ ರಕ್ಷಣೆಯು ಉರಿಯುವ ದೀವಿಟಿಗೆಯಂತೆಯೂ ಹೊರಡುವವರೆಗೆ ನಾನು ವಿಶ್ರಾಂತಿಯಿಂದ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 62:1
30 ತಿಳಿವುಗಳ ಹೋಲಿಕೆ  

ಸಜ್ಜನರ ಮಾರ್ಗ ಪ್ರಾತಃಕಾಲದ ಬೆಳಕಿನಂತೆ; ಅದರ ಬೆಳಕು ಹೆಚ್ಚುತ್ತಿರುತ್ತದೆ ಬಟ್ಟ ಹಗಲವರೆಗೆ.


ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ಆದಕಾರಣ, ತಮ್ಮ ಮುಖಾಂತರ ದೇವರನ್ನು ಅರಸುವವರನ್ನು ಯೇಸು ಸಂಪೂರ್ಣವಾಗಿ ಉದ್ಧಾರಮಾಡಬಲ್ಲರು. ಅಂಥವರ ಪರವಾಗಿ ವಿಜ್ಞಾಪಿಸಲೆಂದೇ ಯೇಸು ಸದಾ ಬದುಕಿರುವರು.


ಎಚ್ಚರಗೊಳ್ಳು ಸರ್ವೇಶ್ವರನ ಭುಜವೇ, ಎಚ್ಚರಗೊಂಡು ಬಲವನು ತಂದುಕೊ ಭುಜವೇ, ಪೂರ್ವಕಾಲದೊಳು ಪುರಾತನ ಪೀಳಿಗೆಯೊಳು ಎಚ್ಚರಗೊಂಡಂತೆ ಎಚ್ಚೆತ್ತುಕೊ ಈಗಲು. ರಹಬನ್ನು ಛೇದಿಸಿಬಿಟ್ಟ ಭುಜ ನೀನಲ್ಲವೆ? ಘಟಸರ್ಪವನು ಅಪ್ಪಳಿಸಿದ ಭುಜ ನೀನಲ್ಲವೆ?


ಅದೇ ರೀತಿ ನಿಮ್ಮ ಜ್ಯೋತಿ ಜನರ ಮುಂದೆ ಬೆಳಗಲಿ; ಹೀಗೆ ಅವರು ನಿಮ್ಮ ಸತ್ಕಾರ್ಯಗಳನ್ನು ಕಂಡು ಸ್ವರ್ಗದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡಲಿ.”


ಈ ಪರಿ ಬಂದ ಹಲವು ನಾಡಿಗರು ಪೇಳ್ವರು ಜನರಿಗೆ; ಬನ್ನಿ, ಹೋಗೋಣ, ಸರ್ವೇಶ್ವರನ ಪರ್ವತಕೆ ಯಕೋಬ್ಯರಾ ದೇವರ ಮಂದಿರಕೆ. ಬೋಧಿಸುವನಾತ ತನ್ನ ಮಾರ್ಗವನು ನಮಗೆ ನಡೆಯುವೆವು ನಾವು ಆತನ ದಾರಿಗನುಗುಣವಾಗ್ಗೆ. ಬರುವುದು ಧರ್ಮೋಪದೇಶ ಸಿಯೋನಿಂದ ಸರ್ವೇಶ್ವರನಾ ವಾಕ್ಯ ಜೆರುಸಲೇಮಿನಿಂದ.


ಜೆರುಸಲೇಮನು ನಾ ಸ್ಮರಣೆಮಾಡದಿದ್ದಲ್ಲಿ I ಆ ಸ್ಮರಣೆ ಸರ್ವೋತ್ತಮ ನಲಿವು ನನಗಾಗದಿದ್ದಲ್ಲಿ I ಸೇದಿಹೋಗಲಿ ನಾಲಿಗೆ ನನ್ನ ಬಾಯಲಿ II


ಸಿಯೋನಿಗೆ ದೇವಾ, ಶುಭವನು ಕರುಣಿಸು I ಜೆರುಸಲೇಮ್ ಕೋಟೆಯನು ಮರಳಿ ಎಬ್ಬಿಸು II


ಕೊನೆಯದಾಗಿ ಸಹೋದರರೇ, ನಮಗಾಗಿಯೂ ಪ್ರಾರ್ಥನೆಮಾಡಿ; ಪ್ರಭುವಿನ ಸಂದೇಶ ನಿಮ್ಮಲ್ಲಿ ಹಬ್ಬಿಹರಡಿದಂತೆ ಎಲ್ಲೆಲ್ಲಿಯೂ ಪಸರಿಸಿ ಪ್ರಖ್ಯಾತವಾಗಲಿ.


ಪವಿತ್ರಭೂಮಿಯಲ್ಲಿ ಜುದೇಯ ನಾಡನ್ನು ಸ್ವಾಮಿ ತಮ್ಮ ಸೊತ್ತಾಗಿ ಮಾಡಿಕೊಳ್ಳುವರು. ಜೆರುಸಲೇಮನ್ನು ತಮಗಾಗಿ ಮರಳಿ ಆರಿಸಿಕೊಳ್ಳುವರು.


ಕಳುಹಿಸುವಾಗ ಅವರಿಗೆ ಹೇಳಿದ್ದೇನೆಂದರೆ, “ಬೆಳೆಯೇನೋ ಹೇರಳವಾಗಿದೆ; ಕೊಯ್ಲುಗಾರರೊ ವಿರಳ. ಆದುದರಿಂದ ಕೊಯ್ಲಿಗೆ ಆಳುಗಳನ್ನು ಕಳುಹಿಸುವಂತೆ ಬೆಳೆಯ ಯಜಮಾನನನ್ನು ಬೇಡಿಕೊಳ್ಳಿ.


ತೆರೆಯಿರಿ ನಗರ ದ್ವಾರಗಳನು, ಪ್ರವೇಶಿಸಲಿ ವಿಶ್ವಾಸವುಳ್ಳ ಸಜ್ಜನರು.


ಬರಮಾಡುವೆನು ಮುಕ್ತಿಯನು ಹತ್ತಿರಕೆ ಅದಿನ್ನು ದೂರವಿರದು ನಿಮಗೆ. ತಡವಾಗದು ನಿಮಗೆ ನನ್ನ ರಕ್ಷಣೆ ಸಾಧಿಸುವೆನು ರಕ್ಷಣೆಯನ್ನು ಸಿಯೋನಿನಲೇ, ಬೀರುವೆನು ನನ್ನ ಮಹಿಮೆಯನ್ನು ಇಸ್ರಯೇಲ ಮೇಲೆ.”


ಎಷ್ಟೋ ಚೆನ್ನಾಗಿರುತ್ತಿತ್ತು ನೀ ನನ್ನ ಆಜ್ಞೆಗಳನ್ನು ಪಾಲಿಸಿದ್ದರೆ ಇರುತ್ತಿತ್ತು ನಿನಗೆ ಸುಖಶಾಂತಿ ಮಹಾನದಿಯಂತೆ ನಿನ್ನ ಸತ್ಯಸಂಧತೆ ಸಮುದ್ರ ಅಲೆಗಳಂತೆ.


ಪ್ರದರ್ಶಿಸಿಹನು ಸ್ವಾಮಿ ಸರ್ವೇಶ್ವರನು ರಾಷ್ಟ್ರಗಳಿಗೆಲ್ಲ ತನ್ನ ಶ್ರೀಶಕ್ತಿಯನು. ಕಾಣುವುವು ಜಗದ ಎಲ್ಲೆ ಎಲ್ಲೆಗಳು ನಮ್ಮ ದೇವ ಸಾಧಿಸುವ ಮುಕ್ತಿಯನು.


ನ್ಯಾಯನೀತಿ ನಿನಗಾಧಾರ; ದೂರವಿರುವುದು ಹಿಂಸಾಚಾರ. ಭಯಭೀತಿಗೆ ನೀ ದೂರ, ಅವು ಬಾರವು ನಿನ್ನ ಹತ್ತಿರ.


“ಇದನ್ನು ಆಚರಿಸುವಾಗ ನೀವು ಉದಯಕಾಲದ ಸೂರ್ಯನಂತೆ ಪ್ರಜ್ವಲಿಸುವಿರಿ. ಆರೋಗ್ಯಭಾಗ್ಯವು ನಿಮಗೆ ಬೇಗನೆ ದೊರಕುವುದು. ನಿಮ್ಮ ಸದಾಚಾರವೆ ನಿಮಗೆ ಮುಂಬಲವಾಗಿ ನಡೆಸುವುದು; ಸರ್ವೇಶ್ವರ ಸ್ವಾಮಿಯ ಮಹಿಮೆ ನಿಮಗೆ ಹಿಂಬಲವಾಗಿ ಇರುವುದು.


ನಿನಗೆ ಬೆಳಕು ಬಂದಿದೆ ಜೆರುಸಲೇಮೇ, ಏಳು, ಪ್ರಕಾಶಿಸು; ನಿನ್ನ ಮೇಲೆ ಉದಯಿಸಿದೆ ಸರ್ವೇಶ್ವರನ ತೇಜಸ್ಸು.


ಇಗೋ ಜಗತ್ತನು ಮುತ್ತಿದೆ ಕತ್ತಲು ಜನಾಂಗಗಳನು ಆವರಿಸಿದೆ ಕಾರ್ಗತ್ತಲು. ನಿನ್ನ ಮೇಲಾದರೋ ಉದಯಿಸುವನು ಸರ್ವೇಶ್ವರನು ನಿನ್ನಲ್ಲಿ ಗೋಚರವಾಗುವುದು ಆತನಾ ತೇಜಸ್ಸು.


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲ ಸೌಭಾಗ್ಯಗಳ ಸುದ್ದಿಯನ್ನು ಸಕಲ ಭೂರಾಜ್ಯಗಳು ಕೇಳುವರು. ಈ ನಗರಕ್ಕೆ ನಾನು ನೀಡುವ ಸುಖಸಮಾಧಾನಗಳನ್ನು ಅವರು ನೋಡುವರು ಹಾಗೂ ಹೆದರಿ ನಡುಗುವರು. ಇದರಿಂದಾಗಿ ಆ ಎಲ್ಲ ರಾಜ್ಯಗಳ ಮುಂದೆ ನನಗೆ ಅದು ಕೀರ್ತಿಯನ್ನು, ಮಹಿಮೆಯನ್ನು ಹಾಗೂ ಆನಂದವನ್ನು ತರುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು